<p><strong>ಮಡಿಕೇರಿ:</strong> ಶೀಘ್ರದಲ್ಲಿಯೇ ಮಡಿಕೇರಿಯಲ್ಲಿ ಸೂಕ್ತ ಒಳಚರಂಡಿ ವ್ಯವಸ್ಥೆ ನಿರ್ಮಾಣವಾಗಲಿದೆ. ಇದಕ್ಕಾಗಿ ಕರ್ನಾಟಕ ನಗರ ನೀರು ಪೂರೈಕೆ ಹಾಗೂ ಕೊಳಚೆ ಮಂಡಳಿಯು ಸುಮಾರು 60.20 ಕೋಟಿ ರೂಪಾಯಿ ಮೊತ್ತದ ಯೋಜನೆಯನ್ನು ಸಿದ್ಧಪಡಿಸಿದೆ ಎಂದು ನಗರಸಭೆ ಅಧ್ಯಕ್ಷ ಎಚ್.ಎಂ. ನಂದಕುಮಾರ್ ಹೇಳಿದರು. <br /> ಕೊಳಚೆ ನೀರು ಶುದ್ಧೀಕರಣ ಘಟಕ ಸ್ಥಾಪಿಸಲು ಇಲ್ಲಿನ ಗಾಲ್ಫ್ ಮೈದಾನ ಬಳಿಯ ಸ್ಥಳವನ್ನು ಪರಿಶೀಲಿಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.<br /> <br /> ನಗರವು ವರ್ಷದಿಂದ ವರ್ಷಕ್ಕೆ ಬೆಳೆಯುತ್ತಿದ್ದು, ಜನಸಂಖ್ಯೆಯು ಸಹ ಹೆಚ್ಚುತ್ತಿದೆ. ಜನರಿಗೆ ಮೂಲ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಸುಮಾರು 106 ಕಿ.ಮೀ. ಉದ್ದದ ಒಳಚರಂಡಿ ನಿರ್ಮಿಸುವುದು ಹಾಗೂ ಅಲ್ಲಿಂದ ಬರುವ ಕೊಳಚೆ ನೀರನ್ನು ಶುದ್ಧೀಕರಣ ಮಾಡಲು ಘಟಕ ಸ್ಥಾಪಿಸಬೇಕಾಗಿದೆ ಎಂದರು. ಒಟ್ಟಾರೆ ಈ ಯೋಜನೆಗಾಗಿ 62.20 ಕೋಟಿ ರೂಪಾಯಿಯ ಅಂದಾಜು ಪಟ್ಟಿಯನ್ನು ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ತಯಾರಿಸಲಾಗಿದೆ ಎಂದು ತಿಳಿಸಿದರು.<br /> <br /> ನಗರದ ಹೊರವಲಯದ ಗಾಲ್ಫ್ ಮೈದಾನ ಬಳಿ ಖಾಸಗಿಯವರ 4 ಎಕರೆ ಜಾಗ ಇದ್ದು, ಈ ಸ್ಥಳದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ಸ್ಥಾಪಿಸಲು ಉದ್ದೇಶಿಸಲಾಗಿದೆ. ವಿಧಾನ ಸಭಾಧ್ಯಕ್ಷರಾದ ಕೆ.ಜಿ. ಬೋಪಯ್ಯ, ಶಾಸಕರಾದ ಅಪ್ಪಚ್ಚುರಂಜನ್ ಪ್ರಯತ್ನದಿಂದಾಗಿ ನಗರಕ್ಕೆ ಒಳಚರಂಡಿ ಯೋಜನೆ ಅನುಷ್ಠಾನಗೊಳ್ಳುತ್ತಿದೆ ಎಂದರು.<br /> <br /> ನಗರಸಭೆಯ ಆಯುಕ್ತ ಶಶಿಕುಮಾರ್ ಮಾತನಾಡಿ, ಗಾಲ್ಫ್ ಮೈದಾನದ ಬಳಿ ಈ ಜಮೀನು ಖಾಸಗಿಯವರಿಗೆ ಸೇರಿದೆ. ಇಲ್ಲಿ ೂಳಚೆ ನೀರು ಶುದ್ಧೀಕರಣ ಘಟಕ ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ:</strong> ಶೀಘ್ರದಲ್ಲಿಯೇ ಮಡಿಕೇರಿಯಲ್ಲಿ ಸೂಕ್ತ ಒಳಚರಂಡಿ ವ್ಯವಸ್ಥೆ ನಿರ್ಮಾಣವಾಗಲಿದೆ. ಇದಕ್ಕಾಗಿ ಕರ್ನಾಟಕ ನಗರ ನೀರು ಪೂರೈಕೆ ಹಾಗೂ ಕೊಳಚೆ ಮಂಡಳಿಯು ಸುಮಾರು 60.20 ಕೋಟಿ ರೂಪಾಯಿ ಮೊತ್ತದ ಯೋಜನೆಯನ್ನು ಸಿದ್ಧಪಡಿಸಿದೆ ಎಂದು ನಗರಸಭೆ ಅಧ್ಯಕ್ಷ ಎಚ್.ಎಂ. ನಂದಕುಮಾರ್ ಹೇಳಿದರು. <br /> ಕೊಳಚೆ ನೀರು ಶುದ್ಧೀಕರಣ ಘಟಕ ಸ್ಥಾಪಿಸಲು ಇಲ್ಲಿನ ಗಾಲ್ಫ್ ಮೈದಾನ ಬಳಿಯ ಸ್ಥಳವನ್ನು ಪರಿಶೀಲಿಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.<br /> <br /> ನಗರವು ವರ್ಷದಿಂದ ವರ್ಷಕ್ಕೆ ಬೆಳೆಯುತ್ತಿದ್ದು, ಜನಸಂಖ್ಯೆಯು ಸಹ ಹೆಚ್ಚುತ್ತಿದೆ. ಜನರಿಗೆ ಮೂಲ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಸುಮಾರು 106 ಕಿ.ಮೀ. ಉದ್ದದ ಒಳಚರಂಡಿ ನಿರ್ಮಿಸುವುದು ಹಾಗೂ ಅಲ್ಲಿಂದ ಬರುವ ಕೊಳಚೆ ನೀರನ್ನು ಶುದ್ಧೀಕರಣ ಮಾಡಲು ಘಟಕ ಸ್ಥಾಪಿಸಬೇಕಾಗಿದೆ ಎಂದರು. ಒಟ್ಟಾರೆ ಈ ಯೋಜನೆಗಾಗಿ 62.20 ಕೋಟಿ ರೂಪಾಯಿಯ ಅಂದಾಜು ಪಟ್ಟಿಯನ್ನು ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ತಯಾರಿಸಲಾಗಿದೆ ಎಂದು ತಿಳಿಸಿದರು.<br /> <br /> ನಗರದ ಹೊರವಲಯದ ಗಾಲ್ಫ್ ಮೈದಾನ ಬಳಿ ಖಾಸಗಿಯವರ 4 ಎಕರೆ ಜಾಗ ಇದ್ದು, ಈ ಸ್ಥಳದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ಸ್ಥಾಪಿಸಲು ಉದ್ದೇಶಿಸಲಾಗಿದೆ. ವಿಧಾನ ಸಭಾಧ್ಯಕ್ಷರಾದ ಕೆ.ಜಿ. ಬೋಪಯ್ಯ, ಶಾಸಕರಾದ ಅಪ್ಪಚ್ಚುರಂಜನ್ ಪ್ರಯತ್ನದಿಂದಾಗಿ ನಗರಕ್ಕೆ ಒಳಚರಂಡಿ ಯೋಜನೆ ಅನುಷ್ಠಾನಗೊಳ್ಳುತ್ತಿದೆ ಎಂದರು.<br /> <br /> ನಗರಸಭೆಯ ಆಯುಕ್ತ ಶಶಿಕುಮಾರ್ ಮಾತನಾಡಿ, ಗಾಲ್ಫ್ ಮೈದಾನದ ಬಳಿ ಈ ಜಮೀನು ಖಾಸಗಿಯವರಿಗೆ ಸೇರಿದೆ. ಇಲ್ಲಿ ೂಳಚೆ ನೀರು ಶುದ್ಧೀಕರಣ ಘಟಕ ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>