<p>ರಾಮನಗರ: ಮಕ್ಕಳು ತಮ್ಮ ಬಾಲ್ಯಾವಸ್ತೆಯಲ್ಲಿಯೇ ಪ್ರಾಮಾಣಿಕತೆಯನ್ನು ಅನುಕರಿಸಬೇಕು. ರಾಷ್ಟ್ರಭಕ್ತಿ, ದೇಶಪ್ರೇಮ, ಶಿಸ್ತು, ಸಹಬಾಳ್ವೆ, ಗುರು ಹಿರಿಯರಿಗೆ ಗೌರವ ಕೊಡುವ ಮೌಲ್ಯಗಳನ್ನು ಅನುಸರಿಸುವುದನ್ನು ಕಲಿಯಬೇಕು ಎಂದು ಗ್ರಾಮದ ಹಿರಿಯ ನಾಗರಿಕ ಟಿ. ಪಿ ರಾಮಯ್ಯ ಕಿವಿಮಾತು ಹೇಳಿದರು. <br /> <br /> ಮಾಗಡಿ ತಾಲ್ಲೂಕಿನ ತಿಪ್ಪಸಂದ್ರದ ಮಾರುತಿ ಸರ್ಕಾರಿ ಪ್ರೌಢಶಾಲೆಯಲ್ಲಿ ಶುಕ್ರವಾರ ನಡೆದ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ತಿಪ್ಪಸಂದ್ರ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಎಸ್. ನಾಗರಾಜ್ ಮಾತನಾಡಿ, ಮಕ್ಕಳು ಶಾಲಾ ಹಂತದಲ್ಲಿಯೇ ಶ್ರಮವಹಿಸಿ ವಿದ್ಯಾಭ್ಯಾಸ ಮಾಡಬೇಕು. ಆ ಮೂಲಕ ತಂದೆ-ತಾಯಿಗಳಿಗೆ ಕೀರ್ತಿ ತರುವಂತಹ ಹೊನ್ನ ಹೂಗಳಾಗಳಾಗಬೇಕು ಎಂದರು.<br /> <br /> ತಿಪ್ಪಸಂದ್ರದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರದಲ್ಲಿ ಈ ವರ್ಷ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಊಟದ ವ್ಯವಸ್ಥೆ ಕಲ್ಪಿಸಿರುವ ದಾನಿಗಳಾದ ಟಿ. ಜಿ ವೆಂಕಟೇಶ್ , ವನಜಾಕ್ಷಿ ಸುರೇಶ್, ವೆಂಕಟರಮಣ ಶೆಟ್ಟಿ, ಉಮೇಶ್, ಜಿ. ರಾಮಣ್ಣ, ಚಂದ್ರಣ್ಣ ಅವರನ್ನು ಸಮಾರಂಭದಲ್ಲಿ ಸನ್ಮಾನಿಸಲಾಯಿತು. ಆಟೋಟಗಳಲ್ಲಿ ಭಾಗವಹಿಸಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ಗ್ರಾಮಸ್ಥರ ಗಮನಸೆಳೆದವು. <br /> <br /> ಶಾಲೆಯ ಮುಖ್ಯ ಶಿಕ್ಷಕ ಸುರೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಎಸ್.ಡಿ.ಎಂ.ಸಿ ಅಧ್ಯಕ್ಷೆ ವನಿತಾ ಗಂಗರಾಜು, ನೇರಳೆಕೆರೆ ಶ್ರೀನಿವಾಸ್, ಗಂಗರಾಜು, ಸಹ ಶಿಕ್ಷಕರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಮನಗರ: ಮಕ್ಕಳು ತಮ್ಮ ಬಾಲ್ಯಾವಸ್ತೆಯಲ್ಲಿಯೇ ಪ್ರಾಮಾಣಿಕತೆಯನ್ನು ಅನುಕರಿಸಬೇಕು. ರಾಷ್ಟ್ರಭಕ್ತಿ, ದೇಶಪ್ರೇಮ, ಶಿಸ್ತು, ಸಹಬಾಳ್ವೆ, ಗುರು ಹಿರಿಯರಿಗೆ ಗೌರವ ಕೊಡುವ ಮೌಲ್ಯಗಳನ್ನು ಅನುಸರಿಸುವುದನ್ನು ಕಲಿಯಬೇಕು ಎಂದು ಗ್ರಾಮದ ಹಿರಿಯ ನಾಗರಿಕ ಟಿ. ಪಿ ರಾಮಯ್ಯ ಕಿವಿಮಾತು ಹೇಳಿದರು. <br /> <br /> ಮಾಗಡಿ ತಾಲ್ಲೂಕಿನ ತಿಪ್ಪಸಂದ್ರದ ಮಾರುತಿ ಸರ್ಕಾರಿ ಪ್ರೌಢಶಾಲೆಯಲ್ಲಿ ಶುಕ್ರವಾರ ನಡೆದ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ತಿಪ್ಪಸಂದ್ರ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಎಸ್. ನಾಗರಾಜ್ ಮಾತನಾಡಿ, ಮಕ್ಕಳು ಶಾಲಾ ಹಂತದಲ್ಲಿಯೇ ಶ್ರಮವಹಿಸಿ ವಿದ್ಯಾಭ್ಯಾಸ ಮಾಡಬೇಕು. ಆ ಮೂಲಕ ತಂದೆ-ತಾಯಿಗಳಿಗೆ ಕೀರ್ತಿ ತರುವಂತಹ ಹೊನ್ನ ಹೂಗಳಾಗಳಾಗಬೇಕು ಎಂದರು.<br /> <br /> ತಿಪ್ಪಸಂದ್ರದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರದಲ್ಲಿ ಈ ವರ್ಷ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಊಟದ ವ್ಯವಸ್ಥೆ ಕಲ್ಪಿಸಿರುವ ದಾನಿಗಳಾದ ಟಿ. ಜಿ ವೆಂಕಟೇಶ್ , ವನಜಾಕ್ಷಿ ಸುರೇಶ್, ವೆಂಕಟರಮಣ ಶೆಟ್ಟಿ, ಉಮೇಶ್, ಜಿ. ರಾಮಣ್ಣ, ಚಂದ್ರಣ್ಣ ಅವರನ್ನು ಸಮಾರಂಭದಲ್ಲಿ ಸನ್ಮಾನಿಸಲಾಯಿತು. ಆಟೋಟಗಳಲ್ಲಿ ಭಾಗವಹಿಸಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ಗ್ರಾಮಸ್ಥರ ಗಮನಸೆಳೆದವು. <br /> <br /> ಶಾಲೆಯ ಮುಖ್ಯ ಶಿಕ್ಷಕ ಸುರೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಎಸ್.ಡಿ.ಎಂ.ಸಿ ಅಧ್ಯಕ್ಷೆ ವನಿತಾ ಗಂಗರಾಜು, ನೇರಳೆಕೆರೆ ಶ್ರೀನಿವಾಸ್, ಗಂಗರಾಜು, ಸಹ ಶಿಕ್ಷಕರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>