<p>ಕೋಲಾರ: ಮಂಗಳೂರಿನ ಹೋಂ ಸ್ಟೇನಲ್ಲಿ ಯುವತಿಯರ ಮೇಲೆ ಅಮಾನವೀಯವಾಗಿ ಹಲ್ಲೆ ಮಾಡಿ ದೌರ್ಜನ್ಯ ಎಸಗಿರುವ ಕಿಡಿಗೇಡಿಗಳನ್ನು ದೇಶದ್ರೋಹ ಕಾಯ್ದೆಯಡಿ ಬಂಧಿಸಬೇಕು ಎಂದು ದಲಿತ ಸಂಘಟನೆಗಳ ಸಂಯುಕ್ತ ರಂಗದ ಪ್ರಮುಖ ಡಾ.ಎಂ.ಚಂದ್ರಶೇಖರ್ ಆಗ್ರಹಿಸಿದರು.<br /> <br /> ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹುಟ್ಟುಹಬ್ಬದ ಆಚರಣೆಯಲ್ಲಿದ್ದ ಯುವಕ-ಯುವತಿಯರ ಮೇಲೆ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ನಡೆಸಿರುವ ಹಲ್ಲೆ ಖಂಡಿಸುತ್ತೇವೆ ಎಂದರು.<br /> <br /> ಹಿಂದುತ್ವ ಎಂಬ ಮುಖವಾಡ ಧರಿಸಿ ಭಾರತ ಸಂವಿಧಾನದ ಆಶಯಗಳನ್ನು ಮಣ್ಣುಪಾಲು ಮಾಡುತ್ತಿರುವ ಇಂಥ ಸಂಘಟನೆಗಳನ್ನು ನಿಷೇಧಿಸಬೇಕು. ಸರ್ಕಾರ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.<br /> <br /> ಸಾಲ ಮನ್ನಾ: ದಲಿತರ ಸಾಲ ಮನ್ನಾ ಮಾಡದ ಬಿಜೆಪಿ ಸರ್ಕಾರದಿಂದ ದಲಿತ ಸಚಿವರು, ಶಾಸಕರು ಸೇರಿದಂತೆ ಜನಪ್ರತಿನಿಧಿಗಳು, ಪ್ರಮುಖರು, ಕಾರ್ಯಕರ್ತರು ಪಕ್ಷವನ್ನು ತೊರೆಯಬೇಕು ಎಂದು ಆಗ್ರಹಿಸಿದರು. <br /> <br /> ರೈತರಿಗೆ ಸಾಲಮನ್ನಾ ವಿಷಯದಲ್ಲಿ ರಾಜ್ಯದ ಬಹುತೇಕ ದಲಿತರಿಗೆ ಅನ್ಯಾಯವಾಗಿದೆ. ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಪರಿಶಿಷ್ಟ ವರ್ಗಗಳ ಅಭಿವೃದ್ಧಿ ನಿಗಮ, ರಾಷ್ಟ್ರೀಕೃತ ಮತ್ತು ಷೆಡ್ಯೂಲ್ಡ್ ಬ್ಯಾಂಕ್ಗಳು, ಕೇಂದ್ರ ಸರ್ಕಾರದ ಅಡಿಯಲ್ಲಿರುವ ಕೆಲವು ಹಣಕಾಸಿನ ಸಂಸ್ಥೆಗಳು ದಲಿತರಿಗೆ ನೀಡಿರುವ ಸಾಲದ ಮೊತ್ತ ಬಹಳ ಕಡಿಮೆ. <br /> <br /> ಹೀಗಾಗಿ ದಲಿತರು ಪಡೆದಿರುವ ಎಲ್ಲ ಸಾಲವನ್ನೂ ಮನ್ನಾ ಮಾಡಬೇಕು ಎಂದು ಆಗ್ರಹಿಸಿದರು. ಮುನಿರಾಜು, ವಿ.ನಾರಾಯಣಸ್ವಾಮಿ, ವಿ.ಶ್ರೀನಿವಾಸ್, ಶ್ರೀರಂಗ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೋಲಾರ: ಮಂಗಳೂರಿನ ಹೋಂ ಸ್ಟೇನಲ್ಲಿ ಯುವತಿಯರ ಮೇಲೆ ಅಮಾನವೀಯವಾಗಿ ಹಲ್ಲೆ ಮಾಡಿ ದೌರ್ಜನ್ಯ ಎಸಗಿರುವ ಕಿಡಿಗೇಡಿಗಳನ್ನು ದೇಶದ್ರೋಹ ಕಾಯ್ದೆಯಡಿ ಬಂಧಿಸಬೇಕು ಎಂದು ದಲಿತ ಸಂಘಟನೆಗಳ ಸಂಯುಕ್ತ ರಂಗದ ಪ್ರಮುಖ ಡಾ.ಎಂ.ಚಂದ್ರಶೇಖರ್ ಆಗ್ರಹಿಸಿದರು.<br /> <br /> ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹುಟ್ಟುಹಬ್ಬದ ಆಚರಣೆಯಲ್ಲಿದ್ದ ಯುವಕ-ಯುವತಿಯರ ಮೇಲೆ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ನಡೆಸಿರುವ ಹಲ್ಲೆ ಖಂಡಿಸುತ್ತೇವೆ ಎಂದರು.<br /> <br /> ಹಿಂದುತ್ವ ಎಂಬ ಮುಖವಾಡ ಧರಿಸಿ ಭಾರತ ಸಂವಿಧಾನದ ಆಶಯಗಳನ್ನು ಮಣ್ಣುಪಾಲು ಮಾಡುತ್ತಿರುವ ಇಂಥ ಸಂಘಟನೆಗಳನ್ನು ನಿಷೇಧಿಸಬೇಕು. ಸರ್ಕಾರ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.<br /> <br /> ಸಾಲ ಮನ್ನಾ: ದಲಿತರ ಸಾಲ ಮನ್ನಾ ಮಾಡದ ಬಿಜೆಪಿ ಸರ್ಕಾರದಿಂದ ದಲಿತ ಸಚಿವರು, ಶಾಸಕರು ಸೇರಿದಂತೆ ಜನಪ್ರತಿನಿಧಿಗಳು, ಪ್ರಮುಖರು, ಕಾರ್ಯಕರ್ತರು ಪಕ್ಷವನ್ನು ತೊರೆಯಬೇಕು ಎಂದು ಆಗ್ರಹಿಸಿದರು. <br /> <br /> ರೈತರಿಗೆ ಸಾಲಮನ್ನಾ ವಿಷಯದಲ್ಲಿ ರಾಜ್ಯದ ಬಹುತೇಕ ದಲಿತರಿಗೆ ಅನ್ಯಾಯವಾಗಿದೆ. ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಪರಿಶಿಷ್ಟ ವರ್ಗಗಳ ಅಭಿವೃದ್ಧಿ ನಿಗಮ, ರಾಷ್ಟ್ರೀಕೃತ ಮತ್ತು ಷೆಡ್ಯೂಲ್ಡ್ ಬ್ಯಾಂಕ್ಗಳು, ಕೇಂದ್ರ ಸರ್ಕಾರದ ಅಡಿಯಲ್ಲಿರುವ ಕೆಲವು ಹಣಕಾಸಿನ ಸಂಸ್ಥೆಗಳು ದಲಿತರಿಗೆ ನೀಡಿರುವ ಸಾಲದ ಮೊತ್ತ ಬಹಳ ಕಡಿಮೆ. <br /> <br /> ಹೀಗಾಗಿ ದಲಿತರು ಪಡೆದಿರುವ ಎಲ್ಲ ಸಾಲವನ್ನೂ ಮನ್ನಾ ಮಾಡಬೇಕು ಎಂದು ಆಗ್ರಹಿಸಿದರು. ಮುನಿರಾಜು, ವಿ.ನಾರಾಯಣಸ್ವಾಮಿ, ವಿ.ಶ್ರೀನಿವಾಸ್, ಶ್ರೀರಂಗ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>