<p>ಬೆಂಗಳೂರು: ನಗರದ ನಂದಿನಿ ಬಡಾವಣೆಯ ಆಕ್ಸ್ಫರ್ಡ್ ಶಾಲೆಯಲ್ಲಿ `ಶಿಕ್ಷಣ ಹಕ್ಕು ಕಾಯ್ದೆ~ಯಡಿ (ಅರ್ಟಿಇ) ದಾಖಲಾದ ಮಕ್ಕಳ ಮೇಲೆ ದೌರ್ಜನ್ಯ ನಡೆದಿದೆ ಎಂಬ ಆರೋಪ ಕುರಿತು ತನಿಖೆಗೆ ಆದೇಶಿಸಲಾಗಿದೆ. ವರದಿ ಬಂದ ಬಳಿಕ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.<br /> <br /> `ಆಕ್ಸ್ಫರ್ಡ್ ಶಾಲೆಯಲ್ಲಿ ಆರ್ಟಿಇ ಅಡಿಯಲ್ಲಿ ಪ್ರವೇಶ ಪಡೆದ ಮಕ್ಕಳ ಕೂದಲು ಕತ್ತರಿಸಿ ದೌರ್ಜನ್ಯ ನಡೆಸಲಾಗಿದೆ. ಶಾಲೆಯ ಆಡಳಿತ ಮಂಡಳಿ ವಿರುದ್ಧ ಸರ್ಕಾರ ಯಾವ ಕ್ರಮ ಜರುಗಿಸಿದೆ~ ಎಂದು ಕಾಂಗ್ರೆಸ್ ಶಾಸಕ ಯು.ಟಿ.ಖಾದರ್ ವಿಧಾನಸಭೆಯಲ್ಲಿ ಸೋಮವಾರ ಶೂನ್ಯವೇಳೆಯಲ್ಲಿ ಪ್ರಶ್ನಿಸಿದರು. ಈ ಕುರಿತು ಉತ್ತರ ನೀಡಿದ ಸಚಿವರು, ಪ್ರಕರಣದ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಇಲಾಖೆಯ ಅಧಿಕಾರಿಗಳಿಗೆ ಆದೇಶ ನೀಡಿರುವುದಾಗಿ ತಿಳಿಸಿದರು.<br /> <br /> `ಆರ್ಟಿಇ ಜಾರಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳು ಸರ್ಕಾರಕ್ಕೆ ಭರವಸೆ ನೀಡಿವೆ. ಯಾವುದೇ ಶಾಲೆಗಳಲ್ಲೂ ಮಕ್ಕಳ ಮೇಲೆ ದೌರ್ಜನ್ಯ ನಡೆಯಲು ಸರ್ಕಾರ ಅವಕಾಶ ನೀಡುವುದಿಲ್ಲ~ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ನಗರದ ನಂದಿನಿ ಬಡಾವಣೆಯ ಆಕ್ಸ್ಫರ್ಡ್ ಶಾಲೆಯಲ್ಲಿ `ಶಿಕ್ಷಣ ಹಕ್ಕು ಕಾಯ್ದೆ~ಯಡಿ (ಅರ್ಟಿಇ) ದಾಖಲಾದ ಮಕ್ಕಳ ಮೇಲೆ ದೌರ್ಜನ್ಯ ನಡೆದಿದೆ ಎಂಬ ಆರೋಪ ಕುರಿತು ತನಿಖೆಗೆ ಆದೇಶಿಸಲಾಗಿದೆ. ವರದಿ ಬಂದ ಬಳಿಕ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.<br /> <br /> `ಆಕ್ಸ್ಫರ್ಡ್ ಶಾಲೆಯಲ್ಲಿ ಆರ್ಟಿಇ ಅಡಿಯಲ್ಲಿ ಪ್ರವೇಶ ಪಡೆದ ಮಕ್ಕಳ ಕೂದಲು ಕತ್ತರಿಸಿ ದೌರ್ಜನ್ಯ ನಡೆಸಲಾಗಿದೆ. ಶಾಲೆಯ ಆಡಳಿತ ಮಂಡಳಿ ವಿರುದ್ಧ ಸರ್ಕಾರ ಯಾವ ಕ್ರಮ ಜರುಗಿಸಿದೆ~ ಎಂದು ಕಾಂಗ್ರೆಸ್ ಶಾಸಕ ಯು.ಟಿ.ಖಾದರ್ ವಿಧಾನಸಭೆಯಲ್ಲಿ ಸೋಮವಾರ ಶೂನ್ಯವೇಳೆಯಲ್ಲಿ ಪ್ರಶ್ನಿಸಿದರು. ಈ ಕುರಿತು ಉತ್ತರ ನೀಡಿದ ಸಚಿವರು, ಪ್ರಕರಣದ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಇಲಾಖೆಯ ಅಧಿಕಾರಿಗಳಿಗೆ ಆದೇಶ ನೀಡಿರುವುದಾಗಿ ತಿಳಿಸಿದರು.<br /> <br /> `ಆರ್ಟಿಇ ಜಾರಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳು ಸರ್ಕಾರಕ್ಕೆ ಭರವಸೆ ನೀಡಿವೆ. ಯಾವುದೇ ಶಾಲೆಗಳಲ್ಲೂ ಮಕ್ಕಳ ಮೇಲೆ ದೌರ್ಜನ್ಯ ನಡೆಯಲು ಸರ್ಕಾರ ಅವಕಾಶ ನೀಡುವುದಿಲ್ಲ~ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>