<p><strong>ಮಂಡ್ಯ:</strong> ಮುಖ್ಯಮಂತ್ರಿ ಸ್ಥಾನದಿಂದ ಡಿ.ವಿ.ಸದಾನಂದಗೌಡ ಅವರನ್ನು ಪದಚ್ಯುತಿಗೊಳಿಸಿರುವ ಬಿಜೆಪಿ ವರಿಷ್ಠರ ಕ್ರಮ ಖಂಡಿಸಿ ಸ್ವಾಭಿಮಾನಿ ಒಕ್ಕಲಿಗರ ಸೇವಾ ಒಕ್ಕೂಟವು ಜುಲೈ 11 ರಂದು ಮಂಡ್ಯ ಬಂದ್ಗೆ ಕರೆ ನೀಡಿದೆ. <br /> <br /> ಬೆಳಿಗ್ಗೆಯಿಂದಲೇ ಮೈಸೂರು ಬೆಂಗಳೂರು ರಸ್ತೆ ಬಂದ್ ಮಾಡಲಾಗುವುದು ಎಂದು ಒಕ್ಕೂಟದ ಅಧ್ಯಕ್ಷ ಡಾ.ಎಂ.ಎಸ್.ಲೋಕೇಶ್ಬಾಬು ಎಚ್ಚರಿಸಿದ್ದಾರೆ. ಬಿಜೆಪಿ ಹೈಕಮಾಂಡ್, ಈ ವಿಷಯವಾಗಿ ಸೂಕ್ತ ನಿರ್ಧಾರ ಕೈಗೊಳ್ಳದೆ ಜಗದೀಶ ಶೆಟ್ಟರ್ ಅವರಿಗೆ ಮುಖ್ಯಮಂತ್ರಿ ಪಟ್ಟ ಕಟ್ಟಲು ಮುಂದಾಗಿದೆ. ಶೆಟ್ಟರ್ ಅವರನ್ನು ಮುಖ್ಯಮಂತ್ರಿ ಮಾಡಿದರೆ, ಪ್ರಮಾಣ ವಚನ ಸ್ವೀಕಾರ ವೇಳೆ ವಿಧಾನಸೌಧದ ಎದುರು ಬೃಹತ್ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ತಿಳಿಸಿದ್ದಾರೆ. <br /> <br /> ರಾಜ್ಯದಲ್ಲಿ ಸ್ವಚ್ಛ, ದಕ್ಷ ಆಡಳಿತ ಮಾಡುತ್ತಿದ್ದ ಸದಾನಂದಗೌಡ ಅವರನ್ನು ವಿನಾ ಕಾರಣ ಕೇವಲ ಒಕ್ಕಲಿಗ ಎಂಬ ಕಾರಣಕ್ಕಾಗಿ ಪದಚ್ಯುತಿಗೊಳಿಸಿ, ರಾಜಕೀಯ ಅರಾಜಕತೆ ಸೃಷ್ಟಿಸಲಾಗಿದೆ ಎಂದು ಟೀಕಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ:</strong> ಮುಖ್ಯಮಂತ್ರಿ ಸ್ಥಾನದಿಂದ ಡಿ.ವಿ.ಸದಾನಂದಗೌಡ ಅವರನ್ನು ಪದಚ್ಯುತಿಗೊಳಿಸಿರುವ ಬಿಜೆಪಿ ವರಿಷ್ಠರ ಕ್ರಮ ಖಂಡಿಸಿ ಸ್ವಾಭಿಮಾನಿ ಒಕ್ಕಲಿಗರ ಸೇವಾ ಒಕ್ಕೂಟವು ಜುಲೈ 11 ರಂದು ಮಂಡ್ಯ ಬಂದ್ಗೆ ಕರೆ ನೀಡಿದೆ. <br /> <br /> ಬೆಳಿಗ್ಗೆಯಿಂದಲೇ ಮೈಸೂರು ಬೆಂಗಳೂರು ರಸ್ತೆ ಬಂದ್ ಮಾಡಲಾಗುವುದು ಎಂದು ಒಕ್ಕೂಟದ ಅಧ್ಯಕ್ಷ ಡಾ.ಎಂ.ಎಸ್.ಲೋಕೇಶ್ಬಾಬು ಎಚ್ಚರಿಸಿದ್ದಾರೆ. ಬಿಜೆಪಿ ಹೈಕಮಾಂಡ್, ಈ ವಿಷಯವಾಗಿ ಸೂಕ್ತ ನಿರ್ಧಾರ ಕೈಗೊಳ್ಳದೆ ಜಗದೀಶ ಶೆಟ್ಟರ್ ಅವರಿಗೆ ಮುಖ್ಯಮಂತ್ರಿ ಪಟ್ಟ ಕಟ್ಟಲು ಮುಂದಾಗಿದೆ. ಶೆಟ್ಟರ್ ಅವರನ್ನು ಮುಖ್ಯಮಂತ್ರಿ ಮಾಡಿದರೆ, ಪ್ರಮಾಣ ವಚನ ಸ್ವೀಕಾರ ವೇಳೆ ವಿಧಾನಸೌಧದ ಎದುರು ಬೃಹತ್ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ತಿಳಿಸಿದ್ದಾರೆ. <br /> <br /> ರಾಜ್ಯದಲ್ಲಿ ಸ್ವಚ್ಛ, ದಕ್ಷ ಆಡಳಿತ ಮಾಡುತ್ತಿದ್ದ ಸದಾನಂದಗೌಡ ಅವರನ್ನು ವಿನಾ ಕಾರಣ ಕೇವಲ ಒಕ್ಕಲಿಗ ಎಂಬ ಕಾರಣಕ್ಕಾಗಿ ಪದಚ್ಯುತಿಗೊಳಿಸಿ, ರಾಜಕೀಯ ಅರಾಜಕತೆ ಸೃಷ್ಟಿಸಲಾಗಿದೆ ಎಂದು ಟೀಕಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>