<p><strong>ನೆಲಮಂಗಲ:</strong> `ನಾಡಿನ ಶೈಕ್ಷಣಿಕ ಪ್ರಗತಿಗೆ ದಾಸೋಹದ ಮೂಲಕ ನಾಂದಿ ಹಾಡಿದ ಮಠ ಮಾನ್ಯಗಳಿಗೆ ಸರ್ಕಾರ ಸಹಾಯ ಹಸ್ತ ಮುಂದುವರೆಸಲಿದೆ~ ಎಂದು ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಭಾನುವಾರ ಭರವಸೆ ನೀಡಿದರು.<br /> <br /> ತಾಲ್ಲೂಕಿನ ಶಿವಗಂಗೆ ಬೆಟ್ಟದ ತಪ್ಪಲಿನಲ್ಲಿರುವ ಕಂಬಾಳು ಸಂಸ್ಥಾನ ಮಠದ ನೂತನ ಪಟ್ಟಾಧಿಕಾರ ಮಹೋತ್ಸವ ಮತ್ತು ಸಿದ್ದಗಂಗಾ ಶ್ರೀಗಳ ಗುರುವಂದನಾ ಸಮಾರಂಭವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.</p>.<p><br /> `ಶಿಕ್ಷಣ ರಂಗಕ್ಕೆ ಅಪಾರ ಕಾಣಿಕೆ ಸಲ್ಲಿಸಿದ ಮಠಗಳು, ಖಾಸಗಿ ಸಂಸ್ಥೆಗಳು, ಧರ್ಮ ಪೀಠಗಳು ಮತ್ತು ಪ್ರಾರ್ಥನಾ ಮಂದಿರಗಳಿಗೆ ಸರ್ಕಾರ ಸಹಾಯಧನ ನೀಡುವುದು ಟೀಕೆಗೆ ಗುರಿಯಾಗಿದ್ದರೂ ಅದು ಸಮಾಜ ಪರಿವರ್ತನೆಗೆ ಅಗತ್ಯ. ಹೀಗಾಗಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮಾರ್ಗದಲ್ಲಿ ಮುಂದುವರೆಯುತ್ತೇನೆ~ ಎಂದರು.<br /> <br /> `ಪ್ರಖರ ಇಚ್ಛಾಶಕ್ತಿಯಿಂದ ಪರಿವರ್ತನೆ ಸಾಧ್ಯ ಎಂಬುದಕ್ಕೆ ಹುಬ್ಬಳ್ಳಿಯ ಸಾಮಾನ್ಯ ಬೆಟ್ಟ (ನೃಪತುಂಗ ಬೆಟ್ಟ) ಉತ್ತಮ ಉದಾಹರಣೆಯಾಗಿದೆ. ಇಂದು ಅದು ಸಾಂಸ್ಕೃತಿಕ ವಿಹಾರ ಕೇಂದ್ರವಾಗಿದೆ. ಆ ಕ್ಷೇತ್ರದ ಶಾಸಕನಾಗಿ ಅಂದು ನಾನು ಸಂಕಲ್ಪ ಮಾಡಿದಂತೆ ಇಂದು ಮುಖ್ಯಮಂತ್ರಿಯಾಗಿ ಧಾರ್ಮಿಕ, ಸಾಂಸ್ಕೃತಿಕ, ಪ್ರವಾಸಿ ಕೇಂದ್ರವನ್ನಾಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ~ ಎಂದು ಪ್ರಕಟಿಸಿದರು. <br /> <br /> `ನೆರೆಯ ರಾಜ್ಯಗಳಆದ ಕೇರಳ ಮತ್ತು ಗೋವಾದಲ್ಲಿ ಪ್ರವಾಸೋದ್ಯಮದಿಂದಲೇ ಸಂಪತ್ತಿನ ಕ್ರೋಡೀಕರಣವಾಗಿದೆ. ಅದೇ ರೀತಿ ನಮ್ಮ ರಾಜ್ಯದಲ್ಲಿಯೂ ಸಾಕಷ್ಟು ಪ್ರಕೃತಿ ಸೌಂದರ್ಯದ ತಾಣಗಳು, ಪ್ರವಾಸಿ ತಾಣಗಳಿವೆ. ಅವುಗಳ ಅಭಿವೃದ್ಧಿಗೆ ವಿಶೇಷ ಗಮನಹರಿಸಲಾಗುವುದು~ ಎಂದೂ ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ಆಶ್ವಾಸನೆ ನೀಡಿದರು.<br /> <br /> <strong>ಪ್ರತ್ಯೇಕ ಅಭಿವೃದ್ಧಿ ಪ್ರಾಧಿಕಾರ: </strong>`ಕಂಬಾಳು ಸಂಸ್ಥಾನ ಮಠ ಗ್ರಂಥ~ ಲೋಕಾರ್ಪಣೆ ಮಾಡಿದ ಕೇಂದ್ರ ಸಚಿವ ಎಂ. ವೀರಪ್ಪ ಮೊಯಿಲಿ, `ಕೂಡಲಸಂಗಮ ಪ್ರಾಧಿಕಾರ ರಚಿಸಿ ಆ ಕ್ಷೇತ್ರವನ್ನು ಅಭಿವೃದ್ಧಿಪಡಿಸಿದಂತೆ ಶಿವಗಂಗೆ ಅಭಿವೃದ್ಧಿಗಾಗಿ ಪ್ರತ್ಯೇಕ ಅಭಿವೃದ್ಧಿ ಪ್ರಾಧಿಕಾರ ರಚಿಸಿ ಆ ಮೂಲಕ ದೇಶದ ಗಮನಸೆಳೆಯುವ ಮತ್ತು ಸಾಹಿತ್ಯ ಸಂಸ್ಕೃತಿಯ ಧರ್ಮದ ನೆಲೆ ಬೀಡಾದ ಇಲ್ಲಿ ಸಂಶೋಧನಾ ಕಾರ್ಯ ಕೈಗೊಳ್ಳುವ ಮಹಾ ವಿಶ್ವವಿದ್ಯಾಲಯವನ್ನು ಸ್ಥಾಪಿಸಬೇಕು~ ಎಂದು ಆಗ್ರಹಿಸಿದರು.<br /> <br /> ಕಾರ್ಮಿಕ ಸಚಿವ ಬಿ.ಎನ್.ಬಚ್ಚೇಗೌಡ, ಸಚಿವ ಎಂ.ಪಿ. ರೇಣುಕಾಚಾರ್ಯ, ಶಾಸಕ ಎಂ.ವಿ.ನಾಗರಾಜು, ಮೇಲಣಗವಿ ಮಠದ ಮಲಯ ಶಾಂತಮುನಿ ಶಿವಾಚಾರ್ಯ ಸ್ವಾಮೀಜಿ, ನೂತನ ಶ್ರೀಗಳಾದ ಚನ್ನವೀರ ಶಿವಾಚಾರ್ಯ ಸ್ವಾಮೀಜಿ ಉಪಸ್ಥಿತರಿದ್ದರು. <br /> <br /> ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಸಿದ್ದಗಂಗೆಯ ಶಿವಕುಮಾರ ಸ್ವಾಮೀಜಿ ಅವರಿಗೆ ಗುರುವಂದನೆ ಸಲ್ಲಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನೆಲಮಂಗಲ:</strong> `ನಾಡಿನ ಶೈಕ್ಷಣಿಕ ಪ್ರಗತಿಗೆ ದಾಸೋಹದ ಮೂಲಕ ನಾಂದಿ ಹಾಡಿದ ಮಠ ಮಾನ್ಯಗಳಿಗೆ ಸರ್ಕಾರ ಸಹಾಯ ಹಸ್ತ ಮುಂದುವರೆಸಲಿದೆ~ ಎಂದು ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಭಾನುವಾರ ಭರವಸೆ ನೀಡಿದರು.<br /> <br /> ತಾಲ್ಲೂಕಿನ ಶಿವಗಂಗೆ ಬೆಟ್ಟದ ತಪ್ಪಲಿನಲ್ಲಿರುವ ಕಂಬಾಳು ಸಂಸ್ಥಾನ ಮಠದ ನೂತನ ಪಟ್ಟಾಧಿಕಾರ ಮಹೋತ್ಸವ ಮತ್ತು ಸಿದ್ದಗಂಗಾ ಶ್ರೀಗಳ ಗುರುವಂದನಾ ಸಮಾರಂಭವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.</p>.<p><br /> `ಶಿಕ್ಷಣ ರಂಗಕ್ಕೆ ಅಪಾರ ಕಾಣಿಕೆ ಸಲ್ಲಿಸಿದ ಮಠಗಳು, ಖಾಸಗಿ ಸಂಸ್ಥೆಗಳು, ಧರ್ಮ ಪೀಠಗಳು ಮತ್ತು ಪ್ರಾರ್ಥನಾ ಮಂದಿರಗಳಿಗೆ ಸರ್ಕಾರ ಸಹಾಯಧನ ನೀಡುವುದು ಟೀಕೆಗೆ ಗುರಿಯಾಗಿದ್ದರೂ ಅದು ಸಮಾಜ ಪರಿವರ್ತನೆಗೆ ಅಗತ್ಯ. ಹೀಗಾಗಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮಾರ್ಗದಲ್ಲಿ ಮುಂದುವರೆಯುತ್ತೇನೆ~ ಎಂದರು.<br /> <br /> `ಪ್ರಖರ ಇಚ್ಛಾಶಕ್ತಿಯಿಂದ ಪರಿವರ್ತನೆ ಸಾಧ್ಯ ಎಂಬುದಕ್ಕೆ ಹುಬ್ಬಳ್ಳಿಯ ಸಾಮಾನ್ಯ ಬೆಟ್ಟ (ನೃಪತುಂಗ ಬೆಟ್ಟ) ಉತ್ತಮ ಉದಾಹರಣೆಯಾಗಿದೆ. ಇಂದು ಅದು ಸಾಂಸ್ಕೃತಿಕ ವಿಹಾರ ಕೇಂದ್ರವಾಗಿದೆ. ಆ ಕ್ಷೇತ್ರದ ಶಾಸಕನಾಗಿ ಅಂದು ನಾನು ಸಂಕಲ್ಪ ಮಾಡಿದಂತೆ ಇಂದು ಮುಖ್ಯಮಂತ್ರಿಯಾಗಿ ಧಾರ್ಮಿಕ, ಸಾಂಸ್ಕೃತಿಕ, ಪ್ರವಾಸಿ ಕೇಂದ್ರವನ್ನಾಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ~ ಎಂದು ಪ್ರಕಟಿಸಿದರು. <br /> <br /> `ನೆರೆಯ ರಾಜ್ಯಗಳಆದ ಕೇರಳ ಮತ್ತು ಗೋವಾದಲ್ಲಿ ಪ್ರವಾಸೋದ್ಯಮದಿಂದಲೇ ಸಂಪತ್ತಿನ ಕ್ರೋಡೀಕರಣವಾಗಿದೆ. ಅದೇ ರೀತಿ ನಮ್ಮ ರಾಜ್ಯದಲ್ಲಿಯೂ ಸಾಕಷ್ಟು ಪ್ರಕೃತಿ ಸೌಂದರ್ಯದ ತಾಣಗಳು, ಪ್ರವಾಸಿ ತಾಣಗಳಿವೆ. ಅವುಗಳ ಅಭಿವೃದ್ಧಿಗೆ ವಿಶೇಷ ಗಮನಹರಿಸಲಾಗುವುದು~ ಎಂದೂ ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ಆಶ್ವಾಸನೆ ನೀಡಿದರು.<br /> <br /> <strong>ಪ್ರತ್ಯೇಕ ಅಭಿವೃದ್ಧಿ ಪ್ರಾಧಿಕಾರ: </strong>`ಕಂಬಾಳು ಸಂಸ್ಥಾನ ಮಠ ಗ್ರಂಥ~ ಲೋಕಾರ್ಪಣೆ ಮಾಡಿದ ಕೇಂದ್ರ ಸಚಿವ ಎಂ. ವೀರಪ್ಪ ಮೊಯಿಲಿ, `ಕೂಡಲಸಂಗಮ ಪ್ರಾಧಿಕಾರ ರಚಿಸಿ ಆ ಕ್ಷೇತ್ರವನ್ನು ಅಭಿವೃದ್ಧಿಪಡಿಸಿದಂತೆ ಶಿವಗಂಗೆ ಅಭಿವೃದ್ಧಿಗಾಗಿ ಪ್ರತ್ಯೇಕ ಅಭಿವೃದ್ಧಿ ಪ್ರಾಧಿಕಾರ ರಚಿಸಿ ಆ ಮೂಲಕ ದೇಶದ ಗಮನಸೆಳೆಯುವ ಮತ್ತು ಸಾಹಿತ್ಯ ಸಂಸ್ಕೃತಿಯ ಧರ್ಮದ ನೆಲೆ ಬೀಡಾದ ಇಲ್ಲಿ ಸಂಶೋಧನಾ ಕಾರ್ಯ ಕೈಗೊಳ್ಳುವ ಮಹಾ ವಿಶ್ವವಿದ್ಯಾಲಯವನ್ನು ಸ್ಥಾಪಿಸಬೇಕು~ ಎಂದು ಆಗ್ರಹಿಸಿದರು.<br /> <br /> ಕಾರ್ಮಿಕ ಸಚಿವ ಬಿ.ಎನ್.ಬಚ್ಚೇಗೌಡ, ಸಚಿವ ಎಂ.ಪಿ. ರೇಣುಕಾಚಾರ್ಯ, ಶಾಸಕ ಎಂ.ವಿ.ನಾಗರಾಜು, ಮೇಲಣಗವಿ ಮಠದ ಮಲಯ ಶಾಂತಮುನಿ ಶಿವಾಚಾರ್ಯ ಸ್ವಾಮೀಜಿ, ನೂತನ ಶ್ರೀಗಳಾದ ಚನ್ನವೀರ ಶಿವಾಚಾರ್ಯ ಸ್ವಾಮೀಜಿ ಉಪಸ್ಥಿತರಿದ್ದರು. <br /> <br /> ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಸಿದ್ದಗಂಗೆಯ ಶಿವಕುಮಾರ ಸ್ವಾಮೀಜಿ ಅವರಿಗೆ ಗುರುವಂದನೆ ಸಲ್ಲಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>