<p>ಸಿದ್ದಾಪುರ: ಜೀವನ ಶಿಕ್ಷಣ ಮತ್ತು ನೀತಿಪಾಠದ ಕಲಿಕೆಯನ್ನು ಮಕ್ಕಳಿಗೆ ಮನೆಯಲ್ಲಿಯೇ ನೀಡಬೇಕು ಎಂದು `ಹೋರಾ~ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಸುಹಾಸ್ ಹೆಗಡೆ ಅಭಿಪ್ರಾಯಪಟ್ಟರು.<br /> <br /> `ಹೋರಾ~ ಸಂಸ್ಥೆಯ ಆಶ್ರಯದಲ್ಲಿ, ಪ್ರವಾಸೋದ್ಯಮ ಇಲಾಖೆ, ಜಿಲ್ಲಾಡಳಿತ ಮತ್ತು `ಬಿಸ್ವಾ~ ಪ್ರತಿಷ್ಠಾನದ ಸಹಕಾರದೊಂದಿಗೆ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ(ಅರ್ಬನ್ ಬ್ಯಾಂಕ್ ಸಭಾಂಗಣ) ಮಂಗಳವಾರ ಏರ್ಪಡಿಸಿದ್ದ `ವಿದ್ಯಾರ್ಥಿ ಜಾಗೃತಿ ವಿಚಾರ ಸಂಕಿರಣ~ದಲ್ಲಿ ಅವರು ಮಾತನಾಡಿದರು.<br /> <br /> `ನಮ್ಮ ಜಿಲ್ಲೆಯಲ್ಲಿರುವ ಪರಿಸರ ವೈವಿಧ್ಯ ಇನ್ನೆಲ್ಲಿಯೂ ಕಾಣದು. ಕರಾವಳಿ, ಮಲೆನಾಡು, ಬಯಲುಸೀಮೆ ಮೂರನ್ನೂ ಹೊಂದಿರುವ ಜಿಲ್ಲೆ ನಮ್ಮದು. ಉ.ಕ. ಜಿಲ್ಲೆಯಲ್ಲಿ ಪ್ರವಾಸೋದ್ಯಮ ಲಾಭದಾಯಕ ಉದ್ದಿಮೆಯಾಗುತ್ತಿದೆ. ಪ್ರವಾಸೋದ್ಯಮದ ಮೂಲಕ ಜಿಲ್ಲೆಯ ಸಂಸ್ಕೃತಿಯನ್ನು ಪರಿಚಯಿಸಲು ಸಾಧ್ಯವಿದೆ. <br /> <br /> ಜಿಲ್ಲೆಯ ಪ್ರವಾಸಿ ತಾಣಗಳು, ಜನಜೀವನ, ಸಂಸ್ಕೃತಿಯ ಬಗ್ಗೆ ಪ್ರವಾಸಿಗರಿಗೆ ತಿಳಿಸಿ ಹೇಳುವ ಮಾರ್ಗದರ್ಶಕರ ಕೊರತೆ ನಮ್ಮಲ್ಲಿದೆ~ ಎಂದರು.<br /> <br /> `ಜಿಲ್ಲೆಯ ಪ್ರವಾಸಿ ತಾಣಗಳ ಮಹತ್ವ~ ಕುರಿತಂತೆ ಮಾತನಾಡಿದ ಲೇಖಕ ಶಿವಾನಂದ ಕಳವೆ, `ಜಿಲ್ಲೆಯ ಪ್ರವಾಸಿ ತಾಣಗಳನ್ನು ನೋಡುವ ಮೊದಲು ಅವುಗಳ ಐತಿಹಾಸಿಕ ಮಹತ್ವವನ್ನು ಅರಿತುಕೊಳ್ಳಬೇಕು. ನಾವಿರುವ ಸ್ಥಳದ ಮಹತ್ವವನ್ನು ತಿಳಿದುಕೊಳ್ಳದಿದ್ದರೇ ನಾವು ಅವುಗಳನ್ನು ಕಳೆದುಕೊಳ್ಳಬೇಕಾಗುತ್ತದೆ~ ಎಂದರು.<br /> <br /> ಮುಖ್ಯ ಅತಿಥಿಗಳಾಗಿ ಪಟ್ಟಣದ ಶಂಕರಮಠದ ಧರ್ಮಾಧಿಕಾರಿ ವಿಜಯ ಹೆಗಡೆ ದೊಡ್ಮನೆ, `ಬಿಸ್ವಾ~ ಪ್ರತಿಷ್ಠಾನದ ಅಧ್ಯಕ್ಷ ಗುರುರಾಜ ಶಾನಭಾಗ, ಲೇಖಕ ಶಿವಾನಂದ ಕಳವೆ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಚಾರ್ಯ ಗೋಪಾಲಕೃಷ್ಣ ಹೆಗಡೆ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕ ರಾಜು ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಿದ್ದಾಪುರ: ಜೀವನ ಶಿಕ್ಷಣ ಮತ್ತು ನೀತಿಪಾಠದ ಕಲಿಕೆಯನ್ನು ಮಕ್ಕಳಿಗೆ ಮನೆಯಲ್ಲಿಯೇ ನೀಡಬೇಕು ಎಂದು `ಹೋರಾ~ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಸುಹಾಸ್ ಹೆಗಡೆ ಅಭಿಪ್ರಾಯಪಟ್ಟರು.<br /> <br /> `ಹೋರಾ~ ಸಂಸ್ಥೆಯ ಆಶ್ರಯದಲ್ಲಿ, ಪ್ರವಾಸೋದ್ಯಮ ಇಲಾಖೆ, ಜಿಲ್ಲಾಡಳಿತ ಮತ್ತು `ಬಿಸ್ವಾ~ ಪ್ರತಿಷ್ಠಾನದ ಸಹಕಾರದೊಂದಿಗೆ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ(ಅರ್ಬನ್ ಬ್ಯಾಂಕ್ ಸಭಾಂಗಣ) ಮಂಗಳವಾರ ಏರ್ಪಡಿಸಿದ್ದ `ವಿದ್ಯಾರ್ಥಿ ಜಾಗೃತಿ ವಿಚಾರ ಸಂಕಿರಣ~ದಲ್ಲಿ ಅವರು ಮಾತನಾಡಿದರು.<br /> <br /> `ನಮ್ಮ ಜಿಲ್ಲೆಯಲ್ಲಿರುವ ಪರಿಸರ ವೈವಿಧ್ಯ ಇನ್ನೆಲ್ಲಿಯೂ ಕಾಣದು. ಕರಾವಳಿ, ಮಲೆನಾಡು, ಬಯಲುಸೀಮೆ ಮೂರನ್ನೂ ಹೊಂದಿರುವ ಜಿಲ್ಲೆ ನಮ್ಮದು. ಉ.ಕ. ಜಿಲ್ಲೆಯಲ್ಲಿ ಪ್ರವಾಸೋದ್ಯಮ ಲಾಭದಾಯಕ ಉದ್ದಿಮೆಯಾಗುತ್ತಿದೆ. ಪ್ರವಾಸೋದ್ಯಮದ ಮೂಲಕ ಜಿಲ್ಲೆಯ ಸಂಸ್ಕೃತಿಯನ್ನು ಪರಿಚಯಿಸಲು ಸಾಧ್ಯವಿದೆ. <br /> <br /> ಜಿಲ್ಲೆಯ ಪ್ರವಾಸಿ ತಾಣಗಳು, ಜನಜೀವನ, ಸಂಸ್ಕೃತಿಯ ಬಗ್ಗೆ ಪ್ರವಾಸಿಗರಿಗೆ ತಿಳಿಸಿ ಹೇಳುವ ಮಾರ್ಗದರ್ಶಕರ ಕೊರತೆ ನಮ್ಮಲ್ಲಿದೆ~ ಎಂದರು.<br /> <br /> `ಜಿಲ್ಲೆಯ ಪ್ರವಾಸಿ ತಾಣಗಳ ಮಹತ್ವ~ ಕುರಿತಂತೆ ಮಾತನಾಡಿದ ಲೇಖಕ ಶಿವಾನಂದ ಕಳವೆ, `ಜಿಲ್ಲೆಯ ಪ್ರವಾಸಿ ತಾಣಗಳನ್ನು ನೋಡುವ ಮೊದಲು ಅವುಗಳ ಐತಿಹಾಸಿಕ ಮಹತ್ವವನ್ನು ಅರಿತುಕೊಳ್ಳಬೇಕು. ನಾವಿರುವ ಸ್ಥಳದ ಮಹತ್ವವನ್ನು ತಿಳಿದುಕೊಳ್ಳದಿದ್ದರೇ ನಾವು ಅವುಗಳನ್ನು ಕಳೆದುಕೊಳ್ಳಬೇಕಾಗುತ್ತದೆ~ ಎಂದರು.<br /> <br /> ಮುಖ್ಯ ಅತಿಥಿಗಳಾಗಿ ಪಟ್ಟಣದ ಶಂಕರಮಠದ ಧರ್ಮಾಧಿಕಾರಿ ವಿಜಯ ಹೆಗಡೆ ದೊಡ್ಮನೆ, `ಬಿಸ್ವಾ~ ಪ್ರತಿಷ್ಠಾನದ ಅಧ್ಯಕ್ಷ ಗುರುರಾಜ ಶಾನಭಾಗ, ಲೇಖಕ ಶಿವಾನಂದ ಕಳವೆ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಚಾರ್ಯ ಗೋಪಾಲಕೃಷ್ಣ ಹೆಗಡೆ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕ ರಾಜು ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>