<p><strong>ಕೊಪ್ಪಳ: </strong>ಮತದಾನ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಮತದಾರರ ಜಾಗೃತಿ ಅಭಿಯಾನವನ್ನು ಮಾರ್ಚ್ 21ರಿಂದ ಹಮ್ಮಿಕೊಳ್ಳಲಾಗಿದ್ದು. ಅಂದು ಸಂಜೆ 7ಕ್ಕೆ ಸಾಹಿತ್ಯ ಭವನದ ಮುಂಭಾಗ ಮೋಂಬತ್ತಿ ಬೆಳಗುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಪಿ. ಮೋಹನರಾಜ್ ಗುರುವಾರ ತಿಳಿಸಿದರು.<br /> <br /> ಮತದಾರರ ಜಾಗೃತಿ ಸಂಬಂಧಿಸಿ ಪ್ರಚಾರ ಪತ್ರಗಳನ್ನು ಬಿಡುಗಡೆಗೊಳಿಸಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮತದಾರರಿಗೆ ವ್ಯವಸ್ಥಿತ ಶಿಕ್ಷಣ, ಸಹಭಾಗಿತ್ವ ಮತ್ತು ಮತದಾನದಲ್ಲಿ ಪಾಲ್ಗೊಳ್ಳುವಿಕೆ ಕಾರ್ಯಕ್ರಮದಡಿ ಮತದಾರರನ್ನು ಮತದಾನಕ್ಕೆ ಉತ್ತೇಜನಗೊಳಿಸುವುದು, ಎಲ್ಲ ಮತದಾರರು ಕಡ್ಡಾಯವಾಗಿ ಮತದಾನ ಮಾಡುವಂತೆ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.<br /> <br /> ವಿವಿಧ ವಿದ್ಯಾರ್ಥಿ ನಿಲಯಗಳ ವಿದ್ಯಾರ್ಥಿಗಳು, ಅಧಿಕಾರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.</p>.<p><br /> ಜಿಲ್ಲೆಯಲ್ಲಿ 9,56,766 ಮತದಾರರು ಇದ್ದಾರೆ. ಹೊಸದಾಗಿ ಸೇರ್ಪಡೆಗೆ 17,623 ಅರ್ಜಿಗಳು ಬಂದಿವೆ. ಎಲ್ಲವನ್ನೂ ಒಂದೆರಡು ದಿನಗಳಲ್ಲಿ ವಿಲೇವಾರಿ ಮಾಡಲಾಗುವುದು ಎಂದು ಹೇಳಿದರು.<br /> <br /> 15 ಸ್ಥಿರ ನಿಗಾ ತಂಡದವರು ಚೆಕ್ಪೋಸ್ಟ್ಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ನಡೆಸುತ್ತಿದ್ದಾರೆ. ಇದುವರೆಗೆ ₨ 11.50 ಲಕ್ಷ ಹಣ ಸಿಕ್ಕಿದೆ. ಹೈ–ಕ ಭಾಗದಲ್ಲಿ ಇದುರೆಗೆ ಪತ್ತೆಯಾದ ದೊಡ್ಡ ಮೊತ್ತ ಎಂದು ಅವರು ವಿವರಿಸಿದರು. ಚೆಕ್ ಪೋಸ್ಟ್ಗಳಲ್ಲಿ ಇದುವರೆಗೆ ಅಬಕಾರಿ ಇಲಾಖೆಯವರು 16, ಪೊಲೀಸರು 1 ಪ್ರಕರಣವನ್ನು ದಾಖಲಿಸಿದ್ದಾರೆ ಎಂದು ಅವರು ನುಡಿದರು.<br /> <br /> <strong>ಸಾಮೂಹಿಕ ವಿವಾಹ ನಿಷೇಧ: </strong>ನೀತಿ ಸಂಹಿತೆ ಜಾರಿಯಲ್ಲಿರುವವರೆಗೆ ಯಾವುದೇ ಸಾಮೂಹಿಕ ವಿವಾಹಕ್ಕೆ ಅನುಮತಿ ನೀಡುವುದಿಲ್ಲ. ಎಲ್ಲ ಅಧಿಕಾರಿಗಳಿಗೆ ಈ ಬಗ್ಗೆ ಸೂಚನೆ ನೀಡಲಾಗಿದೆ ಎಂದು ಅವರು ವಿವರಿಸಿದರು.<br /> <br /> ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರೋಹಿಣಿ ಸೆಪಟ್, ಚುನಾವಣಾ ವೆಚ್ಚದ ವೀಕ್ಷಕ ಮೈಕೆಲ್ ಜೆರಾಲ್ಡ್, ಜಿ.ಪಂ. ಸಿಇಒ ಕೃಷ್ಣ ಡಿ. ಉದುಪುಡಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ: </strong>ಮತದಾನ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಮತದಾರರ ಜಾಗೃತಿ ಅಭಿಯಾನವನ್ನು ಮಾರ್ಚ್ 21ರಿಂದ ಹಮ್ಮಿಕೊಳ್ಳಲಾಗಿದ್ದು. ಅಂದು ಸಂಜೆ 7ಕ್ಕೆ ಸಾಹಿತ್ಯ ಭವನದ ಮುಂಭಾಗ ಮೋಂಬತ್ತಿ ಬೆಳಗುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಪಿ. ಮೋಹನರಾಜ್ ಗುರುವಾರ ತಿಳಿಸಿದರು.<br /> <br /> ಮತದಾರರ ಜಾಗೃತಿ ಸಂಬಂಧಿಸಿ ಪ್ರಚಾರ ಪತ್ರಗಳನ್ನು ಬಿಡುಗಡೆಗೊಳಿಸಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮತದಾರರಿಗೆ ವ್ಯವಸ್ಥಿತ ಶಿಕ್ಷಣ, ಸಹಭಾಗಿತ್ವ ಮತ್ತು ಮತದಾನದಲ್ಲಿ ಪಾಲ್ಗೊಳ್ಳುವಿಕೆ ಕಾರ್ಯಕ್ರಮದಡಿ ಮತದಾರರನ್ನು ಮತದಾನಕ್ಕೆ ಉತ್ತೇಜನಗೊಳಿಸುವುದು, ಎಲ್ಲ ಮತದಾರರು ಕಡ್ಡಾಯವಾಗಿ ಮತದಾನ ಮಾಡುವಂತೆ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.<br /> <br /> ವಿವಿಧ ವಿದ್ಯಾರ್ಥಿ ನಿಲಯಗಳ ವಿದ್ಯಾರ್ಥಿಗಳು, ಅಧಿಕಾರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.</p>.<p><br /> ಜಿಲ್ಲೆಯಲ್ಲಿ 9,56,766 ಮತದಾರರು ಇದ್ದಾರೆ. ಹೊಸದಾಗಿ ಸೇರ್ಪಡೆಗೆ 17,623 ಅರ್ಜಿಗಳು ಬಂದಿವೆ. ಎಲ್ಲವನ್ನೂ ಒಂದೆರಡು ದಿನಗಳಲ್ಲಿ ವಿಲೇವಾರಿ ಮಾಡಲಾಗುವುದು ಎಂದು ಹೇಳಿದರು.<br /> <br /> 15 ಸ್ಥಿರ ನಿಗಾ ತಂಡದವರು ಚೆಕ್ಪೋಸ್ಟ್ಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ನಡೆಸುತ್ತಿದ್ದಾರೆ. ಇದುವರೆಗೆ ₨ 11.50 ಲಕ್ಷ ಹಣ ಸಿಕ್ಕಿದೆ. ಹೈ–ಕ ಭಾಗದಲ್ಲಿ ಇದುರೆಗೆ ಪತ್ತೆಯಾದ ದೊಡ್ಡ ಮೊತ್ತ ಎಂದು ಅವರು ವಿವರಿಸಿದರು. ಚೆಕ್ ಪೋಸ್ಟ್ಗಳಲ್ಲಿ ಇದುವರೆಗೆ ಅಬಕಾರಿ ಇಲಾಖೆಯವರು 16, ಪೊಲೀಸರು 1 ಪ್ರಕರಣವನ್ನು ದಾಖಲಿಸಿದ್ದಾರೆ ಎಂದು ಅವರು ನುಡಿದರು.<br /> <br /> <strong>ಸಾಮೂಹಿಕ ವಿವಾಹ ನಿಷೇಧ: </strong>ನೀತಿ ಸಂಹಿತೆ ಜಾರಿಯಲ್ಲಿರುವವರೆಗೆ ಯಾವುದೇ ಸಾಮೂಹಿಕ ವಿವಾಹಕ್ಕೆ ಅನುಮತಿ ನೀಡುವುದಿಲ್ಲ. ಎಲ್ಲ ಅಧಿಕಾರಿಗಳಿಗೆ ಈ ಬಗ್ಗೆ ಸೂಚನೆ ನೀಡಲಾಗಿದೆ ಎಂದು ಅವರು ವಿವರಿಸಿದರು.<br /> <br /> ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರೋಹಿಣಿ ಸೆಪಟ್, ಚುನಾವಣಾ ವೆಚ್ಚದ ವೀಕ್ಷಕ ಮೈಕೆಲ್ ಜೆರಾಲ್ಡ್, ಜಿ.ಪಂ. ಸಿಇಒ ಕೃಷ್ಣ ಡಿ. ಉದುಪುಡಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>