<p><strong>ಬೆಂಗಳೂರು: </strong>ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆಚರಿಸುವ `ಮಡೆ ಸ್ನಾನ~ ಕುರಿತು ಮಹತ್ವದ ಆದೇಶ ನೀಡಿರುವ ಹೈಕೋರ್ಟ್, `ನಿರ್ದಿಷ್ಟ ಸಮುದಾಯವೊಂದರ ಜನ ಉಂಡು ಬಿಟ್ಟ ಎಂಜಲು ಎಲೆಯ ಮೇಲೆ ಭಕ್ತರು ಉರುಳುವ ಪದ್ಧತಿ ನಿಲ್ಲಿಸಬೇಕು~ ಎಂದು ಸರ್ಕಾರಕ್ಕೆ ನಿರ್ದೇಶನ ನೀಡಿದೆ.<br /> <br /> `ಗರ್ಭಗುಡಿಯಲ್ಲಿ ದೇವರಿಗೆ ಅನ್ನವನ್ನು ನೈವೇದ್ಯದ ರೂಪದಲ್ಲಿ ನೀಡಬೇಕು. ನಂತರ ನೈವೇದ್ಯವನ್ನು ದೇವಸ್ಥಾನದ ಪ್ರಾಂಗಣದಲ್ಲಿಟ್ಟು ಭಕ್ತರಿಗೆ ಉರುಳುಸೇವೆಗೆ ಅವಕಾಶ ನೀಡಬಹುದು. ಈ ಆಹಾರವನ್ನು ಯಾವುದೇ ಸಮುದಾಯದವರೂ ಸೇವಿಸಕೂಡದು~ ಎಂದು ಮುಖ್ಯ ನ್ಯಾಯಮೂರ್ತಿ ವಿಕ್ರಮಜಿತ್ ಸೇನ್ ಹಾಗೂ ನ್ಯಾಯಮೂರ್ತಿ ಬಿ.ವಿ. ನಾಗರತ್ನ ಅವರನ್ನು ಒಳಗೊಂಡ ಹೈಕೋರ್ಟ್ ವಿಭಾಗೀಯ ಪೀಠ ಗುರುವಾರ ನೀಡಿದ ಆದೇಶದಲ್ಲಿ ಹೇಳಿದೆ.</p>.<p><br /> ಮಡೆ ಸ್ನಾನ ಪದ್ಧತಿ ನಿಷೇಧಿಸಬೇಕು ಎಂದು ಕೋರಿ ನಿಡುಮಾಮಿಡಿ ಮಠದ ವೀರಭದ್ರ ಚನ್ನಮಲ್ಲ ಸ್ವಾಮೀಜಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠ, `ಜಾತಿ ಆಧಾರಿತ ಪಂಕ್ತಿಭೇದವನ್ನು ಸರ್ಕಾರ ಯಾವುದೇ ಕಾರಣಕ್ಕೂ ಪ್ರೋತ್ಸಾಹಿಸಬಾರದು. ಅನ್ನದ ಮೇಲೆ ಉರುಳುವ ಹರಕೆ ಸಂಪೂರ್ಣ ಸ್ವಯಂಪ್ರೇರಿತ ಆಗಿರಬೇಕು~ ಎಂದು ನಿರ್ದೇಶನ ನೀಡಿದೆ.<br /> <br /> `ಮಡೆ ಸ್ನಾನದಲ್ಲಿ ಎಲ್ಲ ಸಮುದಾಯದವರೂ ಪಾಲ್ಗೊಳ್ಳುತ್ತಾರೆ. ಇದನ್ನು ಆಚರಿಸುವಂತೆ ಯಾರ ಮೇಲೂ ಒತ್ತಡ ಹೇರುವುದಿಲ್ಲ~ ಎಂದು ಕುಕ್ಕೆ ಸುಬ್ರಹ್ಮಣ್ಯ ಭಾಗದ ಮಲೆಕುಡಿಯರ ಪರ ವಕೀಲರು ನ್ಯಾಯಪೀಠಕ್ಕೆ ತಿಳಿಸಿದರು. <br /> <br /> `ಸ್ವಇಚ್ಛೆಯಿಂದ ಮಾಡುತ್ತಾರೆ~ ಎಂಬ ವಾದವನ್ನು ಪ್ರಶ್ನಿಸಿದ ಮುಖ್ಯ ನ್ಯಾಯಮೂರ್ತಿ ಸೇನ್, `ಎಂಜಲು ಎಲೆಯ ಮೇಲೆ ಉರುಳುವುದರಿಂದ ತನಗೆ ಒಳ್ಳೆಯದಾಗುತ್ತದೆ ಎಂದು ಭಾವಿಸುವುದು ಸ್ವಇಚ್ಛೆಯಿಂದ ಎನ್ನಲಾಗದು. ಆ ರೀತಿಯ ಭಾವನೆಯನ್ನು ವ್ಯಕ್ತಿಯಲ್ಲಿ ಯಾರೋ ಮೂಡಿಸಿರ ಬೇಕು~ ಎಂದರು.<br /> <br /> `ಮಡೆ ಸ್ನಾನ ನಿಷೇಧಿಸುವ ವಿಚಾರದಲ್ಲಿ ವ್ಯಕ್ತಿಯ ಪ್ರಜ್ಞಾ ಸ್ವಾತಂತ್ರ್ಯವನ್ನೂ ಗಣನೆಗೆ ತೆಗೆದುಕೊಳ್ಳಬೇಕಲ್ಲವೇ?~ ಎಂದು ನ್ಯಾಯಮೂರ್ತಿ ನಾಗರತ್ನ ಪ್ರಶ್ನಿಸಿದರು. `ಪ್ರಜ್ಞಾ ಸ್ವಾತಂತ್ರ್ಯಸಂವಿಧಾನದ ಎಲ್ಲೆಯನ್ನು ಮೀರುವಂತಿಲ್ಲ~ ಎಂದು ರವಿವರ್ಮ ಕುಮಾರ್ ವಿವರಣೆ ನೀಡಿದರು.<br /> <br /> `ಸರ್ಕಾರ ಪಂಕ್ತಿಭೇದವನ್ನು ಬೆಂಬಲಿಸುವುದಿಲ್ಲ. ದೇವಸ್ಥಾನ ಪ್ರಾಂಗಣದಲ್ಲಿ (ಮಡೆ ಸ್ನಾನ ಆಚರಿಸುವ ಸ್ಥಳ) ಊಟ ಬಡಿಸುವುದನ್ನು ನಿಲ್ಲಿಸುತ್ತೇವೆ. ಆಗ ಅಲ್ಲಿ ಮಡೆ ಸ್ನಾನ ಆಚರಣೆಗೆ ಅವಕಾಶ ಇರುವುದಿಲ್ಲ~ ಎಂದು ಸರ್ಕಾರದ ಪರ ವಕೀಲರು ಹೇಳಿಕೆ ಸಲ್ಲಿಸಿದರು. ಸರ್ಕಾರದ ಹೇಳಿಕೆ ಆಧರಿಸಿ ನ್ಯಾಯಪೀಠ ಆದೇಶ ನೀಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆಚರಿಸುವ `ಮಡೆ ಸ್ನಾನ~ ಕುರಿತು ಮಹತ್ವದ ಆದೇಶ ನೀಡಿರುವ ಹೈಕೋರ್ಟ್, `ನಿರ್ದಿಷ್ಟ ಸಮುದಾಯವೊಂದರ ಜನ ಉಂಡು ಬಿಟ್ಟ ಎಂಜಲು ಎಲೆಯ ಮೇಲೆ ಭಕ್ತರು ಉರುಳುವ ಪದ್ಧತಿ ನಿಲ್ಲಿಸಬೇಕು~ ಎಂದು ಸರ್ಕಾರಕ್ಕೆ ನಿರ್ದೇಶನ ನೀಡಿದೆ.<br /> <br /> `ಗರ್ಭಗುಡಿಯಲ್ಲಿ ದೇವರಿಗೆ ಅನ್ನವನ್ನು ನೈವೇದ್ಯದ ರೂಪದಲ್ಲಿ ನೀಡಬೇಕು. ನಂತರ ನೈವೇದ್ಯವನ್ನು ದೇವಸ್ಥಾನದ ಪ್ರಾಂಗಣದಲ್ಲಿಟ್ಟು ಭಕ್ತರಿಗೆ ಉರುಳುಸೇವೆಗೆ ಅವಕಾಶ ನೀಡಬಹುದು. ಈ ಆಹಾರವನ್ನು ಯಾವುದೇ ಸಮುದಾಯದವರೂ ಸೇವಿಸಕೂಡದು~ ಎಂದು ಮುಖ್ಯ ನ್ಯಾಯಮೂರ್ತಿ ವಿಕ್ರಮಜಿತ್ ಸೇನ್ ಹಾಗೂ ನ್ಯಾಯಮೂರ್ತಿ ಬಿ.ವಿ. ನಾಗರತ್ನ ಅವರನ್ನು ಒಳಗೊಂಡ ಹೈಕೋರ್ಟ್ ವಿಭಾಗೀಯ ಪೀಠ ಗುರುವಾರ ನೀಡಿದ ಆದೇಶದಲ್ಲಿ ಹೇಳಿದೆ.</p>.<p><br /> ಮಡೆ ಸ್ನಾನ ಪದ್ಧತಿ ನಿಷೇಧಿಸಬೇಕು ಎಂದು ಕೋರಿ ನಿಡುಮಾಮಿಡಿ ಮಠದ ವೀರಭದ್ರ ಚನ್ನಮಲ್ಲ ಸ್ವಾಮೀಜಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠ, `ಜಾತಿ ಆಧಾರಿತ ಪಂಕ್ತಿಭೇದವನ್ನು ಸರ್ಕಾರ ಯಾವುದೇ ಕಾರಣಕ್ಕೂ ಪ್ರೋತ್ಸಾಹಿಸಬಾರದು. ಅನ್ನದ ಮೇಲೆ ಉರುಳುವ ಹರಕೆ ಸಂಪೂರ್ಣ ಸ್ವಯಂಪ್ರೇರಿತ ಆಗಿರಬೇಕು~ ಎಂದು ನಿರ್ದೇಶನ ನೀಡಿದೆ.<br /> <br /> `ಮಡೆ ಸ್ನಾನದಲ್ಲಿ ಎಲ್ಲ ಸಮುದಾಯದವರೂ ಪಾಲ್ಗೊಳ್ಳುತ್ತಾರೆ. ಇದನ್ನು ಆಚರಿಸುವಂತೆ ಯಾರ ಮೇಲೂ ಒತ್ತಡ ಹೇರುವುದಿಲ್ಲ~ ಎಂದು ಕುಕ್ಕೆ ಸುಬ್ರಹ್ಮಣ್ಯ ಭಾಗದ ಮಲೆಕುಡಿಯರ ಪರ ವಕೀಲರು ನ್ಯಾಯಪೀಠಕ್ಕೆ ತಿಳಿಸಿದರು. <br /> <br /> `ಸ್ವಇಚ್ಛೆಯಿಂದ ಮಾಡುತ್ತಾರೆ~ ಎಂಬ ವಾದವನ್ನು ಪ್ರಶ್ನಿಸಿದ ಮುಖ್ಯ ನ್ಯಾಯಮೂರ್ತಿ ಸೇನ್, `ಎಂಜಲು ಎಲೆಯ ಮೇಲೆ ಉರುಳುವುದರಿಂದ ತನಗೆ ಒಳ್ಳೆಯದಾಗುತ್ತದೆ ಎಂದು ಭಾವಿಸುವುದು ಸ್ವಇಚ್ಛೆಯಿಂದ ಎನ್ನಲಾಗದು. ಆ ರೀತಿಯ ಭಾವನೆಯನ್ನು ವ್ಯಕ್ತಿಯಲ್ಲಿ ಯಾರೋ ಮೂಡಿಸಿರ ಬೇಕು~ ಎಂದರು.<br /> <br /> `ಮಡೆ ಸ್ನಾನ ನಿಷೇಧಿಸುವ ವಿಚಾರದಲ್ಲಿ ವ್ಯಕ್ತಿಯ ಪ್ರಜ್ಞಾ ಸ್ವಾತಂತ್ರ್ಯವನ್ನೂ ಗಣನೆಗೆ ತೆಗೆದುಕೊಳ್ಳಬೇಕಲ್ಲವೇ?~ ಎಂದು ನ್ಯಾಯಮೂರ್ತಿ ನಾಗರತ್ನ ಪ್ರಶ್ನಿಸಿದರು. `ಪ್ರಜ್ಞಾ ಸ್ವಾತಂತ್ರ್ಯಸಂವಿಧಾನದ ಎಲ್ಲೆಯನ್ನು ಮೀರುವಂತಿಲ್ಲ~ ಎಂದು ರವಿವರ್ಮ ಕುಮಾರ್ ವಿವರಣೆ ನೀಡಿದರು.<br /> <br /> `ಸರ್ಕಾರ ಪಂಕ್ತಿಭೇದವನ್ನು ಬೆಂಬಲಿಸುವುದಿಲ್ಲ. ದೇವಸ್ಥಾನ ಪ್ರಾಂಗಣದಲ್ಲಿ (ಮಡೆ ಸ್ನಾನ ಆಚರಿಸುವ ಸ್ಥಳ) ಊಟ ಬಡಿಸುವುದನ್ನು ನಿಲ್ಲಿಸುತ್ತೇವೆ. ಆಗ ಅಲ್ಲಿ ಮಡೆ ಸ್ನಾನ ಆಚರಣೆಗೆ ಅವಕಾಶ ಇರುವುದಿಲ್ಲ~ ಎಂದು ಸರ್ಕಾರದ ಪರ ವಕೀಲರು ಹೇಳಿಕೆ ಸಲ್ಲಿಸಿದರು. ಸರ್ಕಾರದ ಹೇಳಿಕೆ ಆಧರಿಸಿ ನ್ಯಾಯಪೀಠ ಆದೇಶ ನೀಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>