<p><strong>ಕೆಂಗೇರಿ:</strong> `ಮಕ್ಕಳು ಹೊರಗಿನ ಜನಗಳೊಟ್ಟಿಗೆ ಬೆರೆತು ಅವರಲ್ಲಿರುವ ಸಾಮಾನ್ಯ ಜ್ಞಾನ ವೃದ್ಧಿಯಾಗಿ ಸಮಾಜಕ್ಕೆ ಪೂರಕವಾದ ವ್ಯಕ್ತಿಯಾಗುತ್ತಾರೆ. ಪಠ್ಯ ಪುಸ್ತಕವನ್ನಷ್ಟೇ ಓದಿದರೆ ಮುಂದೆ ದುಡಿಯುವ ಯಂತ್ರವಾಗುತ್ತಾರೆಯೇ ಹೊರತು ಮಾನವೀಯ ಸಂಬಂಧಗಳು ಮಕ್ಕಳಲ್ಲಿ ಇಲ್ಲದಂತಾಗುತ್ತವೆ~ ಎಂದು ಅವರು ಸಚಿವೆ ಶೋಭಾ ಕರಂದ್ಲಾಜೆ ಅಭಿಪ್ರಾಯಪಟ್ಟರು.<br /> <br /> ಮಾಗಡಿ ರಸ್ತೆಯ ತುಂಗಾನಗರದಲ್ಲಿ ಜನ್ಮ ಭೂಮಿ ರಕ್ಷಣಾ ಪಡೆ, ರಾಜಧಾನಿ ಗೆಳೆಯರ ಬಳಗ ವತಿಯಿಂದ ಶುಕ್ರವಾರ ಆಯೋಜಿಸಿದ್ದ ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕ ವಿತರಣೆ, ಉಚಿತ ಆರೋಗ್ಯ ತಪಾಸಣೆ ಶಿಬಿರದಲ್ಲಿ ಭಾಗವಹಿಸಿ ಮಾತನಾಡಿದರು.<br /> <br /> ಜಿಲ್ಲಾ ಪಂಚಾಯಿತಿ ಸದಸ್ಯೆ ಭಾರತಿ ವೆಂಕಟೇಶ್, ಯಶವಂತಪುರ ಕ್ಷೇತ್ರದ ಬಿಜೆಪಿ ಅಧ್ಯಕ್ಷ ಎಚ್.ಎಲ್.ಕೃಷ್ಣಪ್ಪ, ಬೆಂಗಳೂರು ನಗರ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಧನಲಕ್ಷ್ಮಿ, ಕಾಯದರ್ಶಿ ಎನ್.ಕೆ.ಮಂಜುಳಾ, ಬಿಜೆಪಿ ವಾರ್ಡ್ ಮಹಿಳಾ ಅಧ್ಯಕ್ಷರಾದ ಮಂಜುಳಾ, ಪುಟ್ಟಮ್ಮ, ಲತಾ, ರಘುನಾಥಯ್ಯ, ಗಂಗನರಸಯ್ಯ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆಂಗೇರಿ:</strong> `ಮಕ್ಕಳು ಹೊರಗಿನ ಜನಗಳೊಟ್ಟಿಗೆ ಬೆರೆತು ಅವರಲ್ಲಿರುವ ಸಾಮಾನ್ಯ ಜ್ಞಾನ ವೃದ್ಧಿಯಾಗಿ ಸಮಾಜಕ್ಕೆ ಪೂರಕವಾದ ವ್ಯಕ್ತಿಯಾಗುತ್ತಾರೆ. ಪಠ್ಯ ಪುಸ್ತಕವನ್ನಷ್ಟೇ ಓದಿದರೆ ಮುಂದೆ ದುಡಿಯುವ ಯಂತ್ರವಾಗುತ್ತಾರೆಯೇ ಹೊರತು ಮಾನವೀಯ ಸಂಬಂಧಗಳು ಮಕ್ಕಳಲ್ಲಿ ಇಲ್ಲದಂತಾಗುತ್ತವೆ~ ಎಂದು ಅವರು ಸಚಿವೆ ಶೋಭಾ ಕರಂದ್ಲಾಜೆ ಅಭಿಪ್ರಾಯಪಟ್ಟರು.<br /> <br /> ಮಾಗಡಿ ರಸ್ತೆಯ ತುಂಗಾನಗರದಲ್ಲಿ ಜನ್ಮ ಭೂಮಿ ರಕ್ಷಣಾ ಪಡೆ, ರಾಜಧಾನಿ ಗೆಳೆಯರ ಬಳಗ ವತಿಯಿಂದ ಶುಕ್ರವಾರ ಆಯೋಜಿಸಿದ್ದ ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕ ವಿತರಣೆ, ಉಚಿತ ಆರೋಗ್ಯ ತಪಾಸಣೆ ಶಿಬಿರದಲ್ಲಿ ಭಾಗವಹಿಸಿ ಮಾತನಾಡಿದರು.<br /> <br /> ಜಿಲ್ಲಾ ಪಂಚಾಯಿತಿ ಸದಸ್ಯೆ ಭಾರತಿ ವೆಂಕಟೇಶ್, ಯಶವಂತಪುರ ಕ್ಷೇತ್ರದ ಬಿಜೆಪಿ ಅಧ್ಯಕ್ಷ ಎಚ್.ಎಲ್.ಕೃಷ್ಣಪ್ಪ, ಬೆಂಗಳೂರು ನಗರ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಧನಲಕ್ಷ್ಮಿ, ಕಾಯದರ್ಶಿ ಎನ್.ಕೆ.ಮಂಜುಳಾ, ಬಿಜೆಪಿ ವಾರ್ಡ್ ಮಹಿಳಾ ಅಧ್ಯಕ್ಷರಾದ ಮಂಜುಳಾ, ಪುಟ್ಟಮ್ಮ, ಲತಾ, ರಘುನಾಥಯ್ಯ, ಗಂಗನರಸಯ್ಯ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>