<p><strong>ಚನ್ನಗಿರಿ</strong>: ‘ಮಠಮಾನ್ಯಗಳು ಇರುವುದರಿಂದ ಭಕ್ತರಿಗೆ ಉತ್ತಮ ಮಾರ್ಗದರ್ಶನ ಹಾಗೂ ಒಳ್ಳೆಯ ದಾರಿ ಸಿಗುತ್ತಿದೆ. ಯಾವುದೇ ಮಠಮಾನ್ಯಗಳಿಗೆ ಹಣಕ್ಕಿಂತ ಭಕ್ತರು ಮುಖ್ಯವಾಗಿರುತ್ತಾರೆ’ ಎಂದು ಶಾಸಕ ವಡ್ನಾಳ್ ರಾಜಣ್ಣ ಹೇಳಿದರು.<br /> <br /> ತಾಲ್ಲೂಕಿನ ತಾವರೆಕೆರೆ ಶಿಲಾಮಠದಲ್ಲಿ ಸೋಮವಾರ ನಡೆದ ಉಮಾಮಹೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ನಡೆದ ಧರ್ಮ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p><br /> ಗ್ರಾಮೀಣ ಪ್ರದೇಶಗಳಲ್ಲಿ ಹಬ್ಬ- ಹರಿದಿನಗಳನ್ನು ಇನ್ನು ವಿಶಿಷ್ಟವಾದ ರೀತಿಯಲ್ಲಿ ಆಚರಣೆ ಮಾಡಿಕೊಂಡು ಬರುತ್ತಿದ್ದಾರೆ. ಆದರೆ, ಪಟ್ಟಣ ಹಾಗೂ ನಗರ ಪ್ರದೇಶಗಳಲ್ಲಿ ಕೇವಲ ಫ್ಯಾಷನ್ಗೋಸ್ಕರ ಆಚರಿಸುತ್ತಾರೆ ಎಂದರು. ಇದೇ ಸಮಯದಲ್ಲಿ ಅವರು, ವೀರಭದ್ರೇಶ್ವರ ಸಮುದಾಯ ಭನವ ನಿರ್ಮಾಣಕ್ಕೆ ₨ 10 ಲಕ್ಷ ಅನುದಾನ ನೀಡುವುದಾಗಿ ಭರವಸೆ ನೀಡಿದರು.<br /> <br /> ತಾವರೆಕೆರೆ ಶಿಲಾಮಠದ ಅಭಿನವ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಮಹೇಶ್ವರ ಜಾತ್ರೆಯನ್ನು ಎಲ್ಲಾ ಕಡೆ ಆಚರಿಸುತ್ತಾರೆ. ಆದರೆ, ಉಮಾಮಹೇಶ್ವರ ಸ್ವಾಮಿ ಜಾತ್ರೆಯನ್ನು ಈ ಮಠದಲ್ಲಿ ಮಾತ್ರ ಆಚರಿಸಲಾಗುತ್ತಿದೆ. ಈ ಮಠಕ್ಕೆ ಸರ್ಕಾರ ಈ ತನಕ ಒಂದು ರೂಪಾಯಿ ಅನುದಾನವನ್ನು ನೀಡಿಲ್ಲ. ಕೇವಲ ಭಕ್ತರ ಸಹಕಾರದಿಂದ ಎಲ್ಲಾ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ.<br /> ವೀರಭದ್ರೇಶ್ವರ ಸಮುದಾಯ ಭವನ ನಿರ್ಮಿಸಲು ತೀರ್ಮಾನಿಸಿದ್ದು, ಜೋಳಿಗೆ ಹಿಡಿದು ಭಕ್ತರಿಂದ ಹಣ ಸಂಗ್ರಹಿಸಲಾಗುವುದು ಎಂದರು.<br /> <br /> ಹಾರನಹಳ್ಳಿ ಕೋಡಿಮಠದ ಶಿವಾನಂದ ಶಿವಯೋಗಿ ರಾಜದೇಶಿಕೇಂದ್ರ ಸ್ವಾಮೀಜಿ, ಎಡೆಯೂರು ಕ್ಷೇತ್ರದ ರೇಣುಕ ಶಿವಾಚಾರ್ಯ ಸ್ವಾಮೀಜಿ, ಗ್ರಾಮ ಪಂಚಾಯ್ತಿ ಅಧ್ಯಕ್ಷ ಟಿ.ಬಿ. ಮೃತ್ಯುಂಜಯಪ್ಪ, ಸಿ.ಎಂ. ನಾಗೇಶ್, ಎಚ್.ವಿ. ಶಿವಮೂರ್ತಿ, ಮಲ್ಲಿಕಾರ್ಜುನಸ್ವಾಮಿ, ಸಿ.ಎಸ್. ವಿರೂಪಾಕ್ಷಪ್ಪ, ಶೀಲವಂತರ ಓಂಕಾರಮೂರ್ತಿ, ಪುಟ್ಟಪ್ಪ ಉಪಸ್ಥಿತರಿದ್ದರು.<br /> <br /> ಟಿ.ಎಸ್. ರಮೇಶ್ ಸ್ವಾಗತಿಸಿದರು. ಡಾ. ಜಗದೀಶ್ ವಂದಿಸಿದರು. ಅನಿತಾ ಓಂಕಾರಸ್ವಾಮಿ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಗಿರಿ</strong>: ‘ಮಠಮಾನ್ಯಗಳು ಇರುವುದರಿಂದ ಭಕ್ತರಿಗೆ ಉತ್ತಮ ಮಾರ್ಗದರ್ಶನ ಹಾಗೂ ಒಳ್ಳೆಯ ದಾರಿ ಸಿಗುತ್ತಿದೆ. ಯಾವುದೇ ಮಠಮಾನ್ಯಗಳಿಗೆ ಹಣಕ್ಕಿಂತ ಭಕ್ತರು ಮುಖ್ಯವಾಗಿರುತ್ತಾರೆ’ ಎಂದು ಶಾಸಕ ವಡ್ನಾಳ್ ರಾಜಣ್ಣ ಹೇಳಿದರು.<br /> <br /> ತಾಲ್ಲೂಕಿನ ತಾವರೆಕೆರೆ ಶಿಲಾಮಠದಲ್ಲಿ ಸೋಮವಾರ ನಡೆದ ಉಮಾಮಹೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ನಡೆದ ಧರ್ಮ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p><br /> ಗ್ರಾಮೀಣ ಪ್ರದೇಶಗಳಲ್ಲಿ ಹಬ್ಬ- ಹರಿದಿನಗಳನ್ನು ಇನ್ನು ವಿಶಿಷ್ಟವಾದ ರೀತಿಯಲ್ಲಿ ಆಚರಣೆ ಮಾಡಿಕೊಂಡು ಬರುತ್ತಿದ್ದಾರೆ. ಆದರೆ, ಪಟ್ಟಣ ಹಾಗೂ ನಗರ ಪ್ರದೇಶಗಳಲ್ಲಿ ಕೇವಲ ಫ್ಯಾಷನ್ಗೋಸ್ಕರ ಆಚರಿಸುತ್ತಾರೆ ಎಂದರು. ಇದೇ ಸಮಯದಲ್ಲಿ ಅವರು, ವೀರಭದ್ರೇಶ್ವರ ಸಮುದಾಯ ಭನವ ನಿರ್ಮಾಣಕ್ಕೆ ₨ 10 ಲಕ್ಷ ಅನುದಾನ ನೀಡುವುದಾಗಿ ಭರವಸೆ ನೀಡಿದರು.<br /> <br /> ತಾವರೆಕೆರೆ ಶಿಲಾಮಠದ ಅಭಿನವ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಮಹೇಶ್ವರ ಜಾತ್ರೆಯನ್ನು ಎಲ್ಲಾ ಕಡೆ ಆಚರಿಸುತ್ತಾರೆ. ಆದರೆ, ಉಮಾಮಹೇಶ್ವರ ಸ್ವಾಮಿ ಜಾತ್ರೆಯನ್ನು ಈ ಮಠದಲ್ಲಿ ಮಾತ್ರ ಆಚರಿಸಲಾಗುತ್ತಿದೆ. ಈ ಮಠಕ್ಕೆ ಸರ್ಕಾರ ಈ ತನಕ ಒಂದು ರೂಪಾಯಿ ಅನುದಾನವನ್ನು ನೀಡಿಲ್ಲ. ಕೇವಲ ಭಕ್ತರ ಸಹಕಾರದಿಂದ ಎಲ್ಲಾ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ.<br /> ವೀರಭದ್ರೇಶ್ವರ ಸಮುದಾಯ ಭವನ ನಿರ್ಮಿಸಲು ತೀರ್ಮಾನಿಸಿದ್ದು, ಜೋಳಿಗೆ ಹಿಡಿದು ಭಕ್ತರಿಂದ ಹಣ ಸಂಗ್ರಹಿಸಲಾಗುವುದು ಎಂದರು.<br /> <br /> ಹಾರನಹಳ್ಳಿ ಕೋಡಿಮಠದ ಶಿವಾನಂದ ಶಿವಯೋಗಿ ರಾಜದೇಶಿಕೇಂದ್ರ ಸ್ವಾಮೀಜಿ, ಎಡೆಯೂರು ಕ್ಷೇತ್ರದ ರೇಣುಕ ಶಿವಾಚಾರ್ಯ ಸ್ವಾಮೀಜಿ, ಗ್ರಾಮ ಪಂಚಾಯ್ತಿ ಅಧ್ಯಕ್ಷ ಟಿ.ಬಿ. ಮೃತ್ಯುಂಜಯಪ್ಪ, ಸಿ.ಎಂ. ನಾಗೇಶ್, ಎಚ್.ವಿ. ಶಿವಮೂರ್ತಿ, ಮಲ್ಲಿಕಾರ್ಜುನಸ್ವಾಮಿ, ಸಿ.ಎಸ್. ವಿರೂಪಾಕ್ಷಪ್ಪ, ಶೀಲವಂತರ ಓಂಕಾರಮೂರ್ತಿ, ಪುಟ್ಟಪ್ಪ ಉಪಸ್ಥಿತರಿದ್ದರು.<br /> <br /> ಟಿ.ಎಸ್. ರಮೇಶ್ ಸ್ವಾಗತಿಸಿದರು. ಡಾ. ಜಗದೀಶ್ ವಂದಿಸಿದರು. ಅನಿತಾ ಓಂಕಾರಸ್ವಾಮಿ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>