<p>ಚಿತ್ರದುರ್ಗ: ಮಗುವಿನ ಮೇಲೆ ಬೀದಿನಾಯಿಯೊಂದು ದಾಳಿ ನಡೆಸಿದ್ದರಿಂದ ಮಗು ತೀವ್ರವಾಗಿ ಗಾಯಗೊಂಡಿರುವ ಘಟನೆ ಇಲ್ಲಿನ ವಿದ್ಯಾನಗರ ಬಡಾವಣೆಯಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ.<br /> <br /> ಮೀನಾಜ್ (2) ಗಾಯಗೊಂಡ ಮಗು. ಬೆಳಿಗ್ಗೆ 10 ಗಂಟೆ ಸುಮಾರಿಗೆ ಬೀದಿಯಲ್ಲಿ ಆಟವಾಡುತ್ತಿದ್ದಾಗ ನಾಯಿಯೊಂದು ದಾಳಿ ನಡೆಸಿ ಮುಖಕ್ಕೆ ತೀವ್ರವಾಗಿ ಕಚ್ಚಿದೆ. ಇದರಿಂದ ರಕ್ತದ ಮಡುವಿನಲ್ಲಿ ಮುಳುಗಿದ ಮಗು ಜೋರಾಗಿ ಅಳುವುದನ್ನು ಕೇಳಿ ಪೋಷಕರು ಆಗಮಿಸಿ, ತಕ್ಷಣ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದಾರೆ.<br /> <br /> ಆದರೆ, ಜಿಲ್ಲಾ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ ವೈದ್ಯರೇ ಇಲ್ಲದಿದ್ದರಿಂದ ತಕ್ಷಣಕ್ಕೆ ಚಿಕಿತ್ಸೆ ದೊರೆಯಲಿಲ್ಲ. ಚಿಕಿತ್ಸೆ ನೀಡಲು ವಿಳಂಬ ಮಾಡಿರುವುದನ್ನು ಖಂಡಿಸಿ ಸಾರ್ವಜನಿಕರು ವೈದ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆಗೆ ಮುಂದಾದರು. ಕೆಲ ಹೊತ್ತಿನ ನಂತರ ವೈದ್ಯರು ಆಗಮಿಸಿ ಚಿಕಿತ್ಸೆ ನೀಡಿದರು.<br /> <br /> `ಬಡಾವಣೆಯಲ್ಲಿ ಬೀದಿನಾಯಿ ಹಾವಳಿ ಹೆಚ್ಚಾಗಿದ್ದು, ಸಂಚರಿಸುವುದೇ ಕಷ್ಟವಾಗುತ್ತಿದೆ. ಮಕ್ಕಳನ್ನು ಹೊರಗೆ ಬಿಡಲು ಹೆದರಿಕೆಯಾಗುತ್ತಿದೆ~ ಎಂದು ಗಾಯಗೊಂಡ ಮಗುವಿನ ದೊಡ್ಡಮ್ಮ ಶಹನಾಜ್ ದೂರಿದರು.<br /> <br /> ವಿದ್ಯಾನಗರ ಬಡಾವಣೆ ಮೆದೇಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಗೆ ಸೇರುತ್ತದೆ. ಆದ್ದರಿಂದ ನಗರಸಭೆ ಮತ್ತು ಮೆದೇಹಳ್ಳಿ ಗ್ರಾ.ಪಂ. ಜಂಟಿಯಾಗಿ ಬೀದಿನಾಯಿಗಳ ಹಾವಳಿಯನ್ನು ನಿಯಂತ್ರಿಸಬೇಕು ಎಂದು ನಾಗರಿಕರು ಆಗ್ರಹಿಸಿದ್ದಾರೆ.<br /> <br /> `ಈಗಾಗಲೇ ಸುಮಾರು ಒಂದು ಸಾವಿರ ಬೀದಿನಾಯಿಗಳನ್ನು ಹಿಡಿಯಲಾಗಿದೆ. ಮುಂದಿನ ದಿನಗಳಲ್ಲಿ ಕೇರಳದ ತಂಡವನ್ನು ಕರೆಯಿಸಿಕೊಂಡು ನಗರದಲ್ಲಿನ ಬೀದಿನಾಯಿಗಳ ಹಾವಳಿಗೆ ಕಡಿವಾಣ ಹಾಕಲಾಗುವುದು. ಈ ಬಗ್ಗೆ ಆತಂಕ ಬೇಡ~ ಎಂದು ಪೌರಾಯುಕ್ತ ವಿಜಯಕುಮಾರ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿತ್ರದುರ್ಗ: ಮಗುವಿನ ಮೇಲೆ ಬೀದಿನಾಯಿಯೊಂದು ದಾಳಿ ನಡೆಸಿದ್ದರಿಂದ ಮಗು ತೀವ್ರವಾಗಿ ಗಾಯಗೊಂಡಿರುವ ಘಟನೆ ಇಲ್ಲಿನ ವಿದ್ಯಾನಗರ ಬಡಾವಣೆಯಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ.<br /> <br /> ಮೀನಾಜ್ (2) ಗಾಯಗೊಂಡ ಮಗು. ಬೆಳಿಗ್ಗೆ 10 ಗಂಟೆ ಸುಮಾರಿಗೆ ಬೀದಿಯಲ್ಲಿ ಆಟವಾಡುತ್ತಿದ್ದಾಗ ನಾಯಿಯೊಂದು ದಾಳಿ ನಡೆಸಿ ಮುಖಕ್ಕೆ ತೀವ್ರವಾಗಿ ಕಚ್ಚಿದೆ. ಇದರಿಂದ ರಕ್ತದ ಮಡುವಿನಲ್ಲಿ ಮುಳುಗಿದ ಮಗು ಜೋರಾಗಿ ಅಳುವುದನ್ನು ಕೇಳಿ ಪೋಷಕರು ಆಗಮಿಸಿ, ತಕ್ಷಣ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದಾರೆ.<br /> <br /> ಆದರೆ, ಜಿಲ್ಲಾ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ ವೈದ್ಯರೇ ಇಲ್ಲದಿದ್ದರಿಂದ ತಕ್ಷಣಕ್ಕೆ ಚಿಕಿತ್ಸೆ ದೊರೆಯಲಿಲ್ಲ. ಚಿಕಿತ್ಸೆ ನೀಡಲು ವಿಳಂಬ ಮಾಡಿರುವುದನ್ನು ಖಂಡಿಸಿ ಸಾರ್ವಜನಿಕರು ವೈದ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆಗೆ ಮುಂದಾದರು. ಕೆಲ ಹೊತ್ತಿನ ನಂತರ ವೈದ್ಯರು ಆಗಮಿಸಿ ಚಿಕಿತ್ಸೆ ನೀಡಿದರು.<br /> <br /> `ಬಡಾವಣೆಯಲ್ಲಿ ಬೀದಿನಾಯಿ ಹಾವಳಿ ಹೆಚ್ಚಾಗಿದ್ದು, ಸಂಚರಿಸುವುದೇ ಕಷ್ಟವಾಗುತ್ತಿದೆ. ಮಕ್ಕಳನ್ನು ಹೊರಗೆ ಬಿಡಲು ಹೆದರಿಕೆಯಾಗುತ್ತಿದೆ~ ಎಂದು ಗಾಯಗೊಂಡ ಮಗುವಿನ ದೊಡ್ಡಮ್ಮ ಶಹನಾಜ್ ದೂರಿದರು.<br /> <br /> ವಿದ್ಯಾನಗರ ಬಡಾವಣೆ ಮೆದೇಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಗೆ ಸೇರುತ್ತದೆ. ಆದ್ದರಿಂದ ನಗರಸಭೆ ಮತ್ತು ಮೆದೇಹಳ್ಳಿ ಗ್ರಾ.ಪಂ. ಜಂಟಿಯಾಗಿ ಬೀದಿನಾಯಿಗಳ ಹಾವಳಿಯನ್ನು ನಿಯಂತ್ರಿಸಬೇಕು ಎಂದು ನಾಗರಿಕರು ಆಗ್ರಹಿಸಿದ್ದಾರೆ.<br /> <br /> `ಈಗಾಗಲೇ ಸುಮಾರು ಒಂದು ಸಾವಿರ ಬೀದಿನಾಯಿಗಳನ್ನು ಹಿಡಿಯಲಾಗಿದೆ. ಮುಂದಿನ ದಿನಗಳಲ್ಲಿ ಕೇರಳದ ತಂಡವನ್ನು ಕರೆಯಿಸಿಕೊಂಡು ನಗರದಲ್ಲಿನ ಬೀದಿನಾಯಿಗಳ ಹಾವಳಿಗೆ ಕಡಿವಾಣ ಹಾಕಲಾಗುವುದು. ಈ ಬಗ್ಗೆ ಆತಂಕ ಬೇಡ~ ಎಂದು ಪೌರಾಯುಕ್ತ ವಿಜಯಕುಮಾರ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>