<p><strong>ಔರಾದ್: </strong>ಮಾಜಿ ಸಚಿವ ಬಂಡೆಪ್ಪ ಕಾಶೆಂಪುರ ಬುಧವಾರ ಕಾಶೆಂಪುರ (ಬಿ) ಗ್ರಾಮಕ್ಕೆ ಭೇಟಿ ನೀಡಿದರು.<br /> <br /> ಮೂಲ ಸೌಲಭ್ಯಕ್ಕೆ ಆಗ್ರಹಿಸಿ ಗ್ರಾಮಸ್ಥರು ಈಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಮತದಾನದಿಂದ ದೂರ ಉಳಿದಿದ್ದರು. ಅಂತಹ ಗ್ರಾಮಗಳಿಗೆ ಭೇಟಿ ನೀಡಿ ಅವರ ಸಮಸ್ಯೆ ಏನು ಎಂಬುದನ್ನು ಕಲೆ ಹಾಕುತ್ತಿದ್ದು, ಗ್ರಾಮಕ್ಕೆ ಇಲ್ಲಿಯವರೆಗೆ ರಸ್ತೆ ಸೌಲಭ್ಯ ದಕ್ಕದಿರುವುದು ವಿಷಾದ. ಈ ಕ್ಷೇತ್ರ ಪ್ರತಿನಿಧಿಸುವ ಶಾಸಕ ಪ್ರಭು ಚವಾಣ್ ಜೊತೆ ಸಮಾಲೋಚಿಸಿ ಸಮಸ್ಯೆಗೆ ಪರಿಹಾರ ಹುಡುಕುವುದಾಗಿ ಗ್ರಾಮಸ್ಥರಿಗೆ ಭರವಸೆ ನೀಡಿದರು.<br /> <br /> ಮೂರು ವರ್ಷದ ಹಿಂದೆ ಶಾಸಕ ಚವಾಣ್ ರಸ್ತೆ ಅಭಿವೃದ್ಧಿಗೆ ₨25 ಲಕ್ಷ ಅನುದಾನ ಇಟ್ಟಿದ್ದರು. ಆದರೆ ಯಾರೋ ಒಬ್ಬರು ಆಕ್ಷೇಪ ಎತ್ತಿದ್ದಾರೆ ಎಂದು ನೆಪಹೇಳಿ ಹಣ ಕಬಳಿಕೆಯಾಗಿದೆ.<br /> <br /> 20 ವರ್ಷಗಳಿಂದ ರಸ್ತೆ ಮಾಡಿಸುವುದಾಗಿ ಹಲವರು ಹೇಳಿದರೂ ಸಮಸ್ಯೆ ಬಗೆಹರಿದಿಲ್ಲ ಎಂದು ಗ್ರಾಮಸ್ಥರು ಮಾಜಿ ಸಚಿವರ ಎದುರು </p>.<p>ದೂರಿದರು.<br /> <br /> ರಸ್ತೆ ಕಾಮಗಾರಿ ನನೆಗುದಿಗೆ ಬೀಳಲು ಕಾರಣ ಹಾಗೂ ಪರಿಹಾರ ಸಂಬಂಧ ಜಿಲ್ಲಾಧಿಕಾರಿ ಜೊತೆ ಚರ್ಚಿಸುವುದಾಗಿ ಕಾಶೆಂಪುರ ಹೇಳಿದರು.<br /> <br /> ಜಿಲ್ಲಾ ಪಂಚಾಯಿತಿ ಸದಸ್ಯ ವಸಂತ ಬಿರಾದಾರ, ಶಿವರಾಜ, ರಾಮಶೆಟ್ಟಿ ಪಾಟೀಲ, ಮಾದರಾವ ಪಾಟೀಲ, ಅಂಕುಶ ಮುಳೆ, ಗುಂಡಪ್ಪ ಬಿರಾದಾರ ಇದ್ದರು.<br /> <br /> ‘ಮತದಾನ ಬಹಿಷ್ಕರಿಸಿದರೂ ಸಿಗದ ಸ್ಪಂದನೆ’ ಎಂಬ ಶೀರ್ಷಿಕೆಯಡಿ ‘ಪ್ರಜಾವಾಣಿ’ ಮಂಗಳವಾರ ವರದಿ ಪ್ರಕಟಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಔರಾದ್: </strong>ಮಾಜಿ ಸಚಿವ ಬಂಡೆಪ್ಪ ಕಾಶೆಂಪುರ ಬುಧವಾರ ಕಾಶೆಂಪುರ (ಬಿ) ಗ್ರಾಮಕ್ಕೆ ಭೇಟಿ ನೀಡಿದರು.<br /> <br /> ಮೂಲ ಸೌಲಭ್ಯಕ್ಕೆ ಆಗ್ರಹಿಸಿ ಗ್ರಾಮಸ್ಥರು ಈಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಮತದಾನದಿಂದ ದೂರ ಉಳಿದಿದ್ದರು. ಅಂತಹ ಗ್ರಾಮಗಳಿಗೆ ಭೇಟಿ ನೀಡಿ ಅವರ ಸಮಸ್ಯೆ ಏನು ಎಂಬುದನ್ನು ಕಲೆ ಹಾಕುತ್ತಿದ್ದು, ಗ್ರಾಮಕ್ಕೆ ಇಲ್ಲಿಯವರೆಗೆ ರಸ್ತೆ ಸೌಲಭ್ಯ ದಕ್ಕದಿರುವುದು ವಿಷಾದ. ಈ ಕ್ಷೇತ್ರ ಪ್ರತಿನಿಧಿಸುವ ಶಾಸಕ ಪ್ರಭು ಚವಾಣ್ ಜೊತೆ ಸಮಾಲೋಚಿಸಿ ಸಮಸ್ಯೆಗೆ ಪರಿಹಾರ ಹುಡುಕುವುದಾಗಿ ಗ್ರಾಮಸ್ಥರಿಗೆ ಭರವಸೆ ನೀಡಿದರು.<br /> <br /> ಮೂರು ವರ್ಷದ ಹಿಂದೆ ಶಾಸಕ ಚವಾಣ್ ರಸ್ತೆ ಅಭಿವೃದ್ಧಿಗೆ ₨25 ಲಕ್ಷ ಅನುದಾನ ಇಟ್ಟಿದ್ದರು. ಆದರೆ ಯಾರೋ ಒಬ್ಬರು ಆಕ್ಷೇಪ ಎತ್ತಿದ್ದಾರೆ ಎಂದು ನೆಪಹೇಳಿ ಹಣ ಕಬಳಿಕೆಯಾಗಿದೆ.<br /> <br /> 20 ವರ್ಷಗಳಿಂದ ರಸ್ತೆ ಮಾಡಿಸುವುದಾಗಿ ಹಲವರು ಹೇಳಿದರೂ ಸಮಸ್ಯೆ ಬಗೆಹರಿದಿಲ್ಲ ಎಂದು ಗ್ರಾಮಸ್ಥರು ಮಾಜಿ ಸಚಿವರ ಎದುರು </p>.<p>ದೂರಿದರು.<br /> <br /> ರಸ್ತೆ ಕಾಮಗಾರಿ ನನೆಗುದಿಗೆ ಬೀಳಲು ಕಾರಣ ಹಾಗೂ ಪರಿಹಾರ ಸಂಬಂಧ ಜಿಲ್ಲಾಧಿಕಾರಿ ಜೊತೆ ಚರ್ಚಿಸುವುದಾಗಿ ಕಾಶೆಂಪುರ ಹೇಳಿದರು.<br /> <br /> ಜಿಲ್ಲಾ ಪಂಚಾಯಿತಿ ಸದಸ್ಯ ವಸಂತ ಬಿರಾದಾರ, ಶಿವರಾಜ, ರಾಮಶೆಟ್ಟಿ ಪಾಟೀಲ, ಮಾದರಾವ ಪಾಟೀಲ, ಅಂಕುಶ ಮುಳೆ, ಗುಂಡಪ್ಪ ಬಿರಾದಾರ ಇದ್ದರು.<br /> <br /> ‘ಮತದಾನ ಬಹಿಷ್ಕರಿಸಿದರೂ ಸಿಗದ ಸ್ಪಂದನೆ’ ಎಂಬ ಶೀರ್ಷಿಕೆಯಡಿ ‘ಪ್ರಜಾವಾಣಿ’ ಮಂಗಳವಾರ ವರದಿ ಪ್ರಕಟಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>