<p>ಶಿಕಾರಿಪುರ: ಮಕ್ಕಳನ್ನು ಕೂಲಿ ಕೆಲಸ, ಬೈಕ್ ರಿಪೇರಿ ಕೆಲಸಗಳಿಗೆ ಕಳುಹಿಸದೆ, ಅವರನ್ನು ಶಾಲೆಗೆ ಕಳುಹಿಸಿ ಶಿಕ್ಷಿತರನ್ನಾಗಿಸುವ ಕಡೆ ಹೆಚ್ಚು ಗಮನ ಕೊಡಿ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಲ್ಪಸಂಖ್ಯಾತ ಸಮುದಾಯಕ್ಕೆ ಸಲಹೆ ನೀಡಿದರು.<br /> <br /> ಪಟ್ಟಣದ ಕುಲುಮಿ ಕೇರಿಯಲ್ಲಿ ಈಚೆಗೆ ಅಲ್ಪಸಂಖ್ಯಾತರ ಶಾದಿಮಹಲ್ ಕಟ್ಟಡದ ಶಂಕು ಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.<br /> <br /> ಕಟ್ಟಡ ಕಟ್ಟುವುದು ಸಾಧನೆ ಅಲ್ಲ, ಕಟ್ಟಿದ ಕಟ್ಟಡ ಜನರ ಅನೂಕೂಲಕ್ಕಾಗಿ ಬಳಕೆಯಾಗಬೇಕು ಎಂದರು.<br /> ಹಾಗೆಯೇ, ನಾವುಗಳು ಹಿಂದೂ, ಮುಸ್ಲಿಂ, ಮತ್ತು ಕ್ರಿಶ್ಚಿಯನ್ ಎಂಬ ಭೇದ ಭಾವವಿಲ್ಲದೆ ಒಂದೇ ತಾಯಿ ಮಕ್ಕಳಂತೆ ಬಾಳಬೇಕು ಎಂದು ಸಲಹೆ ಮಾಡಿದರು. <br /> <br /> ಸಮಾರಂಭದಲ್ಲಿ ಸಂಸತ್ ಸದಸ್ಯ ಬಿ.ವೈ. ರಾಘವೇಂದ್ರ, ರಾಜ್ಯ ಕೈಮಗ್ಗ ಮಂಡಳಿ ಅಧ್ಯಕ್ಷ ಲಕ್ಷ್ಮೀನಾರಾಯಣ್, ಸರ್ಕಾರದ ಅಲ್ಪಸಂಖ್ಯಾತ ಕಾರ್ಯದರ್ಶಿ ಜಮೀರ್ ಪಾಷ, ರಾಜ್ಯ ಉರ್ದು ಅಕಾಡಮಿ ಅಧ್ಯಕ್ಷ ಮೌಲಾನಾ ಅಮ್ಜದ್ ಹುಸೇನ್ ಕರ್ನಾಟಕಿ, `ಕಾಡಾ~ ಅಧ್ಯಕ್ಷ ಕೆ. ಶೇಖರಪ್ಪ, ಪುರಸಭೆ ಅಧ್ಯಕ್ಷೆ ವೀಣಾ ಮಲ್ಲೆೀಶಪ್ಪ, ಮಾಜಿ ಅಧ್ಯಕ್ಷ ಟಿ.ಎಸ್. ಮೋಹನ್, ಸ್ಥಾಯಿ ಸಮಿತಿ ಅಧ್ಯಕ್ಷ ಗುರುರಾಜ್ ಜಗತಾಪ್, ಎ.ಪಿ.ಎಂ.ಸಿ ಅಧ್ಯಕ್ಷ ಸುಕೇಂದ್ರಪ್ಪ, ಮುಖಂಡರಾದ ಯೂಸ್ಫ್ ಆಲಿ, ಫಯಾಜ್, ಸಮೀವುಲ್ಲಾ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿಕಾರಿಪುರ: ಮಕ್ಕಳನ್ನು ಕೂಲಿ ಕೆಲಸ, ಬೈಕ್ ರಿಪೇರಿ ಕೆಲಸಗಳಿಗೆ ಕಳುಹಿಸದೆ, ಅವರನ್ನು ಶಾಲೆಗೆ ಕಳುಹಿಸಿ ಶಿಕ್ಷಿತರನ್ನಾಗಿಸುವ ಕಡೆ ಹೆಚ್ಚು ಗಮನ ಕೊಡಿ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಲ್ಪಸಂಖ್ಯಾತ ಸಮುದಾಯಕ್ಕೆ ಸಲಹೆ ನೀಡಿದರು.<br /> <br /> ಪಟ್ಟಣದ ಕುಲುಮಿ ಕೇರಿಯಲ್ಲಿ ಈಚೆಗೆ ಅಲ್ಪಸಂಖ್ಯಾತರ ಶಾದಿಮಹಲ್ ಕಟ್ಟಡದ ಶಂಕು ಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.<br /> <br /> ಕಟ್ಟಡ ಕಟ್ಟುವುದು ಸಾಧನೆ ಅಲ್ಲ, ಕಟ್ಟಿದ ಕಟ್ಟಡ ಜನರ ಅನೂಕೂಲಕ್ಕಾಗಿ ಬಳಕೆಯಾಗಬೇಕು ಎಂದರು.<br /> ಹಾಗೆಯೇ, ನಾವುಗಳು ಹಿಂದೂ, ಮುಸ್ಲಿಂ, ಮತ್ತು ಕ್ರಿಶ್ಚಿಯನ್ ಎಂಬ ಭೇದ ಭಾವವಿಲ್ಲದೆ ಒಂದೇ ತಾಯಿ ಮಕ್ಕಳಂತೆ ಬಾಳಬೇಕು ಎಂದು ಸಲಹೆ ಮಾಡಿದರು. <br /> <br /> ಸಮಾರಂಭದಲ್ಲಿ ಸಂಸತ್ ಸದಸ್ಯ ಬಿ.ವೈ. ರಾಘವೇಂದ್ರ, ರಾಜ್ಯ ಕೈಮಗ್ಗ ಮಂಡಳಿ ಅಧ್ಯಕ್ಷ ಲಕ್ಷ್ಮೀನಾರಾಯಣ್, ಸರ್ಕಾರದ ಅಲ್ಪಸಂಖ್ಯಾತ ಕಾರ್ಯದರ್ಶಿ ಜಮೀರ್ ಪಾಷ, ರಾಜ್ಯ ಉರ್ದು ಅಕಾಡಮಿ ಅಧ್ಯಕ್ಷ ಮೌಲಾನಾ ಅಮ್ಜದ್ ಹುಸೇನ್ ಕರ್ನಾಟಕಿ, `ಕಾಡಾ~ ಅಧ್ಯಕ್ಷ ಕೆ. ಶೇಖರಪ್ಪ, ಪುರಸಭೆ ಅಧ್ಯಕ್ಷೆ ವೀಣಾ ಮಲ್ಲೆೀಶಪ್ಪ, ಮಾಜಿ ಅಧ್ಯಕ್ಷ ಟಿ.ಎಸ್. ಮೋಹನ್, ಸ್ಥಾಯಿ ಸಮಿತಿ ಅಧ್ಯಕ್ಷ ಗುರುರಾಜ್ ಜಗತಾಪ್, ಎ.ಪಿ.ಎಂ.ಸಿ ಅಧ್ಯಕ್ಷ ಸುಕೇಂದ್ರಪ್ಪ, ಮುಖಂಡರಾದ ಯೂಸ್ಫ್ ಆಲಿ, ಫಯಾಜ್, ಸಮೀವುಲ್ಲಾ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>