<p>ಚಿಕ್ಕಮಗಳೂರು: ರಾಜ್ಯ ಸರ್ಕಾರ ಬಲು ಭ್ರಷ್ಟವಾಗಿದೆ ಎಂದು ಖಂಡಿಸಿರುವ ಜೆಡಿಎಸ್ ಜಿಲ್ಲಾ ಘಟಕ, ಬುಧವಾರ ನಗರದಲ್ಲಿ ಅಣಕು ಶವಯಾತ್ರೆ ನಡೆಸಿ ಆಜಾದ್ ಮೈದಾನ ವೃತ್ತದಲ್ಲಿ ಸರ್ಕಾರದ ಪ್ರತಿಕೃತಿ ದಹಿಸಿತು.<br /> <br /> ಪಕ್ಷದ ಜಿಲ್ಲಾ ಘಟಕ ಅಧ್ಯಕ್ಷ ಎಚ್.ಎಚ್.ದೇವರಾಜ್, ಮಾಜಿ ಶಾಸಕ ಎಸ್.ಎಲ್. ಧರ್ಮೇಗೌಡ, ರಾಜ್ಯ ಸಮಿತಿ ಸದಸ್ಯ ಎಸ್.ಎಲ್.ಭೋಜೇಗೌಡ ಮಾತನಾಡಿ, ಭ್ರಷ್ಟಾಚಾರ ಮತ್ತು ಸ್ವಜನ ಪಕ್ಷಪಾತದಲ್ಲಿ ನಿರತವಾಗಿರುವ ಬಿಜೆಪಿ ಸರ್ಕಾರವನ್ನು ರಾಜ್ಯದ ಜನತೆ ತೊಲಗಿಸಬೇಕೆಂದು ಮನವಿ ಮಾಡಿದರು.<br /> <br /> ರಸಗೊಬ್ಬರ ಕೇಳಿದ ಹಾವೇರಿ ರೈತರ ಮೇಲೆ ಗುಂಡು ಹಾರಿಸಲಾಯಿತು. ರೈತರ ಆತ್ಮಹತ್ಯೆ ತಡೆಯುವಲ್ಲಿ ವಿಫಲವಾಗಿದ್ದರೂ ರೈತರ ಸರ್ಕಾರ ಎಂದು ಹೇಳಿ ಕೊಳ್ಳುವುದರಲ್ಲಿ ಅರ್ಥವಿಲ್ಲ ಎಂದು ಟೀಕಿಸಿದರು.<br /> <br /> ಇದಕ್ಕೂ ಮುನ್ನ ಪಕ್ಷದ ಜಿಲ್ಲಾ ಕಚೇರಿಯಿಂದ ಮೆರವಣಿಗೆ ಹೊರಟ ಪಕ್ಷದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಹೆಚ್ಚುವರಿ ಜಿಲ್ಲಾಧಿಕಾರಿ ಸುಬ್ರಾಯ ಕಾಮತ್ ಅವರಿಗೆ ಮನವಿ ಸಲ್ಲಿಸಿದರು. <br /> <br /> ಪಕ್ಷದ ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಚಂದ್ರಪ್ಪ, ಉಮಾ, ಐ.ಬಿ.ಶಂಕರ್, ಮುಖಂಡರಾದ ಹೊಲದಗದ್ದೆ ಗಿರೀಶ್, ಹಂಪಯ್ಯ, ಅನಿಲ್ ಕುಮಾರ್, ರಮೇಶ್, ಕೋಟೆ ಹರೀಶ್, ಜಯರಾಜ್, ಐ.ಡಿ.ಚಂದ್ರಶೇಖರ್ ಪ್ರತಿಭಟನೆಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕಮಗಳೂರು: ರಾಜ್ಯ ಸರ್ಕಾರ ಬಲು ಭ್ರಷ್ಟವಾಗಿದೆ ಎಂದು ಖಂಡಿಸಿರುವ ಜೆಡಿಎಸ್ ಜಿಲ್ಲಾ ಘಟಕ, ಬುಧವಾರ ನಗರದಲ್ಲಿ ಅಣಕು ಶವಯಾತ್ರೆ ನಡೆಸಿ ಆಜಾದ್ ಮೈದಾನ ವೃತ್ತದಲ್ಲಿ ಸರ್ಕಾರದ ಪ್ರತಿಕೃತಿ ದಹಿಸಿತು.<br /> <br /> ಪಕ್ಷದ ಜಿಲ್ಲಾ ಘಟಕ ಅಧ್ಯಕ್ಷ ಎಚ್.ಎಚ್.ದೇವರಾಜ್, ಮಾಜಿ ಶಾಸಕ ಎಸ್.ಎಲ್. ಧರ್ಮೇಗೌಡ, ರಾಜ್ಯ ಸಮಿತಿ ಸದಸ್ಯ ಎಸ್.ಎಲ್.ಭೋಜೇಗೌಡ ಮಾತನಾಡಿ, ಭ್ರಷ್ಟಾಚಾರ ಮತ್ತು ಸ್ವಜನ ಪಕ್ಷಪಾತದಲ್ಲಿ ನಿರತವಾಗಿರುವ ಬಿಜೆಪಿ ಸರ್ಕಾರವನ್ನು ರಾಜ್ಯದ ಜನತೆ ತೊಲಗಿಸಬೇಕೆಂದು ಮನವಿ ಮಾಡಿದರು.<br /> <br /> ರಸಗೊಬ್ಬರ ಕೇಳಿದ ಹಾವೇರಿ ರೈತರ ಮೇಲೆ ಗುಂಡು ಹಾರಿಸಲಾಯಿತು. ರೈತರ ಆತ್ಮಹತ್ಯೆ ತಡೆಯುವಲ್ಲಿ ವಿಫಲವಾಗಿದ್ದರೂ ರೈತರ ಸರ್ಕಾರ ಎಂದು ಹೇಳಿ ಕೊಳ್ಳುವುದರಲ್ಲಿ ಅರ್ಥವಿಲ್ಲ ಎಂದು ಟೀಕಿಸಿದರು.<br /> <br /> ಇದಕ್ಕೂ ಮುನ್ನ ಪಕ್ಷದ ಜಿಲ್ಲಾ ಕಚೇರಿಯಿಂದ ಮೆರವಣಿಗೆ ಹೊರಟ ಪಕ್ಷದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಹೆಚ್ಚುವರಿ ಜಿಲ್ಲಾಧಿಕಾರಿ ಸುಬ್ರಾಯ ಕಾಮತ್ ಅವರಿಗೆ ಮನವಿ ಸಲ್ಲಿಸಿದರು. <br /> <br /> ಪಕ್ಷದ ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಚಂದ್ರಪ್ಪ, ಉಮಾ, ಐ.ಬಿ.ಶಂಕರ್, ಮುಖಂಡರಾದ ಹೊಲದಗದ್ದೆ ಗಿರೀಶ್, ಹಂಪಯ್ಯ, ಅನಿಲ್ ಕುಮಾರ್, ರಮೇಶ್, ಕೋಟೆ ಹರೀಶ್, ಜಯರಾಜ್, ಐ.ಡಿ.ಚಂದ್ರಶೇಖರ್ ಪ್ರತಿಭಟನೆಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>