<p><strong>ಕೊಪ್ಪಳ:</strong> ಕೊಪ್ಪಳ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಪ್ರಗತಿಪರ ಸಂಘಟನೆಗಳ ಒಕ್ಕೂಟವು ಸಾಹಿತಿ ವಿಠ್ಠಪ್ಪ ಗೋರಂಟ್ಲಿ ಅವರನ್ನು ಪಕ್ಷೇತರ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿವೆ.<br /> <br /> ನಗರದಲ್ಲಿ ಗುರುವಾರ ವಿಠ್ಠಪ್ಪ ಗೋರಂಟ್ಲಿ ನಾಮಪತ್ರ ಸಲ್ಲಿಸಿದ ನಂತರ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದರಲ್ಲದೇ ಚುನಾವಣಾ ಪ್ರಣಾಳಿಕೆಯನ್ನು ಸಹ ಬಿಡುಗಡೆ ಮಾಡಿದರು.<br /> <br /> ಚುನಾವಣೆ ಸಂದರ್ಭದಲ್ಲಿ ಮತದಾನ ನಡೆಯಬೇಕು. ಆದರೆ, ಇತ್ತೀಚಿನ ದಿನಗಳಲ್ಲಿ ಇದು ಮತ ಮಾರಾಟ ಎಂಬಂತಾಗಿದೆ. ಹಣ-ಹೆಂಡಕ್ಕೆ ತಮ್ಮ ಮತವನ್ನು ಮಾರಾಟ ಮಾಡುವುದು ಚುನಾವಣೆಗಳಲ್ಲಿ ಸಾಮಾನ್ಯ ಸಂಗತಿಯಾಗಿದೆ. ಇಂತಹ ಅನಿಷ್ಟ ಪದ್ಧತಿಗೆ ಕಡಿವಾಣ ಹಾಕಬೇಕು ಹಾಗೂ ಅತ್ಮಸಾಕ್ಷಿಗೆ ಅನುಗುಣವಾಗಿ ಮತದಾನದ ಹಕ್ಕು ಚಲಾಯಿಸಬೇಕು ಎಂಬುದನ್ನು ಪ್ರತಿಪಾದಿಸಲು ತಾವು ಕಣಕ್ಕಿಳಿಯಲು ಪ್ರಮುಖ ಕಾರಣ ಎಂದರು.<br /> <br /> ಅಲ್ಲದೇ, ಹಣ-ಹೆಂಡದ ಆಮಿಷಕ್ಕೆ ಬಲಿಯಾಗಿ ಮತ ಹಾಕುವವರು ನನಗೆ ಮತ ಚಲಾಯಿಸುವುದಿಲ್ಲ. ಕ್ಷೇತ್ರದ ಅಭಿವೃದ್ಧಿಯನ್ನು ದೃಷ್ಟಿಯಲ್ಲಿಟ್ಟುಕೊಂಡವರು ಮಾತ್ರ ನನಗೆ ಮತ ಹಾಕುತ್ತಾರೆ. ಈ ನಿಟ್ಟಿನಲ್ಲಿ ನಿಜ ಅರ್ಥದಲ್ಲಲಿ ಮತದಾನ ಮಾಡುವವರು ಎಷ್ಟು ಜನರಿದ್ದಾರೆ ಎಂಬುದನ್ನು ತಿಳಿಯವುದು ಸಹ ತಮ್ಮ ಉದ್ದೇಶ ಎಂದು ಹೇಳಿದರು.ಎರಡು ಬಾರಿ ಪಕ್ಷೇತರ ಅಭ್ಯರ್ಥಿಯನ್ನು ಗೆಲ್ಲಿಸಿರುವ ಈ ಕ್ಷೇತ್ರ ಜಾತಿ ಆಧಾರದ ಮೇಲೆ ಆಯ್ಕೆ ಮಾಡುವ ಸಂಪ್ರದಾಯದ ವಿರುದ್ಧವೂ ಜನಾದೇಶ ನೀಡಿದೆ.<br /> <br /> ಈ ಎಲ್ಲ ಹಿನ್ನೆಲೆಯಲ್ಲಿ ಮತದಾರರು ತಮಗೆ ಬೆಂಬಲಿಸುತ್ತಾರೆ ಎಂಬ ವಿಶ್ವಾಸ ಇದೆ ಎಂದೂ ಹೇಳಿದರು.ಒಕ್ಕೂಟದ ಮುಖಂಡ ಜೆ.ಭಾರದ್ವಾಜ್ ಮಾತನಾಡಿ, ವಿಠ್ಠಪ್ಪ ಗೋರಂಟ್ಲಿ ಅವರು 10 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.<br /> <br /> ಒಕ್ಕೂಟದ ಮುಖಂಡರಾದ ಮಹಾಂತೇಶ ಕೊತಬಾಳ, ತಿಪ್ಪೇಸ್ವಾಮಿ, ಕೆ.ಬಿ.ಗೋನಾಳ, ಶಾಂತಕುಮಾರಿ, ಬಸವರಾಜ ಶೀಲವಂತರ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ:</strong> ಕೊಪ್ಪಳ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಪ್ರಗತಿಪರ ಸಂಘಟನೆಗಳ ಒಕ್ಕೂಟವು ಸಾಹಿತಿ ವಿಠ್ಠಪ್ಪ ಗೋರಂಟ್ಲಿ ಅವರನ್ನು ಪಕ್ಷೇತರ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿವೆ.<br /> <br /> ನಗರದಲ್ಲಿ ಗುರುವಾರ ವಿಠ್ಠಪ್ಪ ಗೋರಂಟ್ಲಿ ನಾಮಪತ್ರ ಸಲ್ಲಿಸಿದ ನಂತರ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದರಲ್ಲದೇ ಚುನಾವಣಾ ಪ್ರಣಾಳಿಕೆಯನ್ನು ಸಹ ಬಿಡುಗಡೆ ಮಾಡಿದರು.<br /> <br /> ಚುನಾವಣೆ ಸಂದರ್ಭದಲ್ಲಿ ಮತದಾನ ನಡೆಯಬೇಕು. ಆದರೆ, ಇತ್ತೀಚಿನ ದಿನಗಳಲ್ಲಿ ಇದು ಮತ ಮಾರಾಟ ಎಂಬಂತಾಗಿದೆ. ಹಣ-ಹೆಂಡಕ್ಕೆ ತಮ್ಮ ಮತವನ್ನು ಮಾರಾಟ ಮಾಡುವುದು ಚುನಾವಣೆಗಳಲ್ಲಿ ಸಾಮಾನ್ಯ ಸಂಗತಿಯಾಗಿದೆ. ಇಂತಹ ಅನಿಷ್ಟ ಪದ್ಧತಿಗೆ ಕಡಿವಾಣ ಹಾಕಬೇಕು ಹಾಗೂ ಅತ್ಮಸಾಕ್ಷಿಗೆ ಅನುಗುಣವಾಗಿ ಮತದಾನದ ಹಕ್ಕು ಚಲಾಯಿಸಬೇಕು ಎಂಬುದನ್ನು ಪ್ರತಿಪಾದಿಸಲು ತಾವು ಕಣಕ್ಕಿಳಿಯಲು ಪ್ರಮುಖ ಕಾರಣ ಎಂದರು.<br /> <br /> ಅಲ್ಲದೇ, ಹಣ-ಹೆಂಡದ ಆಮಿಷಕ್ಕೆ ಬಲಿಯಾಗಿ ಮತ ಹಾಕುವವರು ನನಗೆ ಮತ ಚಲಾಯಿಸುವುದಿಲ್ಲ. ಕ್ಷೇತ್ರದ ಅಭಿವೃದ್ಧಿಯನ್ನು ದೃಷ್ಟಿಯಲ್ಲಿಟ್ಟುಕೊಂಡವರು ಮಾತ್ರ ನನಗೆ ಮತ ಹಾಕುತ್ತಾರೆ. ಈ ನಿಟ್ಟಿನಲ್ಲಿ ನಿಜ ಅರ್ಥದಲ್ಲಲಿ ಮತದಾನ ಮಾಡುವವರು ಎಷ್ಟು ಜನರಿದ್ದಾರೆ ಎಂಬುದನ್ನು ತಿಳಿಯವುದು ಸಹ ತಮ್ಮ ಉದ್ದೇಶ ಎಂದು ಹೇಳಿದರು.ಎರಡು ಬಾರಿ ಪಕ್ಷೇತರ ಅಭ್ಯರ್ಥಿಯನ್ನು ಗೆಲ್ಲಿಸಿರುವ ಈ ಕ್ಷೇತ್ರ ಜಾತಿ ಆಧಾರದ ಮೇಲೆ ಆಯ್ಕೆ ಮಾಡುವ ಸಂಪ್ರದಾಯದ ವಿರುದ್ಧವೂ ಜನಾದೇಶ ನೀಡಿದೆ.<br /> <br /> ಈ ಎಲ್ಲ ಹಿನ್ನೆಲೆಯಲ್ಲಿ ಮತದಾರರು ತಮಗೆ ಬೆಂಬಲಿಸುತ್ತಾರೆ ಎಂಬ ವಿಶ್ವಾಸ ಇದೆ ಎಂದೂ ಹೇಳಿದರು.ಒಕ್ಕೂಟದ ಮುಖಂಡ ಜೆ.ಭಾರದ್ವಾಜ್ ಮಾತನಾಡಿ, ವಿಠ್ಠಪ್ಪ ಗೋರಂಟ್ಲಿ ಅವರು 10 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.<br /> <br /> ಒಕ್ಕೂಟದ ಮುಖಂಡರಾದ ಮಹಾಂತೇಶ ಕೊತಬಾಳ, ತಿಪ್ಪೇಸ್ವಾಮಿ, ಕೆ.ಬಿ.ಗೋನಾಳ, ಶಾಂತಕುಮಾರಿ, ಬಸವರಾಜ ಶೀಲವಂತರ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>