<p><strong>ಹಾಸನ: </strong>ಲೋಕಸಭಾ ಚುನಾವಣೆಗಾಗಿತಂದು ಇಲ್ಲಿಯ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಇಟ್ಟಿರುವ ಮತಯಂತ್ರಗಳ ಮೊದಲ ಹಂತದ ತಾಂತ್ರಿಕ ಪರಿಶೀಲನೆ ಜಿಲ್ಲಾ ಚುನಾವಣಾ ಅಧಿಕಾರಿ ಅನ್ಬುಕುಮಾರ್ ಸಮ್ಮುಖದಲ್ಲಿ ಭಾನುವಾರ ನಡೆಯಿತು.<br /> <br /> ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಸಂಸ್ಥೆಯ ತಂತ್ರಜ್ಞರು ಮತಯಂತ್ರಗಳ ತಪಾಸಣೆ ನಡೆಸಿದರು. ಬಿಇಎಲ್ ನ ಆರು ಮಂದಿ ತಾಂತ್ರಿಕ ಪರಿಣತರು ಪರಿಶೀಲನೆ ನಡೆಸುತ್ತಿದ್ದು, ಎಲ್ಲಾ ಮತಯಂತ್ರಗಳು ಸಮರ್ಪಕವಾಗಿದೆಯೇ ಎಂಬುದನ್ನು ಪರೀಕ್ಷೆಗಳ ಮೂಲಕ ಖಾತರಿಪಡಿಸಿಕೊಳ್ಳಲಾಯಿತು.<br /> <br /> ಈ ತಂಡವು ಹಾಸನ ಲೋಕಸಭಾ ಚುನಾವಣೆಯಲ್ಲಿ ಬಳಸುವ 2,780 ಬ್ಯಾಲೆಟ್ ಯೂನಿಟ್ ಮತ್ತು 2,180 ಕಂಟ್ರೋಲ್ ಯೂನಿಟ್ಗಳನ್ನು ಪರಿಶೀಲಿಸಲಿದ್ದು, ಮುಂದಿನ ಒಂದು ವಾರ ಈ ಪ್ರಕ್ರಿಯೆ ನಡೆಯಲಿದೆ. ಅಣಕು ಮತದಾನ ಮಾಡಿ ಯಂತ್ರಗಳು ಸರಿ ಇವೆಯೇ ಎಂದು ಪರಿಶೀಲಿಸಿ ನಂತರ ಸಂಪೂರ್ಣವಾಗಿ ಹೊಸದಾಗಿ ಮತದಾನ ಪ್ರಕ್ರಿಯೆಗೆ ಸಿದ್ಧಪಡಿಸಿ ಇಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಅನ್ಬುಕುಮಾರ್ ಮಾಹಿತಿ ನೀಡಿದರು.<br /> <br /> <strong>ಹೆಚ್ಚವರಿ ಜಿಲ್ಲಾಧಿಕಾರಿ</strong><br /> ಡಾ. ಎಚ್.ಎನ್. ಗೊಪಾಲಕೃಷ್ಣ, ತಹಶೀಲ್ದಾರ್ ಮಂಜುನಾಥ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಪಲ್ಲವಿ, ಹಾಸನ ತಾಲ್ಲೂಕು ತಹಶೀಲ್ದಾರ್ ಮಂಜುನಾಥ್ ಹಾಗೂ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ: </strong>ಲೋಕಸಭಾ ಚುನಾವಣೆಗಾಗಿತಂದು ಇಲ್ಲಿಯ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಇಟ್ಟಿರುವ ಮತಯಂತ್ರಗಳ ಮೊದಲ ಹಂತದ ತಾಂತ್ರಿಕ ಪರಿಶೀಲನೆ ಜಿಲ್ಲಾ ಚುನಾವಣಾ ಅಧಿಕಾರಿ ಅನ್ಬುಕುಮಾರ್ ಸಮ್ಮುಖದಲ್ಲಿ ಭಾನುವಾರ ನಡೆಯಿತು.<br /> <br /> ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಸಂಸ್ಥೆಯ ತಂತ್ರಜ್ಞರು ಮತಯಂತ್ರಗಳ ತಪಾಸಣೆ ನಡೆಸಿದರು. ಬಿಇಎಲ್ ನ ಆರು ಮಂದಿ ತಾಂತ್ರಿಕ ಪರಿಣತರು ಪರಿಶೀಲನೆ ನಡೆಸುತ್ತಿದ್ದು, ಎಲ್ಲಾ ಮತಯಂತ್ರಗಳು ಸಮರ್ಪಕವಾಗಿದೆಯೇ ಎಂಬುದನ್ನು ಪರೀಕ್ಷೆಗಳ ಮೂಲಕ ಖಾತರಿಪಡಿಸಿಕೊಳ್ಳಲಾಯಿತು.<br /> <br /> ಈ ತಂಡವು ಹಾಸನ ಲೋಕಸಭಾ ಚುನಾವಣೆಯಲ್ಲಿ ಬಳಸುವ 2,780 ಬ್ಯಾಲೆಟ್ ಯೂನಿಟ್ ಮತ್ತು 2,180 ಕಂಟ್ರೋಲ್ ಯೂನಿಟ್ಗಳನ್ನು ಪರಿಶೀಲಿಸಲಿದ್ದು, ಮುಂದಿನ ಒಂದು ವಾರ ಈ ಪ್ರಕ್ರಿಯೆ ನಡೆಯಲಿದೆ. ಅಣಕು ಮತದಾನ ಮಾಡಿ ಯಂತ್ರಗಳು ಸರಿ ಇವೆಯೇ ಎಂದು ಪರಿಶೀಲಿಸಿ ನಂತರ ಸಂಪೂರ್ಣವಾಗಿ ಹೊಸದಾಗಿ ಮತದಾನ ಪ್ರಕ್ರಿಯೆಗೆ ಸಿದ್ಧಪಡಿಸಿ ಇಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಅನ್ಬುಕುಮಾರ್ ಮಾಹಿತಿ ನೀಡಿದರು.<br /> <br /> <strong>ಹೆಚ್ಚವರಿ ಜಿಲ್ಲಾಧಿಕಾರಿ</strong><br /> ಡಾ. ಎಚ್.ಎನ್. ಗೊಪಾಲಕೃಷ್ಣ, ತಹಶೀಲ್ದಾರ್ ಮಂಜುನಾಥ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಪಲ್ಲವಿ, ಹಾಸನ ತಾಲ್ಲೂಕು ತಹಶೀಲ್ದಾರ್ ಮಂಜುನಾಥ್ ಹಾಗೂ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>