<p><strong>ಬೆಂಗಳೂರು: </strong>`ಭ್ರಷ್ಟಾಚಾರ ವಿರುದ್ಧದ ಚಳವಳಿಯಲ್ಲಿ ಯುವಕರು ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ದೇಶದಲ್ಲಿ ಬದಲಾವಣೆ ತರಲು ಸಾಧ್ಯ~ ಎಂದು ಸ್ವಾಮಿ ವಿವೇಕಾನಂದ ಯೂತ್ ಮೂವ್ಮೆಂಟ್ನ ಸ್ಥಾಪಕ ಡಾ.ಆರ್.ಬಾಲಸುಬ್ರಹ್ಮಣ್ಯಂ ಅಭಿಪ್ರಾಯಪಟ್ಟರು.<br /> <br /> `ಯೂತ್ ಎಗೆನೆಸ್ಟ್ ಕರಪ್ಷನ್ ಸಂಘಟನೆ~ಯು ನಗರದ ಪುರಭವನದಲ್ಲಿ ಮಂಗಳವಾರ ಏರ್ಪಡಿಸಿದ್ದ ಭ್ರಷ್ಟಾಚಾರ ವಿರೋಧಿ ಸಮಾವೇಶದಲ್ಲಿ ಅವರು ಮಾತನಾಡಿದರು.`ಮಾಹಿತಿ ಹಕ್ಕು ಕಾಯ್ದೆಯನ್ನು ಭ್ರಷ್ಟಾಚಾರ ವಿರುದ್ಧದ ಹೋರಾಟದ ಅಸ್ತ್ರವಾಗಿ ಸಮರ್ಥವಾಗಿ ಬಳಸಿಕೊಳ್ಳಬೇಕು. ಯುವಕರು ಚುನಾವಣೆಯಲ್ಲಿ ಸ್ಪರ್ಧಿಸಿ ಆಯ್ಕೆಯಾದರೆ ಉತ್ತಮ ಆಡಳಿತ ನೀಡಬಹುದು~ ಎಂದರು.<br /> <br /> `ಸಮಾಜದ ಗಂಭೀರ ಸಮಸ್ಯೆಗಳಿಗೆ ಯುವಕರು ಸ್ಪಂದಿಸಿ ಪರಿಹಾರ ಕಂಡುಕೊಳ್ಳಲು ಯತ್ನಿಸಬೇಕು. ಭ್ರಷ್ಟಾಚಾರವನ್ನು ಬೇರುಸಮೇತ ಕಿತ್ತೊಗೆಯಲು ಎಲ್ಲರೂ ಮುಂದಾಗಬೇಕು~ ಎಂದು ಆರ್ಟ್ ಆಫ್ ಲಿವಿಂಗ್ನ ಪ್ರಸನ್ನ ಪ್ರಭುಜಿ ಹೇಳಿದರು.<br /> <br /> ಸಂಘಟನೆ ಮುಖ್ಯಸ್ಥ ಸುವ್ರತ್ಕುಮಾರ್ ಮಾತನಾಡಿ, `ಭ್ರಷ್ಟಾಚಾರ ಮುಕ್ತ ಭಾರತ ಸಂಘಟನೆಯ ಗುರಿಯಾಗಿದೆ. ಸಾವಿರಾರು ಯುವಕರು, ಬುದ್ಧಿ ಜೀವಿಗಳು, ಸಮಾಜ ಸೇವಕರು ಸಂಘಟನೆಗೆ ಬೆಂಬಲ ಸೂಚಿಸುತ್ತಿದ್ದಾರೆ~ ಎಂದರು. ಸಂಘಟನೆಯ ಐನೂರಕ್ಕೂ ಹೆಚ್ಚು ಮಂದಿ ಸಮಾವೇಶದಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>`ಭ್ರಷ್ಟಾಚಾರ ವಿರುದ್ಧದ ಚಳವಳಿಯಲ್ಲಿ ಯುವಕರು ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ದೇಶದಲ್ಲಿ ಬದಲಾವಣೆ ತರಲು ಸಾಧ್ಯ~ ಎಂದು ಸ್ವಾಮಿ ವಿವೇಕಾನಂದ ಯೂತ್ ಮೂವ್ಮೆಂಟ್ನ ಸ್ಥಾಪಕ ಡಾ.ಆರ್.ಬಾಲಸುಬ್ರಹ್ಮಣ್ಯಂ ಅಭಿಪ್ರಾಯಪಟ್ಟರು.<br /> <br /> `ಯೂತ್ ಎಗೆನೆಸ್ಟ್ ಕರಪ್ಷನ್ ಸಂಘಟನೆ~ಯು ನಗರದ ಪುರಭವನದಲ್ಲಿ ಮಂಗಳವಾರ ಏರ್ಪಡಿಸಿದ್ದ ಭ್ರಷ್ಟಾಚಾರ ವಿರೋಧಿ ಸಮಾವೇಶದಲ್ಲಿ ಅವರು ಮಾತನಾಡಿದರು.`ಮಾಹಿತಿ ಹಕ್ಕು ಕಾಯ್ದೆಯನ್ನು ಭ್ರಷ್ಟಾಚಾರ ವಿರುದ್ಧದ ಹೋರಾಟದ ಅಸ್ತ್ರವಾಗಿ ಸಮರ್ಥವಾಗಿ ಬಳಸಿಕೊಳ್ಳಬೇಕು. ಯುವಕರು ಚುನಾವಣೆಯಲ್ಲಿ ಸ್ಪರ್ಧಿಸಿ ಆಯ್ಕೆಯಾದರೆ ಉತ್ತಮ ಆಡಳಿತ ನೀಡಬಹುದು~ ಎಂದರು.<br /> <br /> `ಸಮಾಜದ ಗಂಭೀರ ಸಮಸ್ಯೆಗಳಿಗೆ ಯುವಕರು ಸ್ಪಂದಿಸಿ ಪರಿಹಾರ ಕಂಡುಕೊಳ್ಳಲು ಯತ್ನಿಸಬೇಕು. ಭ್ರಷ್ಟಾಚಾರವನ್ನು ಬೇರುಸಮೇತ ಕಿತ್ತೊಗೆಯಲು ಎಲ್ಲರೂ ಮುಂದಾಗಬೇಕು~ ಎಂದು ಆರ್ಟ್ ಆಫ್ ಲಿವಿಂಗ್ನ ಪ್ರಸನ್ನ ಪ್ರಭುಜಿ ಹೇಳಿದರು.<br /> <br /> ಸಂಘಟನೆ ಮುಖ್ಯಸ್ಥ ಸುವ್ರತ್ಕುಮಾರ್ ಮಾತನಾಡಿ, `ಭ್ರಷ್ಟಾಚಾರ ಮುಕ್ತ ಭಾರತ ಸಂಘಟನೆಯ ಗುರಿಯಾಗಿದೆ. ಸಾವಿರಾರು ಯುವಕರು, ಬುದ್ಧಿ ಜೀವಿಗಳು, ಸಮಾಜ ಸೇವಕರು ಸಂಘಟನೆಗೆ ಬೆಂಬಲ ಸೂಚಿಸುತ್ತಿದ್ದಾರೆ~ ಎಂದರು. ಸಂಘಟನೆಯ ಐನೂರಕ್ಕೂ ಹೆಚ್ಚು ಮಂದಿ ಸಮಾವೇಶದಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>