<p>ಕಾಸರಗೋಡು: ಶಿಕ್ಷಣ ಸಂಸ್ಥೆಗಳಲ್ಲಿ ಕಲಿಯುವ ಮಕ್ಕಳ ಸಂಖ್ಯೆ ಅನುಸರಿಸಿ ಶೌಚಾಲಯ ಸೌಲಭ್ಯ ಕಲ್ಪಿಸಬೇಕು ಎಂದು `ಝೀರೋ ವೇಸ್ಟ್~ ಯೋಜನೆಯ ಅಂಗವಾಗಿ ಸ್ಥಳೀಯಾಡಳಿತ ಸಂಸ್ಥೆಯ ಅಧ್ಯಕ್ಷರಿಗೆ ಕಾಸರಗೋಡು ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ ವಿಚಾರಸಂಕಿರಣದಲ್ಲಿ ತಜ್ಞರು ಅಭಿಪ್ರಾಯಪಟ್ಟರು.<br /> <br /> ಶಿಕ್ಷಣ ಸಂಸ್ಥೆಗಳಲ್ಲಿ 40 ಬಾಲಕರು ಮತ್ತು 20 ಬಾಲಕಿಯರಿಗೆ ತಲಾ ಒಂದೊಂದು ಮೂತ್ರಾಲಯಗಳು ಇರಬೇಕು. ಈ ಸೌಲಭ್ಯ ಒದಗಿಸದಿದ್ದರೆ ಆಯಾ ವಿದ್ಯಾಲಯಗಳ ಮುಖ್ಯ ಶಿಕ್ಷಕರು ಮತ್ತು ಪಂಚಾಯಿತಿ ಅಧ್ಯಕ್ಷರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು.<br /> <br /> ಶಾಲೆಗಳಲ್ಲಿ ಶೌಚಾಲಯ ಮತ್ತು ಮೂತ್ರಾಲಯಗಳನ್ನು ನಿರ್ಮಿಸಲು ಘಟಕವೊಂದಕ್ಕೆ ರೂ. 55ಸಾವಿರ ಅಂದಾಜಿಸಲಾಗಿದೆ. ಇದರಲ್ಲಿ ಸಮಗ್ರ ಶುಚಿತ್ವ ಮಿಷನ್ ರೂ.35ಸಾವಿರ ಸಬ್ಸಿಡಿ ನೀಡಲಿದೆ. ರೂ.20ಸಾವಿರ ಸ್ಥಳೀಯಾಡಳಿತ ಸಂಸ್ಥೆಗಳು ಭರಿಸಬೇಕಾಗಿದೆ.<br /> <br /> ವಿಚಾರಸಂಕಿರಣವನ್ನು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಪಿ.ಪಿ.ಶ್ಯಾಮಲಾದೇವಿ ಉದ್ಘಾಟಿಸಿದರು. ಆಲಪ್ಪುರ ಸಮಗ್ರ ಶುಚಿತ್ವ ಕಾರ್ಯಕ್ರಮದ ಸಹಾಯಕ ಸಂಯೋಜಕ ಆರ್.ವೇಣುಗೋಪಾಲ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದರು. ಶುಚಿತ್ವ ಮಿಷನ್ ಜಿಲ್ಲಾ ಸಂಯೋಜಕ ಎಂ.ಖಾಲಿದ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಾಸರಗೋಡು: ಶಿಕ್ಷಣ ಸಂಸ್ಥೆಗಳಲ್ಲಿ ಕಲಿಯುವ ಮಕ್ಕಳ ಸಂಖ್ಯೆ ಅನುಸರಿಸಿ ಶೌಚಾಲಯ ಸೌಲಭ್ಯ ಕಲ್ಪಿಸಬೇಕು ಎಂದು `ಝೀರೋ ವೇಸ್ಟ್~ ಯೋಜನೆಯ ಅಂಗವಾಗಿ ಸ್ಥಳೀಯಾಡಳಿತ ಸಂಸ್ಥೆಯ ಅಧ್ಯಕ್ಷರಿಗೆ ಕಾಸರಗೋಡು ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ ವಿಚಾರಸಂಕಿರಣದಲ್ಲಿ ತಜ್ಞರು ಅಭಿಪ್ರಾಯಪಟ್ಟರು.<br /> <br /> ಶಿಕ್ಷಣ ಸಂಸ್ಥೆಗಳಲ್ಲಿ 40 ಬಾಲಕರು ಮತ್ತು 20 ಬಾಲಕಿಯರಿಗೆ ತಲಾ ಒಂದೊಂದು ಮೂತ್ರಾಲಯಗಳು ಇರಬೇಕು. ಈ ಸೌಲಭ್ಯ ಒದಗಿಸದಿದ್ದರೆ ಆಯಾ ವಿದ್ಯಾಲಯಗಳ ಮುಖ್ಯ ಶಿಕ್ಷಕರು ಮತ್ತು ಪಂಚಾಯಿತಿ ಅಧ್ಯಕ್ಷರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು.<br /> <br /> ಶಾಲೆಗಳಲ್ಲಿ ಶೌಚಾಲಯ ಮತ್ತು ಮೂತ್ರಾಲಯಗಳನ್ನು ನಿರ್ಮಿಸಲು ಘಟಕವೊಂದಕ್ಕೆ ರೂ. 55ಸಾವಿರ ಅಂದಾಜಿಸಲಾಗಿದೆ. ಇದರಲ್ಲಿ ಸಮಗ್ರ ಶುಚಿತ್ವ ಮಿಷನ್ ರೂ.35ಸಾವಿರ ಸಬ್ಸಿಡಿ ನೀಡಲಿದೆ. ರೂ.20ಸಾವಿರ ಸ್ಥಳೀಯಾಡಳಿತ ಸಂಸ್ಥೆಗಳು ಭರಿಸಬೇಕಾಗಿದೆ.<br /> <br /> ವಿಚಾರಸಂಕಿರಣವನ್ನು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಪಿ.ಪಿ.ಶ್ಯಾಮಲಾದೇವಿ ಉದ್ಘಾಟಿಸಿದರು. ಆಲಪ್ಪುರ ಸಮಗ್ರ ಶುಚಿತ್ವ ಕಾರ್ಯಕ್ರಮದ ಸಹಾಯಕ ಸಂಯೋಜಕ ಆರ್.ವೇಣುಗೋಪಾಲ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದರು. ಶುಚಿತ್ವ ಮಿಷನ್ ಜಿಲ್ಲಾ ಸಂಯೋಜಕ ಎಂ.ಖಾಲಿದ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>