<p><strong>ಶಿವಮೊಗ್ಗ:</strong> ಬಡತನ, ಅನಕ್ಷರತೆ ಹಾಗೂ ಸುತ್ತಲ ಪರಿಸರದ ಕಾರಣದಿಂದ ಮಕ್ಕಳು ದಾರಿ ತಪ್ಪುತ್ತಿದ್ದು, ಅವರನ್ನು ಸರಿದಾರಿಗೆ ಕರೆತರುವ ಜವಾಬ್ದಾರಿ ಪೋಷಕರು ಹಾಗೂ ನಾಗರಿಕ ಸಮಾಜದ ಮೇಲಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಆರ್.ಎಂ.ಶೆಟ್ಟರ್ ಹೇಳಿದರು.<br /> <br /> ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ, ಜಿಲ್ಲಾ ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಂಯುಕ್ತವಾಗಿ ಶುಕ್ರವಾರ ಜಿಲ್ಲಾ ಪೊಲೀಸ್ ಸಭಾಂಗಣದಲ್ಲಿ ಏರ್ಪಡಿಸಿದ್ದ `ಬಾಲನ್ಯಾಯ ಕಾಯ್ದೆ ಹಾಗೂ ನಿಯಮಗಳ ಪರಿಣಾಮಕಾರಿ ಅನುಷ್ಠಾನ ಕಾನೂನು ಶಿಬಿರ'ವನ್ನು ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ಮಕ್ಕಳ ಸರ್ವಾಂಗೀಣ ವಿಕಾಸಕ್ಕೆ ಪೂರಕ ವಾತಾವರಣ ನಿರ್ಮಿಸುವುದು ಮತ್ತು ಅವರ ರಕ್ಷಣೆಗೆ ಸೂಕ್ತ ವಾತಾವರಣ ನಿರ್ಮಾ ಣವಾಗಬೇಕಾಗಿರುವುದು ಇಂದಿನ ಅಗತ್ಯಗಳಲ್ಲಿ ಒಂದು ಎಂದ ಅವರು, ಬಾಲಾಪರಾಧಿಗಳನ್ನು ವಯಸ್ಕ ಅಪರಾಧಿಗಳ ನಡೆಸಿಕೊಳ್ಳುವಂತಿಲ್ಲ, ಅಲ್ಲದೇ ಅವರನ್ನು ಜೈಲಿನಲ್ಲಿಡುವುದು ಸರಿಯಾದ ವಿಧಾನವಲ್ಲ; ಬದಲಾಗಿ ಅವರಿಗೆ ಪ್ರತ್ಯೇಕ ಸ್ಟೇ ಹೋಂಗಳಲ್ಲಿ ಉಳಿಸಬೇಕು ಎಂದರು.<br /> <br /> ಕಾರ್ಯಾಗಾರದಲ್ಲಿ ವಕೀಲರ ಸಂಘದ ಕಾರ್ಯದರ್ಶಿ ನಾಗೇಶನ್ ಮಾತನಾಡಿ, ದಾರಿತಪ್ಪಿದ ಮಕ್ಕಳಿಗೆ ಶಿಕ್ಷೆ ನೀಡುವುದರಿಂದ ಉತ್ತಮ ಸಮಾಜ ನಿರ್ಮಾಣವಾಗುವುದಿಲ್ಲ; ಬದಲಾಗಿ ಮಕ್ಕಳ ಮನಸ್ಸಿನಲ್ಲಿ ಸೇಡು, ದ್ವೇಷ-ಅಸೂಯೆಯ ಭಾವನೆ ಹೆಚ್ಚುತ್ತದೆ. ಆದ್ದರಿಂದ ಅವರ ಪ್ರಚೋದನಾತ್ಮಕ ಕಾರಣಗಳ ಬಗ್ಗೆ ಹಾಗೂ ಅವರ ಮಿತ್ರರ ಒಡನಾಟಗಳನ್ನು ಗಮನಿಸಿ, ಸಕಾಲಿಕವಾಗಿ ಸೂಕ್ತ ಮಾರ್ಗದರ್ಶನ ನೀಡಬೇಕು ಎಂದರು.<br /> <br /> ಈ ಕಾಯ್ದೆಯ ಅನುಷ್ಠಾನದಲ್ಲಿ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು ಎಂದ ಅವರು, ಪೋಷಕರು ಕೂಡ ಮಕ್ಕಳನ್ನು ನೈತಿಕವಲ್ಲದ ಚಟುವಟಿಕೆಗಳಿಗೆ ಉತ್ತೇಜಿಸುತ್ತಿದ್ದಾರೆ. ಪೋಷಕರು ಇಂತಹ ಅಚಾತುರ್ಯಗಳಿಗೆ ಅವಕಾಶ ನೀಡುವ ಮೊದಲು ಒಮ್ಮೆ ಗಂಭೀರವಾಗಿ ಆಲೋಚಿಸುವುದು ಒಳಿತು ಎಂದು ಸಲಹೆ ನೀಡಿದರು.<br /> <br /> ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೌಶಲೇಂದ್ರಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಲಕ್ಷ್ಮೀಕಾಂತಮ್ಮ, ಜಿಲ್ಲಾ ಹೆಚ್ಚುವರಿ ವರಿಷ್ಠಾಧಿಕಾರಿ ಬಿ.ದಯಾಳು ಉಪಸ್ಥಿತರಿದ್ದರು.<br /> ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ರವಿ ಎಂ.ನಾಯ್ಕ ಉಪನ್ಯಾಸ ನೀಡಿದರು. ಶಕುಂತಲಾ ಪ್ರಾರ್ಥಿಸಿದರು. ಇನ್ಸ್ಪೆಕ್ಟರ್ ಚನ್ನಕೇಶವ ಸ್ವಾಗತಿಸಿದರು. ಹಿರಿಯ ಮಕ್ಕಳ ಕಲ್ಯಾಣಾಧಿಕಾರಿ ಓಂಕಾರನಾಯ್ಕ ಕಾರ್ಯಕ್ರಮ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ಬಡತನ, ಅನಕ್ಷರತೆ ಹಾಗೂ ಸುತ್ತಲ ಪರಿಸರದ ಕಾರಣದಿಂದ ಮಕ್ಕಳು ದಾರಿ ತಪ್ಪುತ್ತಿದ್ದು, ಅವರನ್ನು ಸರಿದಾರಿಗೆ ಕರೆತರುವ ಜವಾಬ್ದಾರಿ ಪೋಷಕರು ಹಾಗೂ ನಾಗರಿಕ ಸಮಾಜದ ಮೇಲಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಆರ್.ಎಂ.ಶೆಟ್ಟರ್ ಹೇಳಿದರು.<br /> <br /> ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ, ಜಿಲ್ಲಾ ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಂಯುಕ್ತವಾಗಿ ಶುಕ್ರವಾರ ಜಿಲ್ಲಾ ಪೊಲೀಸ್ ಸಭಾಂಗಣದಲ್ಲಿ ಏರ್ಪಡಿಸಿದ್ದ `ಬಾಲನ್ಯಾಯ ಕಾಯ್ದೆ ಹಾಗೂ ನಿಯಮಗಳ ಪರಿಣಾಮಕಾರಿ ಅನುಷ್ಠಾನ ಕಾನೂನು ಶಿಬಿರ'ವನ್ನು ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ಮಕ್ಕಳ ಸರ್ವಾಂಗೀಣ ವಿಕಾಸಕ್ಕೆ ಪೂರಕ ವಾತಾವರಣ ನಿರ್ಮಿಸುವುದು ಮತ್ತು ಅವರ ರಕ್ಷಣೆಗೆ ಸೂಕ್ತ ವಾತಾವರಣ ನಿರ್ಮಾ ಣವಾಗಬೇಕಾಗಿರುವುದು ಇಂದಿನ ಅಗತ್ಯಗಳಲ್ಲಿ ಒಂದು ಎಂದ ಅವರು, ಬಾಲಾಪರಾಧಿಗಳನ್ನು ವಯಸ್ಕ ಅಪರಾಧಿಗಳ ನಡೆಸಿಕೊಳ್ಳುವಂತಿಲ್ಲ, ಅಲ್ಲದೇ ಅವರನ್ನು ಜೈಲಿನಲ್ಲಿಡುವುದು ಸರಿಯಾದ ವಿಧಾನವಲ್ಲ; ಬದಲಾಗಿ ಅವರಿಗೆ ಪ್ರತ್ಯೇಕ ಸ್ಟೇ ಹೋಂಗಳಲ್ಲಿ ಉಳಿಸಬೇಕು ಎಂದರು.<br /> <br /> ಕಾರ್ಯಾಗಾರದಲ್ಲಿ ವಕೀಲರ ಸಂಘದ ಕಾರ್ಯದರ್ಶಿ ನಾಗೇಶನ್ ಮಾತನಾಡಿ, ದಾರಿತಪ್ಪಿದ ಮಕ್ಕಳಿಗೆ ಶಿಕ್ಷೆ ನೀಡುವುದರಿಂದ ಉತ್ತಮ ಸಮಾಜ ನಿರ್ಮಾಣವಾಗುವುದಿಲ್ಲ; ಬದಲಾಗಿ ಮಕ್ಕಳ ಮನಸ್ಸಿನಲ್ಲಿ ಸೇಡು, ದ್ವೇಷ-ಅಸೂಯೆಯ ಭಾವನೆ ಹೆಚ್ಚುತ್ತದೆ. ಆದ್ದರಿಂದ ಅವರ ಪ್ರಚೋದನಾತ್ಮಕ ಕಾರಣಗಳ ಬಗ್ಗೆ ಹಾಗೂ ಅವರ ಮಿತ್ರರ ಒಡನಾಟಗಳನ್ನು ಗಮನಿಸಿ, ಸಕಾಲಿಕವಾಗಿ ಸೂಕ್ತ ಮಾರ್ಗದರ್ಶನ ನೀಡಬೇಕು ಎಂದರು.<br /> <br /> ಈ ಕಾಯ್ದೆಯ ಅನುಷ್ಠಾನದಲ್ಲಿ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು ಎಂದ ಅವರು, ಪೋಷಕರು ಕೂಡ ಮಕ್ಕಳನ್ನು ನೈತಿಕವಲ್ಲದ ಚಟುವಟಿಕೆಗಳಿಗೆ ಉತ್ತೇಜಿಸುತ್ತಿದ್ದಾರೆ. ಪೋಷಕರು ಇಂತಹ ಅಚಾತುರ್ಯಗಳಿಗೆ ಅವಕಾಶ ನೀಡುವ ಮೊದಲು ಒಮ್ಮೆ ಗಂಭೀರವಾಗಿ ಆಲೋಚಿಸುವುದು ಒಳಿತು ಎಂದು ಸಲಹೆ ನೀಡಿದರು.<br /> <br /> ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೌಶಲೇಂದ್ರಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಲಕ್ಷ್ಮೀಕಾಂತಮ್ಮ, ಜಿಲ್ಲಾ ಹೆಚ್ಚುವರಿ ವರಿಷ್ಠಾಧಿಕಾರಿ ಬಿ.ದಯಾಳು ಉಪಸ್ಥಿತರಿದ್ದರು.<br /> ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ರವಿ ಎಂ.ನಾಯ್ಕ ಉಪನ್ಯಾಸ ನೀಡಿದರು. ಶಕುಂತಲಾ ಪ್ರಾರ್ಥಿಸಿದರು. ಇನ್ಸ್ಪೆಕ್ಟರ್ ಚನ್ನಕೇಶವ ಸ್ವಾಗತಿಸಿದರು. ಹಿರಿಯ ಮಕ್ಕಳ ಕಲ್ಯಾಣಾಧಿಕಾರಿ ಓಂಕಾರನಾಯ್ಕ ಕಾರ್ಯಕ್ರಮ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>