<p>ಚಿಕ್ಕಮಗಳೂರು: ವಿದೇಶದಲ್ಲಿರುವ ಕಪ್ಪುಹಣವನ್ನು ಮರಳಿ ದೇಶಕ್ಕೆ ತರಬೇಕೆಂದು ಒತ್ತಾಯಿಸಿ, ಭ್ರಷ್ಟಾಚಾರ ವಿರೋಧಿಸಿ ಜಿಲ್ಲಾಧಿಕಾರಿ ಕಚೇರಿ ಬಳಿ ಮಂಗಳವಾರ ~ಭ್ರಷ್ಟಾಚಾರ ವಿರುದ್ಧ ಯುವ ಸಂಘಟನೆ~ಯ ಕಾರ್ಯಕರ್ತರು ಧರಣಿ ನಡೆಸಿದರು.<br /> <br /> ಆರು ತಿಂಗಳಿನಿಂದ ಭ್ರಷ್ಟಾಚಾರ ವಿರೋಧಿಸಿ ಯುವಜನರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರ ಮಾತ್ರ ಭ್ರಷ್ಟಾಚಾರ ನಿಯಂತ್ರಣಕ್ಕೆ ಕಡಿವಾಣ ಹಾಕಲು ಮುಂದಾಗಿಯೇ ಇಲ್ಲ ಎಂದು ಧರಣಿ ನಿರತರು ಆಕ್ರೋಶ ವ್ಯಕ್ತಪಡಿಸಿದರು.<br /> <br /> ವಿದೇಶದಲ್ಲಿರುವ ಕಪ್ಪುಹಣವನ್ನು ಮರಳಿ ದೇಶಕ್ಕೆ ತಂದು ದೇಶದ ಸಂಪತ್ತು ಎಂದು ಘೋಷಿಸಬೇಕು. ಆ ಹಣವನ್ನು ಅಭಿವೃದ್ಧಿ ಕೆಲಸಗಳಿಗೆ ಬಳಸಿಕೊಳ್ಳಬೇಕು ಎಂದರು.<br /> <br /> ದೇಶದಲ್ಲಿರುವ ಕಪ್ಪು ಹಣ ನಿಯಂತ್ರಿಸಲು ಅನುಕೂಲವಾಗುವಂತೆ ರೂ. 1 ಸಾವಿರ ಮತ್ತು 500ರ ಮುಖಬೆಲೆ ನೋಟುಗಳನ್ನು ನಿಷೇಧಿಸಬೇಕು ಎಂದೂ ಮನವಿಯಲ್ಲಿ ಒತ್ತಾಯಿಸಿದ್ದಾರೆ. ಮನವಿಪತ್ರವನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಹೊನಕೇರಿ ಅವರು ಸ್ವೀಕರಿಸಿದರು.<br /> <br /> ~ಭ್ರಷ್ಟಾಚಾರ ವಿರುದ್ಧ ಸಂಘಟನೆ~ಯ ಸಂಚಾಲಕ ಎಂ.ಸಿ.ಜಗದೀಶ್, ಮುಖಂಡರಾದ ಸೀತಾರಾಮ್ ಭರಣ್ಯ, ದಯಾನಂದ ತಿರುಗಣ, ಸಂತೋಷ್ ಕೊಟ್ಯಾನ್, ಕೋಟೆರಾಜು, ಪ್ರದೀಪ್, ಮಂಜುನಾಥ ಪ್ರತಿಭಟನೆಯಲ್ಲಿದ್ದರು. <br /> ತಹಸೀಲ್ದಾರ್ ಮತ್ತು ಜಿಲ್ಲಾಧಿಕಾರಿ ಕಚೇರಿ ಎದುರು ನ. 1ರಂದು ಪ್ರತಿಭಟನೆ ನಡೆಸುವುದಾಗಿ ಸಂಘಟನೆಯ ಮುಖಂಡರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕಮಗಳೂರು: ವಿದೇಶದಲ್ಲಿರುವ ಕಪ್ಪುಹಣವನ್ನು ಮರಳಿ ದೇಶಕ್ಕೆ ತರಬೇಕೆಂದು ಒತ್ತಾಯಿಸಿ, ಭ್ರಷ್ಟಾಚಾರ ವಿರೋಧಿಸಿ ಜಿಲ್ಲಾಧಿಕಾರಿ ಕಚೇರಿ ಬಳಿ ಮಂಗಳವಾರ ~ಭ್ರಷ್ಟಾಚಾರ ವಿರುದ್ಧ ಯುವ ಸಂಘಟನೆ~ಯ ಕಾರ್ಯಕರ್ತರು ಧರಣಿ ನಡೆಸಿದರು.<br /> <br /> ಆರು ತಿಂಗಳಿನಿಂದ ಭ್ರಷ್ಟಾಚಾರ ವಿರೋಧಿಸಿ ಯುವಜನರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರ ಮಾತ್ರ ಭ್ರಷ್ಟಾಚಾರ ನಿಯಂತ್ರಣಕ್ಕೆ ಕಡಿವಾಣ ಹಾಕಲು ಮುಂದಾಗಿಯೇ ಇಲ್ಲ ಎಂದು ಧರಣಿ ನಿರತರು ಆಕ್ರೋಶ ವ್ಯಕ್ತಪಡಿಸಿದರು.<br /> <br /> ವಿದೇಶದಲ್ಲಿರುವ ಕಪ್ಪುಹಣವನ್ನು ಮರಳಿ ದೇಶಕ್ಕೆ ತಂದು ದೇಶದ ಸಂಪತ್ತು ಎಂದು ಘೋಷಿಸಬೇಕು. ಆ ಹಣವನ್ನು ಅಭಿವೃದ್ಧಿ ಕೆಲಸಗಳಿಗೆ ಬಳಸಿಕೊಳ್ಳಬೇಕು ಎಂದರು.<br /> <br /> ದೇಶದಲ್ಲಿರುವ ಕಪ್ಪು ಹಣ ನಿಯಂತ್ರಿಸಲು ಅನುಕೂಲವಾಗುವಂತೆ ರೂ. 1 ಸಾವಿರ ಮತ್ತು 500ರ ಮುಖಬೆಲೆ ನೋಟುಗಳನ್ನು ನಿಷೇಧಿಸಬೇಕು ಎಂದೂ ಮನವಿಯಲ್ಲಿ ಒತ್ತಾಯಿಸಿದ್ದಾರೆ. ಮನವಿಪತ್ರವನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಹೊನಕೇರಿ ಅವರು ಸ್ವೀಕರಿಸಿದರು.<br /> <br /> ~ಭ್ರಷ್ಟಾಚಾರ ವಿರುದ್ಧ ಸಂಘಟನೆ~ಯ ಸಂಚಾಲಕ ಎಂ.ಸಿ.ಜಗದೀಶ್, ಮುಖಂಡರಾದ ಸೀತಾರಾಮ್ ಭರಣ್ಯ, ದಯಾನಂದ ತಿರುಗಣ, ಸಂತೋಷ್ ಕೊಟ್ಯಾನ್, ಕೋಟೆರಾಜು, ಪ್ರದೀಪ್, ಮಂಜುನಾಥ ಪ್ರತಿಭಟನೆಯಲ್ಲಿದ್ದರು. <br /> ತಹಸೀಲ್ದಾರ್ ಮತ್ತು ಜಿಲ್ಲಾಧಿಕಾರಿ ಕಚೇರಿ ಎದುರು ನ. 1ರಂದು ಪ್ರತಿಭಟನೆ ನಡೆಸುವುದಾಗಿ ಸಂಘಟನೆಯ ಮುಖಂಡರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>