<p><strong>ಹೂವಿನಹಡಗಲಿ:</strong> ಮಠಗಳು ಶೋಷಿತರಪರವಾಗಿ ಕೆಲಸಮಾಡಬೇಕು. ಸ್ವಾಮೀಜಿಗಳು ಜನ ಸೇವೆ ಯಲ್ಲಿ ತೊಡಗಿಸಿಕೊಳ್ಳುವ ಮೂಲಕ ಜನಮಾನಸದಲ್ಲಿ ಉಳಿಯುವಂತಾಗಬೇಕುಎಂದು ಕೊಪ್ಪಳದ ಗವಿಮಠದ ಅಭಿನವ ಗವಿಸಿದ್ಧೇಶ್ವರ ಸ್ವಾಮೀಜಿ ಹೇಳಿದರು.<br /> <br /> ಪಟ್ಟಣದ ಗವಿಮಠದ ನೂತನ ಶ್ರೀಗಳ ಪಟ್ಟಾಧಿಕಾರದ ಪೀಠಾರೋಹಣ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು. ಸ್ವಾಮಿಗಳಿಗೆ ಸಮಜದ ಜವಾಬ್ದಾರಿಯಿದೆ. ಸಮಾಜವನ್ನು ಸುಧಾರಣೆ ಮಾಡುವ ಮೂಲಕ ಶಾಂತ ಜೀವನಕ್ಕೆ ಅವಕಾಶ ಮಾಡಬೇಕಾಗಿದೆ ಎಂದರು.<br /> <br /> ಲಿಂಗನಾಯಕನಹಳ್ಳಿಯ ಚನ್ನವೀರಸ್ವಾಮೀಜಿ ಪಂಪಯ್ಯ ದೇವರಿಗೆ ಷಟಸ್ಥಲ ಬ್ರಹ್ಮೋಪದೇಶ ನೀಡಿದರು. ಪಂಪಯ್ಯ ದೇವರ ಹೆಸರನ್ನು ಹಿರಿಶಾಂತವೀರ ಸ್ವಾಮೀಜಿ ಎಂದು ಮರುನಾಮಕರಣ ಮಾಡಲಾಯಿತು. <br /> <br /> ಹಂಪಿ ವಿಶ್ವವಿದ್ಯಾಲಯದ ಕುಲಪತಿ ಡಾ.ಮುರಿಗೆಪ್ಪ ಮಾತನಾಡಿದರು. ನೀಲಗುಂದದ ಚನ್ನಬಸವಸ್ವಾಮೀಜಿ, ಗುತ್ತಲದ ಸಂಗನಬಸವ ಸ್ವಾಮೀಜಿ, ಕಾಲ್ವಿತಾಂಡಾ ತಿಪ್ಪೇರುದ್ರಸ್ವಾಮೀಜಿ ಹರ-ಗುರು ಚರಮೂರ್ತಿಗಳು ಮತ್ತಿತರರು ಉಪಸ್ಥಿತರಿದ್ದರು. <br /> <br /> ಪ್ರೊ.ಶಾಂತಮೂರ್ತಿ ಕುಲಕರ್ಣಿ ಸಂಪಾದಿಸಿದ ಬಯಲ-ಬೆಳಗು ಸ್ಮರಣ ಸಂಚಿಕೆಯನ್ನು ಕೊಪ್ಪಳದ ಗವಿಮಠದ ಅಭಿನವ ಗವಿಸಿದ್ಧೇಶ್ವರ ಸ್ವಾಮೀಜಿ ಬಿಡುಗಡೆ ಮಾಡಿದರು.<br /> ಮಾಜಿ ಉಪ ಮುಖ್ಯಮಂತ್ರಿ ಎಂ.ಪಿ. ಪ್ರಕಾಶರ ಅವರ ಅಗಲಿಕೆಯಿಂದಾಗಿ ಕಾರ್ಯಕ್ರಮದ ವಿಚಾರ ಸಂಕಿರಣ, ಗೋಷ್ಠಿಗಳನ್ನು ರದ್ದುಗೊಳಿಸಲಾಗಿತ್ತು. ಕಾರ್ಯಕ್ರಮ ಆರಂಭವಾಗುವ ಮೊದಲು ಗಣ್ಯರು ಎಂ.ಪಿ. ಪ್ರಕಾಶರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೂವಿನಹಡಗಲಿ:</strong> ಮಠಗಳು ಶೋಷಿತರಪರವಾಗಿ ಕೆಲಸಮಾಡಬೇಕು. ಸ್ವಾಮೀಜಿಗಳು ಜನ ಸೇವೆ ಯಲ್ಲಿ ತೊಡಗಿಸಿಕೊಳ್ಳುವ ಮೂಲಕ ಜನಮಾನಸದಲ್ಲಿ ಉಳಿಯುವಂತಾಗಬೇಕುಎಂದು ಕೊಪ್ಪಳದ ಗವಿಮಠದ ಅಭಿನವ ಗವಿಸಿದ್ಧೇಶ್ವರ ಸ್ವಾಮೀಜಿ ಹೇಳಿದರು.<br /> <br /> ಪಟ್ಟಣದ ಗವಿಮಠದ ನೂತನ ಶ್ರೀಗಳ ಪಟ್ಟಾಧಿಕಾರದ ಪೀಠಾರೋಹಣ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು. ಸ್ವಾಮಿಗಳಿಗೆ ಸಮಜದ ಜವಾಬ್ದಾರಿಯಿದೆ. ಸಮಾಜವನ್ನು ಸುಧಾರಣೆ ಮಾಡುವ ಮೂಲಕ ಶಾಂತ ಜೀವನಕ್ಕೆ ಅವಕಾಶ ಮಾಡಬೇಕಾಗಿದೆ ಎಂದರು.<br /> <br /> ಲಿಂಗನಾಯಕನಹಳ್ಳಿಯ ಚನ್ನವೀರಸ್ವಾಮೀಜಿ ಪಂಪಯ್ಯ ದೇವರಿಗೆ ಷಟಸ್ಥಲ ಬ್ರಹ್ಮೋಪದೇಶ ನೀಡಿದರು. ಪಂಪಯ್ಯ ದೇವರ ಹೆಸರನ್ನು ಹಿರಿಶಾಂತವೀರ ಸ್ವಾಮೀಜಿ ಎಂದು ಮರುನಾಮಕರಣ ಮಾಡಲಾಯಿತು. <br /> <br /> ಹಂಪಿ ವಿಶ್ವವಿದ್ಯಾಲಯದ ಕುಲಪತಿ ಡಾ.ಮುರಿಗೆಪ್ಪ ಮಾತನಾಡಿದರು. ನೀಲಗುಂದದ ಚನ್ನಬಸವಸ್ವಾಮೀಜಿ, ಗುತ್ತಲದ ಸಂಗನಬಸವ ಸ್ವಾಮೀಜಿ, ಕಾಲ್ವಿತಾಂಡಾ ತಿಪ್ಪೇರುದ್ರಸ್ವಾಮೀಜಿ ಹರ-ಗುರು ಚರಮೂರ್ತಿಗಳು ಮತ್ತಿತರರು ಉಪಸ್ಥಿತರಿದ್ದರು. <br /> <br /> ಪ್ರೊ.ಶಾಂತಮೂರ್ತಿ ಕುಲಕರ್ಣಿ ಸಂಪಾದಿಸಿದ ಬಯಲ-ಬೆಳಗು ಸ್ಮರಣ ಸಂಚಿಕೆಯನ್ನು ಕೊಪ್ಪಳದ ಗವಿಮಠದ ಅಭಿನವ ಗವಿಸಿದ್ಧೇಶ್ವರ ಸ್ವಾಮೀಜಿ ಬಿಡುಗಡೆ ಮಾಡಿದರು.<br /> ಮಾಜಿ ಉಪ ಮುಖ್ಯಮಂತ್ರಿ ಎಂ.ಪಿ. ಪ್ರಕಾಶರ ಅವರ ಅಗಲಿಕೆಯಿಂದಾಗಿ ಕಾರ್ಯಕ್ರಮದ ವಿಚಾರ ಸಂಕಿರಣ, ಗೋಷ್ಠಿಗಳನ್ನು ರದ್ದುಗೊಳಿಸಲಾಗಿತ್ತು. ಕಾರ್ಯಕ್ರಮ ಆರಂಭವಾಗುವ ಮೊದಲು ಗಣ್ಯರು ಎಂ.ಪಿ. ಪ್ರಕಾಶರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>