<p><strong>ಆಲಮಟ್ಟಿ:</strong> ಕೃಷ್ಣಾ ನದಿಗೆ ರೈತರೇ ಸೇರಿ ಕೊಂಡು ಸೋಮವಾರ ಬಾಗಿನ ಅರ್ಪಿಸಿ, ಒಂದೆಡೆ ಸೇರಿ ನೀರು ಬಳಕೆ ಹಾಗೂ ವಿವಿಧ ಸಮಸ್ಯೆಗಳ ಬಗ್ಗೆ ಚರ್ಚಿಸಿದರು.<br /> <br /> ಕೃಷ್ಣಾ ಕಣಿವೆ ರೈತ ಹಿತರಕ್ಷಣಾ ಸಮಿತಿ ಆಶ್ರಯದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಬೆಳಿಗ್ಗೆಯಿಂದಲೇ ಆಲಮಟ್ಟಿ ಸುತ್ತಮುತ್ತಲಿನ ನೂರಾರು ರೈತರು ಸುರಿಯುತ್ತಿದ್ದ ಧಾರಾಕಾರ ಮಳೆಯನ್ನು ಲೆಕ್ಕಿಸದೇ, ಮೆರವಣಿಗೆ ನಡೆಸಿ ಬಾಗಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.<br /> <br /> ರಾಮಲಿಂಗೇಶ್ವರ ದೇವಸ್ಥಾನದಿಂದ ಕೃಷ್ಣಾ ನದಿಯ ದಂಡೆಯವರೆಗೂ ಮೆರವಣಿಗೆ ಮೂಲಕ ರೈತರು, ರೈತ ಮಹಿಳೆಯರು ಸಾಗಿದರು. ಜೀವ ನದಿಯಾದ ಕೃಷ್ಣೆ ತಮ್ಮೆಲ್ಲರನ್ನು ಕಾಪಾಡಲಿ ಎಂದು ಬೇಡಿಕೊಂಡರು.<br /> <br /> ಕೃಷ್ಣಾ ನದಿಯಲ್ಲಿ ರೈತರ ಪರವಾಗಿ ಬಿಲ್ಕೆರೂರಿನ ಸಿದ್ಧಲಿಂಗ ಸ್ವಾಮೀಜಿ ಪೂಜೆ ಸಲ್ಲಿಸಿದರು. <br /> <br /> ರೈತ ಸಂಘದ ರಾಜ್ಯ ಘಟಕದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ದಂಪತಿ, ರೈತ ಮುಖಂಡ ಬಸವರಾಜ ಕುಂಬಾರ ದಂಪತಿ, ಜಿಪಂ ಸದಸ್ಯ ಶಿವಾ ನಂದ ಅವಟಿ ಸೇರಿದಂತೆ ಮೊದಲಾದ ಗಣ್ಯರು ಕೃಷ್ಣೆಗೆ ಬಾಗಿನ ಅರ್ಪಿಸಿದರು. ಅಲ್ಲಿದ್ದ 108 ಕುಂಬಗಳಿಗೆ ಗಂಗಾಪೂಜೆ ಸಲ್ಲಿಸಲಾಯಿತು.<br /> <br /> ಕಾಶೀನಕುಂಟಿ, ಯಲಗೂರ, ನಿಡಗುಂದಿ, ಬೇನಾಳ, ವಡವಡಗಿ, ಯಲ್ಲಮ್ಮನ ಬೂದಿಹಾಳ, ಕಾಳಗಿ, ಹುಲ್ಲೂರು ಮೊದಲಾದ ಗ್ರಾಮಗಳ ನೂರಾರು ರೈತರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆಲಮಟ್ಟಿ:</strong> ಕೃಷ್ಣಾ ನದಿಗೆ ರೈತರೇ ಸೇರಿ ಕೊಂಡು ಸೋಮವಾರ ಬಾಗಿನ ಅರ್ಪಿಸಿ, ಒಂದೆಡೆ ಸೇರಿ ನೀರು ಬಳಕೆ ಹಾಗೂ ವಿವಿಧ ಸಮಸ್ಯೆಗಳ ಬಗ್ಗೆ ಚರ್ಚಿಸಿದರು.<br /> <br /> ಕೃಷ್ಣಾ ಕಣಿವೆ ರೈತ ಹಿತರಕ್ಷಣಾ ಸಮಿತಿ ಆಶ್ರಯದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಬೆಳಿಗ್ಗೆಯಿಂದಲೇ ಆಲಮಟ್ಟಿ ಸುತ್ತಮುತ್ತಲಿನ ನೂರಾರು ರೈತರು ಸುರಿಯುತ್ತಿದ್ದ ಧಾರಾಕಾರ ಮಳೆಯನ್ನು ಲೆಕ್ಕಿಸದೇ, ಮೆರವಣಿಗೆ ನಡೆಸಿ ಬಾಗಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.<br /> <br /> ರಾಮಲಿಂಗೇಶ್ವರ ದೇವಸ್ಥಾನದಿಂದ ಕೃಷ್ಣಾ ನದಿಯ ದಂಡೆಯವರೆಗೂ ಮೆರವಣಿಗೆ ಮೂಲಕ ರೈತರು, ರೈತ ಮಹಿಳೆಯರು ಸಾಗಿದರು. ಜೀವ ನದಿಯಾದ ಕೃಷ್ಣೆ ತಮ್ಮೆಲ್ಲರನ್ನು ಕಾಪಾಡಲಿ ಎಂದು ಬೇಡಿಕೊಂಡರು.<br /> <br /> ಕೃಷ್ಣಾ ನದಿಯಲ್ಲಿ ರೈತರ ಪರವಾಗಿ ಬಿಲ್ಕೆರೂರಿನ ಸಿದ್ಧಲಿಂಗ ಸ್ವಾಮೀಜಿ ಪೂಜೆ ಸಲ್ಲಿಸಿದರು. <br /> <br /> ರೈತ ಸಂಘದ ರಾಜ್ಯ ಘಟಕದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ದಂಪತಿ, ರೈತ ಮುಖಂಡ ಬಸವರಾಜ ಕುಂಬಾರ ದಂಪತಿ, ಜಿಪಂ ಸದಸ್ಯ ಶಿವಾ ನಂದ ಅವಟಿ ಸೇರಿದಂತೆ ಮೊದಲಾದ ಗಣ್ಯರು ಕೃಷ್ಣೆಗೆ ಬಾಗಿನ ಅರ್ಪಿಸಿದರು. ಅಲ್ಲಿದ್ದ 108 ಕುಂಬಗಳಿಗೆ ಗಂಗಾಪೂಜೆ ಸಲ್ಲಿಸಲಾಯಿತು.<br /> <br /> ಕಾಶೀನಕುಂಟಿ, ಯಲಗೂರ, ನಿಡಗುಂದಿ, ಬೇನಾಳ, ವಡವಡಗಿ, ಯಲ್ಲಮ್ಮನ ಬೂದಿಹಾಳ, ಕಾಳಗಿ, ಹುಲ್ಲೂರು ಮೊದಲಾದ ಗ್ರಾಮಗಳ ನೂರಾರು ರೈತರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>