<p>ಪರಶುರಾಂಪುರ: ಮಕ್ಕಳಲ್ಲಿ ನೈತಿಕತೆ ಬೆಳೆಸುವಂತಹ ಶಿಕ್ಷಣ ನೀಡುವ ಮೂಲಕ ಅವರನ್ನು ಸಮಾಜದ ಆಸ್ತಿಯನ್ನಾಗಿ ಮಾಡಬೇಕು ಎಂದು ಕಾಂಗ್ರೆಸ್ ಮುಖಂಡ ಟಿ. ರಘುಮೂರ್ತಿ ಕರೆ ನೀಡಿದರು.<br /> <br /> ಸಮೀಪದ ಪಿ. ಮಹದೇವಪುರ ಜ್ಞಾನವಿಕಾಸ ಶಾಲೆಯಲ್ಲಿ ಭಾನುವಾರ ನಡೆದ `ನೂತನ ಕೊಠಡಿ ಉದ್ಘಾಟನೆ ಹಾಗೂ ಪೋಷಕರ ದಿನಾಚರಣೆ~ಯಲ್ಲಿ ಅವರು ಮಾತನಾಡಿದರು.<br /> <br /> ಮಕ್ಕಳಲ್ಲಿರುವ ಸಾಮರ್ಥ್ಯ ಗುರುತಿಸಿ, ಅವರ ಆಸಕ್ತಿಗೆ ಪೂರಕವಾದ ವಾತವರಣ ಕಲ್ಪಿಸುವ ಉತ್ತಮ ಸಾಧನೆ ಮಾಡುವ ಅವಕಾಶ ಶಿಕ್ಷಣ ಸಂಸ್ಥೆಗಳು ಒದಗಿಸಿ ಕೊಡಬೇಕು ಎಂದರು.<br /> <br /> ಕಾರ್ಯಕ್ರಮ ಉದ್ಘಾಟಿಸಿದ ತಾ.ಪಂ. ಸದಸ್ಯ ನರಸಿಂಹಯ್ಯ ಮಾತನಾಡಿ, ಆಂಧ್ರ ಗಡಿಯಲ್ಲಿ ಶಾಲೆ ತೆರೆಯುವ ಮೂಲಕ ಗ್ರಾಮೀಣ ಭಾಗದ ಮಕ್ಕಳಿಗೆ ಶಿಕ್ಷಣ ನೀಡುತ್ತಿರುವ ಸಂಸ್ಥೆ ಕಾರ್ಯ ಶ್ಲಾಘನೀಯ ಎಂದರು.<br /> <br /> ಜಿಲ್ಲಾ ನವಜಾಗೃತಿ ವೇದಿಕೆ ಅಧ್ಯಕ್ಷ ಚಿತ್ರಲಿಂಗಪ್ಪ ಮಾತನಾಡಿ, ಪ್ರತಿ ಪೋಷಕರು ತಮ್ಮ ಮಕ್ಕಳು ಉತ್ತಮ ವ್ಯಾಸಂಗ ಮಾಡಿ ಉನ್ನತ ಹುದ್ದೆಯಲ್ಲಿ ಇರಬೇಕು ಎಂದು ಆಶಿಸುವುದರ ಬದಲಾಗಿ, ಸಮಾಜ ಸೇವಕರಾಗಿ ರಾಷ್ಟ್ರಕ್ಕೆ ಮತ್ತು ಸಮಾಜಕ್ಕೆ ಕೊಡುಗೆ ನೀಡುವವರಾಗಲಿ ಎಂದು ಆರೈಸಬೇಕು ಎಂದು ಹೇಳಿದರು.<br /> <br /> ತಾಲ್ಲೂಕು ಪಂಚಾಯ್ತಿ ಸದಸ್ಯ ವೆಂಕಟೇಶ್ ಮಾತನಾಡಿ, ಮಕ್ಕಳು ಶ್ರದ್ಧೆಯಿಂದ ಕಲಿತು ತಂದೆ- ತಾಯಿ, ಗುರುಗಳಿಗೆ, ಸಂಸ್ಥೆಗೆ, ಗ್ರಾಮಕ್ಕೆ ಕೀರ್ತಿ ತಂದು ಒಳ್ಳೆ ಹೆಸರು ಗಳಿಸಬೇಕು ಎಂದರು.<br /> <br /> ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಅಧ್ಯಕ್ಷ ಎಚ್. ರಾಮಚಂದ್ರಪ್ಪ ಮಾತನಾಡಿ, ಮಕ್ಕಳಿಗಾಗಿ ಆಸ್ತಿ ಮಾಡುವ ಬದಲಿಗೆ ಮಕ್ಕಳನ್ನೇ ಆಸ್ತಿಯನ್ನಾಗಿ ರೂಪಿಸಬೇಕು ಎಂದು ತಿಳಿಸಿದರು.<br /> <br /> ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯ್ತಿ ಸದಸ್ಯ ಗೋವರ್ಧನ್, ಕಟ್ಟಾ ನರಸಿಂಹಮೂರ್ತಿ, ಗುರುಲಿಂಗಪ್ಪ, ಚಿತ್ತಯ್ಯ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪರಶುರಾಂಪುರ: ಮಕ್ಕಳಲ್ಲಿ ನೈತಿಕತೆ ಬೆಳೆಸುವಂತಹ ಶಿಕ್ಷಣ ನೀಡುವ ಮೂಲಕ ಅವರನ್ನು ಸಮಾಜದ ಆಸ್ತಿಯನ್ನಾಗಿ ಮಾಡಬೇಕು ಎಂದು ಕಾಂಗ್ರೆಸ್ ಮುಖಂಡ ಟಿ. ರಘುಮೂರ್ತಿ ಕರೆ ನೀಡಿದರು.<br /> <br /> ಸಮೀಪದ ಪಿ. ಮಹದೇವಪುರ ಜ್ಞಾನವಿಕಾಸ ಶಾಲೆಯಲ್ಲಿ ಭಾನುವಾರ ನಡೆದ `ನೂತನ ಕೊಠಡಿ ಉದ್ಘಾಟನೆ ಹಾಗೂ ಪೋಷಕರ ದಿನಾಚರಣೆ~ಯಲ್ಲಿ ಅವರು ಮಾತನಾಡಿದರು.<br /> <br /> ಮಕ್ಕಳಲ್ಲಿರುವ ಸಾಮರ್ಥ್ಯ ಗುರುತಿಸಿ, ಅವರ ಆಸಕ್ತಿಗೆ ಪೂರಕವಾದ ವಾತವರಣ ಕಲ್ಪಿಸುವ ಉತ್ತಮ ಸಾಧನೆ ಮಾಡುವ ಅವಕಾಶ ಶಿಕ್ಷಣ ಸಂಸ್ಥೆಗಳು ಒದಗಿಸಿ ಕೊಡಬೇಕು ಎಂದರು.<br /> <br /> ಕಾರ್ಯಕ್ರಮ ಉದ್ಘಾಟಿಸಿದ ತಾ.ಪಂ. ಸದಸ್ಯ ನರಸಿಂಹಯ್ಯ ಮಾತನಾಡಿ, ಆಂಧ್ರ ಗಡಿಯಲ್ಲಿ ಶಾಲೆ ತೆರೆಯುವ ಮೂಲಕ ಗ್ರಾಮೀಣ ಭಾಗದ ಮಕ್ಕಳಿಗೆ ಶಿಕ್ಷಣ ನೀಡುತ್ತಿರುವ ಸಂಸ್ಥೆ ಕಾರ್ಯ ಶ್ಲಾಘನೀಯ ಎಂದರು.<br /> <br /> ಜಿಲ್ಲಾ ನವಜಾಗೃತಿ ವೇದಿಕೆ ಅಧ್ಯಕ್ಷ ಚಿತ್ರಲಿಂಗಪ್ಪ ಮಾತನಾಡಿ, ಪ್ರತಿ ಪೋಷಕರು ತಮ್ಮ ಮಕ್ಕಳು ಉತ್ತಮ ವ್ಯಾಸಂಗ ಮಾಡಿ ಉನ್ನತ ಹುದ್ದೆಯಲ್ಲಿ ಇರಬೇಕು ಎಂದು ಆಶಿಸುವುದರ ಬದಲಾಗಿ, ಸಮಾಜ ಸೇವಕರಾಗಿ ರಾಷ್ಟ್ರಕ್ಕೆ ಮತ್ತು ಸಮಾಜಕ್ಕೆ ಕೊಡುಗೆ ನೀಡುವವರಾಗಲಿ ಎಂದು ಆರೈಸಬೇಕು ಎಂದು ಹೇಳಿದರು.<br /> <br /> ತಾಲ್ಲೂಕು ಪಂಚಾಯ್ತಿ ಸದಸ್ಯ ವೆಂಕಟೇಶ್ ಮಾತನಾಡಿ, ಮಕ್ಕಳು ಶ್ರದ್ಧೆಯಿಂದ ಕಲಿತು ತಂದೆ- ತಾಯಿ, ಗುರುಗಳಿಗೆ, ಸಂಸ್ಥೆಗೆ, ಗ್ರಾಮಕ್ಕೆ ಕೀರ್ತಿ ತಂದು ಒಳ್ಳೆ ಹೆಸರು ಗಳಿಸಬೇಕು ಎಂದರು.<br /> <br /> ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಅಧ್ಯಕ್ಷ ಎಚ್. ರಾಮಚಂದ್ರಪ್ಪ ಮಾತನಾಡಿ, ಮಕ್ಕಳಿಗಾಗಿ ಆಸ್ತಿ ಮಾಡುವ ಬದಲಿಗೆ ಮಕ್ಕಳನ್ನೇ ಆಸ್ತಿಯನ್ನಾಗಿ ರೂಪಿಸಬೇಕು ಎಂದು ತಿಳಿಸಿದರು.<br /> <br /> ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯ್ತಿ ಸದಸ್ಯ ಗೋವರ್ಧನ್, ಕಟ್ಟಾ ನರಸಿಂಹಮೂರ್ತಿ, ಗುರುಲಿಂಗಪ್ಪ, ಚಿತ್ತಯ್ಯ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>