<p><strong>ರಾಯಚೂರು:</strong> ಪ್ರವಾಹದ ಪರಿಸ್ಥಿತಿ ಎದುರಾದಾಗ ನಾನು ಆಂಧ್ರದ ಸಿಎಂ ಆಗಿದ್ದೆ. ಪ್ರವಾಹದಿಂದ ಮಂತ್ರಾಲಯ ಕ್ಷೇತ್ರ ಸಂಕಷ್ಟಿಕ್ಕೀಡಾಗಿತ್ತು. ಆದರೆ, ಪ್ರವಾಹೋತ್ತರ ಕೈಗೊಂಡ ಅಭಿವೃದ್ಧಿ ಕಾರ್ಯಗಳು ಚುರುಕಿನಿಂದ ನಡೆದಿರುವುದು ನೆಮ್ಮದಿ ತಂದಿದೆ. ಇನ್ನೂ ಹೆಚ್ಚಿನ ರೀತಿ ಈ ಕ್ಷೇತ್ರ ಅಭಿವೃದ್ಧಿ ಹೊಂದಬೇಕು ಎಂದು ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ರೋಸಯ್ಯ ಹೇಳಿದರು.<br /> <br /> ಶುಕ್ರವಾರ ಮಂತ್ರಾಲಯ ಶ್ರೀ ರಾಘವೇಂದ್ರಸ್ವಾಮಿಮಠಕ್ಕೆ ಕುಟುಂಬ ವರ್ಗ ಹಾಗೂ ಆಪ್ತರೊಂದಿಗೆ ಭೇಟಿ ನೀಡಿ ರಾಘವೇಂದ್ರಸ್ವಾಮಿ ಬೃಂದಾವನ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.<br /> <br /> ಮಂತ್ರಾಲಯ ಕ್ಷೇತ್ರಕ್ಕೆ ಭೇಟಿ ನೀಡಬೇಕು. ದರ್ಶನ ಪಡೆಯಬೇಕು ಎಂಬುದು ಬಹು ದಿನದ ಆಶಯ. ಮುಖ್ಯಮಂತ್ರಿ ಆಗಿದ್ದಾಗ ಕಾರ್ಯದ ಒತ್ತಡ, ಪಕ್ಷದ ಚಟುವಟಿಕೆ ಹಿನ್ನೆಲೆಯಲ್ಲಿ ಬಿಡುವ ಆಗಿರಲಿಲ್ಲ. ಈಗ ದರ್ಶನಕ್ಕೆ ಆಗಮಿಸಿರುವುದಾಗಿ ತಿಳಿಸಿದರು.<br /> <br /> ಕ್ಷೇತ್ರದ ಅಭಿವೃದ್ಧಿಗೆ ತಮ್ಮ ಸಂಪೂರ್ಣ ಸಹಕಾರ ಇರುತ್ತದೆ ಎಂದು ಭರವಸೆ ವ್ಯಕ್ತಪಡಿಸಿದರು. ಮಂತ್ರಾಲಯ ವಿಧಾನಸಭಾ ಕ್ಷೇತ್ರದ ಶಾಸಕ ಬಾಲನಾಗಿರೆಡ್ಡಿ, ಸರಪಂಚ ಪನ್ನಗ ವೆಂಕಟೇಶ, ಶ್ರೀಮಠದ ಆಡಳಿತ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ಪ್ರವಾಹದ ಪರಿಸ್ಥಿತಿ ಎದುರಾದಾಗ ನಾನು ಆಂಧ್ರದ ಸಿಎಂ ಆಗಿದ್ದೆ. ಪ್ರವಾಹದಿಂದ ಮಂತ್ರಾಲಯ ಕ್ಷೇತ್ರ ಸಂಕಷ್ಟಿಕ್ಕೀಡಾಗಿತ್ತು. ಆದರೆ, ಪ್ರವಾಹೋತ್ತರ ಕೈಗೊಂಡ ಅಭಿವೃದ್ಧಿ ಕಾರ್ಯಗಳು ಚುರುಕಿನಿಂದ ನಡೆದಿರುವುದು ನೆಮ್ಮದಿ ತಂದಿದೆ. ಇನ್ನೂ ಹೆಚ್ಚಿನ ರೀತಿ ಈ ಕ್ಷೇತ್ರ ಅಭಿವೃದ್ಧಿ ಹೊಂದಬೇಕು ಎಂದು ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ರೋಸಯ್ಯ ಹೇಳಿದರು.<br /> <br /> ಶುಕ್ರವಾರ ಮಂತ್ರಾಲಯ ಶ್ರೀ ರಾಘವೇಂದ್ರಸ್ವಾಮಿಮಠಕ್ಕೆ ಕುಟುಂಬ ವರ್ಗ ಹಾಗೂ ಆಪ್ತರೊಂದಿಗೆ ಭೇಟಿ ನೀಡಿ ರಾಘವೇಂದ್ರಸ್ವಾಮಿ ಬೃಂದಾವನ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.<br /> <br /> ಮಂತ್ರಾಲಯ ಕ್ಷೇತ್ರಕ್ಕೆ ಭೇಟಿ ನೀಡಬೇಕು. ದರ್ಶನ ಪಡೆಯಬೇಕು ಎಂಬುದು ಬಹು ದಿನದ ಆಶಯ. ಮುಖ್ಯಮಂತ್ರಿ ಆಗಿದ್ದಾಗ ಕಾರ್ಯದ ಒತ್ತಡ, ಪಕ್ಷದ ಚಟುವಟಿಕೆ ಹಿನ್ನೆಲೆಯಲ್ಲಿ ಬಿಡುವ ಆಗಿರಲಿಲ್ಲ. ಈಗ ದರ್ಶನಕ್ಕೆ ಆಗಮಿಸಿರುವುದಾಗಿ ತಿಳಿಸಿದರು.<br /> <br /> ಕ್ಷೇತ್ರದ ಅಭಿವೃದ್ಧಿಗೆ ತಮ್ಮ ಸಂಪೂರ್ಣ ಸಹಕಾರ ಇರುತ್ತದೆ ಎಂದು ಭರವಸೆ ವ್ಯಕ್ತಪಡಿಸಿದರು. ಮಂತ್ರಾಲಯ ವಿಧಾನಸಭಾ ಕ್ಷೇತ್ರದ ಶಾಸಕ ಬಾಲನಾಗಿರೆಡ್ಡಿ, ಸರಪಂಚ ಪನ್ನಗ ವೆಂಕಟೇಶ, ಶ್ರೀಮಠದ ಆಡಳಿತ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>