<p>ಚಿಕ್ಕಬಳ್ಳಾಪುರ: ಮಡೆಮಡೆ ಸ್ನಾನ ಪದ್ಧತಿ ವಿರೋಧಿಸಿ ಪ್ರತಿಭಟನೆ ನಡೆಸಲು ಮುಂದಾದ ಸಿಪಿಎಂ ಕಾರ್ಯಕರ್ತೆಯರ ಮೇಲೆ ಮಡೆಸ್ನಾನ ಆಯೋಜನಾ ಸಮಿತಿ ಸದಸ್ಯರು ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಪಕ್ಷದ ಮುಖಂಡರು, ಕಾರ್ಯಕರ್ತರು ನಗರದ ಸುಬ್ರಮಣ್ಯ ದೇವಾಲಯದ ಎದುರು ಭಾನುವಾರ ಸಂಜೆಯಿಂದ ಅನಿರ್ದಿಷ್ಟಾವಧಿ ಧರಣಿ ಕೈಗೊಂಡರು.<br /> <br /> ಪಕ್ಷದ ಕಾರ್ಯಕರ್ತೆಯರಾದ ಮಧುಲತಾ, ಲಕ್ಷ್ಮೀದೇವಮ್ಮ ಮುಂತಾದವರ ಜಡೆಗಳನ್ನು ಎಳೆದು ಆಯೋಜನಾ ಸಮಿತಿ ಸದಸ್ಯರು ಹಲ್ಲೆ ನಡೆಸಿದ್ದು, ಅವರನ್ನು ಕೂಡಲೇ ಬಂಧಿಸಬೇಕು. ಅವರ ವಿರುದ್ಧ ಕ್ರಮ ಕೈಗೊಳ್ಳುವವರೆಗೆ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.<br /> <br /> ‘ಮಡೆಮಡೆ ಸ್ನಾನ ನಡೆಸುವುದಿಲ್ಲ ಎಂದು ನಂಬಿಸಿ ಆಯೋಜನಾ ಸಮಿತಿಯವರು ನಮ್ಮನ್ನು ಮೋಸ ಮಾಡಿದ್ದಾರೆ ಎಂದು ನಮ್ಮ ಪಕ್ಷದ ಕಾರ್ಯಕರ್ತೆಯರು ದೇವಾಲಯದ ಹೊರಗಡೆ ಪ್ರತಿಭಟನೆ ನಡೆಸಲು ಮುಂದಾದರು.<br /> <br /> ಆಗ ಸಿಟ್ಟಿಗೆದ್ದ ಆಯೋಜನಾ ಸಮಿತಿ ಸದಸ್ಯರು ಪಕ್ಷದ ಕಾರ್ಯಕರ್ತೆಯರ ಮೇಲೆ ದೌರ್ಜನ್ಯ ನಡೆಸಿ ಜಡೆಗಳನ್ನು ಮತ್ತು ಉಡುಪುಗಳನ್ನು ಎಳೆದಾಡಿದ್ದಾರೆ. ಹಲ್ಲೆ ಮಾಡಿರುವರನ್ನು ತಕ್ಷಣ ಬಂಧಿಸಬೇಕು. ಪೊಲೀಸರು ಕ್ರಮ ಕೈಗೊಳ್ಳುವವರೆಗೂ ಪ್ರತಿಭಟನೆ ಹಿಂಪಡೆಯುವುದಿಲ್ಲ’ ಎಂದು ಸಿಪಿಎಂ ರಾಜ್ಯ ಘಟಕದ ಕಾರ್ಯದರ್ಶಿ ಜಿ.ವಿ.ಶ್ರೀರಾಮರೆಡ್ಡಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕಬಳ್ಳಾಪುರ: ಮಡೆಮಡೆ ಸ್ನಾನ ಪದ್ಧತಿ ವಿರೋಧಿಸಿ ಪ್ರತಿಭಟನೆ ನಡೆಸಲು ಮುಂದಾದ ಸಿಪಿಎಂ ಕಾರ್ಯಕರ್ತೆಯರ ಮೇಲೆ ಮಡೆಸ್ನಾನ ಆಯೋಜನಾ ಸಮಿತಿ ಸದಸ್ಯರು ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಪಕ್ಷದ ಮುಖಂಡರು, ಕಾರ್ಯಕರ್ತರು ನಗರದ ಸುಬ್ರಮಣ್ಯ ದೇವಾಲಯದ ಎದುರು ಭಾನುವಾರ ಸಂಜೆಯಿಂದ ಅನಿರ್ದಿಷ್ಟಾವಧಿ ಧರಣಿ ಕೈಗೊಂಡರು.<br /> <br /> ಪಕ್ಷದ ಕಾರ್ಯಕರ್ತೆಯರಾದ ಮಧುಲತಾ, ಲಕ್ಷ್ಮೀದೇವಮ್ಮ ಮುಂತಾದವರ ಜಡೆಗಳನ್ನು ಎಳೆದು ಆಯೋಜನಾ ಸಮಿತಿ ಸದಸ್ಯರು ಹಲ್ಲೆ ನಡೆಸಿದ್ದು, ಅವರನ್ನು ಕೂಡಲೇ ಬಂಧಿಸಬೇಕು. ಅವರ ವಿರುದ್ಧ ಕ್ರಮ ಕೈಗೊಳ್ಳುವವರೆಗೆ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.<br /> <br /> ‘ಮಡೆಮಡೆ ಸ್ನಾನ ನಡೆಸುವುದಿಲ್ಲ ಎಂದು ನಂಬಿಸಿ ಆಯೋಜನಾ ಸಮಿತಿಯವರು ನಮ್ಮನ್ನು ಮೋಸ ಮಾಡಿದ್ದಾರೆ ಎಂದು ನಮ್ಮ ಪಕ್ಷದ ಕಾರ್ಯಕರ್ತೆಯರು ದೇವಾಲಯದ ಹೊರಗಡೆ ಪ್ರತಿಭಟನೆ ನಡೆಸಲು ಮುಂದಾದರು.<br /> <br /> ಆಗ ಸಿಟ್ಟಿಗೆದ್ದ ಆಯೋಜನಾ ಸಮಿತಿ ಸದಸ್ಯರು ಪಕ್ಷದ ಕಾರ್ಯಕರ್ತೆಯರ ಮೇಲೆ ದೌರ್ಜನ್ಯ ನಡೆಸಿ ಜಡೆಗಳನ್ನು ಮತ್ತು ಉಡುಪುಗಳನ್ನು ಎಳೆದಾಡಿದ್ದಾರೆ. ಹಲ್ಲೆ ಮಾಡಿರುವರನ್ನು ತಕ್ಷಣ ಬಂಧಿಸಬೇಕು. ಪೊಲೀಸರು ಕ್ರಮ ಕೈಗೊಳ್ಳುವವರೆಗೂ ಪ್ರತಿಭಟನೆ ಹಿಂಪಡೆಯುವುದಿಲ್ಲ’ ಎಂದು ಸಿಪಿಎಂ ರಾಜ್ಯ ಘಟಕದ ಕಾರ್ಯದರ್ಶಿ ಜಿ.ವಿ.ಶ್ರೀರಾಮರೆಡ್ಡಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>