<p><strong>ನೆಲಮಂಗಲ: </strong>‘ಶಿವಾಗಮದ ಗ್ರಂಥಗಳ ಅಧ್ಯಯನಕ್ಕಾಗಿ ದಿನದ ಬಹುಪಾಲು ಸಮಯವನ್ನು ಮೀಸಲಿರಿಸಿದ್ದೇನೆ’ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಎನ್.ಬಸವರಾಧ್ಯ ತಿಳಿಸಿದರು.<br /> ತಾಲ್ಲೂಕಿನ ಶಿವಗಂಗೆಯ ಮೇಲಣಗವಿ ಮಠದಲ್ಲಿ ಭಾನುವಾರ ಎರ್ಪಡಿಸಿದ್ದ ರೇಣುಕಾಚಾರ್ಯ ಯುಗಮಾನೋತ್ಸವ ಸಮಾರಂಭದಲ್ಲಿ ಶಿವಗಂಗಾಶ್ರೀ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು.<br /> <br /> ರಾಜ್ಯ ಮಾರುಕಟ್ಟೆ ಸಲಹಾ ಮಂಡಳಿಯ ಅಧ್ಯಕ್ಷ ಜಿ.ಮರಿಸ್ವಾಮಿ ಮಾತನಾಡಿ ‘ಪ್ರತಿಯೊಬ್ಬರೂ ಸಂಯಮ ಸದಾಚಾರ ಅನುಸರಿಸಬೇಕು’ ಎಂದರು.ಶ್ರೀಮಲಯ ಶಾಂತಮುನಿ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ ‘ಹಿರಿಯ ಚೇತನಗಳನ್ನು ಸ್ಮರಣೆ ಮಾಡುವ ಉದ್ದೇಶದಿಂದ ಶಿವಗಂಗಾಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ’ ಎಂದರು.<br /> <br /> ಪ್ರೊ.ಶಿವಕುಮಾರ್ ಮಾತನಾಡಿ ‘ಮಠಗಳಲ್ಲಿರುವ ಹಸ್ತ ಪ್ರತಿಗಳನ್ನು ಸಂರಕ್ಷಿಸಬೇಕಾಗಿದೆ ಮತ್ತು ಭಾಷೆಗೆ ಮಡಿವಂತಿಕೆ ಬೇಡ’ ಎಂದರು.ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ, ಹಂಪಿಯ ಶ್ರೀವಾಮದೇವ ಮಹಂತ ಶಿವಚಾರ್ಯ ಸ್ವಾಮೀಜಿ, ಸಿಂಧನೂರಿನ ಶ್ರೀಸೋಮನಾಥ ಶಿವಾಚಾರ್ಯ ಸ್ವಾಮೀಜಿ, ಸಿದ್ದರಬೆಟ್ಟದ ಶ್ರೀವೀರಭದ್ರ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು. <br /> <br /> ಎಫ್.ಎಂ. ರೇನ್ಬೊ ಚಂದ್ರಶೇಖರ್, ಉರಗ ತಜ್ಞಲೋಕೆಶ್, ತಾ.ಪಂ. ಸದಸ್ಯ ಪುಟ್ಟಗಂಗಯ್ಯ, ಗ್ರಾ.ಪಂ. ಅಧ್ಯಕ್ಷ ಮಾಲಿಂಗಯ್ಯ ಜಿಲ್ಲಾ ಮಹಾಸಭಾಧ್ಯಕ್ಷ ಎನ್.ಎಸ್. ನಟರಾಜು ಅವರನ್ನು ಸನ್ಮಾನಿಸಲಾಯಿತು. <br /> <br /> ಬೆಂಗಳೂರಿನ ಶರಣ ಬಸವೇಶ್ವರ ಸೇವಾ ಸಮಿತಿಯು ಪ್ರಶಸ್ತಿ ವಿಜೇತರಿಗೆ ನಗದು ಬಹುಮಾನ ವಿತರಿಸಿತು.ಪುರಸಭಾ ಮಾಜಿ ಅಧ್ಯಕ್ಷ ಆರ್.ಉಮಾಶಂಕರ್ ಬಿ.ಜೆ.ಪಿ ಮುಂಖಂಡರಾದ ವೆಂಕಟ್ರಾಮು, ಚೆಲುವರಾಜು, ಕೆ.ಪಿ ಆನಂದ್, ಟಿ.ಎಂ.ಉಮಾಶಂಕರ್, ಚಲನಚಿತ್ರ ನಿರ್ದೇಶಕ ಮೂರ್ತಿ ವೇದಿಕೆಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನೆಲಮಂಗಲ: </strong>‘ಶಿವಾಗಮದ ಗ್ರಂಥಗಳ ಅಧ್ಯಯನಕ್ಕಾಗಿ ದಿನದ ಬಹುಪಾಲು ಸಮಯವನ್ನು ಮೀಸಲಿರಿಸಿದ್ದೇನೆ’ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಎನ್.ಬಸವರಾಧ್ಯ ತಿಳಿಸಿದರು.<br /> ತಾಲ್ಲೂಕಿನ ಶಿವಗಂಗೆಯ ಮೇಲಣಗವಿ ಮಠದಲ್ಲಿ ಭಾನುವಾರ ಎರ್ಪಡಿಸಿದ್ದ ರೇಣುಕಾಚಾರ್ಯ ಯುಗಮಾನೋತ್ಸವ ಸಮಾರಂಭದಲ್ಲಿ ಶಿವಗಂಗಾಶ್ರೀ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು.<br /> <br /> ರಾಜ್ಯ ಮಾರುಕಟ್ಟೆ ಸಲಹಾ ಮಂಡಳಿಯ ಅಧ್ಯಕ್ಷ ಜಿ.ಮರಿಸ್ವಾಮಿ ಮಾತನಾಡಿ ‘ಪ್ರತಿಯೊಬ್ಬರೂ ಸಂಯಮ ಸದಾಚಾರ ಅನುಸರಿಸಬೇಕು’ ಎಂದರು.ಶ್ರೀಮಲಯ ಶಾಂತಮುನಿ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ ‘ಹಿರಿಯ ಚೇತನಗಳನ್ನು ಸ್ಮರಣೆ ಮಾಡುವ ಉದ್ದೇಶದಿಂದ ಶಿವಗಂಗಾಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ’ ಎಂದರು.<br /> <br /> ಪ್ರೊ.ಶಿವಕುಮಾರ್ ಮಾತನಾಡಿ ‘ಮಠಗಳಲ್ಲಿರುವ ಹಸ್ತ ಪ್ರತಿಗಳನ್ನು ಸಂರಕ್ಷಿಸಬೇಕಾಗಿದೆ ಮತ್ತು ಭಾಷೆಗೆ ಮಡಿವಂತಿಕೆ ಬೇಡ’ ಎಂದರು.ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ, ಹಂಪಿಯ ಶ್ರೀವಾಮದೇವ ಮಹಂತ ಶಿವಚಾರ್ಯ ಸ್ವಾಮೀಜಿ, ಸಿಂಧನೂರಿನ ಶ್ರೀಸೋಮನಾಥ ಶಿವಾಚಾರ್ಯ ಸ್ವಾಮೀಜಿ, ಸಿದ್ದರಬೆಟ್ಟದ ಶ್ರೀವೀರಭದ್ರ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು. <br /> <br /> ಎಫ್.ಎಂ. ರೇನ್ಬೊ ಚಂದ್ರಶೇಖರ್, ಉರಗ ತಜ್ಞಲೋಕೆಶ್, ತಾ.ಪಂ. ಸದಸ್ಯ ಪುಟ್ಟಗಂಗಯ್ಯ, ಗ್ರಾ.ಪಂ. ಅಧ್ಯಕ್ಷ ಮಾಲಿಂಗಯ್ಯ ಜಿಲ್ಲಾ ಮಹಾಸಭಾಧ್ಯಕ್ಷ ಎನ್.ಎಸ್. ನಟರಾಜು ಅವರನ್ನು ಸನ್ಮಾನಿಸಲಾಯಿತು. <br /> <br /> ಬೆಂಗಳೂರಿನ ಶರಣ ಬಸವೇಶ್ವರ ಸೇವಾ ಸಮಿತಿಯು ಪ್ರಶಸ್ತಿ ವಿಜೇತರಿಗೆ ನಗದು ಬಹುಮಾನ ವಿತರಿಸಿತು.ಪುರಸಭಾ ಮಾಜಿ ಅಧ್ಯಕ್ಷ ಆರ್.ಉಮಾಶಂಕರ್ ಬಿ.ಜೆ.ಪಿ ಮುಂಖಂಡರಾದ ವೆಂಕಟ್ರಾಮು, ಚೆಲುವರಾಜು, ಕೆ.ಪಿ ಆನಂದ್, ಟಿ.ಎಂ.ಉಮಾಶಂಕರ್, ಚಲನಚಿತ್ರ ನಿರ್ದೇಶಕ ಮೂರ್ತಿ ವೇದಿಕೆಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>