<p><strong>ನವದೆಹಲಿ (ಪಿಟಿಐ):</strong> ಭ್ರಷ್ಟಾಚಾರ ಮುಕ್ತ, ಉತ್ತಮ ಆಡಳಿತ ನಡೆಸುವ ವಿಷಯದಲ್ಲಿ ಮತದಾರ ಈ ಚುನಾವಣೆಯಲ್ಲಿ ಸ್ಪಷ್ಟ ಸಂದೇಶ ನೀಡಿದ್ದಾನೆ ಎಂದು ಹಲವು ಉದ್ಯಮಪತಿಗಳು ಅಭಿಪ್ರಾಯಪಟ್ಟಿದ್ದಾರೆ.<br /> <br /> ‘ಭ್ರಷ್ಟಾಚಾರ ತಡೆಗಟ್ಟಿ ರಾಜಕೀಯ ನಾಯಕತ್ವ ಗಟ್ಟಿಗೊಳಿಸುವಲ್ಲಿ ವಿಫಲವಾದ ಕಾಂಗ್ರೆಸ್ಗೆ ಮತದಾರ ಪಾಠ ಕಲಿಸಿದ್ದಾನೆ’ ಎಂದು ಕಿರಣ್ ಮುಜುಮ್ದಾರ್ ಷಾ ಹೇಳಿದ್ದಾರೆ.<br /> <br /> ‘ಭ್ರಷ್ಟಚಾರದ ವಿರುದ್ಧ ಸಂಘರ್ಷಕ್ಕೆ ಇಳಿದ ಆಮ್ ಆದ್ಮಿ ಪಾರ್ಟಿಗೆ ದೆಹಲಿಯ ಮತದಾರರು ಮಣೆ ಹಾಕಿದ್ದಾರೆ. ಭ್ರಷ್ಟಾಚಾರದಿಂದ ಕೂಡಿದ ಆಡಳಿತ ವ್ಯವಸ್ಥೆಯನ್ನು ಕಿತ್ತೆಸೆಯಲು ಜನ ಕಾಯುತ್ತಿದ್ದರು. ಪಾರದರ್ಶಕ ಹಾಗೂ ಜವಾಬ್ದಾರಿಯುತ ಆಡಳಿತ ಜನರಿಗೆ ಬೇಕಾಗಿದೆ’ ಎಂದು ಷಾ ಟ್ವೀಟ್ ಮಾಡಿದ್ದಾರೆ.<br /> <br /> ವಾಣಿಜ್ಯೋದ್ಯಮ ಮಹಾಸಂಘ ‘ಅಸೋಚಾಂ’ ಅಭಿಪ್ರಾಯಪಟ್ಟಂತೆ, ‘ಈ ಫಲಿತಾಂಶಗಳು ಆಯಾ ರಾಜ್ಯ ಸರ್ಕಾರಗಳು ತೋರಿದ ಆಡಳಿತ ವೈಫಲ್ಯವನ್ನು ಸ್ಪಷ್ಟವಾಗಿ ಹೇಳುತ್ತವೆ’ ಎಂದಿದೆ.<br /> <br /> ‘ಈ ಬಾರಿಯ ಚುನಾವಣೆಯಲ್ಲಿ ಫಲಿತಾಂಶದ ಮೇಲೆ ಪರಿಣಾಮ ಬೀರುವ ಜಾತಿ ಹಾಗೂ ಧರ್ಮದ ಅಂಶಗಳಿಗೆ ಮತದಾರರು ಅಷ್ಟಾಗಿ ಗಮನಕೊಡದೆ ಉತ್ತಮ ಆಡಳಿತಕ್ಕೆ ಆದ್ಯತೆ ನೀಡಿದ್ದಾರೆ. ಬೆಲೆ ಏರಿಕೆ ವಿಷಯವೂ ಈ ಚುನಾವಣೆಯಲ್ಲಿ ಮತದಾರರ ಮೇಲೆ ಗಾಢ ಪರಿಣಾಮ ಬೀರಿದೆ’ ಎಂದು ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಡಿ.ಎಸ್. ರಾವತ್ ತಿಳಿಸಿದ್ದಾರೆ.<br /> <br /> ‘ತರಕಾರಿ, ಅಗತ್ಯ ವಸ್ತುಗಳ ನಿರಂತರ ಬೆಲೆ ಏರಿಕೆಯಿಂದ ಜನ ಆಕ್ರೋಶ ಗೊಂಡಿದ್ದು, ಇದು ಫಲಿತಾಂಶದ ಮೇಲೆ ಸಾಕಷ್ಟು ಪರಿಣಾಮ ಬೀರಿದೆ’ ಎಂದು ಪಿಎಚ್ಡಿ ವಾಣಿಜ್ಯೋದ್ಯಮ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಸೌರಭ ಸನ್ಯಾಲ್ ಹೇಳಿದರು.<br /> ‘ಮತದಾರರಿಗೆ ಪರ್ಯಾಯ ಮಾರ್ಗವೇ ಇರಲಿಲ್ಲ. ಹಾಗಾಗಿ ಎಎಪಿ ಈ ಚುನಾವಣೆಯಲ್ಲಿ ತನ್ನ ಶಕ್ತಿ ತೋರಿಸಿದೆ’ ಎಂದು ಬ್ಯಾಂಕ್ ಉದ್ಯೋಗಿ ಮೀರಾ ಸನ್ಯಾಲ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ):</strong> ಭ್ರಷ್ಟಾಚಾರ ಮುಕ್ತ, ಉತ್ತಮ ಆಡಳಿತ ನಡೆಸುವ ವಿಷಯದಲ್ಲಿ ಮತದಾರ ಈ ಚುನಾವಣೆಯಲ್ಲಿ ಸ್ಪಷ್ಟ ಸಂದೇಶ ನೀಡಿದ್ದಾನೆ ಎಂದು ಹಲವು ಉದ್ಯಮಪತಿಗಳು ಅಭಿಪ್ರಾಯಪಟ್ಟಿದ್ದಾರೆ.<br /> <br /> ‘ಭ್ರಷ್ಟಾಚಾರ ತಡೆಗಟ್ಟಿ ರಾಜಕೀಯ ನಾಯಕತ್ವ ಗಟ್ಟಿಗೊಳಿಸುವಲ್ಲಿ ವಿಫಲವಾದ ಕಾಂಗ್ರೆಸ್ಗೆ ಮತದಾರ ಪಾಠ ಕಲಿಸಿದ್ದಾನೆ’ ಎಂದು ಕಿರಣ್ ಮುಜುಮ್ದಾರ್ ಷಾ ಹೇಳಿದ್ದಾರೆ.<br /> <br /> ‘ಭ್ರಷ್ಟಚಾರದ ವಿರುದ್ಧ ಸಂಘರ್ಷಕ್ಕೆ ಇಳಿದ ಆಮ್ ಆದ್ಮಿ ಪಾರ್ಟಿಗೆ ದೆಹಲಿಯ ಮತದಾರರು ಮಣೆ ಹಾಕಿದ್ದಾರೆ. ಭ್ರಷ್ಟಾಚಾರದಿಂದ ಕೂಡಿದ ಆಡಳಿತ ವ್ಯವಸ್ಥೆಯನ್ನು ಕಿತ್ತೆಸೆಯಲು ಜನ ಕಾಯುತ್ತಿದ್ದರು. ಪಾರದರ್ಶಕ ಹಾಗೂ ಜವಾಬ್ದಾರಿಯುತ ಆಡಳಿತ ಜನರಿಗೆ ಬೇಕಾಗಿದೆ’ ಎಂದು ಷಾ ಟ್ವೀಟ್ ಮಾಡಿದ್ದಾರೆ.<br /> <br /> ವಾಣಿಜ್ಯೋದ್ಯಮ ಮಹಾಸಂಘ ‘ಅಸೋಚಾಂ’ ಅಭಿಪ್ರಾಯಪಟ್ಟಂತೆ, ‘ಈ ಫಲಿತಾಂಶಗಳು ಆಯಾ ರಾಜ್ಯ ಸರ್ಕಾರಗಳು ತೋರಿದ ಆಡಳಿತ ವೈಫಲ್ಯವನ್ನು ಸ್ಪಷ್ಟವಾಗಿ ಹೇಳುತ್ತವೆ’ ಎಂದಿದೆ.<br /> <br /> ‘ಈ ಬಾರಿಯ ಚುನಾವಣೆಯಲ್ಲಿ ಫಲಿತಾಂಶದ ಮೇಲೆ ಪರಿಣಾಮ ಬೀರುವ ಜಾತಿ ಹಾಗೂ ಧರ್ಮದ ಅಂಶಗಳಿಗೆ ಮತದಾರರು ಅಷ್ಟಾಗಿ ಗಮನಕೊಡದೆ ಉತ್ತಮ ಆಡಳಿತಕ್ಕೆ ಆದ್ಯತೆ ನೀಡಿದ್ದಾರೆ. ಬೆಲೆ ಏರಿಕೆ ವಿಷಯವೂ ಈ ಚುನಾವಣೆಯಲ್ಲಿ ಮತದಾರರ ಮೇಲೆ ಗಾಢ ಪರಿಣಾಮ ಬೀರಿದೆ’ ಎಂದು ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಡಿ.ಎಸ್. ರಾವತ್ ತಿಳಿಸಿದ್ದಾರೆ.<br /> <br /> ‘ತರಕಾರಿ, ಅಗತ್ಯ ವಸ್ತುಗಳ ನಿರಂತರ ಬೆಲೆ ಏರಿಕೆಯಿಂದ ಜನ ಆಕ್ರೋಶ ಗೊಂಡಿದ್ದು, ಇದು ಫಲಿತಾಂಶದ ಮೇಲೆ ಸಾಕಷ್ಟು ಪರಿಣಾಮ ಬೀರಿದೆ’ ಎಂದು ಪಿಎಚ್ಡಿ ವಾಣಿಜ್ಯೋದ್ಯಮ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಸೌರಭ ಸನ್ಯಾಲ್ ಹೇಳಿದರು.<br /> ‘ಮತದಾರರಿಗೆ ಪರ್ಯಾಯ ಮಾರ್ಗವೇ ಇರಲಿಲ್ಲ. ಹಾಗಾಗಿ ಎಎಪಿ ಈ ಚುನಾವಣೆಯಲ್ಲಿ ತನ್ನ ಶಕ್ತಿ ತೋರಿಸಿದೆ’ ಎಂದು ಬ್ಯಾಂಕ್ ಉದ್ಯೋಗಿ ಮೀರಾ ಸನ್ಯಾಲ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>