<p><strong>ಬೆಂಗಳೂರು:</strong> `ಮಡೆಸ್ನಾನ ಮತ್ತು ಪಂಕ್ತಿಭೇದವನ್ನು ವಿರೋಧಿಸಿ ಮಾರ್ಚ್ 26ರ ಸೋಮವಾರದಂದು ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ರಾಜ್ಯಮಟ್ಟದ ಬೃಹತ್ ಧರಣಿಯನ್ನು ಹಮ್ಮಿಕೊಳ್ಳಲಾಗಿದೆ~ ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಡಾ.ಸಿ.ಎಸ್.ದ್ವಾರಕಾನಾಥ್ ಹೇಳಿದರು. <br /> <br /> ನಗರದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, `ಇತ್ತೀಚಿನ ದಿನಗಳಲ್ಲಿ ಮಡೆಸ್ನಾನ ಮತ್ತು ಪಂಕ್ತಿಭೇದ ವಿರುದ್ಧ ಕಳೆದ ನಾಲ್ಕು ತಿಂಗಳಿಂದ ನಿಡುಮಾಮಿಡಿ ಸಂಸ್ಥಾನಮಠ ನಿರಂತರವಾಗಿ ಧರಣಿ, ಸಭೆ, ಸಂವಾದಗಳನ್ನ ಹಮ್ಮಿಕೊಳ್ಳುವ ಮೂಲಕ ಸರ್ಕಾರವನ್ನು ಒತ್ತಾಯಿಸಿದರೂ, ಸರ್ಕಾರ ಮಡೆಸ್ನಾನ ನಿಷೇಧಿಸುವ ಕುರಿತು ಯಾವುದೇ ಕ್ರಮವನ್ನು ಕೈಗೊಳ್ಳಲಿಲ್ಲ. ಸರ್ಕಾರದ ಈ ಕ್ರಮವನ್ನು ವಿರೋಧಿಸಿ 136 ಮಠಾಧೀಶರುಗಳು, 19 ಮಹಿಳಾ ಗುರುಗಳು, ಪ್ರಗತಿಪರ ಚಿಂತಕರು ಮತ್ತು ಎಲ್ಲ ಸಮಾಜದ ಮುಖಂಡರು ಭಾಗವಹಿಸಲಿದ್ದಾರೆ~ ಎಂದು ಅವರು ತಿಳಿಸಿದರು.<br /> <br /> ಮಾಜಿ ಸಚಿವೆ ಡಾ.ಬಿ.ಟಿ.ಲಲಿತಾ ನಾಯಕ್ ಮಾತನಾಡಿ, `ಜಾತಿ, ಮತ, ಪಂಥ ಹಾಗೂ ಪ್ರಾದೇಶಿಕ ಭೇದವಿಲ್ಲದೆ ಇಷ್ಟು ಸಂಖ್ಯೆಯಲ್ಲಿ ಧಾರ್ಮಿಕ ಮುಖಂಡರು ಒಂದೆಡೆ ಸೇರಿ ಮಡೆಸ್ನಾನ ಮತ್ತು ಪಂಕ್ತಿಭೇಧ ಹಾಗೂ ಇನ್ನಿತರ ಮೂಢನಂಬಿಕೆಗಳನ್ನು ನಿಷೇಧಿಸುವಂತೆ ಸರ್ಕಾರವನ್ನು ಒತ್ತಾಯಿಸಲಿದ್ದಾರೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> `ಮಡೆಸ್ನಾನ ಮತ್ತು ಪಂಕ್ತಿಭೇದವನ್ನು ವಿರೋಧಿಸಿ ಮಾರ್ಚ್ 26ರ ಸೋಮವಾರದಂದು ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ರಾಜ್ಯಮಟ್ಟದ ಬೃಹತ್ ಧರಣಿಯನ್ನು ಹಮ್ಮಿಕೊಳ್ಳಲಾಗಿದೆ~ ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಡಾ.ಸಿ.ಎಸ್.ದ್ವಾರಕಾನಾಥ್ ಹೇಳಿದರು. <br /> <br /> ನಗರದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, `ಇತ್ತೀಚಿನ ದಿನಗಳಲ್ಲಿ ಮಡೆಸ್ನಾನ ಮತ್ತು ಪಂಕ್ತಿಭೇದ ವಿರುದ್ಧ ಕಳೆದ ನಾಲ್ಕು ತಿಂಗಳಿಂದ ನಿಡುಮಾಮಿಡಿ ಸಂಸ್ಥಾನಮಠ ನಿರಂತರವಾಗಿ ಧರಣಿ, ಸಭೆ, ಸಂವಾದಗಳನ್ನ ಹಮ್ಮಿಕೊಳ್ಳುವ ಮೂಲಕ ಸರ್ಕಾರವನ್ನು ಒತ್ತಾಯಿಸಿದರೂ, ಸರ್ಕಾರ ಮಡೆಸ್ನಾನ ನಿಷೇಧಿಸುವ ಕುರಿತು ಯಾವುದೇ ಕ್ರಮವನ್ನು ಕೈಗೊಳ್ಳಲಿಲ್ಲ. ಸರ್ಕಾರದ ಈ ಕ್ರಮವನ್ನು ವಿರೋಧಿಸಿ 136 ಮಠಾಧೀಶರುಗಳು, 19 ಮಹಿಳಾ ಗುರುಗಳು, ಪ್ರಗತಿಪರ ಚಿಂತಕರು ಮತ್ತು ಎಲ್ಲ ಸಮಾಜದ ಮುಖಂಡರು ಭಾಗವಹಿಸಲಿದ್ದಾರೆ~ ಎಂದು ಅವರು ತಿಳಿಸಿದರು.<br /> <br /> ಮಾಜಿ ಸಚಿವೆ ಡಾ.ಬಿ.ಟಿ.ಲಲಿತಾ ನಾಯಕ್ ಮಾತನಾಡಿ, `ಜಾತಿ, ಮತ, ಪಂಥ ಹಾಗೂ ಪ್ರಾದೇಶಿಕ ಭೇದವಿಲ್ಲದೆ ಇಷ್ಟು ಸಂಖ್ಯೆಯಲ್ಲಿ ಧಾರ್ಮಿಕ ಮುಖಂಡರು ಒಂದೆಡೆ ಸೇರಿ ಮಡೆಸ್ನಾನ ಮತ್ತು ಪಂಕ್ತಿಭೇಧ ಹಾಗೂ ಇನ್ನಿತರ ಮೂಢನಂಬಿಕೆಗಳನ್ನು ನಿಷೇಧಿಸುವಂತೆ ಸರ್ಕಾರವನ್ನು ಒತ್ತಾಯಿಸಲಿದ್ದಾರೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>