<p>ಮಂಡ್ಯ: ಸೀರೆ, ಹಣ, ಹೆಂಡ ಹಂಚುವವರಿಗೆ ಮತ ನೀಡಿದರೆ ಮುಂದೆ ನಿಮಗೆ ತೊಂದರೆ, ಜವಾಬ್ದಾರಿಯಿಂದ ಹಿಂದೆ ಸರಿಯದಿರಿ, ಮತ ಹಾಕಲು ಸಮಯ ಕಾದಿಡಿ, ಸೂಕ್ತ ಅಭ್ಯರ್ಥಿಯ ಆಯ್ಕೆ ಮಾಡಿ, ಅಭಿವೃದ್ಧಿಯಲ್ಲಿ ಭಾಗಿಯಾಗಿ...<br /> <br /> ಈ ಫಲಕಗಳು ಮತದಾರರಿಗೆ ವ್ಯವಸ್ಥಿತ ಶಿಕ್ಷಣ ಹಾಗೂ ಮತದಾರರ ಸಹಭಾಗಿತ್ವ ಸಮಿತಿ ವತಿಯಿಂದ ಗುರುವಾರ ನಗರದಲ್ಲಿ ಮತದಾರರ ಜಾಗೃತಿಗಾಗಿ ಹಮ್ಮಿಕೊಂಡಿದ್ದ ರ್್ಯಾಲಿಯಲ್ಲಿ ಕಂಡು ಬಂದವು.<br /> <br /> ಮತದಾರರಲ್ಲಿ ಜಾಗೃತಿ ಮೂಡಿಸುವಂತಹ ಇಂತಹ ಹತ್ತಾರು ಫಲಕಗಳನ್ನು ಹಿಡಿದುಕೊಂಡು, ಘೋಷಣೆಗಳನ್ನು ಕೂಗುತ್ತಾ ಸಾಗಿದರು.<br /> <br /> ಮತದಾದಲ್ಲಿ ಭಾಗವಹಿಸುವ ಮೂಲಕ ಹಕ್ಕನ್ನು ಚಲಾಯಿಸಬೇಕು ಎಂದು ರ್್ಯಾಲಿಯಲ್ಲಿ ಹೊರಟವರು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡರು. ಕೇಂದ್ರ ಬಸ್ ನಿಲ್ದಾಣದ ಸಮೀಪ ಮಾನವ ಸರಪಳಿಯನ್ನು ರಚಿಸುವ ಮೂಲಕ ಸಾರ್ವಜನಿಕರ ಗಮನ ಸೆಳೆಯಲಾಯಿತು.<br /> <br /> ರ್್ಯಾಲಿಗೆ ಜಿಲ್ಲಾಧಿಕಾರಿ ಡಾ.ಅಜಯ್್ ನಾಗಭೂಷಣ್ ಚಾಲನೆ ನೀಡಿದರು. ಜಿ.ಪಂ. ಸಿಇಒ ಪಿ.ಸಿ. ಜಯಣ್ಣ, ಹೆಚ್ಚುವರಿ ಜಿಲ್ಲಾಧಿಕಾರಿ ಶಂಕರಪ್ಪ, ಉಪವಿಭಾಗಾಧಿಕಾರಿ ಶಾಂತಾ ಹುಲ್ಮನಿ, ತಹಶೀಲ್ದಾರ್್ ಡಾ.ಮಮತಾ, ಆರ್್. ರಾಜು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಂಡ್ಯ: ಸೀರೆ, ಹಣ, ಹೆಂಡ ಹಂಚುವವರಿಗೆ ಮತ ನೀಡಿದರೆ ಮುಂದೆ ನಿಮಗೆ ತೊಂದರೆ, ಜವಾಬ್ದಾರಿಯಿಂದ ಹಿಂದೆ ಸರಿಯದಿರಿ, ಮತ ಹಾಕಲು ಸಮಯ ಕಾದಿಡಿ, ಸೂಕ್ತ ಅಭ್ಯರ್ಥಿಯ ಆಯ್ಕೆ ಮಾಡಿ, ಅಭಿವೃದ್ಧಿಯಲ್ಲಿ ಭಾಗಿಯಾಗಿ...<br /> <br /> ಈ ಫಲಕಗಳು ಮತದಾರರಿಗೆ ವ್ಯವಸ್ಥಿತ ಶಿಕ್ಷಣ ಹಾಗೂ ಮತದಾರರ ಸಹಭಾಗಿತ್ವ ಸಮಿತಿ ವತಿಯಿಂದ ಗುರುವಾರ ನಗರದಲ್ಲಿ ಮತದಾರರ ಜಾಗೃತಿಗಾಗಿ ಹಮ್ಮಿಕೊಂಡಿದ್ದ ರ್್ಯಾಲಿಯಲ್ಲಿ ಕಂಡು ಬಂದವು.<br /> <br /> ಮತದಾರರಲ್ಲಿ ಜಾಗೃತಿ ಮೂಡಿಸುವಂತಹ ಇಂತಹ ಹತ್ತಾರು ಫಲಕಗಳನ್ನು ಹಿಡಿದುಕೊಂಡು, ಘೋಷಣೆಗಳನ್ನು ಕೂಗುತ್ತಾ ಸಾಗಿದರು.<br /> <br /> ಮತದಾದಲ್ಲಿ ಭಾಗವಹಿಸುವ ಮೂಲಕ ಹಕ್ಕನ್ನು ಚಲಾಯಿಸಬೇಕು ಎಂದು ರ್್ಯಾಲಿಯಲ್ಲಿ ಹೊರಟವರು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡರು. ಕೇಂದ್ರ ಬಸ್ ನಿಲ್ದಾಣದ ಸಮೀಪ ಮಾನವ ಸರಪಳಿಯನ್ನು ರಚಿಸುವ ಮೂಲಕ ಸಾರ್ವಜನಿಕರ ಗಮನ ಸೆಳೆಯಲಾಯಿತು.<br /> <br /> ರ್್ಯಾಲಿಗೆ ಜಿಲ್ಲಾಧಿಕಾರಿ ಡಾ.ಅಜಯ್್ ನಾಗಭೂಷಣ್ ಚಾಲನೆ ನೀಡಿದರು. ಜಿ.ಪಂ. ಸಿಇಒ ಪಿ.ಸಿ. ಜಯಣ್ಣ, ಹೆಚ್ಚುವರಿ ಜಿಲ್ಲಾಧಿಕಾರಿ ಶಂಕರಪ್ಪ, ಉಪವಿಭಾಗಾಧಿಕಾರಿ ಶಾಂತಾ ಹುಲ್ಮನಿ, ತಹಶೀಲ್ದಾರ್್ ಡಾ.ಮಮತಾ, ಆರ್್. ರಾಜು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>