<p>ಕೋಲಾರ: ಮಡೆಸ್ನಾನ, ಪಂಕ್ತಿಬೇಧ, ಅಸ್ಪೃಶ್ಯತೆ ಆಚರಣೆ, ದೌರ್ಜನ್ಯ ತಡೆಗಟ್ಟಬೇಕು ಎಂದು ಆಗ್ರಹಿಸಿ ಜಿಲ್ಲಾ ದಲಿತ ಸಂಘಟನೆಗಳ ಸಂಯುಕ್ತ ರಂಗದ ಕಾರ್ಯಕರ್ತರು ಕೋಲಾರದಲ್ಲಿ ಸೋಮವಾರ ಮೆರವಣಿಗೆ ನಡೆಸಿದರು.<br /> <br /> ಬ್ರಾಹ್ಮಣರು ಊಟ ಮಾಡಿ ಬಿಟ್ಟ ಎಂಜಲು ಎಲೆಗಳ ಮೇಲೆ ಉರುಳು ಸೇವೆ ಮಾಡುವ ಪದ್ಧತಿಯನ್ನು, ಮಾನವರ ನಡುವೆ ಮೇಲು-ಕೀಳು ಭಾವವನ್ನು ಪ್ರಚೋದಿಸುವ ಪಂಕ್ತಿಭೇದವನ್ನು ನಿಷೇಧಿಸಬೇಕು ಎಂದು ಆಗ್ರಹಿಸಿದರು.<br /> <br /> ಅಸ್ಪೃಶ್ಯತೆ ಆಚರಣೆ ನಿರ್ಮೂಲನೆ, ಬಾಲ್ಯ ವಿವಾಹ, ಮಲ ಹೊರುವ ಪದ್ಧತಿಯನ್ನು ನಿಷೇಧಿಸಬೇಕು. <br /> ರಾಜ್ಯ ದಲ್ಲಿ ಹಲವೆಡೆ ಉದ್ದೇಶಪೂರ್ವಕವಾಗಿ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಗಳನ್ನು ಧ್ವಂಸ ಮಾಡಲಾಗುತ್ತಿದೆ. <br /> <br /> ಅಂಬೇಡ್ಕರ್ ಭಾವಚಿತ್ರವಿರುವ ಗೋಡೆಗಳನ್ನು ನಾಶ ಮಾಡಲಾಗುತ್ತಿದೆ. ಅಂಥ ಕೃತ್ಯ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.<br /> <br /> 1998ರಲ್ಲೆ ಕ್ಲಾಕ್ಟವರ್ನಿಂದ ಗಾಂಧಿನಗರದವರೆಗಿನ ರಸ್ತೆಯನ್ನು ಅಂಬೇಡ್ಕರ್ ವೀಧಿ ಎಂದು ಹೆಸರಿಸ ಲಾಗಿದೆ. ಆದರೆ ಅದನ್ನು ಇದುವರೆಗೂ ನಗರಸಭೆ ಜಾರಿಗೊಳಿಸಲ್ಲ. ಬೇತಮಂಗಲದ ಕೂಳೂರು ಗ್ರಾಮದಲ್ಲಿ ದಲಿತರ ಗುಡಿಸಲುಗಳಿಗೆ ಬೆಂಕಿ ಇಟ್ಟವರ ವಿರುದ್ಧ ಕ್ರಮ ಕೈಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.<br /> <br /> ನಗರದ ಪ್ರವಾಸಿ ಮಂದಿರದಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ನಡೆದ ಮೆರವಣಿಗೆಯಲ್ಲಿ ನೂರಾರು ಕಾರ್ಯ ಕರ್ತರು ಪಾಲ್ಗೊಂಡಿದ್ದರು. ಡಾ.ಎಂ.ಚಂದ್ರಶೇಖರ್, ಆಟೋ ನಾರಾ ಯಣಸ್ವಾಮಿ, ಹಾರೋಹಳ್ಳಿ ನಾರಾ ಯಣಸ್ವಾಮಿ ನೇತೃತ್ವ ವಹಿಸಿದ್ದರು.<br /> <strong><br /> ಕಾಯಮಾತಿಗೆ ಒತ್ತಾಯ</strong><br /> ಚಿಂತಾಮಣಿ: ಗ್ರಾಮ ಸಹಾಯಕರನ್ನು ಕಾಯಂಗೊಳಿಸಬೇಕು ಎಂದು ಸಫಾಯಿ ಆಯೋಗದ ಮಾಜಿ ಅಧ್ಯಕ್ಷ ಕೆ.ಎಂ.ಮುನಿಯಪ್ಪ ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೋಲಾರ: ಮಡೆಸ್ನಾನ, ಪಂಕ್ತಿಬೇಧ, ಅಸ್ಪೃಶ್ಯತೆ ಆಚರಣೆ, ದೌರ್ಜನ್ಯ ತಡೆಗಟ್ಟಬೇಕು ಎಂದು ಆಗ್ರಹಿಸಿ ಜಿಲ್ಲಾ ದಲಿತ ಸಂಘಟನೆಗಳ ಸಂಯುಕ್ತ ರಂಗದ ಕಾರ್ಯಕರ್ತರು ಕೋಲಾರದಲ್ಲಿ ಸೋಮವಾರ ಮೆರವಣಿಗೆ ನಡೆಸಿದರು.<br /> <br /> ಬ್ರಾಹ್ಮಣರು ಊಟ ಮಾಡಿ ಬಿಟ್ಟ ಎಂಜಲು ಎಲೆಗಳ ಮೇಲೆ ಉರುಳು ಸೇವೆ ಮಾಡುವ ಪದ್ಧತಿಯನ್ನು, ಮಾನವರ ನಡುವೆ ಮೇಲು-ಕೀಳು ಭಾವವನ್ನು ಪ್ರಚೋದಿಸುವ ಪಂಕ್ತಿಭೇದವನ್ನು ನಿಷೇಧಿಸಬೇಕು ಎಂದು ಆಗ್ರಹಿಸಿದರು.<br /> <br /> ಅಸ್ಪೃಶ್ಯತೆ ಆಚರಣೆ ನಿರ್ಮೂಲನೆ, ಬಾಲ್ಯ ವಿವಾಹ, ಮಲ ಹೊರುವ ಪದ್ಧತಿಯನ್ನು ನಿಷೇಧಿಸಬೇಕು. <br /> ರಾಜ್ಯ ದಲ್ಲಿ ಹಲವೆಡೆ ಉದ್ದೇಶಪೂರ್ವಕವಾಗಿ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಗಳನ್ನು ಧ್ವಂಸ ಮಾಡಲಾಗುತ್ತಿದೆ. <br /> <br /> ಅಂಬೇಡ್ಕರ್ ಭಾವಚಿತ್ರವಿರುವ ಗೋಡೆಗಳನ್ನು ನಾಶ ಮಾಡಲಾಗುತ್ತಿದೆ. ಅಂಥ ಕೃತ್ಯ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.<br /> <br /> 1998ರಲ್ಲೆ ಕ್ಲಾಕ್ಟವರ್ನಿಂದ ಗಾಂಧಿನಗರದವರೆಗಿನ ರಸ್ತೆಯನ್ನು ಅಂಬೇಡ್ಕರ್ ವೀಧಿ ಎಂದು ಹೆಸರಿಸ ಲಾಗಿದೆ. ಆದರೆ ಅದನ್ನು ಇದುವರೆಗೂ ನಗರಸಭೆ ಜಾರಿಗೊಳಿಸಲ್ಲ. ಬೇತಮಂಗಲದ ಕೂಳೂರು ಗ್ರಾಮದಲ್ಲಿ ದಲಿತರ ಗುಡಿಸಲುಗಳಿಗೆ ಬೆಂಕಿ ಇಟ್ಟವರ ವಿರುದ್ಧ ಕ್ರಮ ಕೈಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.<br /> <br /> ನಗರದ ಪ್ರವಾಸಿ ಮಂದಿರದಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ನಡೆದ ಮೆರವಣಿಗೆಯಲ್ಲಿ ನೂರಾರು ಕಾರ್ಯ ಕರ್ತರು ಪಾಲ್ಗೊಂಡಿದ್ದರು. ಡಾ.ಎಂ.ಚಂದ್ರಶೇಖರ್, ಆಟೋ ನಾರಾ ಯಣಸ್ವಾಮಿ, ಹಾರೋಹಳ್ಳಿ ನಾರಾ ಯಣಸ್ವಾಮಿ ನೇತೃತ್ವ ವಹಿಸಿದ್ದರು.<br /> <strong><br /> ಕಾಯಮಾತಿಗೆ ಒತ್ತಾಯ</strong><br /> ಚಿಂತಾಮಣಿ: ಗ್ರಾಮ ಸಹಾಯಕರನ್ನು ಕಾಯಂಗೊಳಿಸಬೇಕು ಎಂದು ಸಫಾಯಿ ಆಯೋಗದ ಮಾಜಿ ಅಧ್ಯಕ್ಷ ಕೆ.ಎಂ.ಮುನಿಯಪ್ಪ ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>