<p><strong>ಬೆಂಗಳೂರು:</strong> ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಶುಕ್ರವಾರ ಬಿರಸುಗೊಂಡಿದೆ. ಕೊಡಗಿನಲ್ಲಿ ಮನೆ ಮೇಲೆ ಮರ ಬಿದ್ದು ನಾಲ್ವರು ಗಾಯಗೊಂಡಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಕಡಲ್ಕೊರೆತ ತೀವ್ರಗೊಂಡಿದೆ.<br /> <br /> ಉಡುಪಿ ಸಮೀಪದ ಪಡುಬಿದ್ರಿಯ ತೆಂಕ ಎರ್ಮಾಳಿನಲ್ಲಿ ಮತ್ತೆ ಕಡಲು ಅಬ್ಬರಿಸಿದ್ದು, ತೆಂಗಿನ ಮರಗಳು ಬುಡ ಸಮೇತ ಸಮುದ್ರಕ್ಕೆ ಉರುಳಿ ಬಿದ್ದಿವೆ. ಗೂಡಂಗಡಿಯೊಂದು ಸಮುದ್ರ ಪಾಲಾಗಿದೆ. ಮೀನುಗಾರಿಕಾ ರಸ್ತೆ ಹಾನಿಗೊಳ್ಳುವ ಆತಂಕ ಇದೆ.</p>.<p>ಪಕ್ಕದ ತೊಟ್ಟಂ ಗ್ರಾಮದ ಸಂಪರ್ಕ ರಸ್ತೆ ಈಗಾಗಲೇ ಹಾಳಾಗಿದೆ. ಕಡಲ್ಕೊರೆತದ ತೀವ್ರತೆ ಹೆಚ್ಚಾಗಿದ್ದು ತಡೆಗೋಡೆ ರೂಪದಲ್ಲಿ ಹಾಕುತ್ತಿರುವ ಕಲ್ಲುಗಳು ಅಲೆಗಳ ರಭಸವನ್ನು ತಾಳಿಕೊಳ್ಳದೇ ಕೊಚ್ಚಿಹೋಗುತ್ತಿವೆ.<br /> <br /> ಕುಕ್ಕೆ ಸುಬ್ರಹ್ಮಣ್ಯದಲ್ಲಿ ಬೆಳಿಗ್ಗೆಯೇ ಸುರಿಯಲಾರಂಭಿಸಿದ ಮಳೆ ನಿರಂತರವಾಗಿದ್ದು ಕುಮಾರಾಧಾರಾ ನದಿ ನೀರು ಅಪಾಯದ ಮಟ್ಟದಲ್ಲಿದೆ. ನದಿಯ ಸ್ನಾನಘಟ್ಟ ಈಗಾಗಲೇ ಮುಳುಗಿದೆ.<br /> <br /> ಮಂಗಳೂರಿನಲ್ಲಿ ಬೆಳಿಗ್ಗೆ ಬಿಸಿಲು ಮತ್ತು ಮೋಡದ ವಾತಾವರಣವಿದ್ದು, ಮಧ್ಯಾಹ್ನದ ನಂತರ ನಿರಂತರ ಮಳೆ ಸುರಿಯಿತು. ಸಂಜೆ ವೇಳೆಗೆ ಮಳೆಯ ತೀವ್ರತೆ ಮತ್ತಷ್ಟು ಹೆಚ್ಚಾಗಿದೆ. <br /> <br /> <strong>ಮಳೆವಿವರ (ಮಿ.ಮೀ.ಗಳಲ್ಲಿ ): </strong>ಮಂಗಳೂರು-49.2, ಬಂಟ್ವಾಳ-48.6, ಪುತ್ತೂರು 53.9, ಬೆಳ್ತಂಗಡಿ- 54.2, ಸುಳ್ಯ-50.4, ಕಡಬ- 64.4, ಮೂಡುಬಿದಿರೆ- 91.4.<br /> <br /> ಕೊಡಗು ಜಿಲ್ಲೆಯ ಹಲವು ಭಾಗಗಳಲ್ಲಿ ಶುಕ್ರವಾರವೂ ಉತ್ತಮ ಮಳೆ ಸುರಿದಿದೆ. ಮಡಿಕೇರಿ, ಸಂಪಾಜೆ, ಶಾಂತಳ್ಳಿ, ಕೊಡ್ಲಿಪೇಟೆ, ಶನಿವಾರಸಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಉತ್ತಮವಾಗಿ ಮಳೆಯಾಗಿದೆ. ದಿನವಿಡೀ ಬಿಟ್ಟು ಬಿಟ್ಟು ಮಳೆ ಬರುತ್ತಿತ್ತು. ಮಳೆಯ ರಭಸ ಏರಿಳಿಕೆಯಿಂದ ಕೂಡಿತ್ತು.<br /> <br /> ಮಡಿಕೇರಿಯಲ್ಲಿ ಬೆಳಿಗ್ಗೆ ಮಳೆಯ ಜತೆಗೆ ದಟ್ಟ ಮಂಜು ಕೂಡ ಆವರಿಸಿತ್ತು. ಭಾಗಮಂಡಲದ ತ್ರಿವೇಣಿ ಸಂಗಮ ಬಹುತೇಕ ಭರ್ತಿಯಾಗಿ ಹರಿಯುತ್ತಿದ್ದರೂ, ಸೇತುವೆಯ ಮೇಲೆ ನೀರು ಹರಿದಿಲ್ಲ. ಹೀಗಾಗಿ, ವಾಹನಗಳ ಸಂಚಾರ ಸಾಮಾನ್ಯವಾಗಿದೆ.<br /> <br /> <strong>ಐವರಿಗೆ ಗಾಯ:</strong> ಮಡಿಕೇರಿ ಸಮೀಪದ ಚೇರಳ-ಶ್ರೀಮಂಗಲ ಗ್ರಾಮದ ಮನೆಯೊಂದರ ಮೇಲೆ ಮರ ಬಿದ್ದು ನಾಲ್ವರಿಗೆ ಗಾಯಗಳಾಗಿವೆ. ಚಿಕಿತ್ಸೆಗಾಗಿ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲದೇ, ಮಡಿಕೇರಿಯ ಚೈನ್ಗೇಟ್ ಬಳಿ ಮನೆಯೊಂದರ ತಡೆಗೋಡೆ ಕುಸಿದಿದೆ.<br /> <br /> <strong>ಜಿಟಿ ಜಿಟಿ ಮಳೆ: </strong>ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ದಿನ ಪೂರ್ತಿ ಜಿಟಿಜಿಟಿ ಮಳೆಯಾಗಿದೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದಲ್ಲಿ ಭಾರಿ ಮಳೆ ಸುರಿಯುತ್ತಿದ್ದು ಚಿಕ್ಕೋಡಿ ತಾಲ್ಲೂಕಿನಲ್ಲಿ ವೇದಗಂಗಾ ನದಿಯಲ್ಲಿ ನೀರಿನ ಮಟ್ಟ ಹೆಚ್ಚಿದೆ. ಶುಕ್ರವಾರ ಬೆಳಿಗ್ಗೆ ಜತ್ರಾಟ- ಭೀವಶಿ ಸೇತುವೆ ಜಲಾವೃತವಾಗಿ ಜನರ ಓಡಾಟಕ್ಕೆ ತೊಂದರೆಯಾಗಿದೆ. ಕಳೆದ ವಾರ ಕೂಡ ಈ ಸೇತುವೆ ಜಲಾವೃತವಾಗಿತ್ತು.<br /> <br /> ಬೆಳಗಾವಿ ಜಿಲ್ಲೆಯ ನಿಪ್ಪಾಣಿ, ಬೈಲಹೊಂಗಲದಲ್ಲೂ ಭಾರಿ ಮಳೆಯಾಗಿದೆ. ಧಾರವಾಡ, ಗದಗ, ಹಾವೇರಿ, ವಿಜಾಪುರ, ಬಾಗಲಕೋಟೆ, ಉತ್ತರ ಕನ್ನಡ ಜಿಲ್ಲೆಗಳಲ್ಲೂ ಮಳೆಯಾಗಿದೆ.<br /> <br /> ಶಿವಮೊಗ್ಗ ಜಿಲ್ಲೆಯಲ್ಲಿ ಐದಾರು ದಿನಗಳಿಂದ ಕುಗ್ಗಿದ್ದ ಮಳೆ ಶುಕ್ರವಾರ ಚುರುಕುಗೊಂಡಿದೆ. ಶಿವಮೊಗ್ಗ ನಗರದಲ್ಲಿ ಮೋಡ ಕವಿದ ವಾತಾವರಣವಿದ್ದು, ಆಗಾಗ್ಗೆ ಜಿಟಿ-ಜಿಟಿ ಮಳೆಯಾಗುತ್ತಿದೆ.</p>.<p>ಪಶ್ಚಿಮಘಟ್ಟ ವ್ಯಾಪ್ತಿಯ ಆಗುಂಬೆ, ಹುಲಿಕಲ್ಲು, ಯಡೂರು, ಮಾಸ್ತಿಕಟ್ಟೆ, ನಗರ ಹಾಗೂ ಇತರ ಸ್ಥಳಗಳಲ್ಲಿ ಭಾರೀ ಮಳೆಯಾಗುತ್ತಿದೆ. ಲಿಂಗನಮಕ್ಕಿ, ಭದ್ರಾ, ತುಂಗಾ ಜಲಾಶಯಗಳಲ್ಲಿ ಒಳಹರಿವು ಏರಿಕೆ ಕಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಶುಕ್ರವಾರ ಬಿರಸುಗೊಂಡಿದೆ. ಕೊಡಗಿನಲ್ಲಿ ಮನೆ ಮೇಲೆ ಮರ ಬಿದ್ದು ನಾಲ್ವರು ಗಾಯಗೊಂಡಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಕಡಲ್ಕೊರೆತ ತೀವ್ರಗೊಂಡಿದೆ.<br /> <br /> ಉಡುಪಿ ಸಮೀಪದ ಪಡುಬಿದ್ರಿಯ ತೆಂಕ ಎರ್ಮಾಳಿನಲ್ಲಿ ಮತ್ತೆ ಕಡಲು ಅಬ್ಬರಿಸಿದ್ದು, ತೆಂಗಿನ ಮರಗಳು ಬುಡ ಸಮೇತ ಸಮುದ್ರಕ್ಕೆ ಉರುಳಿ ಬಿದ್ದಿವೆ. ಗೂಡಂಗಡಿಯೊಂದು ಸಮುದ್ರ ಪಾಲಾಗಿದೆ. ಮೀನುಗಾರಿಕಾ ರಸ್ತೆ ಹಾನಿಗೊಳ್ಳುವ ಆತಂಕ ಇದೆ.</p>.<p>ಪಕ್ಕದ ತೊಟ್ಟಂ ಗ್ರಾಮದ ಸಂಪರ್ಕ ರಸ್ತೆ ಈಗಾಗಲೇ ಹಾಳಾಗಿದೆ. ಕಡಲ್ಕೊರೆತದ ತೀವ್ರತೆ ಹೆಚ್ಚಾಗಿದ್ದು ತಡೆಗೋಡೆ ರೂಪದಲ್ಲಿ ಹಾಕುತ್ತಿರುವ ಕಲ್ಲುಗಳು ಅಲೆಗಳ ರಭಸವನ್ನು ತಾಳಿಕೊಳ್ಳದೇ ಕೊಚ್ಚಿಹೋಗುತ್ತಿವೆ.<br /> <br /> ಕುಕ್ಕೆ ಸುಬ್ರಹ್ಮಣ್ಯದಲ್ಲಿ ಬೆಳಿಗ್ಗೆಯೇ ಸುರಿಯಲಾರಂಭಿಸಿದ ಮಳೆ ನಿರಂತರವಾಗಿದ್ದು ಕುಮಾರಾಧಾರಾ ನದಿ ನೀರು ಅಪಾಯದ ಮಟ್ಟದಲ್ಲಿದೆ. ನದಿಯ ಸ್ನಾನಘಟ್ಟ ಈಗಾಗಲೇ ಮುಳುಗಿದೆ.<br /> <br /> ಮಂಗಳೂರಿನಲ್ಲಿ ಬೆಳಿಗ್ಗೆ ಬಿಸಿಲು ಮತ್ತು ಮೋಡದ ವಾತಾವರಣವಿದ್ದು, ಮಧ್ಯಾಹ್ನದ ನಂತರ ನಿರಂತರ ಮಳೆ ಸುರಿಯಿತು. ಸಂಜೆ ವೇಳೆಗೆ ಮಳೆಯ ತೀವ್ರತೆ ಮತ್ತಷ್ಟು ಹೆಚ್ಚಾಗಿದೆ. <br /> <br /> <strong>ಮಳೆವಿವರ (ಮಿ.ಮೀ.ಗಳಲ್ಲಿ ): </strong>ಮಂಗಳೂರು-49.2, ಬಂಟ್ವಾಳ-48.6, ಪುತ್ತೂರು 53.9, ಬೆಳ್ತಂಗಡಿ- 54.2, ಸುಳ್ಯ-50.4, ಕಡಬ- 64.4, ಮೂಡುಬಿದಿರೆ- 91.4.<br /> <br /> ಕೊಡಗು ಜಿಲ್ಲೆಯ ಹಲವು ಭಾಗಗಳಲ್ಲಿ ಶುಕ್ರವಾರವೂ ಉತ್ತಮ ಮಳೆ ಸುರಿದಿದೆ. ಮಡಿಕೇರಿ, ಸಂಪಾಜೆ, ಶಾಂತಳ್ಳಿ, ಕೊಡ್ಲಿಪೇಟೆ, ಶನಿವಾರಸಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಉತ್ತಮವಾಗಿ ಮಳೆಯಾಗಿದೆ. ದಿನವಿಡೀ ಬಿಟ್ಟು ಬಿಟ್ಟು ಮಳೆ ಬರುತ್ತಿತ್ತು. ಮಳೆಯ ರಭಸ ಏರಿಳಿಕೆಯಿಂದ ಕೂಡಿತ್ತು.<br /> <br /> ಮಡಿಕೇರಿಯಲ್ಲಿ ಬೆಳಿಗ್ಗೆ ಮಳೆಯ ಜತೆಗೆ ದಟ್ಟ ಮಂಜು ಕೂಡ ಆವರಿಸಿತ್ತು. ಭಾಗಮಂಡಲದ ತ್ರಿವೇಣಿ ಸಂಗಮ ಬಹುತೇಕ ಭರ್ತಿಯಾಗಿ ಹರಿಯುತ್ತಿದ್ದರೂ, ಸೇತುವೆಯ ಮೇಲೆ ನೀರು ಹರಿದಿಲ್ಲ. ಹೀಗಾಗಿ, ವಾಹನಗಳ ಸಂಚಾರ ಸಾಮಾನ್ಯವಾಗಿದೆ.<br /> <br /> <strong>ಐವರಿಗೆ ಗಾಯ:</strong> ಮಡಿಕೇರಿ ಸಮೀಪದ ಚೇರಳ-ಶ್ರೀಮಂಗಲ ಗ್ರಾಮದ ಮನೆಯೊಂದರ ಮೇಲೆ ಮರ ಬಿದ್ದು ನಾಲ್ವರಿಗೆ ಗಾಯಗಳಾಗಿವೆ. ಚಿಕಿತ್ಸೆಗಾಗಿ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲದೇ, ಮಡಿಕೇರಿಯ ಚೈನ್ಗೇಟ್ ಬಳಿ ಮನೆಯೊಂದರ ತಡೆಗೋಡೆ ಕುಸಿದಿದೆ.<br /> <br /> <strong>ಜಿಟಿ ಜಿಟಿ ಮಳೆ: </strong>ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ದಿನ ಪೂರ್ತಿ ಜಿಟಿಜಿಟಿ ಮಳೆಯಾಗಿದೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದಲ್ಲಿ ಭಾರಿ ಮಳೆ ಸುರಿಯುತ್ತಿದ್ದು ಚಿಕ್ಕೋಡಿ ತಾಲ್ಲೂಕಿನಲ್ಲಿ ವೇದಗಂಗಾ ನದಿಯಲ್ಲಿ ನೀರಿನ ಮಟ್ಟ ಹೆಚ್ಚಿದೆ. ಶುಕ್ರವಾರ ಬೆಳಿಗ್ಗೆ ಜತ್ರಾಟ- ಭೀವಶಿ ಸೇತುವೆ ಜಲಾವೃತವಾಗಿ ಜನರ ಓಡಾಟಕ್ಕೆ ತೊಂದರೆಯಾಗಿದೆ. ಕಳೆದ ವಾರ ಕೂಡ ಈ ಸೇತುವೆ ಜಲಾವೃತವಾಗಿತ್ತು.<br /> <br /> ಬೆಳಗಾವಿ ಜಿಲ್ಲೆಯ ನಿಪ್ಪಾಣಿ, ಬೈಲಹೊಂಗಲದಲ್ಲೂ ಭಾರಿ ಮಳೆಯಾಗಿದೆ. ಧಾರವಾಡ, ಗದಗ, ಹಾವೇರಿ, ವಿಜಾಪುರ, ಬಾಗಲಕೋಟೆ, ಉತ್ತರ ಕನ್ನಡ ಜಿಲ್ಲೆಗಳಲ್ಲೂ ಮಳೆಯಾಗಿದೆ.<br /> <br /> ಶಿವಮೊಗ್ಗ ಜಿಲ್ಲೆಯಲ್ಲಿ ಐದಾರು ದಿನಗಳಿಂದ ಕುಗ್ಗಿದ್ದ ಮಳೆ ಶುಕ್ರವಾರ ಚುರುಕುಗೊಂಡಿದೆ. ಶಿವಮೊಗ್ಗ ನಗರದಲ್ಲಿ ಮೋಡ ಕವಿದ ವಾತಾವರಣವಿದ್ದು, ಆಗಾಗ್ಗೆ ಜಿಟಿ-ಜಿಟಿ ಮಳೆಯಾಗುತ್ತಿದೆ.</p>.<p>ಪಶ್ಚಿಮಘಟ್ಟ ವ್ಯಾಪ್ತಿಯ ಆಗುಂಬೆ, ಹುಲಿಕಲ್ಲು, ಯಡೂರು, ಮಾಸ್ತಿಕಟ್ಟೆ, ನಗರ ಹಾಗೂ ಇತರ ಸ್ಥಳಗಳಲ್ಲಿ ಭಾರೀ ಮಳೆಯಾಗುತ್ತಿದೆ. ಲಿಂಗನಮಕ್ಕಿ, ಭದ್ರಾ, ತುಂಗಾ ಜಲಾಶಯಗಳಲ್ಲಿ ಒಳಹರಿವು ಏರಿಕೆ ಕಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>