<p>ಬೆಂಗಳೂರು: ` ವರ್ಷದಿಂದ ವರ್ಷಕ್ಕೆ ಮದ್ಯಪಾನ ವ್ಯಸನಿಗಳ ಸಂಖ್ಯೆಯಲ್ಲಿ ಶೇ 15 ರಿಂದ 25ರಷ್ಟು ಏರಿಕೆಯಾಗುತ್ತಿದ್ದು, ರಾಜ್ಯದಲ್ಲಿರುವ 12 ಸಾವಿರಕ್ಕಿಂತ ಹೆಚ್ಚು ಮಠಾಧೀಶರು ಮದ್ಯಪಾನ ಮುಕ್ತ ರಾಜ್ಯ ಮಾಡುವತ್ತ ಚಿಂತನೆ ನಡೆಸಬೇಕು~ ಎಂದು ಸೋಂದಾ ಸ್ವರ್ಣವಲ್ಲಿ ಮಠದ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಕರೆ ನೀಡಿದರು. <br /> <br /> ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿಯು ನಗರದಲ್ಲಿ ಗುರುವಾರ ಆಯೋಜಿಸಿದ್ದ ಮದ್ಯಪಾನದ ವಿರುದ್ಧ ಧರ್ಮಾಧಿಕಾರಿಗಳ ದುಂಡು ಮೇಜಿನ ಪರಿಷತ್ತಿನಲ್ಲಿ ಅವರು ಮಾತನಾಡಿದರು.<br /> <br /> `ಮದ್ಯಪಾನ ವ್ಯಸನದ ಪ್ರವೃತ್ತಿಯು ಮಕ್ಕಳಲ್ಲಿ ಹೆಚ್ಚಾಗಿ ಕಂಡುಬರುತ್ತಿದೆ. ಯುವ ಪೀಳಿಗೆಯು ಹೊಸ ವರ್ಷಾಚರಣೆ ಸಂಭ್ರಮವನ್ನು ಮದ್ಯಕ್ಕೆ ಮೀಸಲಿಟ್ಟಿದ್ದು, ಸಂಸ್ಕತಿಯನ್ನು ಉಳಿಸುವ ಸಾಮಾಜಿಕ ಜವಾಬ್ದಾರಿಯನ್ನು ಪ್ರತಿಯೊಬ್ಬರೂ ಹೊರಬೇಕಿದೆ~ ಎಂದು ಹೇಳಿದರು.<br /> <br /> `ಸರ್ಕಾರವು ಹೆಚ್ಚುತ್ತಿರುವ ಮದ್ಯದ ಅಂಗಡಿಗಳ ಪರವಾನಗಿ ರದ್ದು ಮಾಡಬೇಕು ಮತ್ತು ಜನ ಜಾಗೃತಿ ಮೂಡಿಸುವ ಮೂಲಕ ಮದ್ಯಪಾನದ ವಿರುದ್ದ ಅಭಿಯಾನ ಆಯೋಜಿಸಬೇಕು~ ಎಂದು ಒತ್ತಾಯಿಸಿದರು. <br /> ಆದಿಚುಂಚನಗಿರಿ ಮಹಾಸಂಸ್ಥಾನದ ಬಾಲಗಂಗಾಥರನಾಥ ಸ್ವಾಮೀಜಿ, `ಪ್ರೌಢಶಾಲಾ ವಿದ್ಯಾರ್ಥಿಗಳ ಅಧ್ಯಯನಕ್ಕೆ ಅಗತ್ಯವಿರುವ ಪಠ್ಯ ಪುಸ್ತಕ ಸಮರ್ಪಕವಾಗಿ ದೊರೆಯುತ್ತಿಲ್ಲ. ಆದರೆ ಚಟಕ್ಕೆ ಬಿದ್ದ ಅನೇಕ ವಿದ್ಯಾರ್ಥಿಗಳಿಗೆ ಮದ್ಯವು ಸಕಾಲಕ್ಕೆ ಪೂರೈಕೆಯಾಗುತ್ತಿರುವುದು ಆತಂಕಕಾರಿ~ ಎಂದರು.<br /> <br /> ಗಾಂಧಿ ಸ್ಮಾರಕ ನಿಧಿಯ ಅಧ್ಯಕ್ಷ ಹೊ.ಶ್ರೀನಿವಾಸಯ್ಯ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ.ರಾಮಯ್ಯ, ಹಂಗಾರಕಟ್ಟೆಯ ನರಸಿಂಹಾಶ್ರಮ ಸ್ವಾಮೀಜಿ, ಹಾವೇರಿಯ ಬಸವ ಶಾಂತಲಿಂಗ ಸ್ವಾಮೀಜಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ` ವರ್ಷದಿಂದ ವರ್ಷಕ್ಕೆ ಮದ್ಯಪಾನ ವ್ಯಸನಿಗಳ ಸಂಖ್ಯೆಯಲ್ಲಿ ಶೇ 15 ರಿಂದ 25ರಷ್ಟು ಏರಿಕೆಯಾಗುತ್ತಿದ್ದು, ರಾಜ್ಯದಲ್ಲಿರುವ 12 ಸಾವಿರಕ್ಕಿಂತ ಹೆಚ್ಚು ಮಠಾಧೀಶರು ಮದ್ಯಪಾನ ಮುಕ್ತ ರಾಜ್ಯ ಮಾಡುವತ್ತ ಚಿಂತನೆ ನಡೆಸಬೇಕು~ ಎಂದು ಸೋಂದಾ ಸ್ವರ್ಣವಲ್ಲಿ ಮಠದ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಕರೆ ನೀಡಿದರು. <br /> <br /> ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿಯು ನಗರದಲ್ಲಿ ಗುರುವಾರ ಆಯೋಜಿಸಿದ್ದ ಮದ್ಯಪಾನದ ವಿರುದ್ಧ ಧರ್ಮಾಧಿಕಾರಿಗಳ ದುಂಡು ಮೇಜಿನ ಪರಿಷತ್ತಿನಲ್ಲಿ ಅವರು ಮಾತನಾಡಿದರು.<br /> <br /> `ಮದ್ಯಪಾನ ವ್ಯಸನದ ಪ್ರವೃತ್ತಿಯು ಮಕ್ಕಳಲ್ಲಿ ಹೆಚ್ಚಾಗಿ ಕಂಡುಬರುತ್ತಿದೆ. ಯುವ ಪೀಳಿಗೆಯು ಹೊಸ ವರ್ಷಾಚರಣೆ ಸಂಭ್ರಮವನ್ನು ಮದ್ಯಕ್ಕೆ ಮೀಸಲಿಟ್ಟಿದ್ದು, ಸಂಸ್ಕತಿಯನ್ನು ಉಳಿಸುವ ಸಾಮಾಜಿಕ ಜವಾಬ್ದಾರಿಯನ್ನು ಪ್ರತಿಯೊಬ್ಬರೂ ಹೊರಬೇಕಿದೆ~ ಎಂದು ಹೇಳಿದರು.<br /> <br /> `ಸರ್ಕಾರವು ಹೆಚ್ಚುತ್ತಿರುವ ಮದ್ಯದ ಅಂಗಡಿಗಳ ಪರವಾನಗಿ ರದ್ದು ಮಾಡಬೇಕು ಮತ್ತು ಜನ ಜಾಗೃತಿ ಮೂಡಿಸುವ ಮೂಲಕ ಮದ್ಯಪಾನದ ವಿರುದ್ದ ಅಭಿಯಾನ ಆಯೋಜಿಸಬೇಕು~ ಎಂದು ಒತ್ತಾಯಿಸಿದರು. <br /> ಆದಿಚುಂಚನಗಿರಿ ಮಹಾಸಂಸ್ಥಾನದ ಬಾಲಗಂಗಾಥರನಾಥ ಸ್ವಾಮೀಜಿ, `ಪ್ರೌಢಶಾಲಾ ವಿದ್ಯಾರ್ಥಿಗಳ ಅಧ್ಯಯನಕ್ಕೆ ಅಗತ್ಯವಿರುವ ಪಠ್ಯ ಪುಸ್ತಕ ಸಮರ್ಪಕವಾಗಿ ದೊರೆಯುತ್ತಿಲ್ಲ. ಆದರೆ ಚಟಕ್ಕೆ ಬಿದ್ದ ಅನೇಕ ವಿದ್ಯಾರ್ಥಿಗಳಿಗೆ ಮದ್ಯವು ಸಕಾಲಕ್ಕೆ ಪೂರೈಕೆಯಾಗುತ್ತಿರುವುದು ಆತಂಕಕಾರಿ~ ಎಂದರು.<br /> <br /> ಗಾಂಧಿ ಸ್ಮಾರಕ ನಿಧಿಯ ಅಧ್ಯಕ್ಷ ಹೊ.ಶ್ರೀನಿವಾಸಯ್ಯ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ.ರಾಮಯ್ಯ, ಹಂಗಾರಕಟ್ಟೆಯ ನರಸಿಂಹಾಶ್ರಮ ಸ್ವಾಮೀಜಿ, ಹಾವೇರಿಯ ಬಸವ ಶಾಂತಲಿಂಗ ಸ್ವಾಮೀಜಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>