<p><br /> <strong>ದಾವಣಗೆರೆ:</strong>ಸ್ಮಾರ್ಟ್ ಸಿಟಿ ಪ್ರಸ್ತಾವದಲ್ಲಿ ಮಂಡಕ್ಕಿಭಟ್ಟಿ ಸ್ಥಳಾಂತರಗೊಳಿಸುವ ಯೋಜನೆ ಇಲ್ಲ. ಆದರೆ, ಸುಮಾರು 75 ಎಕರೆ ವಿಸ್ತೀರ್ಣದಲ್ಲಿರುವ ಆ ಪ್ರದೇಶವನ್ನು ಸಂಪೂರ್ಣ ಆಧುನೀಕ ರಣಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಸ್.ಟಿ. ಅಂಜನ್ಕುಮಾರ್ ಸ್ಪಷ್ಪಪಡಿಸಿದರು.<br /> <br /> ಸಾವಿರಕ್ಕೂ ಹೆಚ್ಚಿರುವ ಮಂಡಕ್ಕಿಬಟ್ಟಿಗಳನ್ನು ಸಂಪೂರ್ಣ ಬದಲಿಸಲಾಗುತ್ತದೆ. ಹೊಗೆ ಸೂಸಿ ಮಾಲಿನ್ಯಕ್ಕೆ ಕಾರಣವಾಗುವ ಮಂಡಕ್ಕಿಬಟ್ಟಿ ತೆಗೆದುಹಾಕಿ ಅವುಗಳ ಸ್ಥಾನದಲ್ಲಿ ವಿದ್ಯುತ್ ಚಾಲಿತ ಆತ್ಯಾಧುನಿಕ ಮತ್ತು ಪರಿಸರ ಸ್ನೇಹಿ ಯಂತ್ರಗಳನ್ನು ಅಳವಡಿಸಲಾಗುತ್ತದೆ ಎಂದು ಅವರು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.<br /> <br /> ಈ ಮೂಲಕ ಹೆಚ್ಚು ಉತ್ಪಾದನೆ, ಪರಿಸರ ಮಾಲಿನ್ಯ ಕಡಿಮೆ ಗೊಳಿಸಲಾಗುತ್ತದೆ. ಈ ಕೆಲಸಕ್ಕಾಗಿ ₹372.90 ಕೋಟಿ ಅನುದಾನ ವೆಚ್ಚ ಮಾಡಲಾಗುವುದು ಎಂದರು.<br /> <br /> ಅದೇ ರೀತಿ ತ್ಯಾಜ್ಯ ಸಂಸ್ಕರಣೆ, ಫುಟ್ಪಾತ್, ರಸ್ತೆಯಲ್ಲಿ ಸೈಕಲ್ ಮಾರ್ಗ, ಒಳಚರಂಡಿ ವ್ಯವಸ್ಥೆ, ಸುರಂಗ ಮಾರ್ಗ, ಮೀಟರ್ ಆಧಾರಿತ 24X7 ನಿರಂತರ ಕುಡಿಯುವ ನೀರು ಪೂರೈಕೆ ಹಾಗೂ ಪ್ರತಿ ಹೊಸ ಕಟ್ಟಡಗಳ ಮೇಲೆ ಸೋಲಾರ್ ವಿದ್ಯುತ್ ಘಟಕ ಅಳವಡಿಕೆ ಕಡ್ಡಾಯಗೊಳಿಸಲಾಗುತ್ತದೆ. ಇದಕ್ಕಾಗಿ ₹301.90 ಕೋಟಿ ಅನುದಾನ ಮೀಸಲಿಡಲಾಗಿದೆ ಎಂದು ಮಾಹಿತಿ ನೀಡಿದರು.<br /> <br /> <strong>ಆಧುನಿಕ ಮಂಡಿಪೇಟೆ;</strong> ಸುಮಾರು 10 ಎಕರೆ ವಿಸ್ತೀರ್ಣದಲ್ಲಿರುವ ಮಂಡಿಪೇಟೆಯನ್ನು ₹102.91 ಕೋಟಿ ವೆಚ್ಚದಲ್ಲಿ ಸಂಪೂರ್ಣ ಆಧುನೀಕರಣ ಗೊಳಿಸಲಾಗುತ್ತದೆ. ಮಂಡಿಪೇಟೆಯಲ್ಲಿ ಬಹುಮಹಡಿ ಸಂಕೀರ್ಣ ಜತೆಗೆ ಸುಸಜ್ಜಿತ ವಾಹನ ನಿಲುಗಡೆ, ,ಮಾಹಿತಿ ನೀಡುವ ಕಿಯೋನಿಕ್ಸ್ ಅಲ್ಲಿ ಸ್ಥಾಪನೆಯಾಗಲಿವೆ. 150 ಬೆಡ್ ಆಸ್ಪತ್ರೆ ಪುನರ್ ನವೀಕರಣ ಹಾಗೂ ಗ್ರಂಥಾಲಯ ಸ್ಥಾಪಿಸಲಾಗುವುದು ಎಂದು ಅವರು ಭರವಸೆ ನೀಡಿದರು.<br /> <br /> ದೇವಸ್ಥಾನಕ್ಕೂ ಸ್ಮಾರ್ಟ್ ಯೋಗ; ದುರ್ಗಾಂಬಿಕಾ ದೇವಸ್ಥಾನದ ಸುತ್ತ ಮುತ್ತಲಿನ ಮೂರು ಎಕರೆ ಪ್ರದೇಶದ ಅಭಿವೃದ್ಧಿಗೊಳಿಸಲಾಗುತ್ತದೆ. ಈ ಪ್ರದೇಶದಲ್ಲಿ ಡಿಜಿಟಲ್ ಸಿಗ್ನಲ್, ವಸತಿ ಗೃಹ, ಸಾಂಸ್ಕೃತಿಕ ಭವನ ಮತ್ತಿತರ ಸೌಲಭ್ಯಗಳನ್ನು ಸುಮಾರು ₹6.67 ಕೋಟಿ ವೆಚ್ಚದಲ್ಲಿ ಕಲ್ಪಿಸಲಾಗುವುದು ಎಂದು ಮಾಹಿತಿ ನೀಡಿದರು.<br /> <br /> ಹಳೆ ಬಸ್ನಿಲ್ದಾಣವನ್ನು ಸಂಪೂರ್ಣವಾಗಿ ಆಧುನೀಕರಣ ಗೊಳಿಸಲಾಗುವುದು. ಇದೇ ಸ್ಥಳವನ್ನು ಕೇಂದ್ರೀಕೃತಗೊಳಿಸಿ ಅಭಿವೃದ್ಧಿ ಗೊಳಿಸಲು ₹25 ಕೋಟಿ ಅನುದಾನ ನಿಗದಿಪಡಿಸಲಾಗಿದೆ ಎಂದರು.<br /> <br /> ಮನುಷ್ಯನ ದೈನಂದಿನ ವ್ಯವಹಾರಗಳಲ್ಲಿ ತಂತ್ರಜ್ಞಾನ ಬಳಕೆಗೆ ಅನುಕೂಲವಾಗುವ ದೃಷ್ಟಿಯಿಂದ ಹೊಸ ಹೊಸ ಆ್ಯಪ್ಗಳನ್ನು ರೂಪಿಸಲಾಗುತ್ತದೆ. ಸರ್ಕಾರಿ ಕಚೇರಿ ಹಾಗೂ ಸಾರ್ವಜನಿಕರ ಜತೆ ನೇರವಾಗಿ ಸಂಪರ್ಕಿಸಲು ಅನುಕೂಲವಾಗಲು ಯೂನಿಕ್ ನಂಬರ್ ನೀಡುವ ಹೊಸ ವ್ಯವಸ್ಥೆ ಜಾರಿಗೆ ತರಲಾಗುವುದು. ಇದಕ್ಕಾಗಿ ₹38.44 ಕೋಟಿ ಅನುದಾನ ಮೀಸಲಿಡಲಾಗಿದೆ ಎಂದು ಹೇಳಿದರು.<br /> <br /> ಇಡೀ ನಗರದ ಪ್ರಮುಖ ವೃತ್ತಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಕೆ, ನಿಲ್ದಾಣ ಕುರಿತಂತೆ ಬಸ್ಗಳಲ್ಲಿ ಡಿಜಿಟಲ್ ಡಿಸ್ಪ್ಲೇ, ಸೋಲಾರ್ ಆಧಾರಿತ ತುಂಗುದಾಣ ಮತ್ತಿತರ ಕೆಲಸಗಳಿಗಾಗಿ ₹459.35 ಕೋಟಿ ವೆಚ್ಚ ಮಾಡಲಾಗುವುದು ಎಂದು ಮಾಹಿತಿ ನೀಡಿದರು.<br /> ಸುದ್ದಿಗೋಷ್ಠಿಯಲ್ಲಿ ಉಪ ಆಯುಕ್ತರಾದ ಮಹಾಂತೇಶ್, ರವೀಂದ್ರ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><br /> <strong>ದಾವಣಗೆರೆ:</strong>ಸ್ಮಾರ್ಟ್ ಸಿಟಿ ಪ್ರಸ್ತಾವದಲ್ಲಿ ಮಂಡಕ್ಕಿಭಟ್ಟಿ ಸ್ಥಳಾಂತರಗೊಳಿಸುವ ಯೋಜನೆ ಇಲ್ಲ. ಆದರೆ, ಸುಮಾರು 75 ಎಕರೆ ವಿಸ್ತೀರ್ಣದಲ್ಲಿರುವ ಆ ಪ್ರದೇಶವನ್ನು ಸಂಪೂರ್ಣ ಆಧುನೀಕ ರಣಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಸ್.ಟಿ. ಅಂಜನ್ಕುಮಾರ್ ಸ್ಪಷ್ಪಪಡಿಸಿದರು.<br /> <br /> ಸಾವಿರಕ್ಕೂ ಹೆಚ್ಚಿರುವ ಮಂಡಕ್ಕಿಬಟ್ಟಿಗಳನ್ನು ಸಂಪೂರ್ಣ ಬದಲಿಸಲಾಗುತ್ತದೆ. ಹೊಗೆ ಸೂಸಿ ಮಾಲಿನ್ಯಕ್ಕೆ ಕಾರಣವಾಗುವ ಮಂಡಕ್ಕಿಬಟ್ಟಿ ತೆಗೆದುಹಾಕಿ ಅವುಗಳ ಸ್ಥಾನದಲ್ಲಿ ವಿದ್ಯುತ್ ಚಾಲಿತ ಆತ್ಯಾಧುನಿಕ ಮತ್ತು ಪರಿಸರ ಸ್ನೇಹಿ ಯಂತ್ರಗಳನ್ನು ಅಳವಡಿಸಲಾಗುತ್ತದೆ ಎಂದು ಅವರು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.<br /> <br /> ಈ ಮೂಲಕ ಹೆಚ್ಚು ಉತ್ಪಾದನೆ, ಪರಿಸರ ಮಾಲಿನ್ಯ ಕಡಿಮೆ ಗೊಳಿಸಲಾಗುತ್ತದೆ. ಈ ಕೆಲಸಕ್ಕಾಗಿ ₹372.90 ಕೋಟಿ ಅನುದಾನ ವೆಚ್ಚ ಮಾಡಲಾಗುವುದು ಎಂದರು.<br /> <br /> ಅದೇ ರೀತಿ ತ್ಯಾಜ್ಯ ಸಂಸ್ಕರಣೆ, ಫುಟ್ಪಾತ್, ರಸ್ತೆಯಲ್ಲಿ ಸೈಕಲ್ ಮಾರ್ಗ, ಒಳಚರಂಡಿ ವ್ಯವಸ್ಥೆ, ಸುರಂಗ ಮಾರ್ಗ, ಮೀಟರ್ ಆಧಾರಿತ 24X7 ನಿರಂತರ ಕುಡಿಯುವ ನೀರು ಪೂರೈಕೆ ಹಾಗೂ ಪ್ರತಿ ಹೊಸ ಕಟ್ಟಡಗಳ ಮೇಲೆ ಸೋಲಾರ್ ವಿದ್ಯುತ್ ಘಟಕ ಅಳವಡಿಕೆ ಕಡ್ಡಾಯಗೊಳಿಸಲಾಗುತ್ತದೆ. ಇದಕ್ಕಾಗಿ ₹301.90 ಕೋಟಿ ಅನುದಾನ ಮೀಸಲಿಡಲಾಗಿದೆ ಎಂದು ಮಾಹಿತಿ ನೀಡಿದರು.<br /> <br /> <strong>ಆಧುನಿಕ ಮಂಡಿಪೇಟೆ;</strong> ಸುಮಾರು 10 ಎಕರೆ ವಿಸ್ತೀರ್ಣದಲ್ಲಿರುವ ಮಂಡಿಪೇಟೆಯನ್ನು ₹102.91 ಕೋಟಿ ವೆಚ್ಚದಲ್ಲಿ ಸಂಪೂರ್ಣ ಆಧುನೀಕರಣ ಗೊಳಿಸಲಾಗುತ್ತದೆ. ಮಂಡಿಪೇಟೆಯಲ್ಲಿ ಬಹುಮಹಡಿ ಸಂಕೀರ್ಣ ಜತೆಗೆ ಸುಸಜ್ಜಿತ ವಾಹನ ನಿಲುಗಡೆ, ,ಮಾಹಿತಿ ನೀಡುವ ಕಿಯೋನಿಕ್ಸ್ ಅಲ್ಲಿ ಸ್ಥಾಪನೆಯಾಗಲಿವೆ. 150 ಬೆಡ್ ಆಸ್ಪತ್ರೆ ಪುನರ್ ನವೀಕರಣ ಹಾಗೂ ಗ್ರಂಥಾಲಯ ಸ್ಥಾಪಿಸಲಾಗುವುದು ಎಂದು ಅವರು ಭರವಸೆ ನೀಡಿದರು.<br /> <br /> ದೇವಸ್ಥಾನಕ್ಕೂ ಸ್ಮಾರ್ಟ್ ಯೋಗ; ದುರ್ಗಾಂಬಿಕಾ ದೇವಸ್ಥಾನದ ಸುತ್ತ ಮುತ್ತಲಿನ ಮೂರು ಎಕರೆ ಪ್ರದೇಶದ ಅಭಿವೃದ್ಧಿಗೊಳಿಸಲಾಗುತ್ತದೆ. ಈ ಪ್ರದೇಶದಲ್ಲಿ ಡಿಜಿಟಲ್ ಸಿಗ್ನಲ್, ವಸತಿ ಗೃಹ, ಸಾಂಸ್ಕೃತಿಕ ಭವನ ಮತ್ತಿತರ ಸೌಲಭ್ಯಗಳನ್ನು ಸುಮಾರು ₹6.67 ಕೋಟಿ ವೆಚ್ಚದಲ್ಲಿ ಕಲ್ಪಿಸಲಾಗುವುದು ಎಂದು ಮಾಹಿತಿ ನೀಡಿದರು.<br /> <br /> ಹಳೆ ಬಸ್ನಿಲ್ದಾಣವನ್ನು ಸಂಪೂರ್ಣವಾಗಿ ಆಧುನೀಕರಣ ಗೊಳಿಸಲಾಗುವುದು. ಇದೇ ಸ್ಥಳವನ್ನು ಕೇಂದ್ರೀಕೃತಗೊಳಿಸಿ ಅಭಿವೃದ್ಧಿ ಗೊಳಿಸಲು ₹25 ಕೋಟಿ ಅನುದಾನ ನಿಗದಿಪಡಿಸಲಾಗಿದೆ ಎಂದರು.<br /> <br /> ಮನುಷ್ಯನ ದೈನಂದಿನ ವ್ಯವಹಾರಗಳಲ್ಲಿ ತಂತ್ರಜ್ಞಾನ ಬಳಕೆಗೆ ಅನುಕೂಲವಾಗುವ ದೃಷ್ಟಿಯಿಂದ ಹೊಸ ಹೊಸ ಆ್ಯಪ್ಗಳನ್ನು ರೂಪಿಸಲಾಗುತ್ತದೆ. ಸರ್ಕಾರಿ ಕಚೇರಿ ಹಾಗೂ ಸಾರ್ವಜನಿಕರ ಜತೆ ನೇರವಾಗಿ ಸಂಪರ್ಕಿಸಲು ಅನುಕೂಲವಾಗಲು ಯೂನಿಕ್ ನಂಬರ್ ನೀಡುವ ಹೊಸ ವ್ಯವಸ್ಥೆ ಜಾರಿಗೆ ತರಲಾಗುವುದು. ಇದಕ್ಕಾಗಿ ₹38.44 ಕೋಟಿ ಅನುದಾನ ಮೀಸಲಿಡಲಾಗಿದೆ ಎಂದು ಹೇಳಿದರು.<br /> <br /> ಇಡೀ ನಗರದ ಪ್ರಮುಖ ವೃತ್ತಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಕೆ, ನಿಲ್ದಾಣ ಕುರಿತಂತೆ ಬಸ್ಗಳಲ್ಲಿ ಡಿಜಿಟಲ್ ಡಿಸ್ಪ್ಲೇ, ಸೋಲಾರ್ ಆಧಾರಿತ ತುಂಗುದಾಣ ಮತ್ತಿತರ ಕೆಲಸಗಳಿಗಾಗಿ ₹459.35 ಕೋಟಿ ವೆಚ್ಚ ಮಾಡಲಾಗುವುದು ಎಂದು ಮಾಹಿತಿ ನೀಡಿದರು.<br /> ಸುದ್ದಿಗೋಷ್ಠಿಯಲ್ಲಿ ಉಪ ಆಯುಕ್ತರಾದ ಮಹಾಂತೇಶ್, ರವೀಂದ್ರ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>