<p><strong>ದಾವಣಗೆರೆ:</strong> `ವಿದೇಶಿ ಮಹಿಳೆ ಸೋನಿಯಾ ಗಾಂಧಿ ನೇತೃತ್ವದ ರಾಷ್ಟ್ರೀಯ ಸಲಹಾ ಮಂಡಳಿ (ನ್ಯಾಕ್) ಸಮಿತಿ ರಚಿಸಿರುವ `ಮತೀಯ ಹಿಂಸಾಚಾರ ತಡೆ ಕಾಯ್ದೆ-2011~ರ ವಿರುದ್ಧ ಮಹಿಳೆಯರು ಸಂಘಟಿತರಾಗಿ ಹೋರಾಡಬೇಕು~ ಎಂದು ಬಿಜೆಪಿ ಮಹಿಳಾ ಮೋರ್ಚಾದ ರಾಷ್ಟ್ರೀಯ ಕಾರ್ಯದರ್ಶಿ ವಿಕ್ಟೋರಿಯಾ ಗೌರಿ ಕರೆ ನೀಡಿದರು.<br /> <br /> ನಗರದ ಪಾರ್ವತಮ್ಮ ಶಾಮನೂರು ಶಿವಶಂಕರಪ್ಪ ಕಲ್ಯಾಣ ಮಂಟಪದಲ್ಲಿ ಭಾನುವಾರ ನಡೆದ ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದ ಕಾರ್ಯಕಾರಿಣಿ ಸಭೆಯ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.<br /> `ಭಾರತದ ಸಂಸ್ಕೃತಿಯ ಗಂಧ-ಗಾಳಿ ಇಲ್ಲದ, ಇಟಲಿಯ ಸೋನಿಯಾ ಗಾಂಧಿ ನೇತೃತ್ವದ ಸಮಿತಿ ಕೋಮು ಗಲಭೆ ತಡೆಗಟ್ಟಲು `ಮತೀಯ ಹಿಂಸಾಚಾರ ತಡೆ ಕಾಯ್ದೆ~ ರಚಿಸಿದೆ. <br /> <br /> ಇದನ್ನು ದೇಶದ ಆರು ರಾಜ್ಯದ ಮುಖ್ಯಮಂತ್ರಿಗಳು ವಿರೋಧಿಸಿದ್ದಾರೆ. ಈ ಕಾಯ್ದೆಯೇನಾದರೂ ಜಾರಿಗೆ ಬಂದಲ್ಲಿ ಇಡೀ ದೇಶವೇ ಇಬ್ಭಾಗವಾಗುವ ಸಾಧ್ಯತೆ ಇದೆ~ ಎಂದು ಅವರು ಪ್ರತಿಪಾದಿಸಿದರು. ಸಚಿವ ಎಸ್.ಎ. ರವೀಂದ್ರನಾಥ್ ಉದ್ಘಾಟಿಸಿದರು. ಮೋರ್ಚಾದ ರಾಷ್ಟ್ರೀಯ ಉಪಾಧ್ಯಕ್ಷೆ ಪೂರ್ಣಿಮಾ ಪ್ರಕಾಶ್, ಸದಸ್ಯೆ ಮಧುಶ್ರೀ, ರಾಜ್ಯ ಘಟಕದ ಅಧ್ಯಕ್ಷೆ ರೀನಾ ಪ್ರಕಾಶ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> `ವಿದೇಶಿ ಮಹಿಳೆ ಸೋನಿಯಾ ಗಾಂಧಿ ನೇತೃತ್ವದ ರಾಷ್ಟ್ರೀಯ ಸಲಹಾ ಮಂಡಳಿ (ನ್ಯಾಕ್) ಸಮಿತಿ ರಚಿಸಿರುವ `ಮತೀಯ ಹಿಂಸಾಚಾರ ತಡೆ ಕಾಯ್ದೆ-2011~ರ ವಿರುದ್ಧ ಮಹಿಳೆಯರು ಸಂಘಟಿತರಾಗಿ ಹೋರಾಡಬೇಕು~ ಎಂದು ಬಿಜೆಪಿ ಮಹಿಳಾ ಮೋರ್ಚಾದ ರಾಷ್ಟ್ರೀಯ ಕಾರ್ಯದರ್ಶಿ ವಿಕ್ಟೋರಿಯಾ ಗೌರಿ ಕರೆ ನೀಡಿದರು.<br /> <br /> ನಗರದ ಪಾರ್ವತಮ್ಮ ಶಾಮನೂರು ಶಿವಶಂಕರಪ್ಪ ಕಲ್ಯಾಣ ಮಂಟಪದಲ್ಲಿ ಭಾನುವಾರ ನಡೆದ ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದ ಕಾರ್ಯಕಾರಿಣಿ ಸಭೆಯ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.<br /> `ಭಾರತದ ಸಂಸ್ಕೃತಿಯ ಗಂಧ-ಗಾಳಿ ಇಲ್ಲದ, ಇಟಲಿಯ ಸೋನಿಯಾ ಗಾಂಧಿ ನೇತೃತ್ವದ ಸಮಿತಿ ಕೋಮು ಗಲಭೆ ತಡೆಗಟ್ಟಲು `ಮತೀಯ ಹಿಂಸಾಚಾರ ತಡೆ ಕಾಯ್ದೆ~ ರಚಿಸಿದೆ. <br /> <br /> ಇದನ್ನು ದೇಶದ ಆರು ರಾಜ್ಯದ ಮುಖ್ಯಮಂತ್ರಿಗಳು ವಿರೋಧಿಸಿದ್ದಾರೆ. ಈ ಕಾಯ್ದೆಯೇನಾದರೂ ಜಾರಿಗೆ ಬಂದಲ್ಲಿ ಇಡೀ ದೇಶವೇ ಇಬ್ಭಾಗವಾಗುವ ಸಾಧ್ಯತೆ ಇದೆ~ ಎಂದು ಅವರು ಪ್ರತಿಪಾದಿಸಿದರು. ಸಚಿವ ಎಸ್.ಎ. ರವೀಂದ್ರನಾಥ್ ಉದ್ಘಾಟಿಸಿದರು. ಮೋರ್ಚಾದ ರಾಷ್ಟ್ರೀಯ ಉಪಾಧ್ಯಕ್ಷೆ ಪೂರ್ಣಿಮಾ ಪ್ರಕಾಶ್, ಸದಸ್ಯೆ ಮಧುಶ್ರೀ, ರಾಜ್ಯ ಘಟಕದ ಅಧ್ಯಕ್ಷೆ ರೀನಾ ಪ್ರಕಾಶ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>