<p><strong>ಬೆಂಗಳೂರು:</strong> `ರಾಜ್ಯ ಪೊಲೀಸ್ ಇಲಾಖೆಯಲ್ಲಿ ದಕ್ಷ ಅಧಿಕಾರಿಗಳು ಇರುವಂತೆಯೇ ಕೆಲ ಭ್ರಷ್ಟ ಅಧಿಕಾರಿಗಳೂ ಇದ್ದಾರೆ. ಅಂತಹ ಭ್ರಷ್ಟ ಅಧಿಕಾರಿಗಳು ತಮ್ಮ ನಡತೆ ತಿದ್ದಿಕೊಳ್ಳದಿದ್ದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ' ಎಂದು ಗೃಹ ಸಚಿವ ಕೆ.ಜೆ.ಜಾರ್ಜ್ ಎಚ್ಚರಿಕೆ ನೀಡಿದರು.<br /> <br /> ಗೃಹ ಸಚಿವರಾದ ಬಳಿಕ ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಗೆ ಶನಿವಾರ ಮೊದಲ ಬಾರಿಗೆ ಭೇಟಿ ನೀಡಿದ ಜಾರ್ಜ್ ಅವರು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.<br /> <br /> ರಾಜ್ಯ ಪೊಲೀಸ್ ಇಲಾಖೆಯು ರಾಷ್ಟ್ರ ಮಟ್ಟದಲ್ಲಿ ಒಳ್ಳೆಯ ಹೆಸರು ಗಳಿಸಿದೆ. ಆದರೆ, ಕೆಲ ಭ್ರಷ್ಟ ಅಧಿಕಾರಿಗಳು ಇಲಾಖೆಗೆ ಕೆಟ್ಟ ಹೆಸರು ತರುತ್ತಿದ್ದಾರೆ. ಅಂತಹ ಅಧಿಕಾರಿಗಳು ಅಧಿಕಾರ ದುರ್ಬಳಕೆ ಮಾಡಿಕೊಂಡು ಜೂಜುಕೋರರು ಮತ್ತು ಸಮಾಜಘಾತುಕ ವ್ಯಕ್ತಿಗಳಿಂದ ಹಫ್ತಾ ವಸೂಲು ಮಾಡುತ್ತಿದ್ದಾರೆ. ಈ ಭ್ರಷ್ಟ ಪ್ರವೃತ್ತಿಯನ್ನು ಕೂಡಲೇ ನಿಲ್ಲಿಸಬೇಕು.</p>.<p>ವಿಡಿಯೊ ಪಾರ್ಲರ್ಗಳು, ಮಟ್ಕಾ ಮತ್ತು ಬೆಟ್ಟಿಂಗ್ ದಂಧೆ ನಿಯಂತ್ರಣಕ್ಕೆ ಹಾಗೂ ಮಹಿಳೆಯರ ವಿರುದ್ಧದ ದೌರ್ಜನ್ಯ ತಡೆಗೆ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದರು.<br /> <br /> ಅಧಿವೇಶನ ಮುಗಿದ ಬಳಿಕ ಪ್ರತಿ ಜಿಲ್ಲೆಗೂ ಭೇಟಿ ನೀಡಿ ಇಲಾಖೆಯಲ್ಲಿನ ವಿವಿಧ ವಿಭಾಗಗಳ ಸಮಸ್ಯೆಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುತ್ತೇನೆ. ನಂತರ ಆ ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುತ್ತದೆ. ಇಲಾಖೆಯ ವಿವಿಧ ಘಟಕಗಳಲ್ಲಿನ ಎಂಟು ಸಾವಿರ ಹುದ್ದೆಗಳನ್ನು ಭರ್ತಿ ಮಾಡಲು ಮುಖ್ಯಮಂತ್ರಿಗಳು ಈಗಾಗಲೇ ಒಪ್ಪಿಗೆ ಸೂಚಿಸಿದ್ದಾರೆ ಎಂದು ಹೇಳಿದರು.</p>.<p><br /> ನಕ್ಸಲ್ಪೀಡಿತ ಪ್ರದೇಶಗಳ ಅಭಿವೃದ್ಧಿಗೆ ಈಗಾಗಲೇ ್ಙ 5 ಕೋಟಿ ಬಿಡುಗಡೆ ಮಾಡಲಾಗಿದೆ.ನಕ್ಸಲ್ ನಿಗ್ರಹ ಪಡೆಯ (ಎಎನ್ಎಫ್) ಬಲವರ್ಧನೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ನಕ್ಸಲ್ ಪ್ಯಾಕೇಜ್ ಬಗ್ಗೆ ಪರಾಮರ್ಶೆ ನಡೆಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಸೂಚಿಸಲಾಗಿದೆ.</p>.<p>ನಕ್ಸಲರ ಶರಣಾಗತಿ ನೀತಿಯನ್ನು ಮತ್ತಷ್ಟು ಸರಳಗೊಳಿಸಲು ನಿರ್ಧರಿಸಲಾಗಿದೆ. ನಕ್ಸಲರು ತಮ್ಮ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತಂದರೆ ಕಾನೂನಿನ ಚೌಕಟ್ಟಿನಲ್ಲಿ ಅವುಗಳನ್ನು ಈಡೇರಿಸಲಾಗುತ್ತದೆ.</p>.<p>ಎಎನ್ಎಫ್ನಲ್ಲಿ ಕಾರ್ಯ ನಿರ್ವಹಿಸಲು ಸ್ವಇಚ್ಛೆಯಿಂದ ಮುಂದೆ ಬರುವ ಸಿಬ್ಬಂದಿಗೆ ಹೆಚ್ಚಿನ ವೇತನ ಮತ್ತು ಬಡ್ತಿ ನೀಡಲಾಗುತ್ತದೆ ಎಂದರು.<br /> <br /> ರಾಜ್ಯ ಪೊಲೀಸ್ ಮಹಾನಿರ್ದೇಶಕ ಲಾಲ್ ರೋಕುಮಾ ಪಚಾವೊ, ಅಪರಾಧ ಮತ್ತು ತಾಂತ್ರಿಕ ಸೇವೆಗಳ ವಿಭಾಗದ ಎಡಿಜಿಪಿ ಎ.ಎಂ.ಪ್ರಸಾದ್, ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಬಿಪಿನ್ ಗೋಪಾಲಕೃಷ್ಣ ಸೇರಿದಂತೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> `ರಾಜ್ಯ ಪೊಲೀಸ್ ಇಲಾಖೆಯಲ್ಲಿ ದಕ್ಷ ಅಧಿಕಾರಿಗಳು ಇರುವಂತೆಯೇ ಕೆಲ ಭ್ರಷ್ಟ ಅಧಿಕಾರಿಗಳೂ ಇದ್ದಾರೆ. ಅಂತಹ ಭ್ರಷ್ಟ ಅಧಿಕಾರಿಗಳು ತಮ್ಮ ನಡತೆ ತಿದ್ದಿಕೊಳ್ಳದಿದ್ದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ' ಎಂದು ಗೃಹ ಸಚಿವ ಕೆ.ಜೆ.ಜಾರ್ಜ್ ಎಚ್ಚರಿಕೆ ನೀಡಿದರು.<br /> <br /> ಗೃಹ ಸಚಿವರಾದ ಬಳಿಕ ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಗೆ ಶನಿವಾರ ಮೊದಲ ಬಾರಿಗೆ ಭೇಟಿ ನೀಡಿದ ಜಾರ್ಜ್ ಅವರು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.<br /> <br /> ರಾಜ್ಯ ಪೊಲೀಸ್ ಇಲಾಖೆಯು ರಾಷ್ಟ್ರ ಮಟ್ಟದಲ್ಲಿ ಒಳ್ಳೆಯ ಹೆಸರು ಗಳಿಸಿದೆ. ಆದರೆ, ಕೆಲ ಭ್ರಷ್ಟ ಅಧಿಕಾರಿಗಳು ಇಲಾಖೆಗೆ ಕೆಟ್ಟ ಹೆಸರು ತರುತ್ತಿದ್ದಾರೆ. ಅಂತಹ ಅಧಿಕಾರಿಗಳು ಅಧಿಕಾರ ದುರ್ಬಳಕೆ ಮಾಡಿಕೊಂಡು ಜೂಜುಕೋರರು ಮತ್ತು ಸಮಾಜಘಾತುಕ ವ್ಯಕ್ತಿಗಳಿಂದ ಹಫ್ತಾ ವಸೂಲು ಮಾಡುತ್ತಿದ್ದಾರೆ. ಈ ಭ್ರಷ್ಟ ಪ್ರವೃತ್ತಿಯನ್ನು ಕೂಡಲೇ ನಿಲ್ಲಿಸಬೇಕು.</p>.<p>ವಿಡಿಯೊ ಪಾರ್ಲರ್ಗಳು, ಮಟ್ಕಾ ಮತ್ತು ಬೆಟ್ಟಿಂಗ್ ದಂಧೆ ನಿಯಂತ್ರಣಕ್ಕೆ ಹಾಗೂ ಮಹಿಳೆಯರ ವಿರುದ್ಧದ ದೌರ್ಜನ್ಯ ತಡೆಗೆ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದರು.<br /> <br /> ಅಧಿವೇಶನ ಮುಗಿದ ಬಳಿಕ ಪ್ರತಿ ಜಿಲ್ಲೆಗೂ ಭೇಟಿ ನೀಡಿ ಇಲಾಖೆಯಲ್ಲಿನ ವಿವಿಧ ವಿಭಾಗಗಳ ಸಮಸ್ಯೆಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುತ್ತೇನೆ. ನಂತರ ಆ ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುತ್ತದೆ. ಇಲಾಖೆಯ ವಿವಿಧ ಘಟಕಗಳಲ್ಲಿನ ಎಂಟು ಸಾವಿರ ಹುದ್ದೆಗಳನ್ನು ಭರ್ತಿ ಮಾಡಲು ಮುಖ್ಯಮಂತ್ರಿಗಳು ಈಗಾಗಲೇ ಒಪ್ಪಿಗೆ ಸೂಚಿಸಿದ್ದಾರೆ ಎಂದು ಹೇಳಿದರು.</p>.<p><br /> ನಕ್ಸಲ್ಪೀಡಿತ ಪ್ರದೇಶಗಳ ಅಭಿವೃದ್ಧಿಗೆ ಈಗಾಗಲೇ ್ಙ 5 ಕೋಟಿ ಬಿಡುಗಡೆ ಮಾಡಲಾಗಿದೆ.ನಕ್ಸಲ್ ನಿಗ್ರಹ ಪಡೆಯ (ಎಎನ್ಎಫ್) ಬಲವರ್ಧನೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ನಕ್ಸಲ್ ಪ್ಯಾಕೇಜ್ ಬಗ್ಗೆ ಪರಾಮರ್ಶೆ ನಡೆಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಸೂಚಿಸಲಾಗಿದೆ.</p>.<p>ನಕ್ಸಲರ ಶರಣಾಗತಿ ನೀತಿಯನ್ನು ಮತ್ತಷ್ಟು ಸರಳಗೊಳಿಸಲು ನಿರ್ಧರಿಸಲಾಗಿದೆ. ನಕ್ಸಲರು ತಮ್ಮ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತಂದರೆ ಕಾನೂನಿನ ಚೌಕಟ್ಟಿನಲ್ಲಿ ಅವುಗಳನ್ನು ಈಡೇರಿಸಲಾಗುತ್ತದೆ.</p>.<p>ಎಎನ್ಎಫ್ನಲ್ಲಿ ಕಾರ್ಯ ನಿರ್ವಹಿಸಲು ಸ್ವಇಚ್ಛೆಯಿಂದ ಮುಂದೆ ಬರುವ ಸಿಬ್ಬಂದಿಗೆ ಹೆಚ್ಚಿನ ವೇತನ ಮತ್ತು ಬಡ್ತಿ ನೀಡಲಾಗುತ್ತದೆ ಎಂದರು.<br /> <br /> ರಾಜ್ಯ ಪೊಲೀಸ್ ಮಹಾನಿರ್ದೇಶಕ ಲಾಲ್ ರೋಕುಮಾ ಪಚಾವೊ, ಅಪರಾಧ ಮತ್ತು ತಾಂತ್ರಿಕ ಸೇವೆಗಳ ವಿಭಾಗದ ಎಡಿಜಿಪಿ ಎ.ಎಂ.ಪ್ರಸಾದ್, ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಬಿಪಿನ್ ಗೋಪಾಲಕೃಷ್ಣ ಸೇರಿದಂತೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>