<p>ಟೊರಾಂಟೊ (ಪಿಟಿಐ): `ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೆ?~ ಎಂಬ ಗಾದೆ ಮಾತಿನಂತೆ ಚಿಕ್ಕವರಿದ್ದಾಗಲೇ ಮಕ್ಕಳಿಗೆ ಹೊಡೆದು ಬುದ್ಧಿ ಕಲಿಸಬೇಕು ಎನ್ನುವ ಹೆತ್ತವರು ಮಕ್ಕಳಿಗೆ ಆಗಾಗ ಹೊಡೆಯುವುದು ಸಾಮಾನ್ಯ. <br /> <br /> ಆದರೆ ಚಿಕ್ಕಂದಿನಲ್ಲಿ ಹೊಡೆತ ತಿಂದರೆ ಮುಂದೆ ಬೆಳೆದು ದೊಡ್ಡವರಾದಾಗ ಮಾನಸಿಕ ಸಮಸ್ಯೆಗಳು ಕಾಣಿಸಿಕೊಳ್ಳುವ ಅಪಾಯ ಹೆಚ್ಚಿರುತ್ತದೆ ಎಂದು ಕೆನಡಾದ ಸಂಶೋಧನೆಯೊಂದು ಎಚ್ಚರಿಸಿದೆ.<br /> <br /> ಮಕ್ಕಳಿಗೆ, ಅದರಲ್ಲೂ ಅವರ ಪೃಷ್ಠದ ಮೇಲೆ ಹೊಡೆದರೆ ಮುಂದೆ ಅವರು ಮಾನಸಿಕ ಆಘಾತಕ್ಕೆ ಒಳಗಾಗುವ ಸಾಧ್ಯತೆ ಇರುತ್ತದೆ ಎಂದು ಸಂಶೋಧನೆ ತಿಳಿಸಿದೆ.<br /> <br /> ಹೆತ್ತವರ ಹೊಡೆತ ಸಹಿಸುವ ಮಕ್ಕಳಲ್ಲಿ ಶೇ 2ರಿಂದ 7ರಷ್ಟು ಮಕ್ಕಳು ವರ್ಷ ಕಳೆದಂತೆ ವಿವಿಧ ರೀತಿಯ ಮಾನಸಿಕ ಸಮಸ್ಯೆಗಳಿಂದ ಬಳಲುತ್ತಾರೆ ಎಂಬ ಸಂಶೋಧನಾ ಅಧ್ಯಯನವನ್ನು ಅಮೆರಿಕದ ನಿಯತಕಾಲಿಕ ಪ್ರಕಟಿಸಿದೆ. <br /> <br /> `ಮಕ್ಕಳಿಗೆ ದೈಹಿಕ ಶಿಕ್ಷೆಯನ್ನು ಕೊಡಬಾರದು ಎಂಬ ಸಂದೇಶವನ್ನು ಈ ಅಧ್ಯಯನ ತಿಳಿಸುತ್ತದೆ. ಮಕ್ಕಳ ವಿಷಯಕ್ಕೆ ಸಂಬಂಧಿಸಿದಂತೆ ಕಾನೂನುಗಳನ್ನು ರೂಪಿಸುವ ವೇಳೆ ಇವುಗಳನ್ನು ಗಣನೆಗೆ ತೆಗೆದುಕೊಳ್ಳುವ ಮೂಲಕ ಅಪಾಯದಿಂದ ಅವರನ್ನು ರಕ್ಷಿಸುವುದು ಅಗತ್ಯವಿದೆ~ ಎಂದು ಅಧ್ಯಯನದ ನೇತೃತ್ವ ವಹಿಸಿದ್ದ ಮನಿಟೋಬಾ ವಿಶ್ವವಿದ್ಯಾಲಯದ ಸಮುದಾಯ ಆರೋಗ್ಯ ವಿಜ್ಞಾನ ವಿಭಾಗದ ಟ್ರೇಸಿ ಅಫಿಫಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಟೊರಾಂಟೊ (ಪಿಟಿಐ): `ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೆ?~ ಎಂಬ ಗಾದೆ ಮಾತಿನಂತೆ ಚಿಕ್ಕವರಿದ್ದಾಗಲೇ ಮಕ್ಕಳಿಗೆ ಹೊಡೆದು ಬುದ್ಧಿ ಕಲಿಸಬೇಕು ಎನ್ನುವ ಹೆತ್ತವರು ಮಕ್ಕಳಿಗೆ ಆಗಾಗ ಹೊಡೆಯುವುದು ಸಾಮಾನ್ಯ. <br /> <br /> ಆದರೆ ಚಿಕ್ಕಂದಿನಲ್ಲಿ ಹೊಡೆತ ತಿಂದರೆ ಮುಂದೆ ಬೆಳೆದು ದೊಡ್ಡವರಾದಾಗ ಮಾನಸಿಕ ಸಮಸ್ಯೆಗಳು ಕಾಣಿಸಿಕೊಳ್ಳುವ ಅಪಾಯ ಹೆಚ್ಚಿರುತ್ತದೆ ಎಂದು ಕೆನಡಾದ ಸಂಶೋಧನೆಯೊಂದು ಎಚ್ಚರಿಸಿದೆ.<br /> <br /> ಮಕ್ಕಳಿಗೆ, ಅದರಲ್ಲೂ ಅವರ ಪೃಷ್ಠದ ಮೇಲೆ ಹೊಡೆದರೆ ಮುಂದೆ ಅವರು ಮಾನಸಿಕ ಆಘಾತಕ್ಕೆ ಒಳಗಾಗುವ ಸಾಧ್ಯತೆ ಇರುತ್ತದೆ ಎಂದು ಸಂಶೋಧನೆ ತಿಳಿಸಿದೆ.<br /> <br /> ಹೆತ್ತವರ ಹೊಡೆತ ಸಹಿಸುವ ಮಕ್ಕಳಲ್ಲಿ ಶೇ 2ರಿಂದ 7ರಷ್ಟು ಮಕ್ಕಳು ವರ್ಷ ಕಳೆದಂತೆ ವಿವಿಧ ರೀತಿಯ ಮಾನಸಿಕ ಸಮಸ್ಯೆಗಳಿಂದ ಬಳಲುತ್ತಾರೆ ಎಂಬ ಸಂಶೋಧನಾ ಅಧ್ಯಯನವನ್ನು ಅಮೆರಿಕದ ನಿಯತಕಾಲಿಕ ಪ್ರಕಟಿಸಿದೆ. <br /> <br /> `ಮಕ್ಕಳಿಗೆ ದೈಹಿಕ ಶಿಕ್ಷೆಯನ್ನು ಕೊಡಬಾರದು ಎಂಬ ಸಂದೇಶವನ್ನು ಈ ಅಧ್ಯಯನ ತಿಳಿಸುತ್ತದೆ. ಮಕ್ಕಳ ವಿಷಯಕ್ಕೆ ಸಂಬಂಧಿಸಿದಂತೆ ಕಾನೂನುಗಳನ್ನು ರೂಪಿಸುವ ವೇಳೆ ಇವುಗಳನ್ನು ಗಣನೆಗೆ ತೆಗೆದುಕೊಳ್ಳುವ ಮೂಲಕ ಅಪಾಯದಿಂದ ಅವರನ್ನು ರಕ್ಷಿಸುವುದು ಅಗತ್ಯವಿದೆ~ ಎಂದು ಅಧ್ಯಯನದ ನೇತೃತ್ವ ವಹಿಸಿದ್ದ ಮನಿಟೋಬಾ ವಿಶ್ವವಿದ್ಯಾಲಯದ ಸಮುದಾಯ ಆರೋಗ್ಯ ವಿಜ್ಞಾನ ವಿಭಾಗದ ಟ್ರೇಸಿ ಅಫಿಫಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>