<p><strong>ಬೆಂಗಳೂರು: </strong>‘ದೇಶದಲ್ಲಿ ವ್ಯಾಪಕವಾಗಿರುವ ಭ್ರಷ್ಟಾಚಾರ ವ್ಯವಸ್ಥೆಯನ್ನು ಹೋಗಲಾಡಿಸಲು ಯುವ ಮತದಾರರಿಂದ ಮಾತ್ರ ಸಾಧ್ಯ’ ಎಂದು ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಎಂ.ಎನ್.ವೆಂಕಟಾಚಲಯ್ಯ ಅಭಿಪ್ರಾಯಪಟ್ಟರು.<br /> <br /> ‘ಪಬ್ಲಿಕ್ ಅಫೇರ್ಸ್ ಸೆಂಟರ್’ ನಗರದಲ್ಲಿ ಸೋಮವಾರ ಆಯೋಜಿಸಿದ್ದ ಅಂತರರಾಷ್ಟ್ರೀಯ ಭ್ರಷ್ಟಾಚಾರ ವಿರೋಧಿ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.<br /> <br /> ‘ದೆಹಲಿಯ ವಿಧಾನಸಭಾಕ್ಷೇತ್ರದ ಚುನಾವಣೆಯಲ್ಲಿ ಹಣ, ಹೆಂಡದ ಆಮಿಷವಿಲ್ಲದೇ ಆಮ್ ಆದ್ಮಿ ಪಕ್ಷವು 28 ಸ್ಥಾನಗಳಿಸಲು ಸಾಧ್ಯವಾಗಿರುವುದು ಯುವ ಮತದಾರರಿಂದಲೇ. ಇದೊಂದು ಐತಿಹಾಸಿಕ ಕ್ಷಣ’ ಎಂದು ಬಣ್ಣಿಸಿದರು.<br /> <br /> ‘ಸಾಮಾಜಿಕ ಕಾರ್ಯಕರ್ತರು, ಹಿರಿಯ ಪತ್ರಕರ್ತರು ಹಾಗೂ ನಾಗರಿಕ ಹಕ್ಕಿಗಾಗಿ ದುಡಿಯುವ ಸಂಘಟನೆಗಳ ಸದಸ್ಯರನ್ನು ಒಳಗೊಂಡ ಸಮಿತಿಯನ್ನು ಜಿಲ್ಲೆಗಳಲ್ಲಿ ರಚಿಸಬೇಕು. ಗ್ರಾಮ ಹಾಗೂ ಜಿಲ್ಲೆಗಳಲ್ಲಿ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ದೂರುಗಳನ್ನು ಆಲಿಸಿ, ಲೋಕಾಯುಕ್ತ ಸಂಸ್ಥೆ ಗಮನಕ್ಕೆ ತರುವ ಕಾರ್ಯವನ್ನು ಈ ಸಮಿತಿ ಮಾಡಬೇಕು. ಈ ಬಗ್ಗೆ ಲೋಕಾಯುಕ್ತರೊಂದಿಗೆ ಸದ್ಯದಲ್ಲೇ ಚರ್ಚೆ ನಡೆಸಲಿದ್ದೇನೆ’ ಎಂದು ತಿಳಿಸಿದರು.<br /> <br /> ‘ರಾಜಕೀಯ ಹಾಗೂ ಚುನಾವಣೆ ವ್ಯವಸ್ಥೆಗಳೆರಡೂ ಶೀಘ್ರಗತಿಯಲ್ಲಿ ಬದಲಾಗಬೇಕು. ಇಲ್ಲವಾದರೆ ದೇಶ ನಿರೀಕ್ಷಿತ ಪ್ರಮಾಣದಲ್ಲಿ ಮುಂದುವರಿಯಲು ಸಾಧ್ಯವಾಗುವುದಿಲ್ಲ. ವಿಜ್ಞಾನ ಹಾಗೂ ಸಂಶೋಧನೆಯೆಡೆಗೆ ಮಕ್ಕಳನ್ನು ಸೆಳೆಯುವುದರ ಜತೆಗೆ ನೈತಿಕ ಪ್ರಜ್ಞೆಯನ್ನು ಬೆಳೆಸಬೇಕಿದೆ’ ಎಂದು ಸಲಹೆ ನೀಡಿದರು.<br /> <br /> ಚಿತ್ರಕಲಾ ಹಾಗೂ ಪ್ರಬಂಧ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ಸೆಂಟರ್ ಸಂಸ್ಥಾಪಕ ಡಾ.ಸ್ಯಾಮುಯೆಲ್ ಪೌಲ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ದೇಶದಲ್ಲಿ ವ್ಯಾಪಕವಾಗಿರುವ ಭ್ರಷ್ಟಾಚಾರ ವ್ಯವಸ್ಥೆಯನ್ನು ಹೋಗಲಾಡಿಸಲು ಯುವ ಮತದಾರರಿಂದ ಮಾತ್ರ ಸಾಧ್ಯ’ ಎಂದು ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಎಂ.ಎನ್.ವೆಂಕಟಾಚಲಯ್ಯ ಅಭಿಪ್ರಾಯಪಟ್ಟರು.<br /> <br /> ‘ಪಬ್ಲಿಕ್ ಅಫೇರ್ಸ್ ಸೆಂಟರ್’ ನಗರದಲ್ಲಿ ಸೋಮವಾರ ಆಯೋಜಿಸಿದ್ದ ಅಂತರರಾಷ್ಟ್ರೀಯ ಭ್ರಷ್ಟಾಚಾರ ವಿರೋಧಿ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.<br /> <br /> ‘ದೆಹಲಿಯ ವಿಧಾನಸಭಾಕ್ಷೇತ್ರದ ಚುನಾವಣೆಯಲ್ಲಿ ಹಣ, ಹೆಂಡದ ಆಮಿಷವಿಲ್ಲದೇ ಆಮ್ ಆದ್ಮಿ ಪಕ್ಷವು 28 ಸ್ಥಾನಗಳಿಸಲು ಸಾಧ್ಯವಾಗಿರುವುದು ಯುವ ಮತದಾರರಿಂದಲೇ. ಇದೊಂದು ಐತಿಹಾಸಿಕ ಕ್ಷಣ’ ಎಂದು ಬಣ್ಣಿಸಿದರು.<br /> <br /> ‘ಸಾಮಾಜಿಕ ಕಾರ್ಯಕರ್ತರು, ಹಿರಿಯ ಪತ್ರಕರ್ತರು ಹಾಗೂ ನಾಗರಿಕ ಹಕ್ಕಿಗಾಗಿ ದುಡಿಯುವ ಸಂಘಟನೆಗಳ ಸದಸ್ಯರನ್ನು ಒಳಗೊಂಡ ಸಮಿತಿಯನ್ನು ಜಿಲ್ಲೆಗಳಲ್ಲಿ ರಚಿಸಬೇಕು. ಗ್ರಾಮ ಹಾಗೂ ಜಿಲ್ಲೆಗಳಲ್ಲಿ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ದೂರುಗಳನ್ನು ಆಲಿಸಿ, ಲೋಕಾಯುಕ್ತ ಸಂಸ್ಥೆ ಗಮನಕ್ಕೆ ತರುವ ಕಾರ್ಯವನ್ನು ಈ ಸಮಿತಿ ಮಾಡಬೇಕು. ಈ ಬಗ್ಗೆ ಲೋಕಾಯುಕ್ತರೊಂದಿಗೆ ಸದ್ಯದಲ್ಲೇ ಚರ್ಚೆ ನಡೆಸಲಿದ್ದೇನೆ’ ಎಂದು ತಿಳಿಸಿದರು.<br /> <br /> ‘ರಾಜಕೀಯ ಹಾಗೂ ಚುನಾವಣೆ ವ್ಯವಸ್ಥೆಗಳೆರಡೂ ಶೀಘ್ರಗತಿಯಲ್ಲಿ ಬದಲಾಗಬೇಕು. ಇಲ್ಲವಾದರೆ ದೇಶ ನಿರೀಕ್ಷಿತ ಪ್ರಮಾಣದಲ್ಲಿ ಮುಂದುವರಿಯಲು ಸಾಧ್ಯವಾಗುವುದಿಲ್ಲ. ವಿಜ್ಞಾನ ಹಾಗೂ ಸಂಶೋಧನೆಯೆಡೆಗೆ ಮಕ್ಕಳನ್ನು ಸೆಳೆಯುವುದರ ಜತೆಗೆ ನೈತಿಕ ಪ್ರಜ್ಞೆಯನ್ನು ಬೆಳೆಸಬೇಕಿದೆ’ ಎಂದು ಸಲಹೆ ನೀಡಿದರು.<br /> <br /> ಚಿತ್ರಕಲಾ ಹಾಗೂ ಪ್ರಬಂಧ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ಸೆಂಟರ್ ಸಂಸ್ಥಾಪಕ ಡಾ.ಸ್ಯಾಮುಯೆಲ್ ಪೌಲ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>