<p>ಬೆಂಗಳೂರು: ಬೆಂಗಳೂರು ಸರಣಿ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಅಬ್ದುಲ್ ನಾಸರ್ ಮದನಿ ಅವರನ್ನು ಶೀಘ್ರವೇ ಬಿಡುಗಡೆಗೊಳಿಸಬೇಕು ಎಂದು ಒತ್ತಾಯಿಸಿ ಮಾನವ ಹಕ್ಕುಗಳು ಹಾಗೂ ನ್ಯಾಯ ರಕ್ಷಣಾ ಸಂಘಟನೆ (ಎಪಿಎಚ್ಆರ್ಜೆ) ಸದಸ್ಯರು ನಗರದಲ್ಲಿ ಶನಿವಾರ ಪ್ರತಿಭಟನಾ ಸಭೆ ನಡೆಸಿದರು.<br /> <br /> ಸಭೆಯಲ್ಲಿ ಮಾತನಾಡಿದ ಕೇರಳದ ಮಾಜಿ ಸಂಸದ ಡಾ.ಸೆಬಾಸ್ಟಿಯನ್ ಪಾಲ್, ‘ಪ್ರಕರಣದ ಆರೋಪಿಯೊಬ್ಬ ನೀಡಿದ ಹೇಳಿಕೆಯ ಆಧಾರದ ಮೇಲೆ ಮದನಿ ಅವರನ್ನು ಬಂಧಿಸಲಾಗಿದೆಯೇ ಹೊರತು ಅವರ ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳಿಲ್ಲ. ಹೀಗಿದ್ದೂ 2010ರಿಂದ ಅವರು ಕಾರಾಗೃಹ ವಾಸ ಅನುಭವಿಸುವಂತಾಗಿದೆ. ಹೀಗಾಗಿ ಸರ್ಕಾರ ಕೂಡಲೇ ಅವರನ್ನು ಬಿಡುಗಡೆಗೊಳಿಸಬೇಕು’ ಎಂದು ಒತ್ತಾಯಿಸಿದರು.<br /> <br /> ಸಂಸತ್ ಮೇಲಿನ ದಾಳಿ ಪ್ರಕರಣದ ಆರೋಪಿಯಾಗಿದ್ದ ದೆಹಲಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಎಸ್.ಎ.ಆರ್.ಗಿಲಾನಿ ಮಾತನಾಡಿ, ‘ಕೊಯಮತ್ತೂರು ಬಾಂಬ್ ಸ್ಫೋಟ ಪ್ರಕರಣದಲ್ಲಿ ಒಂಬತ್ತೂವರೆ ವರ್ಷಗಳ ಕಾಲ ಜೈಲುವಾಸ ಅನುಭವಿಸಿದ್ದ ಮದನಿ ನಿರಪರಾಧಿ ಎಂದು ನ್ಯಾಯಾಲಯ ತೀರ್ಪು ನೀಡಿತು. ಅವರು ಬಿಡುಗಡೆಯಾಗುತ್ತಿದ್ದಂತೆ ಬೆಂಗಳೂರು ಪೊಲೀಸರು ಅವರ ಬೆನ್ನು ಬಿದ್ದರು. ಅಮಾಯಕ ಮದನಿ ಅವರನ್ನು ವಿನಾಕಾರಣ ಹಿಂಸಿಸಲಾಗುತ್ತಿದೆ’ ಎಂದರು.<br /> <br /> ಪೀಪಲ್ಸ್ ಡೆಮಾಕ್ರೆಟಿಕ್ ಫೋರಂನ (ಪಿಡಿಎಫ್) ಅಧ್ಯಕ್ಷ ಪ್ರೊ.ನಗರಿ ಬಾಬಯ್ಯ ಮಾತನಾಡಿ, ‘ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಮದನಿ ಅವರಿಗೆ ಸೂಕ್ತ ಚಿಕಿತ್ಸೆಯ ಅಗತ್ಯವಿದೆ. ಆದರೆ, ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಆಸ್ಪತ್ರೆಯ ವೈದ್ಯರು ಅವರ ಆರೋಗ್ಯ ಸ್ಥಿತಿ ಉತ್ತಮವಾಗಿದೆ ಎಂದು ಪ್ರಮಾಣ ಪತ್ರ ಸಲ್ಲಿಸಿದ್ದಾರೆ. ಮದನಿ ಅವರೊಂದಿಗೆ ಮಾನವೀಯವಾಗಿ ನಡೆದುಕೊಳ್ಳಬೇಕು. ಯಾವುದೆ ಸಾಕ್ಷ್ಯಾಧಾರಗಳಿಲ್ಲದ ಅವರನ್ನು ಬಿಡುಗಡೆಗೊಳಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.<br /> <br /> ಅನಾರೋಗ್ಯದಿಂದಾಗಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗದ ಕಾರಣ ಸಂದೇಶ ಕಳಿಸಿದ್ದ ಹಿರಿಯ ಸಾಹಿತಿ ಡಾ.ಯು.ಆರ್.ಅನಂತಮೂರ್ತಿ ಅವರ ಧ್ವನಿಮುದ್ರಿಕೆಯನ್ನು ಕಾರ್ಯಕ್ರಮದಲ್ಲಿ ಪ್ರಸಾರ ಮಾಡಲಾಯಿತು.<br /> <br /> ‘ಮದನಿ ಸಂವಿಧಾನ ವಿರೋಧಿಯಲ್ಲ, ಅಪರಾಧಿಯೂ ಅಲ್ಲ. ಸಾಕ್ಷ್ಯಾಧಾರಗಳಿಲ್ಲದಿದ್ದರೂ ಅವರನ್ನು ಬಂಧಿಸಿಟ್ಟಿರುವುದು ನಾಚಿಕೆಗೇಡಿನ ವಿಷಯ. ಮದನಿ ಅವರು ಮಾತನಾಡಲು ಅವಕಾಶ ನೀಡಬೇಕು. ಅವರನ್ನು ಬಿಡುಗಡೆಗೊಳಿಸಲು ಸರ್ಕಾರ ಮುಂದಾಗಬೇಕು. ಈ ವಿಚಾರವಾಗಿ ನಾನು ರಾಷ್ಟ್ರಪತಿಯವರಿಗೆ ಪತ್ರ ಬರೆಯುತ್ತೇನೆ’ ಎಂದು ಅವರು ಹೇಳಿದ್ದಾರೆ.<br /> <br /> ‘ಮದನಿ ಅವರಿಗೆ ಅನ್ನಿಸಿದ್ದನ್ನು ಹೇಳಿಕೊಳ್ಳಲು ಅಭಿವ್ಯಕ್ತಿ ಸ್ವಾತಂತ್ರ್ಯವಿದೆ. ಆಮ್ ಆದ್ಮಿ ಪಕ್ಷದ ಕೆಲವರು ದೇಶದ ಕಾನೂನುಗಳನ್ನು ಪ್ರಶ್ನಿಸುತ್ತಿದ್ದಾರೆ. ಇದು ತಪ್ಪಲ್ಲ. ಸಂವಿಧಾನವನ್ನು ಪ್ರಶ್ನಿಸಿದರೆ ಮಾತ್ರ ತಪ್ಪಾಗುತ್ತದೆ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಬೆಂಗಳೂರು ಸರಣಿ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಅಬ್ದುಲ್ ನಾಸರ್ ಮದನಿ ಅವರನ್ನು ಶೀಘ್ರವೇ ಬಿಡುಗಡೆಗೊಳಿಸಬೇಕು ಎಂದು ಒತ್ತಾಯಿಸಿ ಮಾನವ ಹಕ್ಕುಗಳು ಹಾಗೂ ನ್ಯಾಯ ರಕ್ಷಣಾ ಸಂಘಟನೆ (ಎಪಿಎಚ್ಆರ್ಜೆ) ಸದಸ್ಯರು ನಗರದಲ್ಲಿ ಶನಿವಾರ ಪ್ರತಿಭಟನಾ ಸಭೆ ನಡೆಸಿದರು.<br /> <br /> ಸಭೆಯಲ್ಲಿ ಮಾತನಾಡಿದ ಕೇರಳದ ಮಾಜಿ ಸಂಸದ ಡಾ.ಸೆಬಾಸ್ಟಿಯನ್ ಪಾಲ್, ‘ಪ್ರಕರಣದ ಆರೋಪಿಯೊಬ್ಬ ನೀಡಿದ ಹೇಳಿಕೆಯ ಆಧಾರದ ಮೇಲೆ ಮದನಿ ಅವರನ್ನು ಬಂಧಿಸಲಾಗಿದೆಯೇ ಹೊರತು ಅವರ ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳಿಲ್ಲ. ಹೀಗಿದ್ದೂ 2010ರಿಂದ ಅವರು ಕಾರಾಗೃಹ ವಾಸ ಅನುಭವಿಸುವಂತಾಗಿದೆ. ಹೀಗಾಗಿ ಸರ್ಕಾರ ಕೂಡಲೇ ಅವರನ್ನು ಬಿಡುಗಡೆಗೊಳಿಸಬೇಕು’ ಎಂದು ಒತ್ತಾಯಿಸಿದರು.<br /> <br /> ಸಂಸತ್ ಮೇಲಿನ ದಾಳಿ ಪ್ರಕರಣದ ಆರೋಪಿಯಾಗಿದ್ದ ದೆಹಲಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಎಸ್.ಎ.ಆರ್.ಗಿಲಾನಿ ಮಾತನಾಡಿ, ‘ಕೊಯಮತ್ತೂರು ಬಾಂಬ್ ಸ್ಫೋಟ ಪ್ರಕರಣದಲ್ಲಿ ಒಂಬತ್ತೂವರೆ ವರ್ಷಗಳ ಕಾಲ ಜೈಲುವಾಸ ಅನುಭವಿಸಿದ್ದ ಮದನಿ ನಿರಪರಾಧಿ ಎಂದು ನ್ಯಾಯಾಲಯ ತೀರ್ಪು ನೀಡಿತು. ಅವರು ಬಿಡುಗಡೆಯಾಗುತ್ತಿದ್ದಂತೆ ಬೆಂಗಳೂರು ಪೊಲೀಸರು ಅವರ ಬೆನ್ನು ಬಿದ್ದರು. ಅಮಾಯಕ ಮದನಿ ಅವರನ್ನು ವಿನಾಕಾರಣ ಹಿಂಸಿಸಲಾಗುತ್ತಿದೆ’ ಎಂದರು.<br /> <br /> ಪೀಪಲ್ಸ್ ಡೆಮಾಕ್ರೆಟಿಕ್ ಫೋರಂನ (ಪಿಡಿಎಫ್) ಅಧ್ಯಕ್ಷ ಪ್ರೊ.ನಗರಿ ಬಾಬಯ್ಯ ಮಾತನಾಡಿ, ‘ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಮದನಿ ಅವರಿಗೆ ಸೂಕ್ತ ಚಿಕಿತ್ಸೆಯ ಅಗತ್ಯವಿದೆ. ಆದರೆ, ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಆಸ್ಪತ್ರೆಯ ವೈದ್ಯರು ಅವರ ಆರೋಗ್ಯ ಸ್ಥಿತಿ ಉತ್ತಮವಾಗಿದೆ ಎಂದು ಪ್ರಮಾಣ ಪತ್ರ ಸಲ್ಲಿಸಿದ್ದಾರೆ. ಮದನಿ ಅವರೊಂದಿಗೆ ಮಾನವೀಯವಾಗಿ ನಡೆದುಕೊಳ್ಳಬೇಕು. ಯಾವುದೆ ಸಾಕ್ಷ್ಯಾಧಾರಗಳಿಲ್ಲದ ಅವರನ್ನು ಬಿಡುಗಡೆಗೊಳಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.<br /> <br /> ಅನಾರೋಗ್ಯದಿಂದಾಗಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗದ ಕಾರಣ ಸಂದೇಶ ಕಳಿಸಿದ್ದ ಹಿರಿಯ ಸಾಹಿತಿ ಡಾ.ಯು.ಆರ್.ಅನಂತಮೂರ್ತಿ ಅವರ ಧ್ವನಿಮುದ್ರಿಕೆಯನ್ನು ಕಾರ್ಯಕ್ರಮದಲ್ಲಿ ಪ್ರಸಾರ ಮಾಡಲಾಯಿತು.<br /> <br /> ‘ಮದನಿ ಸಂವಿಧಾನ ವಿರೋಧಿಯಲ್ಲ, ಅಪರಾಧಿಯೂ ಅಲ್ಲ. ಸಾಕ್ಷ್ಯಾಧಾರಗಳಿಲ್ಲದಿದ್ದರೂ ಅವರನ್ನು ಬಂಧಿಸಿಟ್ಟಿರುವುದು ನಾಚಿಕೆಗೇಡಿನ ವಿಷಯ. ಮದನಿ ಅವರು ಮಾತನಾಡಲು ಅವಕಾಶ ನೀಡಬೇಕು. ಅವರನ್ನು ಬಿಡುಗಡೆಗೊಳಿಸಲು ಸರ್ಕಾರ ಮುಂದಾಗಬೇಕು. ಈ ವಿಚಾರವಾಗಿ ನಾನು ರಾಷ್ಟ್ರಪತಿಯವರಿಗೆ ಪತ್ರ ಬರೆಯುತ್ತೇನೆ’ ಎಂದು ಅವರು ಹೇಳಿದ್ದಾರೆ.<br /> <br /> ‘ಮದನಿ ಅವರಿಗೆ ಅನ್ನಿಸಿದ್ದನ್ನು ಹೇಳಿಕೊಳ್ಳಲು ಅಭಿವ್ಯಕ್ತಿ ಸ್ವಾತಂತ್ರ್ಯವಿದೆ. ಆಮ್ ಆದ್ಮಿ ಪಕ್ಷದ ಕೆಲವರು ದೇಶದ ಕಾನೂನುಗಳನ್ನು ಪ್ರಶ್ನಿಸುತ್ತಿದ್ದಾರೆ. ಇದು ತಪ್ಪಲ್ಲ. ಸಂವಿಧಾನವನ್ನು ಪ್ರಶ್ನಿಸಿದರೆ ಮಾತ್ರ ತಪ್ಪಾಗುತ್ತದೆ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>