<p><strong>ಬೆಂಗಳೂರು: </strong>`ರಾಜ್ಯ ಸರ್ಕಾರ ಪ್ರಾಥಮಿಕ ಶಾಲೆಗಳನ್ನು ಮುಚ್ಚುವ ನಿರ್ಧಾರ ಕೈಗೊಳ್ಳುವ ಮೂಲಕ ವೈದಿಕಶಾಹಿ ಪದ್ಧತಿಯನ್ನು ಮುಂದುವರೆಸಲು ಹೊರಟಿದೆ. ದಲಿತರು, ಆದಿವಾಸಿಗಳ ಮಕ್ಕಳನ್ನು ಶಿಕ್ಷಣದಿಂದ ವಂಚಿತರನ್ನಾಗಿಸುವ ಹುನ್ನಾರ ಈ ನಿರ್ಧಾರದ ಹಿಂದೆ ಅಡಗಿದೆ~ ಎಂದು ವಕೀಲ ಪ್ರೊ.ರವಿವರ್ಮಕುಮಾರ್ ಕಟುವಾಗಿ ಟೀಕಿಸಿದರು.<br /> <br /> ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ದಸಂಸ), ದಲಿತ ವಿದ್ಯಾರ್ಥಿ ಒಕ್ಕೂಟ ಮತ್ತು ದಲಿತ ಮಹಿಳಾ ಒಕ್ಕೂಟಗಳ ಸಹಯೋಗದಲ್ಲಿ ಭಾನುವಾರ ನಗರದಲ್ಲಿ ಏರ್ಪಡಿಸಿದ್ದ `ಬುದ್ಧನೆಡೆಗೆ ಮರಳಿ ಮನೆಗೆ~ ರಾಜ್ಯ ಸಮಾವೇಶ ಉದ್ಘಾಟಿಸಿ ಮಾತನಾಡಿದರು.<br /> <br /> `ಖಾಸಗಿ ಶಿಕ್ಷಣ ಸಂಸ್ಥೆಗಳ ಮಾಲೀಕರಿಗೆ ಅನುಕೂಲ ಮಾಡಿಕೊಡಲು ಸರ್ಕಾರ ಈ ತೀರ್ಮಾನ ತೆಗೆದುಕೊಂಡಿರಬೇಕು. ಸರ್ಕಾರಿ ಶಾಲೆಗಳನ್ನು ಮುಚ್ಚುವ ಮೂಲಕ ಖಾಸಗೀಕರಣಕ್ಕೆ ಅದು ಭೂಮಿಕೆಯನ್ನು ಸಿದ್ಧಪಡಿಸಿದೆ. ಇದು ಭ್ರಷ್ಟಾಚಾರಕ್ಕೂ ಅವಕಾಶ ಮಾಡಿಕೊಡಲಿದೆ~ ಎಂದು ಆತಂಕ ವ್ಯಕ್ತಪಡಿಸಿದರು.<br /> <br /> ದಸಂಸ ರಾಜ್ಯ ಸಂಚಾಲಕ ಲಕ್ಷ್ಮಿನಾರಾಯಣ ನಾಗವಾರ, `ರಾಷ್ಟ್ರೋತ್ಥಾನ ಸಾಹಿತ್ಯವು ಶನಿವಾರ ನಗರದಲ್ಲಿ ಬಿಡುಗಡೆ ಮಾಡಿದ ಅಂಬೇಡ್ಕರ್ ಬಗೆಗಿನ ಕೃತಿ ಹಸಿ ಸುಳ್ಳುಗಳಿಂದ ಕೂಡಿದೆ. ಈ ಕೃತಿಯನ್ನು ಅನುವಾದಿಸಿದ ಚಂದ್ರಶೇಖರ ಭಂಡಾರಿ ಹೇಳಿದ ಹಸಿಸುಳ್ಳುಗಳನ್ನು ಸಹಿಸುವುದಿಲ್ಲ. ಇದಕ್ಕೆ ಪರ್ಯಾಯವಾಗಿ ಸತ್ಯದ ಘಟನೆಗಳುಳ್ಳ ಕೃತಿಯನ್ನು ಹೊರತರಲಾಗುವುದು. ಸಂಘ ಪರಿವಾರದ ಲೇಖಕರು ಅಂಬೇಡ್ಕರರ ವ್ಯಕ್ತಿತ್ವ ತಿರುಚುವ ಪ್ರವೃತ್ತಿ ಬಿಡಬೇಕು~ ಎಂದು ಎಚ್ಚರಿಸಿದರು.<br /> <br /> ಮಾಜಿ ಸಚಿವ ಆರ್.ಬಿ.ತಿಮ್ಮಾಪುರ, ಲೇಖಕ ಮಂಗ್ಳೂರು ವಿಜಯ, ನಿವೃತ್ತ ಪೊಲೀಸ್ ಅಧಿಕಾರಿ ಬಿ.ಕೆ.ಶಿವರಾಂ ಉಪಸ್ಥಿತರಿದ್ದರು.<br /> <br /> <strong>ನಿರ್ಣಯ ಅಂಗೀಕಾರ: </strong>ಸರ್ಕಾರಿ ಶಾಲೆಗಳನ್ನು ಮುಚ್ಚುವ ಆದೇಶವನ್ನು ಸರ್ಕಾರ ಕೂಡಲೇ ಹಿಂತೆಗೆದುಕೊಳ್ಳಬೇಕು ಮತ್ತು ಲೋಕಾಯುಕ್ತ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸಬೇಕು ಎಂಬ ಎರಡು ನಿರ್ಣಯಗಳನ್ನು ಅಂಗೀಕರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>`ರಾಜ್ಯ ಸರ್ಕಾರ ಪ್ರಾಥಮಿಕ ಶಾಲೆಗಳನ್ನು ಮುಚ್ಚುವ ನಿರ್ಧಾರ ಕೈಗೊಳ್ಳುವ ಮೂಲಕ ವೈದಿಕಶಾಹಿ ಪದ್ಧತಿಯನ್ನು ಮುಂದುವರೆಸಲು ಹೊರಟಿದೆ. ದಲಿತರು, ಆದಿವಾಸಿಗಳ ಮಕ್ಕಳನ್ನು ಶಿಕ್ಷಣದಿಂದ ವಂಚಿತರನ್ನಾಗಿಸುವ ಹುನ್ನಾರ ಈ ನಿರ್ಧಾರದ ಹಿಂದೆ ಅಡಗಿದೆ~ ಎಂದು ವಕೀಲ ಪ್ರೊ.ರವಿವರ್ಮಕುಮಾರ್ ಕಟುವಾಗಿ ಟೀಕಿಸಿದರು.<br /> <br /> ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ದಸಂಸ), ದಲಿತ ವಿದ್ಯಾರ್ಥಿ ಒಕ್ಕೂಟ ಮತ್ತು ದಲಿತ ಮಹಿಳಾ ಒಕ್ಕೂಟಗಳ ಸಹಯೋಗದಲ್ಲಿ ಭಾನುವಾರ ನಗರದಲ್ಲಿ ಏರ್ಪಡಿಸಿದ್ದ `ಬುದ್ಧನೆಡೆಗೆ ಮರಳಿ ಮನೆಗೆ~ ರಾಜ್ಯ ಸಮಾವೇಶ ಉದ್ಘಾಟಿಸಿ ಮಾತನಾಡಿದರು.<br /> <br /> `ಖಾಸಗಿ ಶಿಕ್ಷಣ ಸಂಸ್ಥೆಗಳ ಮಾಲೀಕರಿಗೆ ಅನುಕೂಲ ಮಾಡಿಕೊಡಲು ಸರ್ಕಾರ ಈ ತೀರ್ಮಾನ ತೆಗೆದುಕೊಂಡಿರಬೇಕು. ಸರ್ಕಾರಿ ಶಾಲೆಗಳನ್ನು ಮುಚ್ಚುವ ಮೂಲಕ ಖಾಸಗೀಕರಣಕ್ಕೆ ಅದು ಭೂಮಿಕೆಯನ್ನು ಸಿದ್ಧಪಡಿಸಿದೆ. ಇದು ಭ್ರಷ್ಟಾಚಾರಕ್ಕೂ ಅವಕಾಶ ಮಾಡಿಕೊಡಲಿದೆ~ ಎಂದು ಆತಂಕ ವ್ಯಕ್ತಪಡಿಸಿದರು.<br /> <br /> ದಸಂಸ ರಾಜ್ಯ ಸಂಚಾಲಕ ಲಕ್ಷ್ಮಿನಾರಾಯಣ ನಾಗವಾರ, `ರಾಷ್ಟ್ರೋತ್ಥಾನ ಸಾಹಿತ್ಯವು ಶನಿವಾರ ನಗರದಲ್ಲಿ ಬಿಡುಗಡೆ ಮಾಡಿದ ಅಂಬೇಡ್ಕರ್ ಬಗೆಗಿನ ಕೃತಿ ಹಸಿ ಸುಳ್ಳುಗಳಿಂದ ಕೂಡಿದೆ. ಈ ಕೃತಿಯನ್ನು ಅನುವಾದಿಸಿದ ಚಂದ್ರಶೇಖರ ಭಂಡಾರಿ ಹೇಳಿದ ಹಸಿಸುಳ್ಳುಗಳನ್ನು ಸಹಿಸುವುದಿಲ್ಲ. ಇದಕ್ಕೆ ಪರ್ಯಾಯವಾಗಿ ಸತ್ಯದ ಘಟನೆಗಳುಳ್ಳ ಕೃತಿಯನ್ನು ಹೊರತರಲಾಗುವುದು. ಸಂಘ ಪರಿವಾರದ ಲೇಖಕರು ಅಂಬೇಡ್ಕರರ ವ್ಯಕ್ತಿತ್ವ ತಿರುಚುವ ಪ್ರವೃತ್ತಿ ಬಿಡಬೇಕು~ ಎಂದು ಎಚ್ಚರಿಸಿದರು.<br /> <br /> ಮಾಜಿ ಸಚಿವ ಆರ್.ಬಿ.ತಿಮ್ಮಾಪುರ, ಲೇಖಕ ಮಂಗ್ಳೂರು ವಿಜಯ, ನಿವೃತ್ತ ಪೊಲೀಸ್ ಅಧಿಕಾರಿ ಬಿ.ಕೆ.ಶಿವರಾಂ ಉಪಸ್ಥಿತರಿದ್ದರು.<br /> <br /> <strong>ನಿರ್ಣಯ ಅಂಗೀಕಾರ: </strong>ಸರ್ಕಾರಿ ಶಾಲೆಗಳನ್ನು ಮುಚ್ಚುವ ಆದೇಶವನ್ನು ಸರ್ಕಾರ ಕೂಡಲೇ ಹಿಂತೆಗೆದುಕೊಳ್ಳಬೇಕು ಮತ್ತು ಲೋಕಾಯುಕ್ತ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸಬೇಕು ಎಂಬ ಎರಡು ನಿರ್ಣಯಗಳನ್ನು ಅಂಗೀಕರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>