<p><strong>ಪಣಜಿ (ಪಿಟಿಐ): </strong>ಅಯೋಧ್ಯೆಯಲ್ಲಿ ಮಂದಿರ ನಿರ್ಮಾಣ ವಿಷಯ ಪಕ್ಷದ ಕಾರ್ಯಸೂಚಿಯಲ್ಲಿ ಇದೆಯಾದರೂ, ಮುಂದಿನ ಲೋಕಸಭೆ ಚುನಾವಣೆಯಲ್ಲಿ ಅದಕ್ಕೆ ಹೆಚ್ಚು ಆದ್ಯತೆ ಕೊಡುವ ಬಗ್ಗೆ ಪರಿಗಣಿಸಿಲ್ಲ ಎಂದು ಬಿಜೆಪಿ ಸ್ಪಷ್ಟಪಡಿಸಿದೆ.<br /> <br /> `ಅಯೋಧ್ಯೆ ನಮ್ಮ ಕಾರ್ಯಸೂಚಿಯಲ್ಲಿ ಇಲ್ಲ ಎಂದು ನಾವು ಯಾವತ್ತೂ ಹೇಳಿಲ್ಲ. ಆದರೆ ಬೆಲೆಯೇರಿಕೆ, ಭ್ರಷ್ಟಾಚಾರ ಹಾಗೂ ದುರಾಡಳಿತದಂತಹ ವಿಷಯಗಳಿಗೆ ಚುನಾವಣೆಯಲ್ಲಿ ಪ್ರಾಮುಖ್ಯ ಕೊಡಲಿದ್ದೇವೆ' ಎಂದು ಪಕ್ಷದ ಉಪಾಧ್ಯಕ್ಷ ಮುಕ್ತಾರ್ ಅಬ್ಬಾಸ್ ನಕ್ವಿ ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.<br /> <br /> `ಗೋವಾದಲ್ಲಿ ಶುಕ್ರವಾರದಿಂದ ಶುರುವಾಗಲಿರುವ ಮೂರು ದಿನಗಳ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ರಾಜಕೀಯ ವಿಷಯಗಳನ್ನು ವಿಸ್ತೃತವಾಗಿ ಚರ್ಚಿಸಲಾಗುವುದು' ಎಂದು ಹೇಳಿದರು.<br /> <br /> ಅವಧಿಗೆ ಮುನ್ನವೇ ಚುನಾವಣೆ ನಡೆಯುವ ಇಂಗಿತ ವ್ಯಕ್ತಪಡಿಸಿದ ನಕ್ವಿ, ಕಾರ್ಯಕಾರಣಿಯಲ್ಲಿ ಮುಂದಿನ ಲೋಕಸಭೆ ಚುನಾವಣೆ ಕುರಿತು ಕಾರ್ಯತಂತ್ರ ರೂಪಿಸಲಾಗುವುದು. ರಾಜಕೀಯ ಹಾಗೂ ದೇಶದ ಆಂತರಿಕ ಭದ್ರತೆ ಸೇರಿದಂತೆ ಹಲವು ವಿಷಯಗಳನ್ನು ಚರ್ಚಿಸಿ, ವಿವಿಧ ನಿರ್ಣಯಗಳನ್ನು ಅಂಗೀಕರಿಸಲಾಗುವುದು ಎಂದರು.<br /> <br /> ಮೈತ್ರಿ ಕಡ್ಡಾಯವಲ್ಲ- `ಧರ್ಮ': ಮುಂಬರುವ ಚುನಾವಣೆಯಲ್ಲಿ ಇತರ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವುದು ಕಡ್ಡಾಯವೇನಿಲ್ಲ; ಅದು ನಮ್ಮ `ಧರ್ಮ' ಎಂದು ನಕ್ವಿ ಪ್ರತಿಕ್ರಿಯಿಸಿದರು.<br /> <br /> `ಮೈತ್ರಿಕೂಟ ರಚಿಸಿಕೊಳ್ಳುವುದು ನಮಗೆ ಕಡ್ಡಾಯವಲ್ಲ. ಈ ಮೊದಲು ಮೈತ್ರಿಕೂಟ ರಚಿಸಿ ನಾವು ಸ್ಥಿರ ಆಡಳಿತ ನೀಡಿದ್ದೇವೆ. ಹೀಗಾಗಿ ಅದನ್ನು ಧರ್ಮ ಎಂದೇ ಪರಿಗಣಿಸುತ್ತೇವೆ' ಎಂದರು.<br /> <br /> ಅಟಲ್ ಬಿಹಾರಿ ವಾಜಪೇಯಿ ನೇತೃತ್ವದಲ್ಲಿ ಎನ್ಡಿಎ ಮೈತ್ರಿಕೂಟ ಆಡಳಿತ ನಡೆಸಿದ್ದನ್ನು ಸ್ಮರಿಸಿದ ಅವರು, `ಅಭಿವೃದ್ಧಿಯೊಂದನ್ನೇ ಕಾರ್ಯಸೂಚಿಯಾಗಿ ಮಾಡಿಕೊಂಡು ಸ್ಥಿರ ಸರ್ಕಾರ ನಡೆಸಿದ್ದೇವೆ. ಮುಂದಿನ ದಿನಗಳಲ್ಲಿ ಎನ್ಡಿಎ ಮೈತ್ರಿಕೂಟವನ್ನು ವಿಸ್ತರಿಸಿ, ಬಲಿಷ್ಠಗೊಳಿಸಲಾಗುವುದು' ಎಂದರು.<br /> <br /> ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರನ್ನು ಲೋಕಸಭೆ ಚುನಾವಣೆ ಪ್ರಚಾರದಿಂದ ದೂರವಿಡುವಂತೆ ಮೈತ್ರಿಕೂಟದ ಯಾವುದೇ ಪಕ್ಷ ಒತ್ತಾಯಿಸಿಲ್ಲ ಎಂದು ನಕ್ವಿ ಸ್ಪಷ್ಟಪಡಿಸಿದರು.<br /> <br /> ಇದೇ ವೇಳೆ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಎನ್ಡಿಎ ಸಾಧನೆ ಸುಧಾರಿಸುವ ದಿಸೆಯಲ್ಲಿ ನರೇಂದ್ರ ಮೋದಿ ಅವರು ಬಿಜೆಪಿಗೆ ಮಾತ್ರವಲ್ಲ, ಜೆಡಿಯು ಗೂ ಅಗತ್ಯ ಎಂದು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಜೀವ್ ಪ್ರತಾಪ್ ರೂಡಿ ಪಟ್ನಾದಲ್ಲಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಣಜಿ (ಪಿಟಿಐ): </strong>ಅಯೋಧ್ಯೆಯಲ್ಲಿ ಮಂದಿರ ನಿರ್ಮಾಣ ವಿಷಯ ಪಕ್ಷದ ಕಾರ್ಯಸೂಚಿಯಲ್ಲಿ ಇದೆಯಾದರೂ, ಮುಂದಿನ ಲೋಕಸಭೆ ಚುನಾವಣೆಯಲ್ಲಿ ಅದಕ್ಕೆ ಹೆಚ್ಚು ಆದ್ಯತೆ ಕೊಡುವ ಬಗ್ಗೆ ಪರಿಗಣಿಸಿಲ್ಲ ಎಂದು ಬಿಜೆಪಿ ಸ್ಪಷ್ಟಪಡಿಸಿದೆ.<br /> <br /> `ಅಯೋಧ್ಯೆ ನಮ್ಮ ಕಾರ್ಯಸೂಚಿಯಲ್ಲಿ ಇಲ್ಲ ಎಂದು ನಾವು ಯಾವತ್ತೂ ಹೇಳಿಲ್ಲ. ಆದರೆ ಬೆಲೆಯೇರಿಕೆ, ಭ್ರಷ್ಟಾಚಾರ ಹಾಗೂ ದುರಾಡಳಿತದಂತಹ ವಿಷಯಗಳಿಗೆ ಚುನಾವಣೆಯಲ್ಲಿ ಪ್ರಾಮುಖ್ಯ ಕೊಡಲಿದ್ದೇವೆ' ಎಂದು ಪಕ್ಷದ ಉಪಾಧ್ಯಕ್ಷ ಮುಕ್ತಾರ್ ಅಬ್ಬಾಸ್ ನಕ್ವಿ ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.<br /> <br /> `ಗೋವಾದಲ್ಲಿ ಶುಕ್ರವಾರದಿಂದ ಶುರುವಾಗಲಿರುವ ಮೂರು ದಿನಗಳ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ರಾಜಕೀಯ ವಿಷಯಗಳನ್ನು ವಿಸ್ತೃತವಾಗಿ ಚರ್ಚಿಸಲಾಗುವುದು' ಎಂದು ಹೇಳಿದರು.<br /> <br /> ಅವಧಿಗೆ ಮುನ್ನವೇ ಚುನಾವಣೆ ನಡೆಯುವ ಇಂಗಿತ ವ್ಯಕ್ತಪಡಿಸಿದ ನಕ್ವಿ, ಕಾರ್ಯಕಾರಣಿಯಲ್ಲಿ ಮುಂದಿನ ಲೋಕಸಭೆ ಚುನಾವಣೆ ಕುರಿತು ಕಾರ್ಯತಂತ್ರ ರೂಪಿಸಲಾಗುವುದು. ರಾಜಕೀಯ ಹಾಗೂ ದೇಶದ ಆಂತರಿಕ ಭದ್ರತೆ ಸೇರಿದಂತೆ ಹಲವು ವಿಷಯಗಳನ್ನು ಚರ್ಚಿಸಿ, ವಿವಿಧ ನಿರ್ಣಯಗಳನ್ನು ಅಂಗೀಕರಿಸಲಾಗುವುದು ಎಂದರು.<br /> <br /> ಮೈತ್ರಿ ಕಡ್ಡಾಯವಲ್ಲ- `ಧರ್ಮ': ಮುಂಬರುವ ಚುನಾವಣೆಯಲ್ಲಿ ಇತರ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವುದು ಕಡ್ಡಾಯವೇನಿಲ್ಲ; ಅದು ನಮ್ಮ `ಧರ್ಮ' ಎಂದು ನಕ್ವಿ ಪ್ರತಿಕ್ರಿಯಿಸಿದರು.<br /> <br /> `ಮೈತ್ರಿಕೂಟ ರಚಿಸಿಕೊಳ್ಳುವುದು ನಮಗೆ ಕಡ್ಡಾಯವಲ್ಲ. ಈ ಮೊದಲು ಮೈತ್ರಿಕೂಟ ರಚಿಸಿ ನಾವು ಸ್ಥಿರ ಆಡಳಿತ ನೀಡಿದ್ದೇವೆ. ಹೀಗಾಗಿ ಅದನ್ನು ಧರ್ಮ ಎಂದೇ ಪರಿಗಣಿಸುತ್ತೇವೆ' ಎಂದರು.<br /> <br /> ಅಟಲ್ ಬಿಹಾರಿ ವಾಜಪೇಯಿ ನೇತೃತ್ವದಲ್ಲಿ ಎನ್ಡಿಎ ಮೈತ್ರಿಕೂಟ ಆಡಳಿತ ನಡೆಸಿದ್ದನ್ನು ಸ್ಮರಿಸಿದ ಅವರು, `ಅಭಿವೃದ್ಧಿಯೊಂದನ್ನೇ ಕಾರ್ಯಸೂಚಿಯಾಗಿ ಮಾಡಿಕೊಂಡು ಸ್ಥಿರ ಸರ್ಕಾರ ನಡೆಸಿದ್ದೇವೆ. ಮುಂದಿನ ದಿನಗಳಲ್ಲಿ ಎನ್ಡಿಎ ಮೈತ್ರಿಕೂಟವನ್ನು ವಿಸ್ತರಿಸಿ, ಬಲಿಷ್ಠಗೊಳಿಸಲಾಗುವುದು' ಎಂದರು.<br /> <br /> ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರನ್ನು ಲೋಕಸಭೆ ಚುನಾವಣೆ ಪ್ರಚಾರದಿಂದ ದೂರವಿಡುವಂತೆ ಮೈತ್ರಿಕೂಟದ ಯಾವುದೇ ಪಕ್ಷ ಒತ್ತಾಯಿಸಿಲ್ಲ ಎಂದು ನಕ್ವಿ ಸ್ಪಷ್ಟಪಡಿಸಿದರು.<br /> <br /> ಇದೇ ವೇಳೆ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಎನ್ಡಿಎ ಸಾಧನೆ ಸುಧಾರಿಸುವ ದಿಸೆಯಲ್ಲಿ ನರೇಂದ್ರ ಮೋದಿ ಅವರು ಬಿಜೆಪಿಗೆ ಮಾತ್ರವಲ್ಲ, ಜೆಡಿಯು ಗೂ ಅಗತ್ಯ ಎಂದು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಜೀವ್ ಪ್ರತಾಪ್ ರೂಡಿ ಪಟ್ನಾದಲ್ಲಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>