<p><strong>ಬೆಂಗಳೂರು:</strong> ಖಾಸಗಿ ಶಿಕ್ಷಣ ಸಂಸ್ಥೆಗಳು ‘ವಿಶ್ವವಿದ್ಯಾಲಯ’ ಎಂಬ ಹೆಸರು ಬಳಕೆ ಮಾಡುವಂತಿಲ್ಲ ಎಂದು ವಿಶ್ವವಿದ್ಯಾಲಯಗಳ ಅನುದಾನ ಆಯೋಗ (ಯುಜಿಸಿ) ನೀಡಿದ್ದ ಸೂಚನೆ ಪ್ರಶ್ನಿಸಿ ಮಣಿಪಾಲ ವಿಶ್ವವಿದ್ಯಾಲಯ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ವಿಭಾಗೀಯ ಪೀಠಕ್ಕೆ ವರ್ಗಾಯಿಸಿ ನ್ಯಾಯಮೂರ್ತಿ ಆನಂದ ಬೈರಾರೆಡ್ಡಿ ಸೋಮವಾರ ಆದೇಶಿಸಿದ್ದಾರೆ.<br /> <br /> ಹಿಂದೆ ಮಣಿಪಾಲ್ ಅಕಾಡೆಮಿ ಫಾರ್ ಹೈಯರ್ ಎಜುಕೇಷನ್ (ಮಾಹೆ) ಹೆಸರಿನಲ್ಲಿ ಶಿಕ್ಷಣ ನೀಡುತ್ತಿದ್ದ ಸಂಸ್ಥೆಗೆ ಕೇಂದ್ರ ಸರ್ಕಾರ 1993ರಲ್ಲಿ ‘ಪರಿಭಾವಿತ (ಡೀಮ್ಡ್) ವಿಶ್ವವಿದ್ಯಾಲಯ’ದ ಸ್ಥಾನಮಾನ ಕಲ್ಪಿಸಿತು. ಡೀಮ್್ಡ ಸ್ಥಾನಮಾನ ಹೊಂದಿರುವ ಖಾಸಗಿ ಶಿಕ್ಷಣ ಸಂಸ್ಥೆಗಳು ತಮ್ಮ ಹೆಸರನ್ನು ‘ವಿಶ್ವವಿದ್ಯಾಲಯ’ ಎಂದು ಬದಲಾಯಿಸಿಕೊಳ್ಳಬಹುದು ಎಂದು ಯುಜಿಸಿ ಸಮ್ಮತಿ ಸೂಚಿಸಿತು. ನಂತರ ಈ ಸಂಸ್ಥೆ ತನ್ನ ಹೆಸರನ್ನು ‘ಮಣಿಪಾಲ ವಿಶ್ವವಿದ್ಯಾಲಯ’ ಎಂದು ಬದಲಾಯಿಸಿಕೊಂಡಿತು.</p>.<p>ನಂತರ 2009ರಲ್ಲಿ ಸ್ಪಷ್ಟೀಕರಣ ನೀಡಿದ ಯುಜಿಸಿ, ಡೀಮ್್ಡ ವಿಶ್ವವಿದ್ಯಾಲಯಗಳು ತಮ್ಮ ಹೆಸರಿನ ಜೊತೆ ‘ವಿಶ್ವವಿದ್ಯಾಲಯ’ ಪದ ಬಳಕೆ ಮಾಡುವಂತಿಲ್ಲ ಎಂದು ಹೇಳಿತು. ಇದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಲಾಗಿತ್ತು. ಒಂದು ಬಾರಿ ಒಪ್ಪಿಗೆ ನೀಡಿ, ಕೆಲವು ಕಾಲದ ನಂತರ ಆ ಒಪ್ಪಿಗೆಯನ್ನು ಹಿಂಪಡೆಯುವುದು ಸರಿಯಲ್ಲ ಎಂದು ಅರ್ಜಿದಾರರು ವಾದಿಸಿದ್ದರು.<br /> <br /> ಇನ್ನೊಂದು ಪ್ರಕರಣದ ವಿಚಾರಣೆ ವೇಳೆ, ಒಂದು ಬಾರಿ ಹೊರಡಿಸಿದ ಅಧಿಸೂಚನೆಯನ್ನು ಹಿಂಪಡೆಯುವ ಅಧಿಕಾರ ಯುಜಿಸಿಗೆ ಇದೆ ಎಂದು ಹೈಕೋರ್ಟ್ನ ಇನ್ನೊಂದು ಏಕಸದಸ್ಯ ಪೀಠ ಹೇಳಿತ್ತು. ಎರಡೂ ಆದೇಶಗಳು ಪರಸ್ಪರ ತಾಳೆಯಾಗದಿರುವುದನ್ನು ಪರಿಗಣಿಸಿದ ನ್ಯಾಯಮೂರ್ತಿಗಳು ಮಣಿಪಾಲ ವಿ.ವಿ. ಅರ್ಜಿಯನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಿದ್ದಾರೆ.</p>.<p><strong>ಬಿದಾಯಿ ವಿರುದ್ಧದ ಅರ್ಜಿ ವಜಾ<br /> ಬೆಂಗಳೂರು: </strong>ರಾಜ್ಯ ಸರ್ಕಾರ ಈ ಬಾರಿಯ ಬಜೆಟ್ನಲ್ಲಿ ಘೋಷಿಸಿರುವ ಬಿದಾಯಿ ಯೋಜನೆ ತಾರತಮ್ಯಕ್ಕೆ ಎಡೆ ಮಾಡಿಕೊಡುವಂತಿದೆ ಎಂದು ದೂರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ. ಡಾ. ಕೋಡೂರು ವೆಂಕಟೇಶ್ ಎಂಬುವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ.ಎಚ್. ವಘೇಲಾ ನೇತೃತ್ವದ ವಿಭಾಗೀಯ ಪೀಠ, ‘ಪ್ರಚಾರ ಗಿಟ್ಟಿಸುವ ಉದ್ದೇಶದಿಂದ ಇಂಥ ಅರ್ಜಿಗಳನ್ನು ಸಲ್ಲಿಸಲಾಗುತ್ತಿದೆ.</p>.<p>ಬಿದಾಯಿ ಯೋಜನೆಗೆ ಸಂಬಂಧಿಸಿದಂತೆ ಸರ್ಕಾರ ಹೊರಡಿಸಿರುವ ಆದೇಶದ ಪ್ರತಿಯನ್ನು ಸೂಕ್ತ ರೀತಿಯಲ್ಲಿ ಅನುವಾದ ಮಾಡಲೂ ಅರ್ಜಿದಾರರಿಗೆ ಆಗಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿತು. ಬಿದಾಯಿ ಯೋಜನೆಯ ಲಾಭವನ್ನು ಅಲ್ಪಸಂಖ್ಯಾತ ಸಮುದಾಯಕ್ಕೆ ಮಾತ್ರ ಸೀಮಿತಗೊಳಿಸಬಾರದು. ಎಲ್ಲ ಸಮುದಾಯಗಳಿಗೆ ಅದನ್ನು ವಿಸ್ತರಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಖಾಸಗಿ ಶಿಕ್ಷಣ ಸಂಸ್ಥೆಗಳು ‘ವಿಶ್ವವಿದ್ಯಾಲಯ’ ಎಂಬ ಹೆಸರು ಬಳಕೆ ಮಾಡುವಂತಿಲ್ಲ ಎಂದು ವಿಶ್ವವಿದ್ಯಾಲಯಗಳ ಅನುದಾನ ಆಯೋಗ (ಯುಜಿಸಿ) ನೀಡಿದ್ದ ಸೂಚನೆ ಪ್ರಶ್ನಿಸಿ ಮಣಿಪಾಲ ವಿಶ್ವವಿದ್ಯಾಲಯ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ವಿಭಾಗೀಯ ಪೀಠಕ್ಕೆ ವರ್ಗಾಯಿಸಿ ನ್ಯಾಯಮೂರ್ತಿ ಆನಂದ ಬೈರಾರೆಡ್ಡಿ ಸೋಮವಾರ ಆದೇಶಿಸಿದ್ದಾರೆ.<br /> <br /> ಹಿಂದೆ ಮಣಿಪಾಲ್ ಅಕಾಡೆಮಿ ಫಾರ್ ಹೈಯರ್ ಎಜುಕೇಷನ್ (ಮಾಹೆ) ಹೆಸರಿನಲ್ಲಿ ಶಿಕ್ಷಣ ನೀಡುತ್ತಿದ್ದ ಸಂಸ್ಥೆಗೆ ಕೇಂದ್ರ ಸರ್ಕಾರ 1993ರಲ್ಲಿ ‘ಪರಿಭಾವಿತ (ಡೀಮ್ಡ್) ವಿಶ್ವವಿದ್ಯಾಲಯ’ದ ಸ್ಥಾನಮಾನ ಕಲ್ಪಿಸಿತು. ಡೀಮ್್ಡ ಸ್ಥಾನಮಾನ ಹೊಂದಿರುವ ಖಾಸಗಿ ಶಿಕ್ಷಣ ಸಂಸ್ಥೆಗಳು ತಮ್ಮ ಹೆಸರನ್ನು ‘ವಿಶ್ವವಿದ್ಯಾಲಯ’ ಎಂದು ಬದಲಾಯಿಸಿಕೊಳ್ಳಬಹುದು ಎಂದು ಯುಜಿಸಿ ಸಮ್ಮತಿ ಸೂಚಿಸಿತು. ನಂತರ ಈ ಸಂಸ್ಥೆ ತನ್ನ ಹೆಸರನ್ನು ‘ಮಣಿಪಾಲ ವಿಶ್ವವಿದ್ಯಾಲಯ’ ಎಂದು ಬದಲಾಯಿಸಿಕೊಂಡಿತು.</p>.<p>ನಂತರ 2009ರಲ್ಲಿ ಸ್ಪಷ್ಟೀಕರಣ ನೀಡಿದ ಯುಜಿಸಿ, ಡೀಮ್್ಡ ವಿಶ್ವವಿದ್ಯಾಲಯಗಳು ತಮ್ಮ ಹೆಸರಿನ ಜೊತೆ ‘ವಿಶ್ವವಿದ್ಯಾಲಯ’ ಪದ ಬಳಕೆ ಮಾಡುವಂತಿಲ್ಲ ಎಂದು ಹೇಳಿತು. ಇದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಲಾಗಿತ್ತು. ಒಂದು ಬಾರಿ ಒಪ್ಪಿಗೆ ನೀಡಿ, ಕೆಲವು ಕಾಲದ ನಂತರ ಆ ಒಪ್ಪಿಗೆಯನ್ನು ಹಿಂಪಡೆಯುವುದು ಸರಿಯಲ್ಲ ಎಂದು ಅರ್ಜಿದಾರರು ವಾದಿಸಿದ್ದರು.<br /> <br /> ಇನ್ನೊಂದು ಪ್ರಕರಣದ ವಿಚಾರಣೆ ವೇಳೆ, ಒಂದು ಬಾರಿ ಹೊರಡಿಸಿದ ಅಧಿಸೂಚನೆಯನ್ನು ಹಿಂಪಡೆಯುವ ಅಧಿಕಾರ ಯುಜಿಸಿಗೆ ಇದೆ ಎಂದು ಹೈಕೋರ್ಟ್ನ ಇನ್ನೊಂದು ಏಕಸದಸ್ಯ ಪೀಠ ಹೇಳಿತ್ತು. ಎರಡೂ ಆದೇಶಗಳು ಪರಸ್ಪರ ತಾಳೆಯಾಗದಿರುವುದನ್ನು ಪರಿಗಣಿಸಿದ ನ್ಯಾಯಮೂರ್ತಿಗಳು ಮಣಿಪಾಲ ವಿ.ವಿ. ಅರ್ಜಿಯನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಿದ್ದಾರೆ.</p>.<p><strong>ಬಿದಾಯಿ ವಿರುದ್ಧದ ಅರ್ಜಿ ವಜಾ<br /> ಬೆಂಗಳೂರು: </strong>ರಾಜ್ಯ ಸರ್ಕಾರ ಈ ಬಾರಿಯ ಬಜೆಟ್ನಲ್ಲಿ ಘೋಷಿಸಿರುವ ಬಿದಾಯಿ ಯೋಜನೆ ತಾರತಮ್ಯಕ್ಕೆ ಎಡೆ ಮಾಡಿಕೊಡುವಂತಿದೆ ಎಂದು ದೂರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ. ಡಾ. ಕೋಡೂರು ವೆಂಕಟೇಶ್ ಎಂಬುವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ.ಎಚ್. ವಘೇಲಾ ನೇತೃತ್ವದ ವಿಭಾಗೀಯ ಪೀಠ, ‘ಪ್ರಚಾರ ಗಿಟ್ಟಿಸುವ ಉದ್ದೇಶದಿಂದ ಇಂಥ ಅರ್ಜಿಗಳನ್ನು ಸಲ್ಲಿಸಲಾಗುತ್ತಿದೆ.</p>.<p>ಬಿದಾಯಿ ಯೋಜನೆಗೆ ಸಂಬಂಧಿಸಿದಂತೆ ಸರ್ಕಾರ ಹೊರಡಿಸಿರುವ ಆದೇಶದ ಪ್ರತಿಯನ್ನು ಸೂಕ್ತ ರೀತಿಯಲ್ಲಿ ಅನುವಾದ ಮಾಡಲೂ ಅರ್ಜಿದಾರರಿಗೆ ಆಗಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿತು. ಬಿದಾಯಿ ಯೋಜನೆಯ ಲಾಭವನ್ನು ಅಲ್ಪಸಂಖ್ಯಾತ ಸಮುದಾಯಕ್ಕೆ ಮಾತ್ರ ಸೀಮಿತಗೊಳಿಸಬಾರದು. ಎಲ್ಲ ಸಮುದಾಯಗಳಿಗೆ ಅದನ್ನು ವಿಸ್ತರಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>