<p>ಬೆಳಗಾವಿ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆಯುತ್ತಿರುವ ಮಡೆ ಮಡೆ ಸ್ನಾನ ಪದ್ಧತಿಯನ್ನು ನಿಷೇಧಿಸಬೇಕು ಎಂದು ಒತ್ತಾಯಿಸಿ ಭಾರತೀಯ ರಾಷ್ಟ್ರೀಯ ಮಹಿಳಾ ಒಕ್ಕೂಟದ (ಎನ್ಎಫ್ಐಡಬ್ಲ್ಯು) ಜಿಲ್ಲಾ ಘಟಕದ ಕಾರ್ಯಕರ್ತರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.<br /> <br /> ಚನ್ನಮ್ಮ ವೃತ್ತದಿಂದ ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಬಂದ ಕಾರ್ಯಕರ್ತರು, ಮೂಢನಂಬಿಕೆ ಆಚರಣೆಗೆ ಕಡಿವಾಣ ಹಾಕಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಪ್ರವೀಣ ಕುಮಾರ್ ಅವರಿಗೆ ಮನವಿ ಸಲ್ಲಿಸಿದರು.<br /> <br /> ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆಚರಿಸುತ್ತಿರುವ ಮಡೆ ಮಡೆ ಸ್ನಾನ ಪದ್ಧತಿ ನಿಷೇಧಿಸುವಂತೆ ಒತ್ತಾಯಿಸಿ ನಿಡಮಾಮಿಡಿ ಸ್ವಾಮೀಜಿ ನಡೆಸುತ್ತಿರುವ ಸತ್ಯಾಗ್ರಹಕ್ಕೆ ಬೆಂಬಲ ವ್ಯಕ್ತಪಡಿಸಿದ ಕಾರ್ಯಕರ್ತರು, ‘ಈ ಪದ್ಧತಿಯು ಜಾತಿಗಳ ನಡುವೆ ತಾರತಮ್ಯವನ್ನು ಹುಟ್ಟು ಹಾಕುತ್ತದೆ.<br /> <br /> ಬ್ರಾಹ್ಮಣರು ಊಟ ಮಾಡಿದ ಎಲೆಗಳ ಮೇಲೆ ಉರುಳುವುದರಿಂದ ತಮ್ಮ ಚರ್ಮರೋಗ ಕಡಿಮೆಯಾಗುತ್ತದೆ ಎಂಬ ಮೂಢನಂಬಿಕೆ ಬಡ ಹಾಗೂ ಕಳೆ ಜಾತಿಯ ಜನರಲ್ಲಿದೆ. ದೇವರ ದೃಷ್ಟಿಯಲ್ಲಿ ಎಲ್ಲ ಜಾತಿಯವರೂ ಒಂದೇ ಆಗಿದ್ದಾರೆ’ ಎಂದು ಎನ್ಎಫ್ಐಡಬ್ಲ್ಯು ರಾಜ್ಯ ಕಾರ್ಯದರ್ಶಿ ಪ್ರಮೋದಾ ಹಜಾರೆ ತಿಳಿಸಿದರು.<br /> <br /> ‘ನರ ಬಲಿ, ಬೆತ್ತಲೆ ಪೂಜೆ, ದೇವರ ಹೆಸರಿನಲ್ಲಿ ಭಿಕ್ಷೆ ಬೇಡುವುದು, ದೇವದಾಸಿ ಅಂಥ ಪದ್ಧತಿಗಳನ್ನು ನಿಷೇಧಿಸಬೇಕು. ದೇವರ ಹೆಸರಿನಲ್ಲಿ ನಡೆಯುವ ಇಂಥ ಪದ್ಧತಿಗಳಿಂದ ದಲಿತರ ಮೇಲೆ ಇನ್ನಷ್ಟು ಅನ್ಯಾಯ ಆಗುತ್ತದೆ. ಹೀಗಾಗಿ ಸರ್ಕಾರವು ಕೂಡಲೇ ಇಂಥ ಮೂಢನಂಬಿಕೆಗಳ ಆಚರಣೆಗಳ ಮೇಲೆ ನಿಷೇಧ ಹೇರಬೇಕು’ ಒತ್ತಾಯಿಸಿದರು.<br /> <br /> <strong>ವಿದ್ಯುತ್: ಕುಂದುಕೊರತೆ ಸಭೆ ಇಂದು</strong><br /> ಬೆಳಗಾವಿ: ಹೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ನಗರ ಉಪವಿಭಾಗ ನಂ. 2 ಕಚೇರಿಯಲ್ಲಿ ಇದರ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದುಕೊರತೆ ಸಭೆಯನ್ನು ಇದೇ 10ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1.30ರವರೆಗೆ ಹಮ್ಮಿಕೊಳ್ಳಲಾಗಿದೆ. ಗ್ರಾಹಕರು ಸಭೆಗೆ ಆಗಮಿಸಿ ಸಮಸ್ಯೆ ನಿವಾರಿಸಿಕೊಳ್ಳಬೇಕು ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಳಗಾವಿ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆಯುತ್ತಿರುವ ಮಡೆ ಮಡೆ ಸ್ನಾನ ಪದ್ಧತಿಯನ್ನು ನಿಷೇಧಿಸಬೇಕು ಎಂದು ಒತ್ತಾಯಿಸಿ ಭಾರತೀಯ ರಾಷ್ಟ್ರೀಯ ಮಹಿಳಾ ಒಕ್ಕೂಟದ (ಎನ್ಎಫ್ಐಡಬ್ಲ್ಯು) ಜಿಲ್ಲಾ ಘಟಕದ ಕಾರ್ಯಕರ್ತರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.<br /> <br /> ಚನ್ನಮ್ಮ ವೃತ್ತದಿಂದ ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಬಂದ ಕಾರ್ಯಕರ್ತರು, ಮೂಢನಂಬಿಕೆ ಆಚರಣೆಗೆ ಕಡಿವಾಣ ಹಾಕಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಪ್ರವೀಣ ಕುಮಾರ್ ಅವರಿಗೆ ಮನವಿ ಸಲ್ಲಿಸಿದರು.<br /> <br /> ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆಚರಿಸುತ್ತಿರುವ ಮಡೆ ಮಡೆ ಸ್ನಾನ ಪದ್ಧತಿ ನಿಷೇಧಿಸುವಂತೆ ಒತ್ತಾಯಿಸಿ ನಿಡಮಾಮಿಡಿ ಸ್ವಾಮೀಜಿ ನಡೆಸುತ್ತಿರುವ ಸತ್ಯಾಗ್ರಹಕ್ಕೆ ಬೆಂಬಲ ವ್ಯಕ್ತಪಡಿಸಿದ ಕಾರ್ಯಕರ್ತರು, ‘ಈ ಪದ್ಧತಿಯು ಜಾತಿಗಳ ನಡುವೆ ತಾರತಮ್ಯವನ್ನು ಹುಟ್ಟು ಹಾಕುತ್ತದೆ.<br /> <br /> ಬ್ರಾಹ್ಮಣರು ಊಟ ಮಾಡಿದ ಎಲೆಗಳ ಮೇಲೆ ಉರುಳುವುದರಿಂದ ತಮ್ಮ ಚರ್ಮರೋಗ ಕಡಿಮೆಯಾಗುತ್ತದೆ ಎಂಬ ಮೂಢನಂಬಿಕೆ ಬಡ ಹಾಗೂ ಕಳೆ ಜಾತಿಯ ಜನರಲ್ಲಿದೆ. ದೇವರ ದೃಷ್ಟಿಯಲ್ಲಿ ಎಲ್ಲ ಜಾತಿಯವರೂ ಒಂದೇ ಆಗಿದ್ದಾರೆ’ ಎಂದು ಎನ್ಎಫ್ಐಡಬ್ಲ್ಯು ರಾಜ್ಯ ಕಾರ್ಯದರ್ಶಿ ಪ್ರಮೋದಾ ಹಜಾರೆ ತಿಳಿಸಿದರು.<br /> <br /> ‘ನರ ಬಲಿ, ಬೆತ್ತಲೆ ಪೂಜೆ, ದೇವರ ಹೆಸರಿನಲ್ಲಿ ಭಿಕ್ಷೆ ಬೇಡುವುದು, ದೇವದಾಸಿ ಅಂಥ ಪದ್ಧತಿಗಳನ್ನು ನಿಷೇಧಿಸಬೇಕು. ದೇವರ ಹೆಸರಿನಲ್ಲಿ ನಡೆಯುವ ಇಂಥ ಪದ್ಧತಿಗಳಿಂದ ದಲಿತರ ಮೇಲೆ ಇನ್ನಷ್ಟು ಅನ್ಯಾಯ ಆಗುತ್ತದೆ. ಹೀಗಾಗಿ ಸರ್ಕಾರವು ಕೂಡಲೇ ಇಂಥ ಮೂಢನಂಬಿಕೆಗಳ ಆಚರಣೆಗಳ ಮೇಲೆ ನಿಷೇಧ ಹೇರಬೇಕು’ ಒತ್ತಾಯಿಸಿದರು.<br /> <br /> <strong>ವಿದ್ಯುತ್: ಕುಂದುಕೊರತೆ ಸಭೆ ಇಂದು</strong><br /> ಬೆಳಗಾವಿ: ಹೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ನಗರ ಉಪವಿಭಾಗ ನಂ. 2 ಕಚೇರಿಯಲ್ಲಿ ಇದರ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದುಕೊರತೆ ಸಭೆಯನ್ನು ಇದೇ 10ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1.30ರವರೆಗೆ ಹಮ್ಮಿಕೊಳ್ಳಲಾಗಿದೆ. ಗ್ರಾಹಕರು ಸಭೆಗೆ ಆಗಮಿಸಿ ಸಮಸ್ಯೆ ನಿವಾರಿಸಿಕೊಳ್ಳಬೇಕು ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>