<p><strong>ಸಿದ್ದಾಪುರ: </strong>`ಮಕ್ಕಳ ಪ್ರಗತಿಗೆ ಶಿಕ್ಷಣ ಅಗತ್ಯ' ಎಂದು ಸಿವಿಲ್ ಮತ್ತು ನ್ಯಾಯಾಧೀಶೆ ವಿಮಲಾ ಆರ್.ನಂದಗಾಂವ ಹೇಳಿದರು.<br /> ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯ ಅಂಗವಾಗಿ ಸ್ಥಳೀಯ ತಾಲ್ಲೂಕು ಪಂಚಾಯ್ತಿ ಸಭಾಭವನದಲ್ಲಿ ಬುಧವಾರ ಏರ್ಪಡಿಸಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.<br /> <br /> `ಮಕ್ಕಳು ಗಿಡದಂತೆ. ಗಿಡಗಳಿಗೆ ಒಳ್ಳೆಯ ಪೋಷಣೆ ನೀಡಿದರೆ ಅವುಗಳು ಉತ್ತಮ ಫಲ ನೀಡುವಂತೆ ಮಕ್ಕಳಿಗೆ ಒಳ್ಳೆಯ ಶಿಕ್ಷಣ ನೀಡಿದರೆ ಅವರು ಭವಿಷ್ಯದಲ್ಲಿ ಉತ್ತಮ ಪ್ರಜೆಗಳಾಗುತ್ತಾರೆ' ಎಂದರು.<br /> <br /> `ಮಕ್ಕಳು ತಮಗೆ ಸಿಕ್ಕುವ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಎಲ್ಲ ಮಕ್ಕಳಿಗೂ ಎಲ್ಲ ಸೌಲಭ್ಯಗಳು ದೊರೆಯುವುದಿಲ್ಲ. ಮೈಮೇಲೆ ಸರಿಯಾಗಿ ಬಟ್ಟೆ ಕೂಡ ಇಲ್ಲದೇ ಭಿಕ್ಷೆ ಬೇಡುವ ಮಕ್ಕಳನ್ನು ನಾವು ನೋಡುತ್ತೇವೆ. ಈ ರೀತಿಯ ಪರಿಸ್ಥಿತಿ ದೂರವಾಗಬೇಕು ಎಂಬ ದೃಷ್ಟಿಯಿಂದಲೇ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ' ಎಂದರು.<br /> <br /> `ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಮತ್ತು ಮಾಜಿ ರಾಷ್ಟ್ರಪತಿ ಎ.ಪಿ.ಜೆ.ಅಬ್ದುಲ್ ಕಲಾಂ ಅವರ ಆದರ್ಶಗಳನ್ನು ಮಕ್ಕಳು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು. ಇಂತಹ ಮಹಾಪುರುಷರ ಜೀವನ ಚರಿತ್ರೆಯನ್ನು ಓದುವ ಅಭ್ಯಾಸ ಬೆಳೆಸಿಕೊಳ್ಳಬೇಕು' ಎಂದರು.<br /> <br /> ಬಿಇಒ ಬಿ.ವಿ.ನಾಯ್ಕ, ತಾ.ಪಂ.ಯೋಜನಾಧಿಕಾರಿ ವಿ.ಎಂ.ಹೆಗಡೆ ಉಪಸ್ಥಿತರಿದ್ದರು. ತಹಶೀಲ್ದಾರ್ ವಿ.ಕೆ.ನಾಯ್ಕ ಅಧ್ಯಕ್ಷತೆ ವಹಿಸಿದ್ದರು.<br /> <strong>ಉಪನ್ಯಾಸ: </strong>ವಕೀಲ ಎಸ್.ಜಿ.ಹೆಗಡೆ ಇದೇ ಸಂದರ್ಭದಲ್ಲಿ ಬಾಲಕಾರ್ಮಿಕ ಪದ್ಧತಿ ವಿರೋಧಿ ಕಾನೂನು ಕುರಿತು ಉಪನ್ಯಾಸ ನೀಡಿದರು. ದೈಹಿಕ ಶಿಕ್ಷಣ ಪರಿವೀಕ್ಷಕ ಎಸ್.ಜಿ.ಹೆಗಡೆ ಸ್ವಾಗತಿಸಿದರು.ಎನ್.ಆರ್.ಹೆಗಡೆಕರ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿದ್ದಾಪುರ: </strong>`ಮಕ್ಕಳ ಪ್ರಗತಿಗೆ ಶಿಕ್ಷಣ ಅಗತ್ಯ' ಎಂದು ಸಿವಿಲ್ ಮತ್ತು ನ್ಯಾಯಾಧೀಶೆ ವಿಮಲಾ ಆರ್.ನಂದಗಾಂವ ಹೇಳಿದರು.<br /> ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯ ಅಂಗವಾಗಿ ಸ್ಥಳೀಯ ತಾಲ್ಲೂಕು ಪಂಚಾಯ್ತಿ ಸಭಾಭವನದಲ್ಲಿ ಬುಧವಾರ ಏರ್ಪಡಿಸಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.<br /> <br /> `ಮಕ್ಕಳು ಗಿಡದಂತೆ. ಗಿಡಗಳಿಗೆ ಒಳ್ಳೆಯ ಪೋಷಣೆ ನೀಡಿದರೆ ಅವುಗಳು ಉತ್ತಮ ಫಲ ನೀಡುವಂತೆ ಮಕ್ಕಳಿಗೆ ಒಳ್ಳೆಯ ಶಿಕ್ಷಣ ನೀಡಿದರೆ ಅವರು ಭವಿಷ್ಯದಲ್ಲಿ ಉತ್ತಮ ಪ್ರಜೆಗಳಾಗುತ್ತಾರೆ' ಎಂದರು.<br /> <br /> `ಮಕ್ಕಳು ತಮಗೆ ಸಿಕ್ಕುವ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಎಲ್ಲ ಮಕ್ಕಳಿಗೂ ಎಲ್ಲ ಸೌಲಭ್ಯಗಳು ದೊರೆಯುವುದಿಲ್ಲ. ಮೈಮೇಲೆ ಸರಿಯಾಗಿ ಬಟ್ಟೆ ಕೂಡ ಇಲ್ಲದೇ ಭಿಕ್ಷೆ ಬೇಡುವ ಮಕ್ಕಳನ್ನು ನಾವು ನೋಡುತ್ತೇವೆ. ಈ ರೀತಿಯ ಪರಿಸ್ಥಿತಿ ದೂರವಾಗಬೇಕು ಎಂಬ ದೃಷ್ಟಿಯಿಂದಲೇ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ' ಎಂದರು.<br /> <br /> `ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಮತ್ತು ಮಾಜಿ ರಾಷ್ಟ್ರಪತಿ ಎ.ಪಿ.ಜೆ.ಅಬ್ದುಲ್ ಕಲಾಂ ಅವರ ಆದರ್ಶಗಳನ್ನು ಮಕ್ಕಳು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು. ಇಂತಹ ಮಹಾಪುರುಷರ ಜೀವನ ಚರಿತ್ರೆಯನ್ನು ಓದುವ ಅಭ್ಯಾಸ ಬೆಳೆಸಿಕೊಳ್ಳಬೇಕು' ಎಂದರು.<br /> <br /> ಬಿಇಒ ಬಿ.ವಿ.ನಾಯ್ಕ, ತಾ.ಪಂ.ಯೋಜನಾಧಿಕಾರಿ ವಿ.ಎಂ.ಹೆಗಡೆ ಉಪಸ್ಥಿತರಿದ್ದರು. ತಹಶೀಲ್ದಾರ್ ವಿ.ಕೆ.ನಾಯ್ಕ ಅಧ್ಯಕ್ಷತೆ ವಹಿಸಿದ್ದರು.<br /> <strong>ಉಪನ್ಯಾಸ: </strong>ವಕೀಲ ಎಸ್.ಜಿ.ಹೆಗಡೆ ಇದೇ ಸಂದರ್ಭದಲ್ಲಿ ಬಾಲಕಾರ್ಮಿಕ ಪದ್ಧತಿ ವಿರೋಧಿ ಕಾನೂನು ಕುರಿತು ಉಪನ್ಯಾಸ ನೀಡಿದರು. ದೈಹಿಕ ಶಿಕ್ಷಣ ಪರಿವೀಕ್ಷಕ ಎಸ್.ಜಿ.ಹೆಗಡೆ ಸ್ವಾಗತಿಸಿದರು.ಎನ್.ಆರ್.ಹೆಗಡೆಕರ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>