<p>ಮುಂಡರಗಿ: ಮಕರ ಸಂಕ್ರಾಂತಿ ನಿಮಿತ್ಯ ತಾಲ್ಲೂಕಿನ ಶಿಂಗಟಾಲೂರ ವೀರಭದ್ರೇಶ್ವರ ದೇವಸ್ಥಾನದ ಬಳಿ ಹರಿದಿರುವ ತುಂಗಭದ್ರಾ ನದಿಯಲ್ಲಿ ಶನಿವಾರ ಮತ್ತು ಭಾನುವಾರ ನೂರಾರು ಜನರು ಪುಣ್ಯಸ್ನಾನ ಮಾಡಿ ವೀರಭದ್ರೇಶ್ವರನ ದರ್ಶನ ಪಡೆದರು.<br /> <br /> ಗದಗ, ಬಳ್ಳಾರಿ, ದಾವಣಗೇರೆ, ಹಾವೇರಿ, ಕೊಪ್ಪಳ ಮೊದಲಾದ ಜಿಲ್ಲೆಗಳಿಂದ ಆಗಮಿಸಿದ್ದ ಭಕ್ತರು ತುಂಗಭದ್ರಾ ನದಿಯಲ್ಲಿ ಪುಣ್ಯಸ್ನಾನ ಮಾಡಿ, ಆತ್ಮೀಯರಿಗೆ, ಬಂಧು ಬಳಗದವರಿಗೆ ಎಳ್ಳುಬೆಲ್ಲ ವಿತರಿಸಿ ಶುಭಾಶಯ ವಿನಿಮಯ ಮಾಡಿಕೊಂಡರು.<br /> <br /> ಮಕರ ಸಂಕ್ರಾಂತಿಯ ನಿಮಿತ್ಯ ಮುಂಡರಗಿ ಹಾಗೂ ಹೂವಿನ ಹಡಗಲಿಗಳಿಂದ ಶಿಂಗಟಾಲೂರ ವೀರಭದ್ರೇಶ್ವರ ದೇವಸ್ಥಾನಕ್ಕೆ ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಲಾಗಿತ್ತು.<br /> <br /> ತಾಲ್ಲೂಕಿನ ಕೊರ್ಲಹಳ್ಳಿ ಗ್ರಾಮದ ನದಿಯಾಚೆಗೆ ಇರುವ ಬಳ್ಳಾರಿ ಜಿಲ್ಲೆಯ ಹೂವಿನಹಡಗಲಿ ತಾಲ್ಲೂಕಿನ ಮದಲಗಟ್ಟಿ ಆಂಜನೇಯನ ದೇವಸ್ಥಾನದ ಬಳಿಯೂ ನೂರಾರು ಜನರು ತುಂಗಭದ್ರಾ ನದಿಯಲ್ಲಿ ಪುಣ್ಯಸ್ನಾನ ಮಾಡಿ ಆಂಜನೇಯನ ದರ್ಶನ ಪಡೆದರು. <br /> <br /> ಕೆಲವು ಜನರು ಶನಿವಾರ ಮತ್ತೆ ಕೆಲವು ಜನರು ಭಾನುವಾರ ಮಕರ ಸಂಕ್ರಾಂತಿಯನ್ನು ಆಚರಿಸಿದ್ದು, ಶಿಂಗಟಾಲೂರ ವೀರ ಭದ್ರೇಶ್ವರ ದೇವಸ್ಥಾನ ಮತ್ತು ಮದಲಗಟ್ಟಿ ಆಂಜನೇಯ ದೇವ ಸ್ಥಾನದಲ್ಲಿ ಎರಡೂ ದಿನವು ದೇವಸ್ಥಾನಗಳಲ್ಲಿ ಜನಸಂದಣಿ ಹೆಚ್ಚಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮುಂಡರಗಿ: ಮಕರ ಸಂಕ್ರಾಂತಿ ನಿಮಿತ್ಯ ತಾಲ್ಲೂಕಿನ ಶಿಂಗಟಾಲೂರ ವೀರಭದ್ರೇಶ್ವರ ದೇವಸ್ಥಾನದ ಬಳಿ ಹರಿದಿರುವ ತುಂಗಭದ್ರಾ ನದಿಯಲ್ಲಿ ಶನಿವಾರ ಮತ್ತು ಭಾನುವಾರ ನೂರಾರು ಜನರು ಪುಣ್ಯಸ್ನಾನ ಮಾಡಿ ವೀರಭದ್ರೇಶ್ವರನ ದರ್ಶನ ಪಡೆದರು.<br /> <br /> ಗದಗ, ಬಳ್ಳಾರಿ, ದಾವಣಗೇರೆ, ಹಾವೇರಿ, ಕೊಪ್ಪಳ ಮೊದಲಾದ ಜಿಲ್ಲೆಗಳಿಂದ ಆಗಮಿಸಿದ್ದ ಭಕ್ತರು ತುಂಗಭದ್ರಾ ನದಿಯಲ್ಲಿ ಪುಣ್ಯಸ್ನಾನ ಮಾಡಿ, ಆತ್ಮೀಯರಿಗೆ, ಬಂಧು ಬಳಗದವರಿಗೆ ಎಳ್ಳುಬೆಲ್ಲ ವಿತರಿಸಿ ಶುಭಾಶಯ ವಿನಿಮಯ ಮಾಡಿಕೊಂಡರು.<br /> <br /> ಮಕರ ಸಂಕ್ರಾಂತಿಯ ನಿಮಿತ್ಯ ಮುಂಡರಗಿ ಹಾಗೂ ಹೂವಿನ ಹಡಗಲಿಗಳಿಂದ ಶಿಂಗಟಾಲೂರ ವೀರಭದ್ರೇಶ್ವರ ದೇವಸ್ಥಾನಕ್ಕೆ ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಲಾಗಿತ್ತು.<br /> <br /> ತಾಲ್ಲೂಕಿನ ಕೊರ್ಲಹಳ್ಳಿ ಗ್ರಾಮದ ನದಿಯಾಚೆಗೆ ಇರುವ ಬಳ್ಳಾರಿ ಜಿಲ್ಲೆಯ ಹೂವಿನಹಡಗಲಿ ತಾಲ್ಲೂಕಿನ ಮದಲಗಟ್ಟಿ ಆಂಜನೇಯನ ದೇವಸ್ಥಾನದ ಬಳಿಯೂ ನೂರಾರು ಜನರು ತುಂಗಭದ್ರಾ ನದಿಯಲ್ಲಿ ಪುಣ್ಯಸ್ನಾನ ಮಾಡಿ ಆಂಜನೇಯನ ದರ್ಶನ ಪಡೆದರು. <br /> <br /> ಕೆಲವು ಜನರು ಶನಿವಾರ ಮತ್ತೆ ಕೆಲವು ಜನರು ಭಾನುವಾರ ಮಕರ ಸಂಕ್ರಾಂತಿಯನ್ನು ಆಚರಿಸಿದ್ದು, ಶಿಂಗಟಾಲೂರ ವೀರ ಭದ್ರೇಶ್ವರ ದೇವಸ್ಥಾನ ಮತ್ತು ಮದಲಗಟ್ಟಿ ಆಂಜನೇಯ ದೇವ ಸ್ಥಾನದಲ್ಲಿ ಎರಡೂ ದಿನವು ದೇವಸ್ಥಾನಗಳಲ್ಲಿ ಜನಸಂದಣಿ ಹೆಚ್ಚಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>