<p><strong>ಮಂಗಳೂರು:</strong> ಕಾಸರಗೋಡು ಸಹಿತ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ದಿನವಿಡೀ ಮಳೆ ಸುರಿಯಿತು. ಆದರೆ ಮಳೆ ಇನ್ನೂ ಬಿರುಸು ಪಡೆದುಕೊಂಡಿಲ್ಲ.<br /> <br /> ಮಂಗಳೂರು, ಮೂಡುಬಿದಿರೆ ಭಾಗದಲ್ಲಿ ಅಧಿಕ ಮಳೆ ಸುರಿದರೆ, ಜಿಲ್ಲೆಯ ಇತರ ಕಡೆಗಳಲ್ಲಿ ಮಳೆ ವಿರಳವಾಗಿತ್ತು. ಉಡುಪಿಯಲ್ಲಿ ಬಿಟ್ಟು ಬಿಟ್ಟು ಮಳೆ ಸುರಿಯಿತು. ಚಿಕ್ಕಮಗಳೂರು ಭಾಗದಲ್ಲಿ ಮೋಡ ಕವಿದ ವಾತಾವರಣ ಇದ್ದುದು ಬಿಟ್ಟರೆ ಮಳೆ ಸುರಿಯಲಿಲ್ಲ.<br /> <br /> ಕಳೆದ 24 ಗಂಟೆಗಳಲ್ಲಿ ಮಂಗಳೂರಿನಲ್ಲಿ 45 ಮಿ.ಮೀ. ಮತ್ತು ಮೂಡುಬಿದಿರೆಯಲ್ಲಿ 52 ಮಿ.ಮೀ. ಮಳೆ ಸುರಿದಿದೆ.<br /> <br /> ಸಾಮಾನ್ಯವಾಗಿ ಜೂನ್ 10ರೊಳಗೆ ಮುಂಗಾರು ಮಳೆಯಿಂದ ಭೂಮಿಯಲ್ಲಿ ಒರತೆ ಆರಂಭವಾಗಿರುತ್ತದೆ. ಆದರೆ ಈ ಬಾರಿ ಮಳೆ ವಿಳಂಬವಾಗಿದ್ದರಿಂದ ಹಾಗೂ ಎರಡು ದಿನದಿಂದ ಮಳೆ ಸುರಿಯುತ್ತಿದ್ದರೂ ಅದು ಬಿರುಸುಗೊಂಡಿಲ್ಲದ ಕಾರಣ ಮಳೆಗಾಲದ ವಾತಾವರಣ ಇನ್ನೂ ಮೂಡಿಲ್ಲ.<br /> <br /> ಬಾಗಲಕೋಟೆ, ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ: ಹುಬ್ಬಳ್ಳಿ: ಬಾಗಲಕೋಟೆ ಮತ್ತು ಉತ್ತರ ಕನ್ನಡ ದಲ್ಲಿ ಮಂಗಳವಾರ ಭಾರಿ ಮಳೆಯಾಗಿದೆ.<br /> <br /> ಬಾಗಲಕೋಟೆ ನಗರ ಹಾಗೂ ಜಿಲ್ಲೆಯ ಅಮೀನಗಡ ಸೇರಿದಂತೆ ಹಲವೆಡೆ ಸುಮಾರು ಅರ್ಧ ಗಂಟೆಗೂ ಅಧಿಕ ಹೊತ್ತು ಧಾರಾಕಾರ ಮಳೆ ಸುರಿಯಿತು. ಗಾಳಿ, ಗುಡುಗು, ಸಿಡಿಲಿನ ಆರ್ಭಟವಿಲ್ಲದೇ ಸುರಿದ ಮಳೆ ಮುಂಗಾರು ಬಿತ್ತನೆ ಆರಂಭಕ್ಕೆ ಹಸಿರು ನಿಶಾನೆ ತೋರಿಸಿತು.<br /> <br /> ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಹಾಗೂ ಮಲೆನಾಡು ಪ್ರದೇಶದಲ್ಲಿ ಮಂಗಳವಾರ ಜಿಟಿ ಜಿಟಿ ಮಳೆಯಾದರೆ, ಅರೆಬಯಲುಸೀಮೆಯಲ್ಲಿ ಸಾಧಾರಣ ಮಳೆ ಇತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ಕಾಸರಗೋಡು ಸಹಿತ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ದಿನವಿಡೀ ಮಳೆ ಸುರಿಯಿತು. ಆದರೆ ಮಳೆ ಇನ್ನೂ ಬಿರುಸು ಪಡೆದುಕೊಂಡಿಲ್ಲ.<br /> <br /> ಮಂಗಳೂರು, ಮೂಡುಬಿದಿರೆ ಭಾಗದಲ್ಲಿ ಅಧಿಕ ಮಳೆ ಸುರಿದರೆ, ಜಿಲ್ಲೆಯ ಇತರ ಕಡೆಗಳಲ್ಲಿ ಮಳೆ ವಿರಳವಾಗಿತ್ತು. ಉಡುಪಿಯಲ್ಲಿ ಬಿಟ್ಟು ಬಿಟ್ಟು ಮಳೆ ಸುರಿಯಿತು. ಚಿಕ್ಕಮಗಳೂರು ಭಾಗದಲ್ಲಿ ಮೋಡ ಕವಿದ ವಾತಾವರಣ ಇದ್ದುದು ಬಿಟ್ಟರೆ ಮಳೆ ಸುರಿಯಲಿಲ್ಲ.<br /> <br /> ಕಳೆದ 24 ಗಂಟೆಗಳಲ್ಲಿ ಮಂಗಳೂರಿನಲ್ಲಿ 45 ಮಿ.ಮೀ. ಮತ್ತು ಮೂಡುಬಿದಿರೆಯಲ್ಲಿ 52 ಮಿ.ಮೀ. ಮಳೆ ಸುರಿದಿದೆ.<br /> <br /> ಸಾಮಾನ್ಯವಾಗಿ ಜೂನ್ 10ರೊಳಗೆ ಮುಂಗಾರು ಮಳೆಯಿಂದ ಭೂಮಿಯಲ್ಲಿ ಒರತೆ ಆರಂಭವಾಗಿರುತ್ತದೆ. ಆದರೆ ಈ ಬಾರಿ ಮಳೆ ವಿಳಂಬವಾಗಿದ್ದರಿಂದ ಹಾಗೂ ಎರಡು ದಿನದಿಂದ ಮಳೆ ಸುರಿಯುತ್ತಿದ್ದರೂ ಅದು ಬಿರುಸುಗೊಂಡಿಲ್ಲದ ಕಾರಣ ಮಳೆಗಾಲದ ವಾತಾವರಣ ಇನ್ನೂ ಮೂಡಿಲ್ಲ.<br /> <br /> ಬಾಗಲಕೋಟೆ, ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ: ಹುಬ್ಬಳ್ಳಿ: ಬಾಗಲಕೋಟೆ ಮತ್ತು ಉತ್ತರ ಕನ್ನಡ ದಲ್ಲಿ ಮಂಗಳವಾರ ಭಾರಿ ಮಳೆಯಾಗಿದೆ.<br /> <br /> ಬಾಗಲಕೋಟೆ ನಗರ ಹಾಗೂ ಜಿಲ್ಲೆಯ ಅಮೀನಗಡ ಸೇರಿದಂತೆ ಹಲವೆಡೆ ಸುಮಾರು ಅರ್ಧ ಗಂಟೆಗೂ ಅಧಿಕ ಹೊತ್ತು ಧಾರಾಕಾರ ಮಳೆ ಸುರಿಯಿತು. ಗಾಳಿ, ಗುಡುಗು, ಸಿಡಿಲಿನ ಆರ್ಭಟವಿಲ್ಲದೇ ಸುರಿದ ಮಳೆ ಮುಂಗಾರು ಬಿತ್ತನೆ ಆರಂಭಕ್ಕೆ ಹಸಿರು ನಿಶಾನೆ ತೋರಿಸಿತು.<br /> <br /> ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಹಾಗೂ ಮಲೆನಾಡು ಪ್ರದೇಶದಲ್ಲಿ ಮಂಗಳವಾರ ಜಿಟಿ ಜಿಟಿ ಮಳೆಯಾದರೆ, ಅರೆಬಯಲುಸೀಮೆಯಲ್ಲಿ ಸಾಧಾರಣ ಮಳೆ ಇತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>