<p><strong>ರಾಯಚೂರು: </strong> ಎರಡು ದಿನಗಳಿಂದ ಸುರಿದ ಮಳೆಗೆ ರಾಯಚೂರು- ಮಂತ್ರಾಲಯಕ್ಕೆ ಸಂಪರ್ಕ ಕಲ್ಪಿಸಲು ತುಂಗಭದ್ರಾ ನದಿಗೆ ನಿರ್ಮಿಸಿದ ತಾತ್ಕಾಲಿಕ ಸೇತುವೆ ಸಂಪೂರ್ಣವಾಗಿ ಕೊಚ್ಚಿ ಹೋಗಿದೆ. <br /> ಸೇತುವೆ ಕೊಚ್ಚಿಹೋದ ಹಿನ್ನೆಲೆಯಲ್ಲಿ ದ್ವಿಚಕ್ರವಾಹನ ಹಾಗೂ ಲಘು ವಾಹನಗಳ ಸಂಚಾರವೂ ಸಂಪೂರ್ಣವಾಗಿ ಸ್ಥಗಿತಗೊಂಡಿದೆ.<br /> <br /> ರಾಜ್ಯ ಸರ್ಕಾರವು ಮಂತ್ರಾಲಯಕ್ಕೆ ತೆರಳುವ ಭಕ್ತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸುಮಾರು 1.67 ಕೋಟಿ ವೆಚ್ಚದಲ್ಲಿ ತುಂಗಭದ್ರಾ ನದಿಗೆ ತಾತ್ಕಾಲಿಕ ಸೇತುವೆಯನ್ನು ನಿರ್ಮಾಣ ಮಾಡಿತ್ತು.<br /> <br /> ಒಂದೆರಡು ತಿಂಗಳ ಹಿಂದೆ ಸ್ವಲ್ಪ ಪ್ರಮಾಣದಲ್ಲಿ ಮಳೆಯಾದ ಸಂದರ್ಭದಲ್ಲಿ ತುಂಗಭದ್ರಾ ನದಿಗೆ ನಿರ್ಮಿಸಲಾದ ತಾತ್ಕಾಲಿಕ ಸೇತುವೆ ಕುಸಿದು ಸುಮಾರು ಒಂದು ವಾರ ಸಂಚಾರ ಸ್ಥಗಿತಗೊಂಡಿತ್ತು. <br /> ಆದರೆ, ಜಿಲ್ಲಾಡಳಿತ ತಾತ್ಕಾಲಿಕ ಸೇತುವೆಯನ್ನು ದುರಸ್ತಿಗೊಳಿಸಿ ಮಂತ್ರಾಲಯಕ್ಕೆ ತೆರಳುವ ಭಕ್ತರಿಗೆ ಅನುಕೂಲ ಮಾಡಿಕೊಟ್ಟಿತ್ತು.<br /> <br /> ಈಗ ತಾತ್ಕಾಲಿಕ ಸೇತುವೆ ಕೊಚ್ಚಿ ಹೋಗಿರುವುದರಿಂದ ಮಂತ್ರಾಲಯಕ್ಕೆ ತೆರಳುವ ಭಕ್ತರು ರೈಲು ಮಾರ್ಗವಾಗಿ ಹೋಗುವುದು ಅನಿವಾರ್ಯವಾಗಿದೆ. ಸೇತುವೆ ಕೊಚ್ಚಿಹೋದ ಹಿನ್ನೆಲೆಯಲ್ಲಿ ಈಶಾನ್ಯ ಸಾರಿಗೆ ಸಂಸ್ಥೆಗೂ ಸಾಕಷ್ಟು ನಷ್ಟ ಸಂಭವಿಸುತ್ತಿದೆ.</p>.<p>ಒಂದೂವರೆ ವರ್ಷದಿಂದ ಈಶಾನ್ಯ ಸಾರಿಗೆ ಸಂಸ್ಥೆಗೆ ಪ್ರತಿದಿನ 1.50 ಲಕ್ಷ ರೂಪಾಯಿಗಳಷ್ಟು ನಷ್ಟವಾಗುತ್ತಿದೆ. ಅಲ್ಲದೇ ತುಂಗಭದ್ರಾ ಸೇತುವೆ ಮೇಲೆ ಹೋಗುತ್ತಿರುವ ಬಸ್ಗಳ ಸಂಚಾರವೂ ಸ್ಥಗಿತಗೊಳಿಸಲಾಗಿದೆ. <br /> <br /> ಈ ಸಂಸ್ಥೆಯಿಂದ ಬೆಂಗಳೂರಿಗೆ ತೆರಳುವ ಬಸ್ಗಳು ಸ್ಥಗಿತಗೊಳಿಸಲಾಗಿದೆ ಎಂದು ಈಶಾನ್ಯ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ಎಂ.ಎ ಹಾನಗಲ್ `ಪ್ರಜಾವಾಣಿ~ಗೆ ತಿಳಿಸಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು: </strong> ಎರಡು ದಿನಗಳಿಂದ ಸುರಿದ ಮಳೆಗೆ ರಾಯಚೂರು- ಮಂತ್ರಾಲಯಕ್ಕೆ ಸಂಪರ್ಕ ಕಲ್ಪಿಸಲು ತುಂಗಭದ್ರಾ ನದಿಗೆ ನಿರ್ಮಿಸಿದ ತಾತ್ಕಾಲಿಕ ಸೇತುವೆ ಸಂಪೂರ್ಣವಾಗಿ ಕೊಚ್ಚಿ ಹೋಗಿದೆ. <br /> ಸೇತುವೆ ಕೊಚ್ಚಿಹೋದ ಹಿನ್ನೆಲೆಯಲ್ಲಿ ದ್ವಿಚಕ್ರವಾಹನ ಹಾಗೂ ಲಘು ವಾಹನಗಳ ಸಂಚಾರವೂ ಸಂಪೂರ್ಣವಾಗಿ ಸ್ಥಗಿತಗೊಂಡಿದೆ.<br /> <br /> ರಾಜ್ಯ ಸರ್ಕಾರವು ಮಂತ್ರಾಲಯಕ್ಕೆ ತೆರಳುವ ಭಕ್ತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸುಮಾರು 1.67 ಕೋಟಿ ವೆಚ್ಚದಲ್ಲಿ ತುಂಗಭದ್ರಾ ನದಿಗೆ ತಾತ್ಕಾಲಿಕ ಸೇತುವೆಯನ್ನು ನಿರ್ಮಾಣ ಮಾಡಿತ್ತು.<br /> <br /> ಒಂದೆರಡು ತಿಂಗಳ ಹಿಂದೆ ಸ್ವಲ್ಪ ಪ್ರಮಾಣದಲ್ಲಿ ಮಳೆಯಾದ ಸಂದರ್ಭದಲ್ಲಿ ತುಂಗಭದ್ರಾ ನದಿಗೆ ನಿರ್ಮಿಸಲಾದ ತಾತ್ಕಾಲಿಕ ಸೇತುವೆ ಕುಸಿದು ಸುಮಾರು ಒಂದು ವಾರ ಸಂಚಾರ ಸ್ಥಗಿತಗೊಂಡಿತ್ತು. <br /> ಆದರೆ, ಜಿಲ್ಲಾಡಳಿತ ತಾತ್ಕಾಲಿಕ ಸೇತುವೆಯನ್ನು ದುರಸ್ತಿಗೊಳಿಸಿ ಮಂತ್ರಾಲಯಕ್ಕೆ ತೆರಳುವ ಭಕ್ತರಿಗೆ ಅನುಕೂಲ ಮಾಡಿಕೊಟ್ಟಿತ್ತು.<br /> <br /> ಈಗ ತಾತ್ಕಾಲಿಕ ಸೇತುವೆ ಕೊಚ್ಚಿ ಹೋಗಿರುವುದರಿಂದ ಮಂತ್ರಾಲಯಕ್ಕೆ ತೆರಳುವ ಭಕ್ತರು ರೈಲು ಮಾರ್ಗವಾಗಿ ಹೋಗುವುದು ಅನಿವಾರ್ಯವಾಗಿದೆ. ಸೇತುವೆ ಕೊಚ್ಚಿಹೋದ ಹಿನ್ನೆಲೆಯಲ್ಲಿ ಈಶಾನ್ಯ ಸಾರಿಗೆ ಸಂಸ್ಥೆಗೂ ಸಾಕಷ್ಟು ನಷ್ಟ ಸಂಭವಿಸುತ್ತಿದೆ.</p>.<p>ಒಂದೂವರೆ ವರ್ಷದಿಂದ ಈಶಾನ್ಯ ಸಾರಿಗೆ ಸಂಸ್ಥೆಗೆ ಪ್ರತಿದಿನ 1.50 ಲಕ್ಷ ರೂಪಾಯಿಗಳಷ್ಟು ನಷ್ಟವಾಗುತ್ತಿದೆ. ಅಲ್ಲದೇ ತುಂಗಭದ್ರಾ ಸೇತುವೆ ಮೇಲೆ ಹೋಗುತ್ತಿರುವ ಬಸ್ಗಳ ಸಂಚಾರವೂ ಸ್ಥಗಿತಗೊಳಿಸಲಾಗಿದೆ. <br /> <br /> ಈ ಸಂಸ್ಥೆಯಿಂದ ಬೆಂಗಳೂರಿಗೆ ತೆರಳುವ ಬಸ್ಗಳು ಸ್ಥಗಿತಗೊಳಿಸಲಾಗಿದೆ ಎಂದು ಈಶಾನ್ಯ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ಎಂ.ಎ ಹಾನಗಲ್ `ಪ್ರಜಾವಾಣಿ~ಗೆ ತಿಳಿಸಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>