<p><strong>ಚಾಮರಾಜನಗರ: </strong>ತಾಲ್ಲೂಕಿನ ಮಂಗಲದಲ್ಲಿ ಗೋಶಾಲೆ ಹಾಗೂ ಕೊಳ್ಳೇಗಾಲ ತಾಲ್ಲೂಕಿನ ಹನೂರು ಭಾಗದ ಬರಪೀಡಿತ ಪ್ರದೇಶಗಳಿಗೆ ಶುಕ್ರವಾರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಪಿ. ರೇಣುಕಾಚಾರ್ಯ ಭೇಟಿ ನೀಡಿ ಪರಿಶೀಲಿಸಿದರು.<br /> <br /> ಮಂಗಲದ ಗೋಶಾಲೆಗೆ ಭೇಟಿ ನೀಡಿದ ಸಚಿವರು, ಜಾನುವಾರುಗಳಿಗೆ ಮೇವು ಪೂರೈಕೆ ಮಾಡುವಲ್ಲಿ ತಾಲ್ಲೂಕು ಆಡಳಿತ ಕೈಗೊಂಡಿರುವ ಕ್ರಮಗಳ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದರು.<br /> <br /> ಮರಗಳಿಗೆ ಜಾನುವಾರು ಕಟ್ಟಿಹಾಕಿ ಮೇವು ಪೂರೈಸಲಾಗುತ್ತಿದೆ. ಇದು ಗೋಶಾಲೆಯಾಗುವುದಿಲ್ಲ. ರಾಸುಗಳಿಗೆ ನೆರಳಿನ ವ್ಯವಸ್ಥೆಯೂ ಇಲ್ಲ. ಮೇವಿನ ರಾಶಿ ಹಾಕಿರುವುದು ಸರಿಯಲ್ಲ. ಕೂಡಲೇ, ಸಮರ್ಪಕ ವ್ಯವಸ್ಥೆ ಕೈಗೊಳ್ಳಲು ಅಧಿಕಾರಿಗಳು ಕ್ರಮವಹಿಸಬೇಕು ಎಂದು ಸೂಚಿಸಿದರು.<br /> <br /> ಚಾಮರಾಜನಗರ, ಗುಂಡ್ಲುಪೇಟೆ ಮತ್ತು ಹನೂರು ಪಟ್ಟಣದಲ್ಲಿ ಮೇವಿನ ಬ್ಯಾಂಕ್ ತೆರೆಯ ಲಾಗಿದೆ. ಯಾವುದೇ, ತೊಂದರೆಯಾಗದಂತೆ ಜಾನುವಾರು ಗಳಿಗೆ ಮೇವು, ಕುಡಿಯುವ ನೀರು ಪೂರೈಕೆ ವ್ಯವಸ್ಥೆ ಕಲ್ಪಿಸಬೇಕು. ಸಂಸದರು, ಶಾಸಕರು ಹಾಗೂ ಸ್ಥಳೀಯ ಜನಪ್ರತಿನಿಧಿಗಳ ಸಹಕಾರದೊಂದಿಗೆ ಬರಪರಿಹಾರ ಕಾಮಗಾರಿ ಕೈಗೊಳ್ಳಲು ಅಧಿಕಾರಿಗಳು ಮುಂದಾಗಬೇಕು ಎಂದರು.<br /> <br /> ಬಳಿಕ ಕೊಳ್ಳೇಗಾಲ ತಾಲ್ಲೂಕಿನ ಮಣಗಳ್ಳಿ ಮತ್ತು ಚಿಂಚಳ್ಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಕುಡಿಯುವ ನೀರು ಪೂರೈಕೆ ಸಂಬಂಧ ಸಮರ್ಪಕವಾದ ವರದಿ ಸಿದ್ಧಪಡಿಸಿ ಸಲ್ಲಿಸಲು ಪಂಚಾಯತ್ರಾಜ್ ಎಂಜಿನಿ ಯರಿಂಗ್ ಅಧಿಕಾರಿಗಳು ಕ್ರಮವಹಿಸಬೇಕು. ವರದಿ ಸಲ್ಲಿಸಿದರೆ ಮುಖ್ಯಮಂತ್ರಿ ಬಳಿಯಲ್ಲಿ ಚರ್ಚಿಸಿ ಅನುದಾನ ಬಿಡುಗಡೆಗೊಳಿಸಲಾಗುವುದು ಎಂದರು.<br /> <br /> ಶಾಸಕ ಆರ್. ನರೇಂದ್ರ, ಜಿ.ಪಂ. ಸದಸ್ಯರಾದ ದೇವ ರಾಜು, ನಾಗೇಂದ್ರಮೂರ್ತಿ, ಜಿಲ್ಲಾಧಿಕಾರಿ ಕೆ.ಆರ್. ಸುಂದರ್, ಉಪ ವಿಭಾಗಾಧಿಕಾರಿ ಎ.ಬಿ. ಬಸವ ರಾಜು, ಜಿ.ಪಂ. ಪ್ರಭಾರ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎ.ಪಿ. ಶಂಕರರಾಜ್ ಸೇರಿದಂತೆ ಅಧಿಕಾರಿಗಳು ಹಾಜರಿದ್ದರು. </p>.<p><strong>ನೋಟಿಸ್ ಜಾರಿಗೆ ಸೂಚನೆ</strong><br /> ಚಾಮರಾಜನಗರ: ಜಿಲ್ಲೆಯಲ್ಲಿ ಮೇವಿನ ಬೀಜದ ಕಿಟ್ ವಿತರಣೆ ಸಂಬಂಧ ಜಿಲ್ಲಾ ಪಶುಪಾಲನಾ ಇಲಾಖೆಯ ಉಪ ನಿರ್ದೇಶಕರ ಬಳಿ ಸಮರ್ಪಕ ಮಾಹಿತಿ ಇಲ್ಲ. ಎಲ್ಲೆಲ್ಲಿ ಮೇವು ಬೆಳೆಸಲಾಗಿದೆ ಎಂಬ ಮಾಹಿತಿಯನ್ನೂ ಹೊಂದಿಲ್ಲ. ಈ ಹಿನ್ನೆಲೆಯಲ್ಲಿ ಅವರಿಗೆ ನೋಟಿಸ್ ನೀಡಿ ಕ್ರಮಕೈಗೊಳ್ಳಬೇಕು ಎಂದು ಸಚಿವ ರೇಣುಕಾಚಾರ್ಯ ಜಿಲ್ಲಾಧಿಕಾರಿಗೆ ಸೂಚಿಸಿದರು.<br /> <br /> ಮಂಗಲದಲ್ಲಿ ಸಮರ್ಪಕವಾಗಿ ಗೋಶಾಲೆ ತೆರೆಯುವಲ್ಲಿ ತಾಲ್ಲೂಕು ಆಡಳಿತ ವೈಫಲ್ಯ ಕಂಡಿದೆ. ಈ ಹಿನ್ನೆಲೆಯಲ್ಲಿ ತಹಶೀಲ್ದಾರ್ಗೂ ನೋಟಿಸ್ ನೀಡುವಂತೆ ಸೂಚಿಸಿದ ಅವರು, ಬರಪರಿಹಾರ ಕಾಮಗಾರಿ ಕೈಗೊಳ್ಳಲು ನಿರ್ಲಕ್ಷ್ಯವಹಿಸುವ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗು ವುದು ಎಂದು ಎಚ್ಚರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ: </strong>ತಾಲ್ಲೂಕಿನ ಮಂಗಲದಲ್ಲಿ ಗೋಶಾಲೆ ಹಾಗೂ ಕೊಳ್ಳೇಗಾಲ ತಾಲ್ಲೂಕಿನ ಹನೂರು ಭಾಗದ ಬರಪೀಡಿತ ಪ್ರದೇಶಗಳಿಗೆ ಶುಕ್ರವಾರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಪಿ. ರೇಣುಕಾಚಾರ್ಯ ಭೇಟಿ ನೀಡಿ ಪರಿಶೀಲಿಸಿದರು.<br /> <br /> ಮಂಗಲದ ಗೋಶಾಲೆಗೆ ಭೇಟಿ ನೀಡಿದ ಸಚಿವರು, ಜಾನುವಾರುಗಳಿಗೆ ಮೇವು ಪೂರೈಕೆ ಮಾಡುವಲ್ಲಿ ತಾಲ್ಲೂಕು ಆಡಳಿತ ಕೈಗೊಂಡಿರುವ ಕ್ರಮಗಳ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದರು.<br /> <br /> ಮರಗಳಿಗೆ ಜಾನುವಾರು ಕಟ್ಟಿಹಾಕಿ ಮೇವು ಪೂರೈಸಲಾಗುತ್ತಿದೆ. ಇದು ಗೋಶಾಲೆಯಾಗುವುದಿಲ್ಲ. ರಾಸುಗಳಿಗೆ ನೆರಳಿನ ವ್ಯವಸ್ಥೆಯೂ ಇಲ್ಲ. ಮೇವಿನ ರಾಶಿ ಹಾಕಿರುವುದು ಸರಿಯಲ್ಲ. ಕೂಡಲೇ, ಸಮರ್ಪಕ ವ್ಯವಸ್ಥೆ ಕೈಗೊಳ್ಳಲು ಅಧಿಕಾರಿಗಳು ಕ್ರಮವಹಿಸಬೇಕು ಎಂದು ಸೂಚಿಸಿದರು.<br /> <br /> ಚಾಮರಾಜನಗರ, ಗುಂಡ್ಲುಪೇಟೆ ಮತ್ತು ಹನೂರು ಪಟ್ಟಣದಲ್ಲಿ ಮೇವಿನ ಬ್ಯಾಂಕ್ ತೆರೆಯ ಲಾಗಿದೆ. ಯಾವುದೇ, ತೊಂದರೆಯಾಗದಂತೆ ಜಾನುವಾರು ಗಳಿಗೆ ಮೇವು, ಕುಡಿಯುವ ನೀರು ಪೂರೈಕೆ ವ್ಯವಸ್ಥೆ ಕಲ್ಪಿಸಬೇಕು. ಸಂಸದರು, ಶಾಸಕರು ಹಾಗೂ ಸ್ಥಳೀಯ ಜನಪ್ರತಿನಿಧಿಗಳ ಸಹಕಾರದೊಂದಿಗೆ ಬರಪರಿಹಾರ ಕಾಮಗಾರಿ ಕೈಗೊಳ್ಳಲು ಅಧಿಕಾರಿಗಳು ಮುಂದಾಗಬೇಕು ಎಂದರು.<br /> <br /> ಬಳಿಕ ಕೊಳ್ಳೇಗಾಲ ತಾಲ್ಲೂಕಿನ ಮಣಗಳ್ಳಿ ಮತ್ತು ಚಿಂಚಳ್ಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಕುಡಿಯುವ ನೀರು ಪೂರೈಕೆ ಸಂಬಂಧ ಸಮರ್ಪಕವಾದ ವರದಿ ಸಿದ್ಧಪಡಿಸಿ ಸಲ್ಲಿಸಲು ಪಂಚಾಯತ್ರಾಜ್ ಎಂಜಿನಿ ಯರಿಂಗ್ ಅಧಿಕಾರಿಗಳು ಕ್ರಮವಹಿಸಬೇಕು. ವರದಿ ಸಲ್ಲಿಸಿದರೆ ಮುಖ್ಯಮಂತ್ರಿ ಬಳಿಯಲ್ಲಿ ಚರ್ಚಿಸಿ ಅನುದಾನ ಬಿಡುಗಡೆಗೊಳಿಸಲಾಗುವುದು ಎಂದರು.<br /> <br /> ಶಾಸಕ ಆರ್. ನರೇಂದ್ರ, ಜಿ.ಪಂ. ಸದಸ್ಯರಾದ ದೇವ ರಾಜು, ನಾಗೇಂದ್ರಮೂರ್ತಿ, ಜಿಲ್ಲಾಧಿಕಾರಿ ಕೆ.ಆರ್. ಸುಂದರ್, ಉಪ ವಿಭಾಗಾಧಿಕಾರಿ ಎ.ಬಿ. ಬಸವ ರಾಜು, ಜಿ.ಪಂ. ಪ್ರಭಾರ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎ.ಪಿ. ಶಂಕರರಾಜ್ ಸೇರಿದಂತೆ ಅಧಿಕಾರಿಗಳು ಹಾಜರಿದ್ದರು. </p>.<p><strong>ನೋಟಿಸ್ ಜಾರಿಗೆ ಸೂಚನೆ</strong><br /> ಚಾಮರಾಜನಗರ: ಜಿಲ್ಲೆಯಲ್ಲಿ ಮೇವಿನ ಬೀಜದ ಕಿಟ್ ವಿತರಣೆ ಸಂಬಂಧ ಜಿಲ್ಲಾ ಪಶುಪಾಲನಾ ಇಲಾಖೆಯ ಉಪ ನಿರ್ದೇಶಕರ ಬಳಿ ಸಮರ್ಪಕ ಮಾಹಿತಿ ಇಲ್ಲ. ಎಲ್ಲೆಲ್ಲಿ ಮೇವು ಬೆಳೆಸಲಾಗಿದೆ ಎಂಬ ಮಾಹಿತಿಯನ್ನೂ ಹೊಂದಿಲ್ಲ. ಈ ಹಿನ್ನೆಲೆಯಲ್ಲಿ ಅವರಿಗೆ ನೋಟಿಸ್ ನೀಡಿ ಕ್ರಮಕೈಗೊಳ್ಳಬೇಕು ಎಂದು ಸಚಿವ ರೇಣುಕಾಚಾರ್ಯ ಜಿಲ್ಲಾಧಿಕಾರಿಗೆ ಸೂಚಿಸಿದರು.<br /> <br /> ಮಂಗಲದಲ್ಲಿ ಸಮರ್ಪಕವಾಗಿ ಗೋಶಾಲೆ ತೆರೆಯುವಲ್ಲಿ ತಾಲ್ಲೂಕು ಆಡಳಿತ ವೈಫಲ್ಯ ಕಂಡಿದೆ. ಈ ಹಿನ್ನೆಲೆಯಲ್ಲಿ ತಹಶೀಲ್ದಾರ್ಗೂ ನೋಟಿಸ್ ನೀಡುವಂತೆ ಸೂಚಿಸಿದ ಅವರು, ಬರಪರಿಹಾರ ಕಾಮಗಾರಿ ಕೈಗೊಳ್ಳಲು ನಿರ್ಲಕ್ಷ್ಯವಹಿಸುವ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗು ವುದು ಎಂದು ಎಚ್ಚರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>