<p><strong>ಮಂಗಳೂರು: </strong>ಮೈಸೂರು, ಹುಬ್ಬಳ್ಳಿ-ಧಾರವಾಡ ಹಾಗೂ ಮಂಗಳೂರಿನಲ್ಲಿ ಸೈಬರ್ ಅಪರಾಧ ಪೊಲೀಸ್ ಠಾಣೆಗಳನ್ನು ಶೀಘ್ರದಲ್ಲಿಯೇ ಆರಂಭಿಸಲಾಗುವುದು ಎಂದು ರಾಜ್ಯ ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ. ಎಂ.ಎಸ್.ಜಾಮದಾರ್ ಹೇಳಿದರು. <br /> <br /> ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಸೈಬರ್ ಅಪರಾಧ ಪ್ರಕರಣ ಹೆಚ್ಚುತ್ತಿವೆ. ಬೆಂಗಳೂರಿನಲ್ಲಿ ಮಾತ್ರ ಸೈಬರ್ ಅಪರಾಧ ಪೊಲೀಸ್ ಠಾಣೆ ಇದೆ. ಕೇಂದ್ರ ಸರ್ಕಾರದಿಂದ 15 ದಿನಗಳ ಹಿಂದೆ ಮಾರ್ಗಸೂಚಿ ಬಂದಿದ್ದು, ಹೊಸದಾಗಿ ಮೂರು ಠಾಣೆ ಸ್ಥಾಪಿಸಲಾಗುತ್ತಿದೆ ಎಂದರು. <br /> <br /> 2008ರ ಐಟಿ ಕಾಯ್ದೆ ಪ್ರಕಾರ 26 ಬಗೆಯ ಸೈಬರ್ ಅಪರಾಧಗಳಲ್ಲಿ 23ರಲ್ಲಿ ಆರೋಪಿಗಳಿಗೆ 7ರಿಂದ 10 ವರ್ಷಗಳರೆಗೆ ಶಿಕ್ಷೆ ವಿಧಿಸಲು ಅವಕಾಶ ಇದೆ. ರೂ. 10 ಲಕ್ಷದವರೆಗೂ ದಂಡ ವಿಧಿಸಬಹುದಾಗಿದೆ. ಮೂರು ಬಗೆಯಲ್ಲಿ 3 ವರ್ಷದವರೆಗೆ ಶಿಕ್ಷೆ ವಿಧಿಸಬಹುದಾಗಿದೆ ಎಂದು ವಿವರಿಸಿದರು. <br /> <br /> ಪೊಲೀಸ್ ಇಲಾಖೆ ಆಧುನೀಕರಣಕ್ಕೆ ಕೇಂದ್ರ ಸರ್ಕಾರದಿಂದ ಈ ಬಾರಿ ರೂ. 84 ಕೋಟಿ ಬಂದಿದೆ. ರಾಜ್ಯದ ಫೊರೆನ್ಸಿಕ್ ಸೈನ್ಸ್ ಘಟಕ ವಿಸ್ತರಣೆ ಹಾಗೂ ಆಧುನೀಕರಣಕ್ಕೆ ರೂ. 3 ಕೋಟಿ ಯೋಜನೆ ರೂಪಿಸಲಾಗುವುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು: </strong>ಮೈಸೂರು, ಹುಬ್ಬಳ್ಳಿ-ಧಾರವಾಡ ಹಾಗೂ ಮಂಗಳೂರಿನಲ್ಲಿ ಸೈಬರ್ ಅಪರಾಧ ಪೊಲೀಸ್ ಠಾಣೆಗಳನ್ನು ಶೀಘ್ರದಲ್ಲಿಯೇ ಆರಂಭಿಸಲಾಗುವುದು ಎಂದು ರಾಜ್ಯ ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ. ಎಂ.ಎಸ್.ಜಾಮದಾರ್ ಹೇಳಿದರು. <br /> <br /> ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಸೈಬರ್ ಅಪರಾಧ ಪ್ರಕರಣ ಹೆಚ್ಚುತ್ತಿವೆ. ಬೆಂಗಳೂರಿನಲ್ಲಿ ಮಾತ್ರ ಸೈಬರ್ ಅಪರಾಧ ಪೊಲೀಸ್ ಠಾಣೆ ಇದೆ. ಕೇಂದ್ರ ಸರ್ಕಾರದಿಂದ 15 ದಿನಗಳ ಹಿಂದೆ ಮಾರ್ಗಸೂಚಿ ಬಂದಿದ್ದು, ಹೊಸದಾಗಿ ಮೂರು ಠಾಣೆ ಸ್ಥಾಪಿಸಲಾಗುತ್ತಿದೆ ಎಂದರು. <br /> <br /> 2008ರ ಐಟಿ ಕಾಯ್ದೆ ಪ್ರಕಾರ 26 ಬಗೆಯ ಸೈಬರ್ ಅಪರಾಧಗಳಲ್ಲಿ 23ರಲ್ಲಿ ಆರೋಪಿಗಳಿಗೆ 7ರಿಂದ 10 ವರ್ಷಗಳರೆಗೆ ಶಿಕ್ಷೆ ವಿಧಿಸಲು ಅವಕಾಶ ಇದೆ. ರೂ. 10 ಲಕ್ಷದವರೆಗೂ ದಂಡ ವಿಧಿಸಬಹುದಾಗಿದೆ. ಮೂರು ಬಗೆಯಲ್ಲಿ 3 ವರ್ಷದವರೆಗೆ ಶಿಕ್ಷೆ ವಿಧಿಸಬಹುದಾಗಿದೆ ಎಂದು ವಿವರಿಸಿದರು. <br /> <br /> ಪೊಲೀಸ್ ಇಲಾಖೆ ಆಧುನೀಕರಣಕ್ಕೆ ಕೇಂದ್ರ ಸರ್ಕಾರದಿಂದ ಈ ಬಾರಿ ರೂ. 84 ಕೋಟಿ ಬಂದಿದೆ. ರಾಜ್ಯದ ಫೊರೆನ್ಸಿಕ್ ಸೈನ್ಸ್ ಘಟಕ ವಿಸ್ತರಣೆ ಹಾಗೂ ಆಧುನೀಕರಣಕ್ಕೆ ರೂ. 3 ಕೋಟಿ ಯೋಜನೆ ರೂಪಿಸಲಾಗುವುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>