ಮತ್ತೆ 13 ಮಂದಿಗೆ ದೃಷ್ಟಿ ನಷ್ಟ
ರಾಯಪುರ (ಐಎಎನ್ಎಸ್): ಛತ್ತೀಸ್ಗಢದಲ್ಲಿ ಕಳೆದ ತಿಂಗಳು ಸರ್ಕಾರಿ ಆರೋಗ್ಯ ಶಿಬಿರದಲ್ಲಿ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆಗೆ ಒಳಗಾದವರಲ್ಲಿ ಇನ್ನೂ 13 ಮಂದಿ ದೃಷ್ಟಿ ಕಳೆದುಕೊಂಡಿದ್ದಾರೆ. ಇದರೊಂದಿಗೆ ದೃಷ್ಟಿ ಕಳೆದುಕೊಂಡವರ ಸಂಖ್ಯೆ 24ಕ್ಕೆ ಏರಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.
`ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆಗೆ ಒಳಗಾದವರಲ್ಲಿ ಹೆಚ್ಚು ಮಂದಿಗೆ ಊತ ಮತ್ತು ಕಣ್ಣಿನಲ್ಲಿ ಕೀವು ಕಾಣಿಸಿಕೊಂಡಿದೆ ಎಂದು ವರದಿಗಳು ಬರುತ್ತಿವೆ.
ಜಿಲ್ಲಾಡಳಿತ ಅವರನ್ನು ಸಂಪರ್ಕಿಸಿ ಚಿಕಿತ್ಸೆ ನೀಡಲು ಪ್ರಯತ್ನ ನಡೆಸಿದೆ~ ಎಂದು ಅಲ್ಲಿ ನಿಯೋಜಿಸಲಾದ ವೈದ್ಯರೊಬ್ಬರು ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ. ಗುರುವಾರ 11 ಮಂದಿ ಹಿರಿಯರು ಇದೇ ಶಿಬಿರದಲ್ಲಿ ಶಸ್ತ್ರ ಚಿಕಿತ್ಸೆ ನಂತರ ದೃಷ್ಟಿ ಕಳೆದುಕೊಂಡಿದ್ದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.